Homeಮುಖಪುಟಗಡಿಯಾರ ಚಿಹ್ನೆ ಬಳಕೆ ಕುರಿತು 'ಸೂಚನೆ' ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ

ಗಡಿಯಾರ ಚಿಹ್ನೆ ಬಳಕೆ ಕುರಿತು ‘ಸೂಚನೆ’ ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ

- Advertisement -
- Advertisement -

ತಮ್ಮ ಪಕ್ಷದ ‘ಗಡಿಯಾರ ಚಿಹ್ನೆ’ಯನ್ನು ‘ವಿಚಾರಣಾಧೀನ’ ಎಂಬುವುದನ್ನು ಸೂಚಿಸಿ ಪತ್ರಿಕೆಗಳಲ್ಲಿ ಹೊಸದಾಗಿ ಜಾಹಿರಾತುಗಳನ್ನು ಪ್ರಕಟಿಸುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣವು ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು 36 ಗಂಟೆಗಳ ಒಳಗೆ ಪತ್ರಿಕೆಗಳಲ್ಲಿ ಹೊಸದಾಗಿ ಸೂಚನೆಗಳನ್ನು ಪ್ರಕಟಿಸುವಂತೆ ಅಜಿತ್ ಪವಾರ್ ಅವರ ಬಣಕ್ಕೆ ನಿರ್ದೇಶನ ನೀಡಿದೆ. ಗಡಿಯಾರ ಚಿಹ್ನೆ

“ವ್ಯಾಪಕ ಪ್ರಚಾರದೊಂದಿಗೆ ಪತ್ರಿಕೆಗಳ ಪ್ರಮುಖ ಭಾಗದಲ್ಲಿ ಇದನ್ನು ಪ್ರಕಟಿಸ ಬೇಕು” ಎಂದು ನ್ಯಾಯಾಲಯ ಹೇಳಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ “ಗಡಿಯಾರ” ಚಿಹ್ನೆಯನ್ನು ಬಳಸದಂತೆ ಅಜಿತ್ ಪವಾರ್ ಅವರ ಬಣಕ್ಕೆ ನಿರ್ದೇಶನ ನೀಡಬೇಕು ಎಂದು ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣವು ಸುಪ್ರೀಂಕೋರ್ಟ್‌ಗೆ ಕೋರಿತ್ತು. ಈ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 24 ರಂದು, ನ್ಯಾಯಾಲಯವು ಅಜಿತ್ ಪವಾರ್ ಬಣಕ್ಕೆ ರಾಜ್ಯ ಚುನಾವಣೆಯ ಎಲ್ಲಾ ಪ್ರಚಾರ ಸಾಮಗ್ರಿಗಳಿಗೆ ‘ವಿಚಾರಣಾಧೀನ’ ಎಂಬ ಸೂಚನೆ ಸೇರಿಸುವಂತೆ ನಿರ್ದೇಶಿಸಿತ್ತು. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಗಡಿಯಾರ ಚಿಹ್ನೆ

ರಾಜ್ಯ ಚುನಾವಣೆಯಲ್ಲಿ ಅಜಿತ್ ಪವಾರ್ ಪಾಳಯಕ್ಕೆ ಹೊಸ ಚಿಹ್ನೆ ನೀಡಬೇಕು ಎಂದು ಕೋರಿ ಶರದ್ ಪವಾರ್ ಬಣ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಪ್ರತಿಕ್ರಿಯೆಯಾಗಿ ಅಜಿತ್ ಪವಾರ್ ಬಣಕ್ಕೆ ಪ್ರತಿಯಾಗಿ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ಈ ನಡುವೆ ಶರದ್ ಪವಾರ್ ಬಣದ ನಾಯಕಿ ಸುಪ್ರಿಯಾ ಸುಳೆ ಬುಧವಾರ ಅಜಿತ್ ಪವಾರ್ ಜೊತೆಗೆ ಯಾವುದೆ ಹೊಂದಾಣಿಕೆ ಇಲ್ಲ ಎಂದಿದ್ದು, ಊಹಾಪೋಹಗಳನ್ನು ತಿರಸ್ಕರಿಸಿದ್ದಾರೆ. ಎರಡು ಬಣಗಳ ನಡುವಿನ ರಾಜಕೀಯ ಜಗಳ ನಿಜವಾಗಿದ್ದು, ಅಜಿತ್ ಪವಾರ್ ಅವರು ಸ್ವಯಂಪ್ರೇರಿತವಾಗಿ ಪಕ್ಷವನ್ನು ತೊರೆದಿದ್ದಾರೆ ಎಂದು ದಿ ಹಿಂದೂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಹೇಳಿದ್ದಾರೆ.

