Homeಎಕಾನಮಿವಿಡಿಯೋ ತಿರುಚಲು ಸಿಕ್ಕಿಬಿದ್ದ ಕಳ್ಳರು: 2013ರಲ್ಲಿ ರವೀಶ್‍ಕುಮಾರ್ ನಿಜವಾಗಿ ಹೇಳಿದ್ದೇನು?

ವಿಡಿಯೋ ತಿರುಚಲು ಸಿಕ್ಕಿಬಿದ್ದ ಕಳ್ಳರು: 2013ರಲ್ಲಿ ರವೀಶ್‍ಕುಮಾರ್ ನಿಜವಾಗಿ ಹೇಳಿದ್ದೇನು?

- Advertisement -
- Advertisement -

ಜನಾನುರಾಗಿ ಪತ್ರಕರ್ತ ರವೀಶ್‍ಕುಮಾರ್ ಮ್ಯಾಗ್ಸ್ಸೆಸ್ಸೆ ಪ್ರಶಸ್ತಿ ಸ್ವೀಕರಿಸಲು ಇಲ್ಲಿಂದ ಮನಿಲಾಕ್ಕೆ ಹೊರಟ ಸಂದರ್ಭದಲ್ಲಿ ಅವರ ವಿರುದ್ಧ ಮತ್ತೆ ಕೆಲವರು ಅಪಪ್ರಚಾರ ಶುರು ಮಾಡಿದರು. 2013ರ ತಿರುಚುದ ವಿಡಿಯೋ ಬಳಸಿ ರವೀಶ್‍ಕುಮಾರ್ ಹಿಪಾಕ್ರೈಟ್ ಅಂದರೆ ಆಷಾಢಭೂತಿ ಎಂದೆಲ್ಲ ಸುಳ್ಳನ್ನು ಹರಡಲಾಗುತ್ತಿದೆ.

ಮಿಥ್ಯ: 2013ರಲ್ಲಿ ಜಿಡಿಪಿ ಬೆಳವಣಿಗೆ ಕುಸಿದಿದ್ದರ ಕುರಿತು ರವೀಶ್‍ಕುಮಾರ್ ನಡೆಸಿಕೊಟ್ಟ ಕಾರ್ಯಕ್ರಮದ 35 ಸೆಕೆಂಡುಗಳ ವಿಡಿಯೋ ಕ್ಲಿಪ್ ಅನ್ನು ಆ ಅಪಪ್ರಚಾರದ ಪ್ರೊಪಗಂಡಾ ತೊರಿಸುತ್ತೆ. ಪಕ್ಕದಲ್ಲೇ 2019ರ ಜಿಡಿಪಿ ಕುಸಿತ ಕುರಿತು ಮಾತಾಡಿದ್ದನ್ನೂ ಇದು ತೋರಿಸುತ್ತದೆ. ಆದರೆ, 2013ರ ವಿಡಿಯೋ ಕ್ಲಿಪ್ ತಿರುಚಲ್ಪಟ್ಟಿದ್ದು ಎಂದು ಅವತ್ತೇ ಅಲ್ಟ್ ನ್ಯೂಸ್ ಸಾಬೀತು ಮಾಡಿತ್ತು. ಈ ತಿರುಚಿದ ವಿಡಿಯೋದಲ್ಲಿ 2013ರಲ್ಲಿ (ಯುಪಿಎ ಅವಧಿ) ಜಿಡಿಪಿ ಶೇ. 5ಕ್ಕೆ ಇಳಿದಿದ್ದನ್ನು ರವೀಶ್ ಟೀಕಿಸಲೇ ಇಲ್ಲ ಎಂದು ತೋರಿಸುವ ಯತ್ನ ಮಾಡಲಾಗಿತ್ತು. ರವೀಶ್ ಕುಮಾರ್ ರವರು ಟೀಕಿಸಿದ ಭಾಗವನ್ನು ಎಡಿಟ್ ಮಾಡಿ ತೆಗೆದು ಹಾಕಲಾಗಿದೆ ಮತ್ತು ‘ಶೇ. 5ಕ್ಕಿಂತ ಜಿಡಿಪಿ ಕಡಿಮೆ ಇರುವ ಎಷ್ಟು ದೇಶಗಳಿಲ್ಲ? ಭಾರತವೂ ಸುಧಾರಿಸುತ್ತದೆ’ ಎಂದು ತಿರುಚಲಾಗಿತ್ತು. ಆದರೆ ಸತ್ಯವೇ ಬೇರೆಯಿದೆ.

ಸತ್ಯ: 2013 ಮತ್ತು 2019ರ ಆರ್ಥಿಕ ಕುಸಿತು ರವೀಶ್ ಮಾತು ಆರಂಭವಾಗುವುದೇ ಒಂದೇ ಶೈಲಿಯಿಂದ. ಆಗಲೂ ಅವರು ಸರ್ಕಾರವನ್ನು ಟೀಕಿಸಿದ್ದರು. ಈಗಲೂ ಟೀಕಿಸಿದ್ದಾರೆ. ಆದರೆ ಆಗ ಸರ್ಕಾರವನ್ನು ಟೀಕಿಸಿರಲೇ ಇಲ್ಲ ಎಂದು ತಿರುಚಿದ ವಿಡಿಯೋ ಇಟ್ಟುಕೊಂಡು ಕೆಲವರು ಹಾರಾಡುತ್ತಿದ್ದಾರೆ.

ವಿಚಿತ್ರ ಎಂದರೆ, ಈ ತಿರುಚಿದ ವಿಡಿಯೋ ಇಟ್ಟುಕೊಂಡೇ ಕೆಲವು ಪತ್ರಕರ್ತರೂ ಟ್ವೀಟ್ ಮಾಡುವ ಮಟ್ಟಕ್ಕೆ ಇಳಿದಿದ್ದಾರೆ!
ಅಲ್ಟ್ ನ್ಯೂಸ್ ಅವತ್ತೂ ಸತ್ಯವನ್ನು ತೋರಿಸಿತ್ತು, ಈಗಲೂ ತೋರಿಸಿದೆ. ಎರಡೂ ವರ್ಸನ್‍ಗಳ ವಿಡಿಯೋ ತುಣುಕುಗಳನ್ನು ನೀವೇ ಗಮನಿಸಿ….

 

(ಕೃಪೆ: ಆಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...