Homeಅಂಕಣಗಳುಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಗೋಹತ್ಯೆ ನಿಷೇಧ ವಿಧೇಯಕ ಮತ್ತು ರೈತರ ಹೋರಾಟದ ಕುರಿತು ಗುರುಪ್ರಸಾದ್ ಡಿ.ಎನ್ ರವರ ಲೇಖನ ಓದಿ.

- Advertisement -
- Advertisement -

ಯಾವುದೇ ಬಹು ಸಂಸ್ಕೃತಿಯ ಪ್ರಜಾಪ್ರಭುತ್ವ ದೇಶದಲ್ಲಿ ನಂಬಿಕೆ ಆಚರಣೆಗಳ ವಿಚಾರಕ್ಕೆ ಬಂದಾಗ, ಹಲವು ವರ್ಗಗಳ ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ವಿವಿಧ ಸಮುದಾಯಗಳ ನಡುವೆ ಸಂಧಾನಕ್ಕೆ, ಚೌಕಾಶಿಗೆ ಅವಕಾಶ ಇರಬೇಕು. ಅದಕ್ಕೆ ಪ್ರಭುತ್ವಗಳು-ಆಡಳಿತ ವ್ಯವಸ್ಥೆಗಳು ಸಹಾಯ ಮಾಡಬೇಕು. ಯಾವುದೋ ಒಂದು ಬಲಿಷ್ಟ ಸಂಸ್ಕೃತಿಯು ಮತ್ತೊಂದು ಸಂಸ್ಕೃತಿಯ ಮೇಲೆ ದಬ್ಬಾಳಿಕೆ ಮಾಡುವುದಕ್ಕೆ ಸಹಕರಿಸುವುದನ್ನಾಗಲೀ, ಸಾಂವಿಧಾನಿಕ ತತ್ವಗಳನ್ನು ಗಾಳಿಗೆ ತೂರಿ ಯಾವದೇ ಒಂದು ವರ್ಗದ-ಸಮುದಾಯದ ಹಿತಾಸಕ್ತಿಗೆ ಮಣೆ ಹಾಕಿ ಸಾಮಾನ್ಯ ಹಿತವನ್ನು, ಜನಸಾಮಾನ್ಯರ ಒಟ್ಟಾರೆ ಹಿತಾಸಕ್ತಿಯನ್ನು ಕಡೆಗಣಿಸುವುದನ್ನಾಗಲೀ ಸರ್ಕಾರಗಳು ಮಾಡಲೇಬಾರದು.

ಸ್ವಾತಂತ್ರ್ಯಪೂರ್ವದಿಂದಲೂ ಗೋಹತ್ಯೆ ಈ ದೇಶದಲ್ಲಿ ವಿವಾದಾಸ್ಪದ ಸಂಗತಿಯೇ. ಒಂದು ಸಣ್ಣ ಸಮುದಾಯದ ನಂಬಿಕೆಯಾಗಿ ಯಾವುದೋ ಒಂದು ಕಾಲಘಟ್ಟದಲ್ಲಿ ಹಸುಗಳ ಬಗ್ಗೆ ಪೂಜ್ಯ ಭಾವನೆ ಬೆಳೆದಿರಬಹುದು. ಈ ದೇಶದಲ್ಲಿ ಹಲವು ಸಮುದಾಯಗಳು ತಮ್ಮ ಮಾಂಸಾಹಾರದ ಜೊತೆಗೆ ಗೋಮಾಂಸ ತಿನ್ನುವುದೂ ಕೂಡ ವಾಸ್ತವ. ಹಸುಗಳನ್ನು ಪೂಜಿಸುವ ಆದರೆ ತಮ್ಮ ಮಾಂಸಾಹಾರದಲ್ಲಿ ಗೋವನ್ನು ಹೊಂದಿರದ ಮತ್ತು ಗೋಮಾಂಸ ತಿನ್ನುವವರ ಬಗ್ಗೆ ಯಾವುದೇ ಅಸಹನೆ ತೋರದ ಸಮುದಾಯಗಳೂ ಇವೆ. ಮೊದಲನೆಯ ಸಮುದಾಯದ ಅವೈಚಾರಿಕತೆಯನ್ನು ಮತ್ತು ಗೋಮಾಂಸ ತಿನ್ನುವ ಸಮುದಾಯಗಳ ಅಗತ್ಯಗಳು-ಕಾರಣಗಳನ್ನು ಸದ್ಯಕ್ಕೆ ಬದಿಗಿಟ್ಟರೂ, ಯಾವುದೇ ಆಡಳಿತ ವ್ಯವಸ್ಥೆಯ ಕೆಲಸ ಎರಡೂ ಸಮುದಾಯಗಳ ನಡುವಿನ ಸಂಘರ್ಷಕ್ಕೆ ವೈಚಾರಿಕ ತಳಹದಿಯಲ್ಲಿ, ಸಂವಿಧಾನದ ಆಶಯಗಳಲ್ಲಿ ಸಂಧಾನಕ್ಕೆ ಪ್ರಯತ್ನಿಸಿ, ಪರಿಹಾರಗಳನ್ನು ಸೂಚಿಸುವುದು. ಅಂದರೆ ಅಂತಹ ಚೌಕಾಶಿಗೆ ಇರುವ ಸ್ಪೇಸ್‌ಅನ್ನು ಉಳಿಸಿಕೊಳ್ಳಬೇಕು. ಇಂತಹ ಸಂದರ್ಭವನ್ನು ಊಹಿಸಿಯೇ, ಸಂವಿಧಾನ ರಚನೆಯಲ್ಲಿ, ಗೋರಕ್ಷಣೆಯನ್ನು ರಾಜ್ಯ ನಿರ್ದೇಶಕ ತತ್ವಗಳನ್ನಾಗಿಸಿ, ಆಯಾ ನಾಡಿನ ಸಾಂಸ್ಕೃತಿಕ-ಸಾಮಾಜಿಕ ಸಂದರ್ಭಕ್ಕೆ, ಎಲ್ಲ ಸಮುದಾಯಗಳ ಬೇಡಿಕೆಗಳಿಗೂ ಜಾಗ ನೀಡುವ ಕಾನೂನನ್ನು ರಚಿಸಲು ಸಾಧ್ಯವಾಗುವಂತೆ ಅವಕಾಶ ಒದಗಿಸಿತ್ತು.

