Homeಅಂಕಣಗಳುಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಗೋಹತ್ಯೆ ನಿಷೇಧ ವಿಧೇಯಕ ಮತ್ತು ರೈತರ ಹೋರಾಟದ ಕುರಿತು ಗುರುಪ್ರಸಾದ್ ಡಿ.ಎನ್ ರವರ ಲೇಖನ ಓದಿ.

- Advertisement -
- Advertisement -

ಯಾವುದೇ ಬಹು ಸಂಸ್ಕೃತಿಯ ಪ್ರಜಾಪ್ರಭುತ್ವ ದೇಶದಲ್ಲಿ ನಂಬಿಕೆ ಆಚರಣೆಗಳ ವಿಚಾರಕ್ಕೆ ಬಂದಾಗ, ಹಲವು ವರ್ಗಗಳ ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ವಿವಿಧ ಸಮುದಾಯಗಳ ನಡುವೆ ಸಂಧಾನಕ್ಕೆ, ಚೌಕಾಶಿಗೆ ಅವಕಾಶ ಇರಬೇಕು. ಅದಕ್ಕೆ ಪ್ರಭುತ್ವಗಳು-ಆಡಳಿತ ವ್ಯವಸ್ಥೆಗಳು ಸಹಾಯ ಮಾಡಬೇಕು. ಯಾವುದೋ ಒಂದು ಬಲಿಷ್ಟ ಸಂಸ್ಕೃತಿಯು ಮತ್ತೊಂದು ಸಂಸ್ಕೃತಿಯ ಮೇಲೆ ದಬ್ಬಾಳಿಕೆ ಮಾಡುವುದಕ್ಕೆ ಸಹಕರಿಸುವುದನ್ನಾಗಲೀ, ಸಾಂವಿಧಾನಿಕ ತತ್ವಗಳನ್ನು ಗಾಳಿಗೆ ತೂರಿ ಯಾವದೇ ಒಂದು ವರ್ಗದ-ಸಮುದಾಯದ ಹಿತಾಸಕ್ತಿಗೆ ಮಣೆ ಹಾಕಿ ಸಾಮಾನ್ಯ ಹಿತವನ್ನು, ಜನಸಾಮಾನ್ಯರ ಒಟ್ಟಾರೆ ಹಿತಾಸಕ್ತಿಯನ್ನು ಕಡೆಗಣಿಸುವುದನ್ನಾಗಲೀ ಸರ್ಕಾರಗಳು ಮಾಡಲೇಬಾರದು.

ಸ್ವಾತಂತ್ರ್ಯಪೂರ್ವದಿಂದಲೂ ಗೋಹತ್ಯೆ ಈ ದೇಶದಲ್ಲಿ ವಿವಾದಾಸ್ಪದ ಸಂಗತಿಯೇ. ಒಂದು ಸಣ್ಣ ಸಮುದಾಯದ ನಂಬಿಕೆಯಾಗಿ ಯಾವುದೋ ಒಂದು ಕಾಲಘಟ್ಟದಲ್ಲಿ ಹಸುಗಳ ಬಗ್ಗೆ ಪೂಜ್ಯ ಭಾವನೆ ಬೆಳೆದಿರಬಹುದು. ಈ ದೇಶದಲ್ಲಿ ಹಲವು ಸಮುದಾಯಗಳು ತಮ್ಮ ಮಾಂಸಾಹಾರದ ಜೊತೆಗೆ ಗೋಮಾಂಸ ತಿನ್ನುವುದೂ ಕೂಡ ವಾಸ್ತವ. ಹಸುಗಳನ್ನು ಪೂಜಿಸುವ ಆದರೆ ತಮ್ಮ ಮಾಂಸಾಹಾರದಲ್ಲಿ ಗೋವನ್ನು ಹೊಂದಿರದ ಮತ್ತು ಗೋಮಾಂಸ ತಿನ್ನುವವರ ಬಗ್ಗೆ ಯಾವುದೇ ಅಸಹನೆ ತೋರದ ಸಮುದಾಯಗಳೂ ಇವೆ. ಮೊದಲನೆಯ ಸಮುದಾಯದ ಅವೈಚಾರಿಕತೆಯನ್ನು ಮತ್ತು ಗೋಮಾಂಸ ತಿನ್ನುವ ಸಮುದಾಯಗಳ ಅಗತ್ಯಗಳು-ಕಾರಣಗಳನ್ನು ಸದ್ಯಕ್ಕೆ ಬದಿಗಿಟ್ಟರೂ, ಯಾವುದೇ ಆಡಳಿತ ವ್ಯವಸ್ಥೆಯ ಕೆಲಸ ಎರಡೂ ಸಮುದಾಯಗಳ ನಡುವಿನ ಸಂಘರ್ಷಕ್ಕೆ ವೈಚಾರಿಕ ತಳಹದಿಯಲ್ಲಿ, ಸಂವಿಧಾನದ ಆಶಯಗಳಲ್ಲಿ ಸಂಧಾನಕ್ಕೆ ಪ್ರಯತ್ನಿಸಿ, ಪರಿಹಾರಗಳನ್ನು ಸೂಚಿಸುವುದು. ಅಂದರೆ ಅಂತಹ ಚೌಕಾಶಿಗೆ ಇರುವ ಸ್ಪೇಸ್‌ಅನ್ನು ಉಳಿಸಿಕೊಳ್ಳಬೇಕು. ಇಂತಹ ಸಂದರ್ಭವನ್ನು ಊಹಿಸಿಯೇ, ಸಂವಿಧಾನ ರಚನೆಯಲ್ಲಿ, ಗೋರಕ್ಷಣೆಯನ್ನು ರಾಜ್ಯ ನಿರ್ದೇಶಕ ತತ್ವಗಳನ್ನಾಗಿಸಿ, ಆಯಾ ನಾಡಿನ ಸಾಂಸ್ಕೃತಿಕ-ಸಾಮಾಜಿಕ ಸಂದರ್ಭಕ್ಕೆ, ಎಲ್ಲ ಸಮುದಾಯಗಳ ಬೇಡಿಕೆಗಳಿಗೂ ಜಾಗ ನೀಡುವ ಕಾನೂನನ್ನು ರಚಿಸಲು ಸಾಧ್ಯವಾಗುವಂತೆ ಅವಕಾಶ ಒದಗಿಸಿತ್ತು.

