Homeಎಕಾನಮಿವಿಡಿಯೋ ತಿರುಚಲು ಸಿಕ್ಕಿಬಿದ್ದ ಕಳ್ಳರು: 2013ರಲ್ಲಿ ರವೀಶ್‍ಕುಮಾರ್ ನಿಜವಾಗಿ ಹೇಳಿದ್ದೇನು?

ವಿಡಿಯೋ ತಿರುಚಲು ಸಿಕ್ಕಿಬಿದ್ದ ಕಳ್ಳರು: 2013ರಲ್ಲಿ ರವೀಶ್‍ಕುಮಾರ್ ನಿಜವಾಗಿ ಹೇಳಿದ್ದೇನು?

- Advertisement -
- Advertisement -

ಜನಾನುರಾಗಿ ಪತ್ರಕರ್ತ ರವೀಶ್‍ಕುಮಾರ್ ಮ್ಯಾಗ್ಸ್ಸೆಸ್ಸೆ ಪ್ರಶಸ್ತಿ ಸ್ವೀಕರಿಸಲು ಇಲ್ಲಿಂದ ಮನಿಲಾಕ್ಕೆ ಹೊರಟ ಸಂದರ್ಭದಲ್ಲಿ ಅವರ ವಿರುದ್ಧ ಮತ್ತೆ ಕೆಲವರು ಅಪಪ್ರಚಾರ ಶುರು ಮಾಡಿದರು. 2013ರ ತಿರುಚುದ ವಿಡಿಯೋ ಬಳಸಿ ರವೀಶ್‍ಕುಮಾರ್ ಹಿಪಾಕ್ರೈಟ್ ಅಂದರೆ ಆಷಾಢಭೂತಿ ಎಂದೆಲ್ಲ ಸುಳ್ಳನ್ನು ಹರಡಲಾಗುತ್ತಿದೆ.

ಮಿಥ್ಯ: 2013ರಲ್ಲಿ ಜಿಡಿಪಿ ಬೆಳವಣಿಗೆ ಕುಸಿದಿದ್ದರ ಕುರಿತು ರವೀಶ್‍ಕುಮಾರ್ ನಡೆಸಿಕೊಟ್ಟ ಕಾರ್ಯಕ್ರಮದ 35 ಸೆಕೆಂಡುಗಳ ವಿಡಿಯೋ ಕ್ಲಿಪ್ ಅನ್ನು ಆ ಅಪಪ್ರಚಾರದ ಪ್ರೊಪಗಂಡಾ ತೊರಿಸುತ್ತೆ. ಪಕ್ಕದಲ್ಲೇ 2019ರ ಜಿಡಿಪಿ ಕುಸಿತ ಕುರಿತು ಮಾತಾಡಿದ್ದನ್ನೂ ಇದು ತೋರಿಸುತ್ತದೆ. ಆದರೆ, 2013ರ ವಿಡಿಯೋ ಕ್ಲಿಪ್ ತಿರುಚಲ್ಪಟ್ಟಿದ್ದು ಎಂದು ಅವತ್ತೇ ಅಲ್ಟ್ ನ್ಯೂಸ್ ಸಾಬೀತು ಮಾಡಿತ್ತು. ಈ ತಿರುಚಿದ ವಿಡಿಯೋದಲ್ಲಿ 2013ರಲ್ಲಿ (ಯುಪಿಎ ಅವಧಿ) ಜಿಡಿಪಿ ಶೇ. 5ಕ್ಕೆ ಇಳಿದಿದ್ದನ್ನು ರವೀಶ್ ಟೀಕಿಸಲೇ ಇಲ್ಲ ಎಂದು ತೋರಿಸುವ ಯತ್ನ ಮಾಡಲಾಗಿತ್ತು. ರವೀಶ್ ಕುಮಾರ್ ರವರು ಟೀಕಿಸಿದ ಭಾಗವನ್ನು ಎಡಿಟ್ ಮಾಡಿ ತೆಗೆದು ಹಾಕಲಾಗಿದೆ ಮತ್ತು ‘ಶೇ. 5ಕ್ಕಿಂತ ಜಿಡಿಪಿ ಕಡಿಮೆ ಇರುವ ಎಷ್ಟು ದೇಶಗಳಿಲ್ಲ? ಭಾರತವೂ ಸುಧಾರಿಸುತ್ತದೆ’ ಎಂದು ತಿರುಚಲಾಗಿತ್ತು. ಆದರೆ ಸತ್ಯವೇ ಬೇರೆಯಿದೆ.

ಸತ್ಯ: 2013 ಮತ್ತು 2019ರ ಆರ್ಥಿಕ ಕುಸಿತು ರವೀಶ್ ಮಾತು ಆರಂಭವಾಗುವುದೇ ಒಂದೇ ಶೈಲಿಯಿಂದ. ಆಗಲೂ ಅವರು ಸರ್ಕಾರವನ್ನು ಟೀಕಿಸಿದ್ದರು. ಈಗಲೂ ಟೀಕಿಸಿದ್ದಾರೆ. ಆದರೆ ಆಗ ಸರ್ಕಾರವನ್ನು ಟೀಕಿಸಿರಲೇ ಇಲ್ಲ ಎಂದು ತಿರುಚಿದ ವಿಡಿಯೋ ಇಟ್ಟುಕೊಂಡು ಕೆಲವರು ಹಾರಾಡುತ್ತಿದ್ದಾರೆ.

ವಿಚಿತ್ರ ಎಂದರೆ, ಈ ತಿರುಚಿದ ವಿಡಿಯೋ ಇಟ್ಟುಕೊಂಡೇ ಕೆಲವು ಪತ್ರಕರ್ತರೂ ಟ್ವೀಟ್ ಮಾಡುವ ಮಟ್ಟಕ್ಕೆ ಇಳಿದಿದ್ದಾರೆ!
ಅಲ್ಟ್ ನ್ಯೂಸ್ ಅವತ್ತೂ ಸತ್ಯವನ್ನು ತೋರಿಸಿತ್ತು, ಈಗಲೂ ತೋರಿಸಿದೆ. ಎರಡೂ ವರ್ಸನ್‍ಗಳ ವಿಡಿಯೋ ತುಣುಕುಗಳನ್ನು ನೀವೇ ಗಮನಿಸಿ….

 

(ಕೃಪೆ: ಆಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...