Homeಅಂಕಣಗಳುಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಗೋಹತ್ಯೆ ನಿಷೇಧ ವಿಧೇಯಕ ಮತ್ತು ರೈತರ ಹೋರಾಟದ ಕುರಿತು ಗುರುಪ್ರಸಾದ್ ಡಿ.ಎನ್ ರವರ ಲೇಖನ ಓದಿ.

- Advertisement -
- Advertisement -

ಯಾವುದೇ ಬಹು ಸಂಸ್ಕೃತಿಯ ಪ್ರಜಾಪ್ರಭುತ್ವ ದೇಶದಲ್ಲಿ ನಂಬಿಕೆ ಆಚರಣೆಗಳ ವಿಚಾರಕ್ಕೆ ಬಂದಾಗ, ಹಲವು ವರ್ಗಗಳ ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ವಿವಿಧ ಸಮುದಾಯಗಳ ನಡುವೆ ಸಂಧಾನಕ್ಕೆ, ಚೌಕಾಶಿಗೆ ಅವಕಾಶ ಇರಬೇಕು. ಅದಕ್ಕೆ ಪ್ರಭುತ್ವಗಳು-ಆಡಳಿತ ವ್ಯವಸ್ಥೆಗಳು ಸಹಾಯ ಮಾಡಬೇಕು. ಯಾವುದೋ ಒಂದು ಬಲಿಷ್ಟ ಸಂಸ್ಕೃತಿಯು ಮತ್ತೊಂದು ಸಂಸ್ಕೃತಿಯ ಮೇಲೆ ದಬ್ಬಾಳಿಕೆ ಮಾಡುವುದಕ್ಕೆ ಸಹಕರಿಸುವುದನ್ನಾಗಲೀ, ಸಾಂವಿಧಾನಿಕ ತತ್ವಗಳನ್ನು ಗಾಳಿಗೆ ತೂರಿ ಯಾವದೇ ಒಂದು ವರ್ಗದ-ಸಮುದಾಯದ ಹಿತಾಸಕ್ತಿಗೆ ಮಣೆ ಹಾಕಿ ಸಾಮಾನ್ಯ ಹಿತವನ್ನು, ಜನಸಾಮಾನ್ಯರ ಒಟ್ಟಾರೆ ಹಿತಾಸಕ್ತಿಯನ್ನು ಕಡೆಗಣಿಸುವುದನ್ನಾಗಲೀ ಸರ್ಕಾರಗಳು ಮಾಡಲೇಬಾರದು.

ಸ್ವಾತಂತ್ರ್ಯಪೂರ್ವದಿಂದಲೂ ಗೋಹತ್ಯೆ ಈ ದೇಶದಲ್ಲಿ ವಿವಾದಾಸ್ಪದ ಸಂಗತಿಯೇ. ಒಂದು ಸಣ್ಣ ಸಮುದಾಯದ ನಂಬಿಕೆಯಾಗಿ ಯಾವುದೋ ಒಂದು ಕಾಲಘಟ್ಟದಲ್ಲಿ ಹಸುಗಳ ಬಗ್ಗೆ ಪೂಜ್ಯ ಭಾವನೆ ಬೆಳೆದಿರಬಹುದು. ಈ ದೇಶದಲ್ಲಿ ಹಲವು ಸಮುದಾಯಗಳು ತಮ್ಮ ಮಾಂಸಾಹಾರದ ಜೊತೆಗೆ ಗೋಮಾಂಸ ತಿನ್ನುವುದೂ ಕೂಡ ವಾಸ್ತವ. ಹಸುಗಳನ್ನು ಪೂಜಿಸುವ ಆದರೆ ತಮ್ಮ ಮಾಂಸಾಹಾರದಲ್ಲಿ ಗೋವನ್ನು ಹೊಂದಿರದ ಮತ್ತು ಗೋಮಾಂಸ ತಿನ್ನುವವರ ಬಗ್ಗೆ ಯಾವುದೇ ಅಸಹನೆ ತೋರದ ಸಮುದಾಯಗಳೂ ಇವೆ. ಮೊದಲನೆಯ ಸಮುದಾಯದ ಅವೈಚಾರಿಕತೆಯನ್ನು ಮತ್ತು ಗೋಮಾಂಸ ತಿನ್ನುವ ಸಮುದಾಯಗಳ ಅಗತ್ಯಗಳು-ಕಾರಣಗಳನ್ನು ಸದ್ಯಕ್ಕೆ ಬದಿಗಿಟ್ಟರೂ, ಯಾವುದೇ ಆಡಳಿತ ವ್ಯವಸ್ಥೆಯ ಕೆಲಸ ಎರಡೂ ಸಮುದಾಯಗಳ ನಡುವಿನ ಸಂಘರ್ಷಕ್ಕೆ ವೈಚಾರಿಕ ತಳಹದಿಯಲ್ಲಿ, ಸಂವಿಧಾನದ ಆಶಯಗಳಲ್ಲಿ ಸಂಧಾನಕ್ಕೆ ಪ್ರಯತ್ನಿಸಿ, ಪರಿಹಾರಗಳನ್ನು ಸೂಚಿಸುವುದು. ಅಂದರೆ ಅಂತಹ ಚೌಕಾಶಿಗೆ ಇರುವ ಸ್ಪೇಸ್‌ಅನ್ನು ಉಳಿಸಿಕೊಳ್ಳಬೇಕು. ಇಂತಹ ಸಂದರ್ಭವನ್ನು ಊಹಿಸಿಯೇ, ಸಂವಿಧಾನ ರಚನೆಯಲ್ಲಿ, ಗೋರಕ್ಷಣೆಯನ್ನು ರಾಜ್ಯ ನಿರ್ದೇಶಕ ತತ್ವಗಳನ್ನಾಗಿಸಿ, ಆಯಾ ನಾಡಿನ ಸಾಂಸ್ಕೃತಿಕ-ಸಾಮಾಜಿಕ ಸಂದರ್ಭಕ್ಕೆ, ಎಲ್ಲ ಸಮುದಾಯಗಳ ಬೇಡಿಕೆಗಳಿಗೂ ಜಾಗ ನೀಡುವ ಕಾನೂನನ್ನು ರಚಿಸಲು ಸಾಧ್ಯವಾಗುವಂತೆ ಅವಕಾಶ ಒದಗಿಸಿತ್ತು.