ಹಲವು ರಾಜ್ಯ ಸರ್ಕಾರಗಳು ಇಂತಹ ಸಮತೋಲನದ ಕಾನೂನುಗಳನ್ನು ರಚಿಸಿದ್ದವು ಕೂಡ. ಗೋವುಗಳನ್ನು ವಧೆ ಮಾಡದಂತೆ, ಉಳಿದ ಜಾನುವಾರುಗಳ ಭಕ್ಷಣೆಗೆ ಅವಕಾಶ ಮಾಡಿಕೊಡುವ ಕಾನೂನುಗಳು ಬಹುಸಂಸ್ಕೃತಿಯ ಪ್ರಜಾಸತ್ತೆಯಲ್ಲಿ ಚೌಕಾಶಿ ಮಾಡುವ ಪ್ರಕ್ರಿಯೆಯನ್ನು ಎತ್ತಿ ಹಿಡಿದಿತ್ತು. ಆದರೆ, ಈಗ ಹಲವು ರಾಜ್ಯಗಳ ಬಿಜೆಪಿ ಸರ್ಕಾರಗಳು ಹೊಸ ಜಾನುವಾರು ಹತ್ಯೆ ಕಾನೂನುಗಳನ್ನು ರಚಿಸಿ ಅದರಲ್ಲಿ, ಹಸುಗಳು, ಎತ್ತುಗಳು, ಗೊಡ್ಡು ದನಗಳು ಎಲ್ಲವನ್ನು ಹತ್ಯೆ ಮಾಡದಂತೆ ತಡೆದಿವೆ. ಕರ್ನಾಟಕ ಸರ್ಕಾರವೂ ಇಂತಹ ಕರಾಳ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೇವಲ ಒಂದು ಸಮುದಾಯದ ಹಿತಾಸಕ್ತಿಯನ್ನು ಕಾಯುವ, ಉಳಿದ ಸಮುದಾಯಗಳ ಸಂಧಾನಕ್ಕೆ ಕದ ಮುಚ್ಚಿರುವ ರಾಜ್ಯ ಸರ್ಕಾರದ ಕ್ರಮ ಸಂವಿಧಾನತತ್ವಕ್ಕೆ ಬದ್ಧವಾಗಿಲ್ಲ. (ವೈಚಾರಿಕವಾಗಿ, ಕಾನೂನಿನ ಅನುಷ್ಠಾನದ ದೃಷ್ಟಿಯಿಂದಲೂ ಈ ಹೊಸ ಕಾಯ್ದೆ ಸರಿಯಲ್ಲ ಎನ್ನುವ ಚರ್ಚೆಯನ್ನು ಹೊರತುಪಡಿಸಿದರೂ)

ಇದೇ ರೀತಿಯಲ್ಲಿ ಕೇಂದ್ರ ಸರ್ಕಾರ ಕಾರ್ಪೊರೆಟ್ ಹಿತಾಸಕ್ತಿಯನ್ನು ಮಾತ್ರ ಕಾಪಾಡಲು, ರೈತರ ಜೊತೆಗೆ, ರಾಜ್ಯ ಸರ್ಕಾರಗಳ ಜೊತೆಗೆ ಯಾವುದೇ ಸಂಧಾನ-ಚೌಕಾಶಿ ನಡೆಸದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕಾನೂನುಗಳು ಈಗ ತನ್ನ ಕೊರಳಿಗೇ ಸುತ್ತಿಕೊಳ್ಳುತ್ತಿವೆ. ಕಾನೂನು ಜಾರಿ ಮಾಡುವಾಗ ಯಾವುದೇ ಮಾತುಕತೆ ನಡೆಸದೆ, ಈಗ ದೊಡ್ಡ ಮಟ್ಟದ ಪ್ರತಿರೋಧ ಬರುತ್ತಿರುವ ಹೊತ್ತಿನಲ್ಲಿ ರೈತರ ಜೊತೆಗೆ ಚೌಕಾಶಿಗೆ ಇಳಿದಿದೆ. ಆದರೆ ಅಲ್ಲೂ ಪ್ರಾಮಾಣಿಕತೆಯಿಲ್ಲ. ಕಾರ್ಪೊರೆಟ್ ಶಕ್ತಿಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಬಹುತೇಕ ಬೆದರಿಕೆ ರೀತಿಯಲ್ಲಿಯೇ ರೈತರನ್ನು ಮಣಿಸಲು ಪ್ರಯತ್ನ ಮಾಡುತ್ತಿರುವುದು ಇಲ್ಲಿಯವರೆಗೂ ಫಲ ಕೊಟ್ಟಿಲ್ಲ.

ಯಾವುದೇ ಕಾನೂನು-ಕಾಯ್ದೆ ಜಾರಿಗೊಳಿಸುವಾಗ ಹಲವು ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ ಜನ ಸಾಮಾನ್ಯರೆಲ್ಲರ ಹಿತವನ್ನು ಕಾಯುವುದನ್ನು ಸರ್ಕಾರಗಳು ಮನಗಾಣಬೇಕಲ್ಲವೇ?


ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...