Homeಅಂತರಾಷ್ಟ್ರೀಯಏನು ಸಿಗುತ್ತೊ ಅದರಲ್ಲಿ ಹತ್ತಿ ಕಿವ್‌‌ ತೊರೆಯಿರಿ: ಭಾರತೀಯ ಪ್ರಜೆಗಳಿಗೆ ಸರ್ಕಾರ ಸೂಚನೆ

ಏನು ಸಿಗುತ್ತೊ ಅದರಲ್ಲಿ ಹತ್ತಿ ಕಿವ್‌‌ ತೊರೆಯಿರಿ: ಭಾರತೀಯ ಪ್ರಜೆಗಳಿಗೆ ಸರ್ಕಾರ ಸೂಚನೆ

- Advertisement -
- Advertisement -

ರಷ್ಯಾ ಸೇನೆ ಉಕ್ರೇನ್‌ ಮೇಲೆ ತನ್ನ ದಾಳಿಯನ್ನು ಮುಂದುವರೆಸುತ್ತಿರುವ ಮಧ್ಯೆ, ಭಾರತವು ತನ್ನ ಎಲ್ಲಾ ನಾಗರಿಕರನ್ನು ‘ತುರ್ತಾಗಿ ರೈಲುಗಳು ಅಥವಾ ಲಭ್ಯವಿರುವ ಯಾವುದೇ ವಿಧಾನಗಳ ಮೂಲಕ’ ಉಕ್ರೇನ್ ರಾಜಧಾನಿ ಕೈವ್‌ನಿಂದ ತೊರೆಯುವಂತೆ ಒತ್ತಾಯಿಸಿದೆ. ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆಸುತ್ತಿದ್ದಂತೆ, ಇದೂವರೆಗೂ ಉಕ್ರೇನ್ನಲ್ಲಿ 352 ನಾಗರೀಕರು ಸಾವನ್ನಪ್ಪಿದ್ದು, 1,684 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಟ್ವೀಟ್ ಮಾಡಿರುವ ಉಕ್ರೇನ್‌ನ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ, “ಕೈವ್‌ನಲ್ಲಿರುವ ಭಾರತೀಯರಿಗೆ ಸಲಹೆ… ಲಭ್ಯವಿರುವ ರೈಲುಗಳ ಮೂಲಕ ಅಥವಾ ಲಭ್ಯವಿರುವ ಯಾವುದೇ ಇತರ ವಿಧಾನಗಳ ಮೂಲಕ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ಪ್ರಜೆಗಳಿಗೆ ಇಂದು ತುರ್ತಾಗಿ ಕೈವ್ ತೊರೆಯುವಂತೆ ಸೂಚಿಸಲಾಗಿದೆ” ಎಂದು ಹೇಳಿದೆ.

ಕೈವ್‌ನ ವಾಯುವ್ಯ ರಸ್ತೆಗಳಲ್ಲಿ ರಷ್ಯಾದ ಮಿಲಿಟರಿ ವಾಹನಗಳ ದೀರ್ಘ ಬೆಂಗಾವಲುಗಳ ಉಪಗ್ರಹ ಚಿತ್ರಗಳು ಹೊರಹೊಮ್ಮಿದ ಗಂಟೆಗಳ ನಂತರ ಈ ಸಲಹೆಯನ್ನು ಭಾರತೀಯ ರಾಯಭಾರಿ ಕಚೇರಿ ಈ ಪೋಸ್ಟ್ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಮೆರಿಕಾ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ಬಿಡುಗಡೆ ಮಾಡಿದ ಈ ಚಿತ್ರಗಳಲ್ಲಿ ನೂರಾರು ಟ್ಯಾಂಕ್‌ಗಳು, ಫಿರಂಗಿಗಳು, ಶಸ್ತ್ರಸಜ್ಜಿತ ಲಾಜಿಸ್ಟಿಕ್ ವಾಹನಗಳು ಕಾಣುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

