Homeಮುಖಪುಟಗಡಿಯಾರ ಚಿಹ್ನೆ ಬಳಕೆ ಕುರಿತು 'ಸೂಚನೆ' ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ

ಗಡಿಯಾರ ಚಿಹ್ನೆ ಬಳಕೆ ಕುರಿತು ‘ಸೂಚನೆ’ ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ

- Advertisement -
- Advertisement -

ತಮ್ಮ ಪಕ್ಷದ ‘ಗಡಿಯಾರ ಚಿಹ್ನೆ’ಯನ್ನು ‘ವಿಚಾರಣಾಧೀನ’ ಎಂಬುವುದನ್ನು ಸೂಚಿಸಿ ಪತ್ರಿಕೆಗಳಲ್ಲಿ ಹೊಸದಾಗಿ ಜಾಹಿರಾತುಗಳನ್ನು ಪ್ರಕಟಿಸುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣವು ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು 36 ಗಂಟೆಗಳ ಒಳಗೆ ಪತ್ರಿಕೆಗಳಲ್ಲಿ ಹೊಸದಾಗಿ ಸೂಚನೆಗಳನ್ನು ಪ್ರಕಟಿಸುವಂತೆ ಅಜಿತ್ ಪವಾರ್ ಅವರ ಬಣಕ್ಕೆ ನಿರ್ದೇಶನ ನೀಡಿದೆ. ಗಡಿಯಾರ ಚಿಹ್ನೆ

“ವ್ಯಾಪಕ ಪ್ರಚಾರದೊಂದಿಗೆ ಪತ್ರಿಕೆಗಳ ಪ್ರಮುಖ ಭಾಗದಲ್ಲಿ ಇದನ್ನು ಪ್ರಕಟಿಸ ಬೇಕು” ಎಂದು ನ್ಯಾಯಾಲಯ ಹೇಳಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ “ಗಡಿಯಾರ” ಚಿಹ್ನೆಯನ್ನು ಬಳಸದಂತೆ ಅಜಿತ್ ಪವಾರ್ ಅವರ ಬಣಕ್ಕೆ ನಿರ್ದೇಶನ ನೀಡಬೇಕು ಎಂದು ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣವು ಸುಪ್ರೀಂಕೋರ್ಟ್‌ಗೆ ಕೋರಿತ್ತು. ಈ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 24 ರಂದು, ನ್ಯಾಯಾಲಯವು ಅಜಿತ್ ಪವಾರ್ ಬಣಕ್ಕೆ ರಾಜ್ಯ ಚುನಾವಣೆಯ ಎಲ್ಲಾ ಪ್ರಚಾರ ಸಾಮಗ್ರಿಗಳಿಗೆ ‘ವಿಚಾರಣಾಧೀನ’ ಎಂಬ ಸೂಚನೆ ಸೇರಿಸುವಂತೆ ನಿರ್ದೇಶಿಸಿತ್ತು. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಗಡಿಯಾರ ಚಿಹ್ನೆ

ರಾಜ್ಯ ಚುನಾವಣೆಯಲ್ಲಿ ಅಜಿತ್ ಪವಾರ್ ಪಾಳಯಕ್ಕೆ ಹೊಸ ಚಿಹ್ನೆ ನೀಡಬೇಕು ಎಂದು ಕೋರಿ ಶರದ್ ಪವಾರ್ ಬಣ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಪ್ರತಿಕ್ರಿಯೆಯಾಗಿ ಅಜಿತ್ ಪವಾರ್ ಬಣಕ್ಕೆ ಪ್ರತಿಯಾಗಿ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ಈ ನಡುವೆ ಶರದ್ ಪವಾರ್ ಬಣದ ನಾಯಕಿ ಸುಪ್ರಿಯಾ ಸುಳೆ ಬುಧವಾರ ಅಜಿತ್ ಪವಾರ್ ಜೊತೆಗೆ ಯಾವುದೆ ಹೊಂದಾಣಿಕೆ ಇಲ್ಲ ಎಂದಿದ್ದು, ಊಹಾಪೋಹಗಳನ್ನು ತಿರಸ್ಕರಿಸಿದ್ದಾರೆ. ಎರಡು ಬಣಗಳ ನಡುವಿನ ರಾಜಕೀಯ ಜಗಳ ನಿಜವಾಗಿದ್ದು, ಅಜಿತ್ ಪವಾರ್ ಅವರು ಸ್ವಯಂಪ್ರೇರಿತವಾಗಿ ಪಕ್ಷವನ್ನು ತೊರೆದಿದ್ದಾರೆ ಎಂದು ದಿ ಹಿಂದೂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಹೇಳಿದ್ದಾರೆ.

