Homeಅಂತರಾಷ್ಟ್ರೀಯಏನು ಸಿಗುತ್ತೊ ಅದರಲ್ಲಿ ಹತ್ತಿ ಕಿವ್‌‌ ತೊರೆಯಿರಿ: ಭಾರತೀಯ ಪ್ರಜೆಗಳಿಗೆ ಸರ್ಕಾರ ಸೂಚನೆ

ಏನು ಸಿಗುತ್ತೊ ಅದರಲ್ಲಿ ಹತ್ತಿ ಕಿವ್‌‌ ತೊರೆಯಿರಿ: ಭಾರತೀಯ ಪ್ರಜೆಗಳಿಗೆ ಸರ್ಕಾರ ಸೂಚನೆ

- Advertisement -
- Advertisement -

ರಷ್ಯಾ ಸೇನೆ ಉಕ್ರೇನ್‌ ಮೇಲೆ ತನ್ನ ದಾಳಿಯನ್ನು ಮುಂದುವರೆಸುತ್ತಿರುವ ಮಧ್ಯೆ, ಭಾರತವು ತನ್ನ ಎಲ್ಲಾ ನಾಗರಿಕರನ್ನು ‘ತುರ್ತಾಗಿ ರೈಲುಗಳು ಅಥವಾ ಲಭ್ಯವಿರುವ ಯಾವುದೇ ವಿಧಾನಗಳ ಮೂಲಕ’ ಉಕ್ರೇನ್ ರಾಜಧಾನಿ ಕೈವ್‌ನಿಂದ ತೊರೆಯುವಂತೆ ಒತ್ತಾಯಿಸಿದೆ. ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆಸುತ್ತಿದ್ದಂತೆ, ಇದೂವರೆಗೂ ಉಕ್ರೇನ್ನಲ್ಲಿ 352 ನಾಗರೀಕರು ಸಾವನ್ನಪ್ಪಿದ್ದು, 1,684 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಟ್ವೀಟ್ ಮಾಡಿರುವ ಉಕ್ರೇನ್‌ನ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ, “ಕೈವ್‌ನಲ್ಲಿರುವ ಭಾರತೀಯರಿಗೆ ಸಲಹೆ… ಲಭ್ಯವಿರುವ ರೈಲುಗಳ ಮೂಲಕ ಅಥವಾ ಲಭ್ಯವಿರುವ ಯಾವುದೇ ಇತರ ವಿಧಾನಗಳ ಮೂಲಕ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ಪ್ರಜೆಗಳಿಗೆ ಇಂದು ತುರ್ತಾಗಿ ಕೈವ್ ತೊರೆಯುವಂತೆ ಸೂಚಿಸಲಾಗಿದೆ” ಎಂದು ಹೇಳಿದೆ.

ಕೈವ್‌ನ ವಾಯುವ್ಯ ರಸ್ತೆಗಳಲ್ಲಿ ರಷ್ಯಾದ ಮಿಲಿಟರಿ ವಾಹನಗಳ ದೀರ್ಘ ಬೆಂಗಾವಲುಗಳ ಉಪಗ್ರಹ ಚಿತ್ರಗಳು ಹೊರಹೊಮ್ಮಿದ ಗಂಟೆಗಳ ನಂತರ ಈ ಸಲಹೆಯನ್ನು ಭಾರತೀಯ ರಾಯಭಾರಿ ಕಚೇರಿ ಈ ಪೋಸ್ಟ್ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಮೆರಿಕಾ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ಬಿಡುಗಡೆ ಮಾಡಿದ ಈ ಚಿತ್ರಗಳಲ್ಲಿ ನೂರಾರು ಟ್ಯಾಂಕ್‌ಗಳು, ಫಿರಂಗಿಗಳು, ಶಸ್ತ್ರಸಜ್ಜಿತ ಲಾಜಿಸ್ಟಿಕ್ ವಾಹನಗಳು ಕಾಣುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

