Homeಅಂಕಣಗಳುಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಗೋಹತ್ಯೆ ನಿಷೇಧ ವಿಧೇಯಕ ಮತ್ತು ರೈತರ ಹೋರಾಟದ ಕುರಿತು ಗುರುಪ್ರಸಾದ್ ಡಿ.ಎನ್ ರವರ ಲೇಖನ ಓದಿ.

- Advertisement -
- Advertisement -

ಯಾವುದೇ ಬಹು ಸಂಸ್ಕೃತಿಯ ಪ್ರಜಾಪ್ರಭುತ್ವ ದೇಶದಲ್ಲಿ ನಂಬಿಕೆ ಆಚರಣೆಗಳ ವಿಚಾರಕ್ಕೆ ಬಂದಾಗ, ಹಲವು ವರ್ಗಗಳ ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ವಿವಿಧ ಸಮುದಾಯಗಳ ನಡುವೆ ಸಂಧಾನಕ್ಕೆ, ಚೌಕಾಶಿಗೆ ಅವಕಾಶ ಇರಬೇಕು. ಅದಕ್ಕೆ ಪ್ರಭುತ್ವಗಳು-ಆಡಳಿತ ವ್ಯವಸ್ಥೆಗಳು ಸಹಾಯ ಮಾಡಬೇಕು. ಯಾವುದೋ ಒಂದು ಬಲಿಷ್ಟ ಸಂಸ್ಕೃತಿಯು ಮತ್ತೊಂದು ಸಂಸ್ಕೃತಿಯ ಮೇಲೆ ದಬ್ಬಾಳಿಕೆ ಮಾಡುವುದಕ್ಕೆ ಸಹಕರಿಸುವುದನ್ನಾಗಲೀ, ಸಾಂವಿಧಾನಿಕ ತತ್ವಗಳನ್ನು ಗಾಳಿಗೆ ತೂರಿ ಯಾವದೇ ಒಂದು ವರ್ಗದ-ಸಮುದಾಯದ ಹಿತಾಸಕ್ತಿಗೆ ಮಣೆ ಹಾಕಿ ಸಾಮಾನ್ಯ ಹಿತವನ್ನು, ಜನಸಾಮಾನ್ಯರ ಒಟ್ಟಾರೆ ಹಿತಾಸಕ್ತಿಯನ್ನು ಕಡೆಗಣಿಸುವುದನ್ನಾಗಲೀ ಸರ್ಕಾರಗಳು ಮಾಡಲೇಬಾರದು.

ಸ್ವಾತಂತ್ರ್ಯಪೂರ್ವದಿಂದಲೂ ಗೋಹತ್ಯೆ ಈ ದೇಶದಲ್ಲಿ ವಿವಾದಾಸ್ಪದ ಸಂಗತಿಯೇ. ಒಂದು ಸಣ್ಣ ಸಮುದಾಯದ ನಂಬಿಕೆಯಾಗಿ ಯಾವುದೋ ಒಂದು ಕಾಲಘಟ್ಟದಲ್ಲಿ ಹಸುಗಳ ಬಗ್ಗೆ ಪೂಜ್ಯ ಭಾವನೆ ಬೆಳೆದಿರಬಹುದು. ಈ ದೇಶದಲ್ಲಿ ಹಲವು ಸಮುದಾಯಗಳು ತಮ್ಮ ಮಾಂಸಾಹಾರದ ಜೊತೆಗೆ ಗೋಮಾಂಸ ತಿನ್ನುವುದೂ ಕೂಡ ವಾಸ್ತವ. ಹಸುಗಳನ್ನು ಪೂಜಿಸುವ ಆದರೆ ತಮ್ಮ ಮಾಂಸಾಹಾರದಲ್ಲಿ ಗೋವನ್ನು ಹೊಂದಿರದ ಮತ್ತು ಗೋಮಾಂಸ ತಿನ್ನುವವರ ಬಗ್ಗೆ ಯಾವುದೇ ಅಸಹನೆ ತೋರದ ಸಮುದಾಯಗಳೂ ಇವೆ. ಮೊದಲನೆಯ ಸಮುದಾಯದ ಅವೈಚಾರಿಕತೆಯನ್ನು ಮತ್ತು ಗೋಮಾಂಸ ತಿನ್ನುವ ಸಮುದಾಯಗಳ ಅಗತ್ಯಗಳು-ಕಾರಣಗಳನ್ನು ಸದ್ಯಕ್ಕೆ ಬದಿಗಿಟ್ಟರೂ, ಯಾವುದೇ ಆಡಳಿತ ವ್ಯವಸ್ಥೆಯ ಕೆಲಸ ಎರಡೂ ಸಮುದಾಯಗಳ ನಡುವಿನ ಸಂಘರ್ಷಕ್ಕೆ ವೈಚಾರಿಕ ತಳಹದಿಯಲ್ಲಿ, ಸಂವಿಧಾನದ ಆಶಯಗಳಲ್ಲಿ ಸಂಧಾನಕ್ಕೆ ಪ್ರಯತ್ನಿಸಿ, ಪರಿಹಾರಗಳನ್ನು ಸೂಚಿಸುವುದು. ಅಂದರೆ ಅಂತಹ ಚೌಕಾಶಿಗೆ ಇರುವ ಸ್ಪೇಸ್‌ಅನ್ನು ಉಳಿಸಿಕೊಳ್ಳಬೇಕು. ಇಂತಹ ಸಂದರ್ಭವನ್ನು ಊಹಿಸಿಯೇ, ಸಂವಿಧಾನ ರಚನೆಯಲ್ಲಿ, ಗೋರಕ್ಷಣೆಯನ್ನು ರಾಜ್ಯ ನಿರ್ದೇಶಕ ತತ್ವಗಳನ್ನಾಗಿಸಿ, ಆಯಾ ನಾಡಿನ ಸಾಂಸ್ಕೃತಿಕ-ಸಾಮಾಜಿಕ ಸಂದರ್ಭಕ್ಕೆ, ಎಲ್ಲ ಸಮುದಾಯಗಳ ಬೇಡಿಕೆಗಳಿಗೂ ಜಾಗ ನೀಡುವ ಕಾನೂನನ್ನು ರಚಿಸಲು ಸಾಧ್ಯವಾಗುವಂತೆ ಅವಕಾಶ ಒದಗಿಸಿತ್ತು.