ಭಾರತೀಯ ರಾಯಭಾರಿಯ ಈ ನಡೆಯನ್ನು ವಿರೋಧಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ, “ಸಾವು-ಬದುಕಿನ ನಡುವೆ ಇರುವ ಸಾವಿರಾರು ಭಾರತೀಯರಿಗೆ ‘ಸಹಾಯ’ ಮಾಡುವ ಬದಲು ‘ಆತ್ಮನಿರ್ಭರ ಸಲಹೆ’ ಮಾತ್ರ ನೀಡುವುದೇ? ಕಳೆದ 5 ದಿನಗಳಿಂದ ಉಕ್ರೇನ್‌ನಲ್ಲಿ ಮೋದಿ ಸರ್ಕಾರ ಸಾವಿರಾರು ಮಕ್ಕಳನ್ನು ಇಲ್ಲಿಂದ ಅಲ್ಲಿಗೆ ಓಡಿಸುತ್ತಿದೆಯೇ? ಇಂತಹ ವಿನಾಶದಿಂದ ಹೊರಬರುವುದು ಹೇಗೆ, ಅಷ್ಟು ದೂರವನ್ನು ಹೇಗೆ ಕ್ರಮಿಸುವುದು ಮತ್ತು ಎಲ್ಲಿಗೆ ಹೋಗಬೇಕು? ಮಕ್ಕಳ ಬದುಕಿನೊಂದಿಗೆ ಎಷ್ಟು ದಿನ ಆಟವಾಡುತ್ತಿದ್ದೀರಿ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು: 352 ಉಕ್ರೇನಿಯನ್ ನಾಗರಿಕರು ಸಾವು, 1,684 ಮಂದಿಗೆ ಗಾಯ

ಉಕ್ರೇನ್‌ನಲ್ಲಿ ಸುಮಾರು 16,000 ಭಾರತೀಯ ವಿದ್ಯಾರ್ಥಿಗಳು ಇನ್ನೂ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಗುರುವಾರ ರಷ್ಯಾದ ದಾಳಿ ಪ್ರಾರಂಭವಾದಾಗಿನಿಂದ ಅವರು ಅಡಗಿರುವ ಭೂಗತ ಬಂಕರ್‌ಗಳು, ಮೆಟ್ರೋ ನಿಲ್ದಾಣಗಳು ಮತ್ತು ಬಾಂಬ್ ಶೆಲ್ಟರ್‌ಗಳ ಫೋಟೊ ಮತ್ತು ವಿಡಿಯೊಗಳನ್ನು ಅನೇಕ ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಇಲ್ಲಿಯವರೆಗೆ ಸುಮಾರು 8,000 ಭಾರತೀಯ ಪ್ರಜೆಗಳು ಉಕ್ರೇನ್‌ನಿಂದ ತೆರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸೋಮವಾರ ತಿಳಿಸಿದೆ.

ಸೋಮವಾರ, ರಾಯಭಾರ ಕಚೇರಿಯು ಕೈವ್‌ನಲ್ಲಿರುವ ರೈಲ್ವೆ ನಿಲ್ದಾಣಕ್ಕೆ ಹೋಗಲು ವಿದ್ಯಾರ್ಥಿಗಳನ್ನು ಕೇಳಿತ್ತು. ಅಲ್ಲಿ ಜನರನ್ನು ಪಶ್ಚಿಮ ಪ್ರದೇಶಕ್ಕೆ ಕರೆದೊಯ್ಯಲು ಉಕ್ರೇನ್ ವಿಶೇಷ ಸ್ಥಳಾಂತರಿಸುವ ರೈಲುಗಳನ್ನು ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಪಾಸ್‌ಪೋರ್ಟ್, ಸಾಕಷ್ಟು ನಗದು ಮತ್ತು ಬೆಚ್ಚಗಿನ ಬಟ್ಟೆಗಳನ್ನು ತೆಗೆದುಕೊಂಡು ಹೋಗುವಂತೆ ಕೇಳಲಾಗಿತ್ತು.

“ಎಲ್ಲಾ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳು ಶಾಂತಿಯುತವಾಗಿ ಮತ್ತು ಒಗ್ಗಟ್ಟಿನಿಂದ ಇರುವಂತೆ ನಾವು ಪ್ರಾಮಾಣಿಕವಾಗಿ ವಿನಂತಿಸುತ್ತೇವೆ. ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಇರಬಹುದಾದ್ದರಿಂದ ಎಲ್ಲಾ ಭಾರತೀಯ ವಿದ್ಯಾರ್ಥಿಗಳು ತಾಳ್ಮೆ ಮತ್ತು ಸಂಯಮದಿಂದಿರಬೇಕು. ಆಕ್ರಮಣಕಾರಿ ನಡವಳಿಕೆಯನ್ನು ಪ್ರದರ್ಶಿಸಬಾರದು” ಎಂದು ಸಲಹೆ ನೀಡಿತ್ತು.

