Homeಕರೋನಾ ತಲ್ಲಣಭಾರತದಲ್ಲಿ ಮಾನವ ಸ್ವಯಂಸೇವಕರ ಮೇಲೆ ಕೊರೊನಾ ಲಸಿಕೆಯ ಕ್ಲಿನಿಕಲ್ ಅಧ್ಯಯನ

ಭಾರತದಲ್ಲಿ ಮಾನವ ಸ್ವಯಂಸೇವಕರ ಮೇಲೆ ಕೊರೊನಾ ಲಸಿಕೆಯ ಕ್ಲಿನಿಕಲ್ ಅಧ್ಯಯನ

ಕೊರೊನಾ ಲಸಿಕೆಯನ್ನು ಐಸಿಎಂಆರ್‌ ತರಾತುರಿಯಲ್ಲಿ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಈ ತಿಂಗಳ ಆರಂಭದಲ್ಲಿ ವಿವಾದಕ್ಕೆ ಒಳಗಾಗಿತ್ತು.

- Advertisement -
- Advertisement -

ಕೊರೊನಾ ಸೋಂಕಿಗೆ ಲಸಿಕೆ ನೀಡಲು ಮಾನವ ಸ್ವಯಂಸೇವಕರನ್ನು ಒಳಗೊಂಡ ಕ್ಲಿನಿಕಲ್ ಅಧ್ಯಯನವು ಪ್ರಸ್ತುತ ಭಾರತದಲ್ಲಿ ನಡೆಯುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಮಹಾನಿರ್ದೇಶಕ ಬಲರಾಮ್ ಭಾರ್ಗವ ಮಂಗಳವಾರ ತಿಳಿಸಿದ್ದಾರೆ.

ಪ್ರಾಣಿಗಳ ಮೇಲೆ ನಡೆಸಿದ ಯಶಸ್ವಿ ಅಧ್ಯಯನಗಳ ನಂತರ ಎರಡು ಲಸಿಕೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

“ಎರಡು ಭಾರತೀಯ ಲಸಿಕೆಗಳಿವೆ. ಅವುಗಳನ್ನು ಇಲಿಗಳು ಮತ್ತು ಮೊಲಗಳ ಮೇಲೆ ಅದನ್ನು ಯಶಸ್ವಿ ಅಧ್ಯಯನಕ್ಕೆ ಒಳಪಡಿದ್ದಾರೆ. ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್‌ ಡೇಟಾವನ್ನು ಸಲ್ಲಿಸಲಾಗಿದೆ, ಈ ತಿಂಗಳ ಆರಂಭದಲ್ಲಿ ಆರಂಭಿಕ ಹಂತದ ಮಾನವ ಪ್ರಯೋಗಗಳನ್ನು ಪ್ರಾರಂಭಿಸಲು ಇವೆರಡೂ ಅನುಮತಿ ಪಡೆದಿವೆ ” ಎಂದು ಭಾರ್ಗವ ದೇಶದ ಕೊರೊನಾ ಪರಿಸ್ಥಿತಿ ಕುರಿತು ಆರೋಗ್ಯ ಸಚಿವಾಲಯದ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.

“ಈ ಲಸಿಕೆಗಳನ್ನು ಸುಮಾರು 1,000 ಮಾನವ ಸ್ವಯಂಸೇವಕರ ಮೇಲೆ ವಿವಿಧ ಸೈಟ್‌ಗಳಲ್ಲಿ ತಮ್ಮ ಕ್ಲಿನಿಕಲ್ ಅಧ್ಯಯನವನ್ನು ಮಾಡುತ್ತಿದ್ದಾರೆ” ಎಂದು ಅವರು ಹೇಳಿದರು.

ಅಮೆರಿಕಾ, ಯುಕೆ ಮತ್ತು ರಷ್ಯಾದಂತಹ ದೇಶಗಳು ಸಹ ತಮ್ಮ ಲಸಿಕೆಗಳನ್ನು ವೇಗವಾಗಿ ಪತ್ತೆ ಹಚ್ಚಿವೆ ಎಂದು ಐಸಿಎಂಆರ್ ಮುಖ್ಯಸ್ಥರು ತಿಳಿಸಿದ್ದಾರೆ.

“ರಷ್ಯಾ ಲಸಿಕೆಯನ್ನು ವೇಗವಾಗಿ ಪತ್ತೆಹಚ್ಚಿದೆ, ಅದು ಅದರ ಆರಂಭಿಕ ಹಂತಗಳಲ್ಲಿ ಯಶಸ್ವಿಯಾಗಿದೆ. ಅಮೆರಿಕಾ ಕೂಡಾ ಇಂದು ನೀವು ಓದಿದಂತೆ ಎರಡು ಲಸಿಕೆಗಳನ್ನು ವೇಗವಾಗಿ ಪತ್ತೆ ಮಾಡಿದೆ. ಯುಕೆ ಕೂಡಾ ಲಸಿಕೆಗಳನ್ನು ಹೇಗೆ ವೇಗವಾಗಿ ಪತ್ತೆಹಚ್ಚಹುದು ಹಾಗೂ ಅದನ್ನು ಮಾನವ ಬಳಕೆಗಾಗಿ ಹೇಗೆ ವೇಗವಾಗಿ ಮಾಡಬಹುದು ಎಂಬುದನ್ನು ಎದುರು ನೋಡುತ್ತಿದೆ,” ಎಂದು ಅವರು ಹೇಳಿದರು.

ಮೂರು ತಿಂಗಳ ಕ್ಲಿನಿಕಲ್ ಪ್ರಯೋಗಗಳನ್ನು ಐದು ವಾರಗಳಲ್ಲಿ ಸಂಕುಚಿತಗೊಳಿಸಿ ಆಗಸ್ಟ್ ಮಧ್ಯದಲ್ಲಿ ಕೊರೊನಾ ಲಸಿಕೆ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಹೇಳಿ ಐಸಿಎಂಆರ್ ಈ ತಿಂಗಳ ಆರಂಭದಲ್ಲಿ ವಿವಾದಕ್ಕೆ ಒಳಗಾಗಿತ್ತು.


ಓದಿ: ತ್ವರಿತ ಲಸಿಕೆ ಹೆಸರಿನಲ್ಲಿ ನಮ್ಮ ಜೀವಗಳೊಂದಿಗೆ ಚೆಲ್ಲಾಟವಾಡುತ್ತಿರುವ ICMR‌!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...