ಭಾರತೀಯ ರಾಯಭಾರಿಯ ಈ ನಡೆಯನ್ನು ವಿರೋಧಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ, “ಸಾವು-ಬದುಕಿನ ನಡುವೆ ಇರುವ ಸಾವಿರಾರು ಭಾರತೀಯರಿಗೆ ‘ಸಹಾಯ’ ಮಾಡುವ ಬದಲು ‘ಆತ್ಮನಿರ್ಭರ ಸಲಹೆ’ ಮಾತ್ರ ನೀಡುವುದೇ? ಕಳೆದ 5 ದಿನಗಳಿಂದ ಉಕ್ರೇನ್‌ನಲ್ಲಿ ಮೋದಿ ಸರ್ಕಾರ ಸಾವಿರಾರು ಮಕ್ಕಳನ್ನು ಇಲ್ಲಿಂದ ಅಲ್ಲಿಗೆ ಓಡಿಸುತ್ತಿದೆಯೇ? ಇಂತಹ ವಿನಾಶದಿಂದ ಹೊರಬರುವುದು ಹೇಗೆ, ಅಷ್ಟು ದೂರವನ್ನು ಹೇಗೆ ಕ್ರಮಿಸುವುದು ಮತ್ತು ಎಲ್ಲಿಗೆ ಹೋಗಬೇಕು? ಮಕ್ಕಳ ಬದುಕಿನೊಂದಿಗೆ ಎಷ್ಟು ದಿನ ಆಟವಾಡುತ್ತಿದ್ದೀರಿ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು: 352 ಉಕ್ರೇನಿಯನ್ ನಾಗರಿಕರು ಸಾವು, 1,684 ಮಂದಿಗೆ ಗಾಯ

ಉಕ್ರೇನ್‌ನಲ್ಲಿ ಸುಮಾರು 16,000 ಭಾರತೀಯ ವಿದ್ಯಾರ್ಥಿಗಳು ಇನ್ನೂ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಗುರುವಾರ ರಷ್ಯಾದ ದಾಳಿ ಪ್ರಾರಂಭವಾದಾಗಿನಿಂದ ಅವರು ಅಡಗಿರುವ ಭೂಗತ ಬಂಕರ್‌ಗಳು, ಮೆಟ್ರೋ ನಿಲ್ದಾಣಗಳು ಮತ್ತು ಬಾಂಬ್ ಶೆಲ್ಟರ್‌ಗಳ ಫೋಟೊ ಮತ್ತು ವಿಡಿಯೊಗಳನ್ನು ಅನೇಕ ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಇಲ್ಲಿಯವರೆಗೆ ಸುಮಾರು 8,000 ಭಾರತೀಯ ಪ್ರಜೆಗಳು ಉಕ್ರೇನ್‌ನಿಂದ ತೆರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸೋಮವಾರ ತಿಳಿಸಿದೆ.

ಸೋಮವಾರ, ರಾಯಭಾರ ಕಚೇರಿಯು ಕೈವ್‌ನಲ್ಲಿರುವ ರೈಲ್ವೆ ನಿಲ್ದಾಣಕ್ಕೆ ಹೋಗಲು ವಿದ್ಯಾರ್ಥಿಗಳನ್ನು ಕೇಳಿತ್ತು. ಅಲ್ಲಿ ಜನರನ್ನು ಪಶ್ಚಿಮ ಪ್ರದೇಶಕ್ಕೆ ಕರೆದೊಯ್ಯಲು ಉಕ್ರೇನ್ ವಿಶೇಷ ಸ್ಥಳಾಂತರಿಸುವ ರೈಲುಗಳನ್ನು ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಪಾಸ್‌ಪೋರ್ಟ್, ಸಾಕಷ್ಟು ನಗದು ಮತ್ತು ಬೆಚ್ಚಗಿನ ಬಟ್ಟೆಗಳನ್ನು ತೆಗೆದುಕೊಂಡು ಹೋಗುವಂತೆ ಕೇಳಲಾಗಿತ್ತು.

“ಎಲ್ಲಾ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳು ಶಾಂತಿಯುತವಾಗಿ ಮತ್ತು ಒಗ್ಗಟ್ಟಿನಿಂದ ಇರುವಂತೆ ನಾವು ಪ್ರಾಮಾಣಿಕವಾಗಿ ವಿನಂತಿಸುತ್ತೇವೆ. ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಇರಬಹುದಾದ್ದರಿಂದ ಎಲ್ಲಾ ಭಾರತೀಯ ವಿದ್ಯಾರ್ಥಿಗಳು ತಾಳ್ಮೆ ಮತ್ತು ಸಂಯಮದಿಂದಿರಬೇಕು. ಆಕ್ರಮಣಕಾರಿ ನಡವಳಿಕೆಯನ್ನು ಪ್ರದರ್ಶಿಸಬಾರದು” ಎಂದು ಸಲಹೆ ನೀಡಿತ್ತು.