ಇದನ್ನೂ ಓದಿ: ’ಬಿಡಾಡಿ ದನಗಳ ಸಂರಕ್ಷಣೆಯಲ್ಲಿ ಅದ್ಭುತ ಕೆಲಸ ಮಾಡಿದ್ದೇವೆ’- ಉತ್ತರ ಪ್ರದೇಶ ಸರ್ಕಾರ

ಈ ಮಧ್ಯೆ, ಅನೇಕ ವಿದ್ಯಾರ್ಥಿಗಳು ತಮ್ಮನ್ನು ರೈಲು ಹತ್ತಲು ಅನುಮತಿಸಲಿಲ್ಲ ಅಥವಾ ಅಧಿಕಾರಿಗಳು ತಮ್ಮೊಂದಿಗೆ ಕೆಟ್ಟದಾಗಿ ನಡೆಸಿಕೊಂಡರು ಎಂದು ದೂರಿದ್ದಾರೆ.

ಆದಾಗ್ಯೂ, ಕಳೆದ ವಾರದಿಂದ ರಾಯಭಾರ ಕಚೇರಿಯ ಬಳಿ ನೆಲೆಸಿರುವ ಸುಮಾರು 400 ವಿದ್ಯಾರ್ಥಿಗಳು ಸೇರಿದಂತೆ ಸೋಮವಾರ ಕೈವ್‌ನಿಂದ ಪಶ್ಚಿಮ ಉಕ್ರೇನ್ ಕಡೆಗೆ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸ್ಥಳಾಂತರ ಮಾಡಲಾಗಿದೆ ಎಂದು ರಾಯಭಾರ ಕಚೇರಿ ಖಚಿತಪಡಿಸಿದೆ ಎಂದು ಸರ್ಕಾರಿ ಮೂಲಗಳು ಹೇಳಿಕೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭಾರತೀಯ ವಿದ್ಯಾರ್ಥಿಗಳನ್ನು ಹಂಗೇರಿ, ಪೋಲೆಂಡ್, ರೊಮೇನಿಯಾ, ಸ್ಲೋವಾಕ್ ಗಣರಾಜ್ಯಕ್ಕೆ ಸ್ಥಳಾಂತರಿಸಲಾಗುತ್ತಿದೆ. ಈ ಎಲ್ಲಾ ದೇಶಗಳು ಉಕ್ರೇನ್‌ನೊಂದಿಗೆ ಗಡಿಯನ್ನು ಹಂಚಿಕೊಡಿದ್ದು, ಅಲ್ಲಿಂದ ಅವರನ್ನು ಆಪರೇಷನ್ ಗಂಗಾ ಅಡಿಯಲ್ಲಿ ಭಾರತಕ್ಕೆ ಸ್ಥಳಾಂತರಿಸಲಾಗುತ್ತದೆ ಎನ್ನಲಾಗಿದೆ.

ರಷ್ಯಾ ಒಕ್ಕೂಟದಿಂದ ಉಕ್ರೇನ್ ಬೇರ್ಪಟ್ಟ ನಂತರ, ಅಮೆರಿಕಾ ನೇತೃತ್ವದ NATO ಜೊತೆಗೆ ಸೇರಿಕೊಕೊಳ್ಳಲು ಯತ್ನಿಸುತ್ತಿದೆ. ಅದಕ್ಕಾಗಿ, ಅಮೆರಿಕಾ ಸಾಕಷ್ಟು ಯುದ್ದ ಶಸ್ತ್ರಾಸ್ತ್ರಗಳನ್ನು ಉಕ್ರೇನ್‌ನಲ್ಲಿ ಶೇಖರಣೆ ಮಾಡಿದೆ. ಇದು ರಷ್ಯಾ ವಿರುದ್ದದ ಷಡ್ಯಂತ್ರದ ಭಾಗವಾಗಿದ್ದು, ಉಕ್ರೇನ್ನಲ್ಲಿ ನ್ಯಾಟೋ ನೆಲೆಗೂಡುವುದನ್ನು ರಷ್ಯಾ ವಿರೋಧಿಸಿತ್ತು ಮತ್ತು ಯುದ್ದಾಸ್ತ್ರಗಳನ್ನು ಹಿಂಪಡೆಯುವಂತೆ ಹಲವು ತಿಂಗಳಿನಿಂದ ನ್ಯಾಟೋಗೆ ಹೇಳುತ್ತಲೇ ಇತ್ತು. ಕೊನೆಗೆ ಕಳೆದ ಗುರುವಾರ ಬೆಳಿಗ್ಗೆ ರಷ್ಯಾ ಸೇನೆ ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...