2023ರ ಜುಲೈ ತಿಂಗಳಲ್ಲಿ ಅಜಿತ್ ಪವಾರ್ ಅವರು ಪಕ್ಷದ ಹಲವಾರು ಶಾಸಕರೊಂದಿಗೆ ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರವನ್ನು ಸೇರಿಕೊಂಡಿದ್ದರು. ಈ ವೇಳೆಗೆ ಸರ್ಕಾರವು ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣವನ್ನು ಒಳಗೊಂಡಿತ್ತು. ಸಮ್ಮಿಶ್ರಕ್ಕೆ ಸೇರಿದ ನಂತರ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾದರು.

ಇದರ ನಂತರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ವಿಭಜನೆಯಾಗಿತ್ತು. ಒಂದು ಬಣ ಶರದ್ ಪವಾರ್ ಅವರ ಬೆಂಬಲಕ್ಕೆ ನಿಂತರೆ, ಇನ್ನೊಂದು ಬಣ ಅಜಿತ್ ಪವಾರ್ ಅವರನ್ನು ಬೆಂಬಲಿಸಿತ್ತು. ಅದರ ನಂತರ ಫೆಬ್ರವರಿಯಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣವನ್ನು ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವೆಂದು ಗುರುತಿಸಿ ಗಡಿಯಾರದ ಚಿಹ್ನೆಯನ್ನು  ಅವರಿಗೆ ನಿಗದಿಪಡಿಸಿತ್ತು.

ಇದೇ ವೇಳೆ ಚುನಾವಣಾ ಆಯೋಗ ಶರದ್ ಪವಾರ್ ಅವರ ಬಣಕ್ಕೆ “ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ – ಶರದ್ಚಂದ್ರ ಪವಾರ್” ಎಂಬ ಹೆಸರನ್ನು ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ “ತುತ್ತೂರು ಊದುವ ವ್ಯಕ್ತಿ”ಯ ಚಿಹ್ನೆಯನ್ನು ನಿಗದಿಪಡಿಸಿತ್ತು. ಚುನಾವಣಾ ಆಯೋಗದ ಈ ತೀರ್ಮಾನದ ವಿರುದ್ಧ ಶರದ್ ಪವಾರ್ ನೇತೃತ್ವದ ಬಣ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಮಾರ್ಚ್‌ನಲ್ಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ಅಜಿತ್ ಪವಾರ್ ನೇತೃತ್ವದ ಬಣವು ಲೋಕಸಭೆ ಚುನಾವಣೆಗೆ ಗಡಿಯಾರ ಚಿಹ್ನೆಯನ್ನು ಬಳಸಲು ಅನುಮತಿಸುವುದಾಗಿ ತೀರ್ಪು ನೀಡಿತು. ಆದಾಗ್ಯೂ, ಬಣವು ಚಿಹ್ನೆಯ ಬಳಕೆಯು ‘ವಿಚಾರಣಾಧೀನವಾಗಿದೆ’ ಮತ್ತು ಈ ಪ್ರಕಣದ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿ ಪತ್ರಿಕೆಗಳಲ್ಲಿ ಸಾರ್ವಜನಿಕ ನೋಟಿಸ್ ನೀಡುವಂತೆ ಹೇಳಿತ್ತು.

ಅದೇ ವೇಳೆಗೆ ಅಜಿತ್ ಪವಾರ್ ಬಣವು ತನ್ನ ಚುನಾವಣಾ ಪ್ರಚಾರ ಸಾಮಗ್ರಿಗಳಲ್ಲಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಸೇರಿದಂತೆ ಗಡಿಯಾರದ ಚಿಹ್ನೆಯ ಬಳಕೆಯನ್ನು ‘ವಿಚಾರಣಾಧೀನ’ ಎಂದು ನಮೂದಿಸುವಂತೆ ಆ ಸಮಯದಲ್ಲಿ ನಿರ್ದೇಶಿಸಲಾಗಿತ್ತು.

ಇದನ್ನೂ ಓದಿ: PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....