ಇದನ್ನೂ ಓದಿ: ’ಬಿಡಾಡಿ ದನಗಳ ಸಂರಕ್ಷಣೆಯಲ್ಲಿ ಅದ್ಭುತ ಕೆಲಸ ಮಾಡಿದ್ದೇವೆ’- ಉತ್ತರ ಪ್ರದೇಶ ಸರ್ಕಾರ

ಈ ಮಧ್ಯೆ, ಅನೇಕ ವಿದ್ಯಾರ್ಥಿಗಳು ತಮ್ಮನ್ನು ರೈಲು ಹತ್ತಲು ಅನುಮತಿಸಲಿಲ್ಲ ಅಥವಾ ಅಧಿಕಾರಿಗಳು ತಮ್ಮೊಂದಿಗೆ ಕೆಟ್ಟದಾಗಿ ನಡೆಸಿಕೊಂಡರು ಎಂದು ದೂರಿದ್ದಾರೆ.

ಆದಾಗ್ಯೂ, ಕಳೆದ ವಾರದಿಂದ ರಾಯಭಾರ ಕಚೇರಿಯ ಬಳಿ ನೆಲೆಸಿರುವ ಸುಮಾರು 400 ವಿದ್ಯಾರ್ಥಿಗಳು ಸೇರಿದಂತೆ ಸೋಮವಾರ ಕೈವ್‌ನಿಂದ ಪಶ್ಚಿಮ ಉಕ್ರೇನ್ ಕಡೆಗೆ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸ್ಥಳಾಂತರ ಮಾಡಲಾಗಿದೆ ಎಂದು ರಾಯಭಾರ ಕಚೇರಿ ಖಚಿತಪಡಿಸಿದೆ ಎಂದು ಸರ್ಕಾರಿ ಮೂಲಗಳು ಹೇಳಿಕೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭಾರತೀಯ ವಿದ್ಯಾರ್ಥಿಗಳನ್ನು ಹಂಗೇರಿ, ಪೋಲೆಂಡ್, ರೊಮೇನಿಯಾ, ಸ್ಲೋವಾಕ್ ಗಣರಾಜ್ಯಕ್ಕೆ ಸ್ಥಳಾಂತರಿಸಲಾಗುತ್ತಿದೆ. ಈ ಎಲ್ಲಾ ದೇಶಗಳು ಉಕ್ರೇನ್‌ನೊಂದಿಗೆ ಗಡಿಯನ್ನು ಹಂಚಿಕೊಡಿದ್ದು, ಅಲ್ಲಿಂದ ಅವರನ್ನು ಆಪರೇಷನ್ ಗಂಗಾ ಅಡಿಯಲ್ಲಿ ಭಾರತಕ್ಕೆ ಸ್ಥಳಾಂತರಿಸಲಾಗುತ್ತದೆ ಎನ್ನಲಾಗಿದೆ.

ರಷ್ಯಾ ಒಕ್ಕೂಟದಿಂದ ಉಕ್ರೇನ್ ಬೇರ್ಪಟ್ಟ ನಂತರ, ಅಮೆರಿಕಾ ನೇತೃತ್ವದ NATO ಜೊತೆಗೆ ಸೇರಿಕೊಕೊಳ್ಳಲು ಯತ್ನಿಸುತ್ತಿದೆ. ಅದಕ್ಕಾಗಿ, ಅಮೆರಿಕಾ ಸಾಕಷ್ಟು ಯುದ್ದ ಶಸ್ತ್ರಾಸ್ತ್ರಗಳನ್ನು ಉಕ್ರೇನ್‌ನಲ್ಲಿ ಶೇಖರಣೆ ಮಾಡಿದೆ. ಇದು ರಷ್ಯಾ ವಿರುದ್ದದ ಷಡ್ಯಂತ್ರದ ಭಾಗವಾಗಿದ್ದು, ಉಕ್ರೇನ್ನಲ್ಲಿ ನ್ಯಾಟೋ ನೆಲೆಗೂಡುವುದನ್ನು ರಷ್ಯಾ ವಿರೋಧಿಸಿತ್ತು ಮತ್ತು ಯುದ್ದಾಸ್ತ್ರಗಳನ್ನು ಹಿಂಪಡೆಯುವಂತೆ ಹಲವು ತಿಂಗಳಿನಿಂದ ನ್ಯಾಟೋಗೆ ಹೇಳುತ್ತಲೇ ಇತ್ತು. ಕೊನೆಗೆ ಕಳೆದ ಗುರುವಾರ ಬೆಳಿಗ್ಗೆ ರಷ್ಯಾ ಸೇನೆ ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...