ಹಲವು ರಾಜ್ಯ ಸರ್ಕಾರಗಳು ಇಂತಹ ಸಮತೋಲನದ ಕಾನೂನುಗಳನ್ನು ರಚಿಸಿದ್ದವು ಕೂಡ. ಗೋವುಗಳನ್ನು ವಧೆ ಮಾಡದಂತೆ, ಉಳಿದ ಜಾನುವಾರುಗಳ ಭಕ್ಷಣೆಗೆ ಅವಕಾಶ ಮಾಡಿಕೊಡುವ ಕಾನೂನುಗಳು ಬಹುಸಂಸ್ಕೃತಿಯ ಪ್ರಜಾಸತ್ತೆಯಲ್ಲಿ ಚೌಕಾಶಿ ಮಾಡುವ ಪ್ರಕ್ರಿಯೆಯನ್ನು ಎತ್ತಿ ಹಿಡಿದಿತ್ತು. ಆದರೆ, ಈಗ ಹಲವು ರಾಜ್ಯಗಳ ಬಿಜೆಪಿ ಸರ್ಕಾರಗಳು ಹೊಸ ಜಾನುವಾರು ಹತ್ಯೆ ಕಾನೂನುಗಳನ್ನು ರಚಿಸಿ ಅದರಲ್ಲಿ, ಹಸುಗಳು, ಎತ್ತುಗಳು, ಗೊಡ್ಡು ದನಗಳು ಎಲ್ಲವನ್ನು ಹತ್ಯೆ ಮಾಡದಂತೆ ತಡೆದಿವೆ. ಕರ್ನಾಟಕ ಸರ್ಕಾರವೂ ಇಂತಹ ಕರಾಳ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೇವಲ ಒಂದು ಸಮುದಾಯದ ಹಿತಾಸಕ್ತಿಯನ್ನು ಕಾಯುವ, ಉಳಿದ ಸಮುದಾಯಗಳ ಸಂಧಾನಕ್ಕೆ ಕದ ಮುಚ್ಚಿರುವ ರಾಜ್ಯ ಸರ್ಕಾರದ ಕ್ರಮ ಸಂವಿಧಾನತತ್ವಕ್ಕೆ ಬದ್ಧವಾಗಿಲ್ಲ. (ವೈಚಾರಿಕವಾಗಿ, ಕಾನೂನಿನ ಅನುಷ್ಠಾನದ ದೃಷ್ಟಿಯಿಂದಲೂ ಈ ಹೊಸ ಕಾಯ್ದೆ ಸರಿಯಲ್ಲ ಎನ್ನುವ ಚರ್ಚೆಯನ್ನು ಹೊರತುಪಡಿಸಿದರೂ)

ಇದೇ ರೀತಿಯಲ್ಲಿ ಕೇಂದ್ರ ಸರ್ಕಾರ ಕಾರ್ಪೊರೆಟ್ ಹಿತಾಸಕ್ತಿಯನ್ನು ಮಾತ್ರ ಕಾಪಾಡಲು, ರೈತರ ಜೊತೆಗೆ, ರಾಜ್ಯ ಸರ್ಕಾರಗಳ ಜೊತೆಗೆ ಯಾವುದೇ ಸಂಧಾನ-ಚೌಕಾಶಿ ನಡೆಸದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕಾನೂನುಗಳು ಈಗ ತನ್ನ ಕೊರಳಿಗೇ ಸುತ್ತಿಕೊಳ್ಳುತ್ತಿವೆ. ಕಾನೂನು ಜಾರಿ ಮಾಡುವಾಗ ಯಾವುದೇ ಮಾತುಕತೆ ನಡೆಸದೆ, ಈಗ ದೊಡ್ಡ ಮಟ್ಟದ ಪ್ರತಿರೋಧ ಬರುತ್ತಿರುವ ಹೊತ್ತಿನಲ್ಲಿ ರೈತರ ಜೊತೆಗೆ ಚೌಕಾಶಿಗೆ ಇಳಿದಿದೆ. ಆದರೆ ಅಲ್ಲೂ ಪ್ರಾಮಾಣಿಕತೆಯಿಲ್ಲ. ಕಾರ್ಪೊರೆಟ್ ಶಕ್ತಿಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಬಹುತೇಕ ಬೆದರಿಕೆ ರೀತಿಯಲ್ಲಿಯೇ ರೈತರನ್ನು ಮಣಿಸಲು ಪ್ರಯತ್ನ ಮಾಡುತ್ತಿರುವುದು ಇಲ್ಲಿಯವರೆಗೂ ಫಲ ಕೊಟ್ಟಿಲ್ಲ.

ಯಾವುದೇ ಕಾನೂನು-ಕಾಯ್ದೆ ಜಾರಿಗೊಳಿಸುವಾಗ ಹಲವು ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ ಜನ ಸಾಮಾನ್ಯರೆಲ್ಲರ ಹಿತವನ್ನು ಕಾಯುವುದನ್ನು ಸರ್ಕಾರಗಳು ಮನಗಾಣಬೇಕಲ್ಲವೇ?


ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....