2023ರ ಜುಲೈ ತಿಂಗಳಲ್ಲಿ ಅಜಿತ್ ಪವಾರ್ ಅವರು ಪಕ್ಷದ ಹಲವಾರು ಶಾಸಕರೊಂದಿಗೆ ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರವನ್ನು ಸೇರಿಕೊಂಡಿದ್ದರು. ಈ ವೇಳೆಗೆ ಸರ್ಕಾರವು ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣವನ್ನು ಒಳಗೊಂಡಿತ್ತು. ಸಮ್ಮಿಶ್ರಕ್ಕೆ ಸೇರಿದ ನಂತರ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾದರು.

ಇದರ ನಂತರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ವಿಭಜನೆಯಾಗಿತ್ತು. ಒಂದು ಬಣ ಶರದ್ ಪವಾರ್ ಅವರ ಬೆಂಬಲಕ್ಕೆ ನಿಂತರೆ, ಇನ್ನೊಂದು ಬಣ ಅಜಿತ್ ಪವಾರ್ ಅವರನ್ನು ಬೆಂಬಲಿಸಿತ್ತು. ಅದರ ನಂತರ ಫೆಬ್ರವರಿಯಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣವನ್ನು ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವೆಂದು ಗುರುತಿಸಿ ಗಡಿಯಾರದ ಚಿಹ್ನೆಯನ್ನು  ಅವರಿಗೆ ನಿಗದಿಪಡಿಸಿತ್ತು.

ಇದೇ ವೇಳೆ ಚುನಾವಣಾ ಆಯೋಗ ಶರದ್ ಪವಾರ್ ಅವರ ಬಣಕ್ಕೆ “ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ – ಶರದ್ಚಂದ್ರ ಪವಾರ್” ಎಂಬ ಹೆಸರನ್ನು ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ “ತುತ್ತೂರು ಊದುವ ವ್ಯಕ್ತಿ”ಯ ಚಿಹ್ನೆಯನ್ನು ನಿಗದಿಪಡಿಸಿತ್ತು. ಚುನಾವಣಾ ಆಯೋಗದ ಈ ತೀರ್ಮಾನದ ವಿರುದ್ಧ ಶರದ್ ಪವಾರ್ ನೇತೃತ್ವದ ಬಣ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಮಾರ್ಚ್‌ನಲ್ಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ಅಜಿತ್ ಪವಾರ್ ನೇತೃತ್ವದ ಬಣವು ಲೋಕಸಭೆ ಚುನಾವಣೆಗೆ ಗಡಿಯಾರ ಚಿಹ್ನೆಯನ್ನು ಬಳಸಲು ಅನುಮತಿಸುವುದಾಗಿ ತೀರ್ಪು ನೀಡಿತು. ಆದಾಗ್ಯೂ, ಬಣವು ಚಿಹ್ನೆಯ ಬಳಕೆಯು ‘ವಿಚಾರಣಾಧೀನವಾಗಿದೆ’ ಮತ್ತು ಈ ಪ್ರಕಣದ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿ ಪತ್ರಿಕೆಗಳಲ್ಲಿ ಸಾರ್ವಜನಿಕ ನೋಟಿಸ್ ನೀಡುವಂತೆ ಹೇಳಿತ್ತು.

ಅದೇ ವೇಳೆಗೆ ಅಜಿತ್ ಪವಾರ್ ಬಣವು ತನ್ನ ಚುನಾವಣಾ ಪ್ರಚಾರ ಸಾಮಗ್ರಿಗಳಲ್ಲಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಸೇರಿದಂತೆ ಗಡಿಯಾರದ ಚಿಹ್ನೆಯ ಬಳಕೆಯನ್ನು ‘ವಿಚಾರಣಾಧೀನ’ ಎಂದು ನಮೂದಿಸುವಂತೆ ಆ ಸಮಯದಲ್ಲಿ ನಿರ್ದೇಶಿಸಲಾಗಿತ್ತು.

ಇದನ್ನೂ ಓದಿ: PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...