Homeಮುಖಪುಟಗಡಿಯಾರ ಚಿಹ್ನೆ ಬಳಕೆ ಕುರಿತು 'ಸೂಚನೆ' ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ

ಗಡಿಯಾರ ಚಿಹ್ನೆ ಬಳಕೆ ಕುರಿತು ‘ಸೂಚನೆ’ ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ

- Advertisement -
- Advertisement -

ತಮ್ಮ ಪಕ್ಷದ ‘ಗಡಿಯಾರ ಚಿಹ್ನೆ’ಯನ್ನು ‘ವಿಚಾರಣಾಧೀನ’ ಎಂಬುವುದನ್ನು ಸೂಚಿಸಿ ಪತ್ರಿಕೆಗಳಲ್ಲಿ ಹೊಸದಾಗಿ ಜಾಹಿರಾತುಗಳನ್ನು ಪ್ರಕಟಿಸುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣವು ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು 36 ಗಂಟೆಗಳ ಒಳಗೆ ಪತ್ರಿಕೆಗಳಲ್ಲಿ ಹೊಸದಾಗಿ ಸೂಚನೆಗಳನ್ನು ಪ್ರಕಟಿಸುವಂತೆ ಅಜಿತ್ ಪವಾರ್ ಅವರ ಬಣಕ್ಕೆ ನಿರ್ದೇಶನ ನೀಡಿದೆ. ಗಡಿಯಾರ ಚಿಹ್ನೆ

“ವ್ಯಾಪಕ ಪ್ರಚಾರದೊಂದಿಗೆ ಪತ್ರಿಕೆಗಳ ಪ್ರಮುಖ ಭಾಗದಲ್ಲಿ ಇದನ್ನು ಪ್ರಕಟಿಸ ಬೇಕು” ಎಂದು ನ್ಯಾಯಾಲಯ ಹೇಳಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ “ಗಡಿಯಾರ” ಚಿಹ್ನೆಯನ್ನು ಬಳಸದಂತೆ ಅಜಿತ್ ಪವಾರ್ ಅವರ ಬಣಕ್ಕೆ ನಿರ್ದೇಶನ ನೀಡಬೇಕು ಎಂದು ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣವು ಸುಪ್ರೀಂಕೋರ್ಟ್‌ಗೆ ಕೋರಿತ್ತು. ಈ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 24 ರಂದು, ನ್ಯಾಯಾಲಯವು ಅಜಿತ್ ಪವಾರ್ ಬಣಕ್ಕೆ ರಾಜ್ಯ ಚುನಾವಣೆಯ ಎಲ್ಲಾ ಪ್ರಚಾರ ಸಾಮಗ್ರಿಗಳಿಗೆ ‘ವಿಚಾರಣಾಧೀನ’ ಎಂಬ ಸೂಚನೆ ಸೇರಿಸುವಂತೆ ನಿರ್ದೇಶಿಸಿತ್ತು. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಗಡಿಯಾರ ಚಿಹ್ನೆ

ರಾಜ್ಯ ಚುನಾವಣೆಯಲ್ಲಿ ಅಜಿತ್ ಪವಾರ್ ಪಾಳಯಕ್ಕೆ ಹೊಸ ಚಿಹ್ನೆ ನೀಡಬೇಕು ಎಂದು ಕೋರಿ ಶರದ್ ಪವಾರ್ ಬಣ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಪ್ರತಿಕ್ರಿಯೆಯಾಗಿ ಅಜಿತ್ ಪವಾರ್ ಬಣಕ್ಕೆ ಪ್ರತಿಯಾಗಿ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ಈ ನಡುವೆ ಶರದ್ ಪವಾರ್ ಬಣದ ನಾಯಕಿ ಸುಪ್ರಿಯಾ ಸುಳೆ ಬುಧವಾರ ಅಜಿತ್ ಪವಾರ್ ಜೊತೆಗೆ ಯಾವುದೆ ಹೊಂದಾಣಿಕೆ ಇಲ್ಲ ಎಂದಿದ್ದು, ಊಹಾಪೋಹಗಳನ್ನು ತಿರಸ್ಕರಿಸಿದ್ದಾರೆ. ಎರಡು ಬಣಗಳ ನಡುವಿನ ರಾಜಕೀಯ ಜಗಳ ನಿಜವಾಗಿದ್ದು, ಅಜಿತ್ ಪವಾರ್ ಅವರು ಸ್ವಯಂಪ್ರೇರಿತವಾಗಿ ಪಕ್ಷವನ್ನು ತೊರೆದಿದ್ದಾರೆ ಎಂದು ದಿ ಹಿಂದೂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಹೇಳಿದ್ದಾರೆ.