ಹಲವು ರಾಜ್ಯ ಸರ್ಕಾರಗಳು ಇಂತಹ ಸಮತೋಲನದ ಕಾನೂನುಗಳನ್ನು ರಚಿಸಿದ್ದವು ಕೂಡ. ಗೋವುಗಳನ್ನು ವಧೆ ಮಾಡದಂತೆ, ಉಳಿದ ಜಾನುವಾರುಗಳ ಭಕ್ಷಣೆಗೆ ಅವಕಾಶ ಮಾಡಿಕೊಡುವ ಕಾನೂನುಗಳು ಬಹುಸಂಸ್ಕೃತಿಯ ಪ್ರಜಾಸತ್ತೆಯಲ್ಲಿ ಚೌಕಾಶಿ ಮಾಡುವ ಪ್ರಕ್ರಿಯೆಯನ್ನು ಎತ್ತಿ ಹಿಡಿದಿತ್ತು. ಆದರೆ, ಈಗ ಹಲವು ರಾಜ್ಯಗಳ ಬಿಜೆಪಿ ಸರ್ಕಾರಗಳು ಹೊಸ ಜಾನುವಾರು ಹತ್ಯೆ ಕಾನೂನುಗಳನ್ನು ರಚಿಸಿ ಅದರಲ್ಲಿ, ಹಸುಗಳು, ಎತ್ತುಗಳು, ಗೊಡ್ಡು ದನಗಳು ಎಲ್ಲವನ್ನು ಹತ್ಯೆ ಮಾಡದಂತೆ ತಡೆದಿವೆ. ಕರ್ನಾಟಕ ಸರ್ಕಾರವೂ ಇಂತಹ ಕರಾಳ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೇವಲ ಒಂದು ಸಮುದಾಯದ ಹಿತಾಸಕ್ತಿಯನ್ನು ಕಾಯುವ, ಉಳಿದ ಸಮುದಾಯಗಳ ಸಂಧಾನಕ್ಕೆ ಕದ ಮುಚ್ಚಿರುವ ರಾಜ್ಯ ಸರ್ಕಾರದ ಕ್ರಮ ಸಂವಿಧಾನತತ್ವಕ್ಕೆ ಬದ್ಧವಾಗಿಲ್ಲ. (ವೈಚಾರಿಕವಾಗಿ, ಕಾನೂನಿನ ಅನುಷ್ಠಾನದ ದೃಷ್ಟಿಯಿಂದಲೂ ಈ ಹೊಸ ಕಾಯ್ದೆ ಸರಿಯಲ್ಲ ಎನ್ನುವ ಚರ್ಚೆಯನ್ನು ಹೊರತುಪಡಿಸಿದರೂ)

ಇದೇ ರೀತಿಯಲ್ಲಿ ಕೇಂದ್ರ ಸರ್ಕಾರ ಕಾರ್ಪೊರೆಟ್ ಹಿತಾಸಕ್ತಿಯನ್ನು ಮಾತ್ರ ಕಾಪಾಡಲು, ರೈತರ ಜೊತೆಗೆ, ರಾಜ್ಯ ಸರ್ಕಾರಗಳ ಜೊತೆಗೆ ಯಾವುದೇ ಸಂಧಾನ-ಚೌಕಾಶಿ ನಡೆಸದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕಾನೂನುಗಳು ಈಗ ತನ್ನ ಕೊರಳಿಗೇ ಸುತ್ತಿಕೊಳ್ಳುತ್ತಿವೆ. ಕಾನೂನು ಜಾರಿ ಮಾಡುವಾಗ ಯಾವುದೇ ಮಾತುಕತೆ ನಡೆಸದೆ, ಈಗ ದೊಡ್ಡ ಮಟ್ಟದ ಪ್ರತಿರೋಧ ಬರುತ್ತಿರುವ ಹೊತ್ತಿನಲ್ಲಿ ರೈತರ ಜೊತೆಗೆ ಚೌಕಾಶಿಗೆ ಇಳಿದಿದೆ. ಆದರೆ ಅಲ್ಲೂ ಪ್ರಾಮಾಣಿಕತೆಯಿಲ್ಲ. ಕಾರ್ಪೊರೆಟ್ ಶಕ್ತಿಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಬಹುತೇಕ ಬೆದರಿಕೆ ರೀತಿಯಲ್ಲಿಯೇ ರೈತರನ್ನು ಮಣಿಸಲು ಪ್ರಯತ್ನ ಮಾಡುತ್ತಿರುವುದು ಇಲ್ಲಿಯವರೆಗೂ ಫಲ ಕೊಟ್ಟಿಲ್ಲ.

ಯಾವುದೇ ಕಾನೂನು-ಕಾಯ್ದೆ ಜಾರಿಗೊಳಿಸುವಾಗ ಹಲವು ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ ಜನ ಸಾಮಾನ್ಯರೆಲ್ಲರ ಹಿತವನ್ನು ಕಾಯುವುದನ್ನು ಸರ್ಕಾರಗಳು ಮನಗಾಣಬೇಕಲ್ಲವೇ?


ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...