ಹಲವು ರಾಜ್ಯ ಸರ್ಕಾರಗಳು ಇಂತಹ ಸಮತೋಲನದ ಕಾನೂನುಗಳನ್ನು ರಚಿಸಿದ್ದವು ಕೂಡ. ಗೋವುಗಳನ್ನು ವಧೆ ಮಾಡದಂತೆ, ಉಳಿದ ಜಾನುವಾರುಗಳ ಭಕ್ಷಣೆಗೆ ಅವಕಾಶ ಮಾಡಿಕೊಡುವ ಕಾನೂನುಗಳು ಬಹುಸಂಸ್ಕೃತಿಯ ಪ್ರಜಾಸತ್ತೆಯಲ್ಲಿ ಚೌಕಾಶಿ ಮಾಡುವ ಪ್ರಕ್ರಿಯೆಯನ್ನು ಎತ್ತಿ ಹಿಡಿದಿತ್ತು. ಆದರೆ, ಈಗ ಹಲವು ರಾಜ್ಯಗಳ ಬಿಜೆಪಿ ಸರ್ಕಾರಗಳು ಹೊಸ ಜಾನುವಾರು ಹತ್ಯೆ ಕಾನೂನುಗಳನ್ನು ರಚಿಸಿ ಅದರಲ್ಲಿ, ಹಸುಗಳು, ಎತ್ತುಗಳು, ಗೊಡ್ಡು ದನಗಳು ಎಲ್ಲವನ್ನು ಹತ್ಯೆ ಮಾಡದಂತೆ ತಡೆದಿವೆ. ಕರ್ನಾಟಕ ಸರ್ಕಾರವೂ ಇಂತಹ ಕರಾಳ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೇವಲ ಒಂದು ಸಮುದಾಯದ ಹಿತಾಸಕ್ತಿಯನ್ನು ಕಾಯುವ, ಉಳಿದ ಸಮುದಾಯಗಳ ಸಂಧಾನಕ್ಕೆ ಕದ ಮುಚ್ಚಿರುವ ರಾಜ್ಯ ಸರ್ಕಾರದ ಕ್ರಮ ಸಂವಿಧಾನತತ್ವಕ್ಕೆ ಬದ್ಧವಾಗಿಲ್ಲ. (ವೈಚಾರಿಕವಾಗಿ, ಕಾನೂನಿನ ಅನುಷ್ಠಾನದ ದೃಷ್ಟಿಯಿಂದಲೂ ಈ ಹೊಸ ಕಾಯ್ದೆ ಸರಿಯಲ್ಲ ಎನ್ನುವ ಚರ್ಚೆಯನ್ನು ಹೊರತುಪಡಿಸಿದರೂ)

ಇದೇ ರೀತಿಯಲ್ಲಿ ಕೇಂದ್ರ ಸರ್ಕಾರ ಕಾರ್ಪೊರೆಟ್ ಹಿತಾಸಕ್ತಿಯನ್ನು ಮಾತ್ರ ಕಾಪಾಡಲು, ರೈತರ ಜೊತೆಗೆ, ರಾಜ್ಯ ಸರ್ಕಾರಗಳ ಜೊತೆಗೆ ಯಾವುದೇ ಸಂಧಾನ-ಚೌಕಾಶಿ ನಡೆಸದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕಾನೂನುಗಳು ಈಗ ತನ್ನ ಕೊರಳಿಗೇ ಸುತ್ತಿಕೊಳ್ಳುತ್ತಿವೆ. ಕಾನೂನು ಜಾರಿ ಮಾಡುವಾಗ ಯಾವುದೇ ಮಾತುಕತೆ ನಡೆಸದೆ, ಈಗ ದೊಡ್ಡ ಮಟ್ಟದ ಪ್ರತಿರೋಧ ಬರುತ್ತಿರುವ ಹೊತ್ತಿನಲ್ಲಿ ರೈತರ ಜೊತೆಗೆ ಚೌಕಾಶಿಗೆ ಇಳಿದಿದೆ. ಆದರೆ ಅಲ್ಲೂ ಪ್ರಾಮಾಣಿಕತೆಯಿಲ್ಲ. ಕಾರ್ಪೊರೆಟ್ ಶಕ್ತಿಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಬಹುತೇಕ ಬೆದರಿಕೆ ರೀತಿಯಲ್ಲಿಯೇ ರೈತರನ್ನು ಮಣಿಸಲು ಪ್ರಯತ್ನ ಮಾಡುತ್ತಿರುವುದು ಇಲ್ಲಿಯವರೆಗೂ ಫಲ ಕೊಟ್ಟಿಲ್ಲ.

ಯಾವುದೇ ಕಾನೂನು-ಕಾಯ್ದೆ ಜಾರಿಗೊಳಿಸುವಾಗ ಹಲವು ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ ಜನ ಸಾಮಾನ್ಯರೆಲ್ಲರ ಹಿತವನ್ನು ಕಾಯುವುದನ್ನು ಸರ್ಕಾರಗಳು ಮನಗಾಣಬೇಕಲ್ಲವೇ?


ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...