Homeಎಕಾನಮಿವಿಡಿಯೋ ತಿರುಚಲು ಸಿಕ್ಕಿಬಿದ್ದ ಕಳ್ಳರು: 2013ರಲ್ಲಿ ರವೀಶ್‍ಕುಮಾರ್ ನಿಜವಾಗಿ ಹೇಳಿದ್ದೇನು?

ವಿಡಿಯೋ ತಿರುಚಲು ಸಿಕ್ಕಿಬಿದ್ದ ಕಳ್ಳರು: 2013ರಲ್ಲಿ ರವೀಶ್‍ಕುಮಾರ್ ನಿಜವಾಗಿ ಹೇಳಿದ್ದೇನು?

- Advertisement -
- Advertisement -

ಜನಾನುರಾಗಿ ಪತ್ರಕರ್ತ ರವೀಶ್‍ಕುಮಾರ್ ಮ್ಯಾಗ್ಸ್ಸೆಸ್ಸೆ ಪ್ರಶಸ್ತಿ ಸ್ವೀಕರಿಸಲು ಇಲ್ಲಿಂದ ಮನಿಲಾಕ್ಕೆ ಹೊರಟ ಸಂದರ್ಭದಲ್ಲಿ ಅವರ ವಿರುದ್ಧ ಮತ್ತೆ ಕೆಲವರು ಅಪಪ್ರಚಾರ ಶುರು ಮಾಡಿದರು. 2013ರ ತಿರುಚುದ ವಿಡಿಯೋ ಬಳಸಿ ರವೀಶ್‍ಕುಮಾರ್ ಹಿಪಾಕ್ರೈಟ್ ಅಂದರೆ ಆಷಾಢಭೂತಿ ಎಂದೆಲ್ಲ ಸುಳ್ಳನ್ನು ಹರಡಲಾಗುತ್ತಿದೆ.

ಮಿಥ್ಯ: 2013ರಲ್ಲಿ ಜಿಡಿಪಿ ಬೆಳವಣಿಗೆ ಕುಸಿದಿದ್ದರ ಕುರಿತು ರವೀಶ್‍ಕುಮಾರ್ ನಡೆಸಿಕೊಟ್ಟ ಕಾರ್ಯಕ್ರಮದ 35 ಸೆಕೆಂಡುಗಳ ವಿಡಿಯೋ ಕ್ಲಿಪ್ ಅನ್ನು ಆ ಅಪಪ್ರಚಾರದ ಪ್ರೊಪಗಂಡಾ ತೊರಿಸುತ್ತೆ. ಪಕ್ಕದಲ್ಲೇ 2019ರ ಜಿಡಿಪಿ ಕುಸಿತ ಕುರಿತು ಮಾತಾಡಿದ್ದನ್ನೂ ಇದು ತೋರಿಸುತ್ತದೆ. ಆದರೆ, 2013ರ ವಿಡಿಯೋ ಕ್ಲಿಪ್ ತಿರುಚಲ್ಪಟ್ಟಿದ್ದು ಎಂದು ಅವತ್ತೇ ಅಲ್ಟ್ ನ್ಯೂಸ್ ಸಾಬೀತು ಮಾಡಿತ್ತು. ಈ ತಿರುಚಿದ ವಿಡಿಯೋದಲ್ಲಿ 2013ರಲ್ಲಿ (ಯುಪಿಎ ಅವಧಿ) ಜಿಡಿಪಿ ಶೇ. 5ಕ್ಕೆ ಇಳಿದಿದ್ದನ್ನು ರವೀಶ್ ಟೀಕಿಸಲೇ ಇಲ್ಲ ಎಂದು ತೋರಿಸುವ ಯತ್ನ ಮಾಡಲಾಗಿತ್ತು. ರವೀಶ್ ಕುಮಾರ್ ರವರು ಟೀಕಿಸಿದ ಭಾಗವನ್ನು ಎಡಿಟ್ ಮಾಡಿ ತೆಗೆದು ಹಾಕಲಾಗಿದೆ ಮತ್ತು ‘ಶೇ. 5ಕ್ಕಿಂತ ಜಿಡಿಪಿ ಕಡಿಮೆ ಇರುವ ಎಷ್ಟು ದೇಶಗಳಿಲ್ಲ? ಭಾರತವೂ ಸುಧಾರಿಸುತ್ತದೆ’ ಎಂದು ತಿರುಚಲಾಗಿತ್ತು. ಆದರೆ ಸತ್ಯವೇ ಬೇರೆಯಿದೆ.

ಸತ್ಯ: 2013 ಮತ್ತು 2019ರ ಆರ್ಥಿಕ ಕುಸಿತು ರವೀಶ್ ಮಾತು ಆರಂಭವಾಗುವುದೇ ಒಂದೇ ಶೈಲಿಯಿಂದ. ಆಗಲೂ ಅವರು ಸರ್ಕಾರವನ್ನು ಟೀಕಿಸಿದ್ದರು. ಈಗಲೂ ಟೀಕಿಸಿದ್ದಾರೆ. ಆದರೆ ಆಗ ಸರ್ಕಾರವನ್ನು ಟೀಕಿಸಿರಲೇ ಇಲ್ಲ ಎಂದು ತಿರುಚಿದ ವಿಡಿಯೋ ಇಟ್ಟುಕೊಂಡು ಕೆಲವರು ಹಾರಾಡುತ್ತಿದ್ದಾರೆ.

ವಿಚಿತ್ರ ಎಂದರೆ, ಈ ತಿರುಚಿದ ವಿಡಿಯೋ ಇಟ್ಟುಕೊಂಡೇ ಕೆಲವು ಪತ್ರಕರ್ತರೂ ಟ್ವೀಟ್ ಮಾಡುವ ಮಟ್ಟಕ್ಕೆ ಇಳಿದಿದ್ದಾರೆ!
ಅಲ್ಟ್ ನ್ಯೂಸ್ ಅವತ್ತೂ ಸತ್ಯವನ್ನು ತೋರಿಸಿತ್ತು, ಈಗಲೂ ತೋರಿಸಿದೆ. ಎರಡೂ ವರ್ಸನ್‍ಗಳ ವಿಡಿಯೋ ತುಣುಕುಗಳನ್ನು ನೀವೇ ಗಮನಿಸಿ….

 

(ಕೃಪೆ: ಆಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...