2023ರ ಜುಲೈ ತಿಂಗಳಲ್ಲಿ ಅಜಿತ್ ಪವಾರ್ ಅವರು ಪಕ್ಷದ ಹಲವಾರು ಶಾಸಕರೊಂದಿಗೆ ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರವನ್ನು ಸೇರಿಕೊಂಡಿದ್ದರು. ಈ ವೇಳೆಗೆ ಸರ್ಕಾರವು ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣವನ್ನು ಒಳಗೊಂಡಿತ್ತು. ಸಮ್ಮಿಶ್ರಕ್ಕೆ ಸೇರಿದ ನಂತರ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾದರು.

ಇದರ ನಂತರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ವಿಭಜನೆಯಾಗಿತ್ತು. ಒಂದು ಬಣ ಶರದ್ ಪವಾರ್ ಅವರ ಬೆಂಬಲಕ್ಕೆ ನಿಂತರೆ, ಇನ್ನೊಂದು ಬಣ ಅಜಿತ್ ಪವಾರ್ ಅವರನ್ನು ಬೆಂಬಲಿಸಿತ್ತು. ಅದರ ನಂತರ ಫೆಬ್ರವರಿಯಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣವನ್ನು ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವೆಂದು ಗುರುತಿಸಿ ಗಡಿಯಾರದ ಚಿಹ್ನೆಯನ್ನು  ಅವರಿಗೆ ನಿಗದಿಪಡಿಸಿತ್ತು.

ಇದೇ ವೇಳೆ ಚುನಾವಣಾ ಆಯೋಗ ಶರದ್ ಪವಾರ್ ಅವರ ಬಣಕ್ಕೆ “ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ – ಶರದ್ಚಂದ್ರ ಪವಾರ್” ಎಂಬ ಹೆಸರನ್ನು ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ “ತುತ್ತೂರು ಊದುವ ವ್ಯಕ್ತಿ”ಯ ಚಿಹ್ನೆಯನ್ನು ನಿಗದಿಪಡಿಸಿತ್ತು. ಚುನಾವಣಾ ಆಯೋಗದ ಈ ತೀರ್ಮಾನದ ವಿರುದ್ಧ ಶರದ್ ಪವಾರ್ ನೇತೃತ್ವದ ಬಣ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಮಾರ್ಚ್‌ನಲ್ಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ಅಜಿತ್ ಪವಾರ್ ನೇತೃತ್ವದ ಬಣವು ಲೋಕಸಭೆ ಚುನಾವಣೆಗೆ ಗಡಿಯಾರ ಚಿಹ್ನೆಯನ್ನು ಬಳಸಲು ಅನುಮತಿಸುವುದಾಗಿ ತೀರ್ಪು ನೀಡಿತು. ಆದಾಗ್ಯೂ, ಬಣವು ಚಿಹ್ನೆಯ ಬಳಕೆಯು ‘ವಿಚಾರಣಾಧೀನವಾಗಿದೆ’ ಮತ್ತು ಈ ಪ್ರಕಣದ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿ ಪತ್ರಿಕೆಗಳಲ್ಲಿ ಸಾರ್ವಜನಿಕ ನೋಟಿಸ್ ನೀಡುವಂತೆ ಹೇಳಿತ್ತು.

ಅದೇ ವೇಳೆಗೆ ಅಜಿತ್ ಪವಾರ್ ಬಣವು ತನ್ನ ಚುನಾವಣಾ ಪ್ರಚಾರ ಸಾಮಗ್ರಿಗಳಲ್ಲಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಸೇರಿದಂತೆ ಗಡಿಯಾರದ ಚಿಹ್ನೆಯ ಬಳಕೆಯನ್ನು ‘ವಿಚಾರಣಾಧೀನ’ ಎಂದು ನಮೂದಿಸುವಂತೆ ಆ ಸಮಯದಲ್ಲಿ ನಿರ್ದೇಶಿಸಲಾಗಿತ್ತು.

ಇದನ್ನೂ ಓದಿ: PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...