Homeಅಂಕಣಗಳುಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಗೋಹತ್ಯೆ ನಿಷೇಧ ವಿಧೇಯಕ ಮತ್ತು ರೈತರ ಹೋರಾಟದ ಕುರಿತು ಗುರುಪ್ರಸಾದ್ ಡಿ.ಎನ್ ರವರ ಲೇಖನ ಓದಿ.

- Advertisement -
- Advertisement -

ಯಾವುದೇ ಬಹು ಸಂಸ್ಕೃತಿಯ ಪ್ರಜಾಪ್ರಭುತ್ವ ದೇಶದಲ್ಲಿ ನಂಬಿಕೆ ಆಚರಣೆಗಳ ವಿಚಾರಕ್ಕೆ ಬಂದಾಗ, ಹಲವು ವರ್ಗಗಳ ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ವಿವಿಧ ಸಮುದಾಯಗಳ ನಡುವೆ ಸಂಧಾನಕ್ಕೆ, ಚೌಕಾಶಿಗೆ ಅವಕಾಶ ಇರಬೇಕು. ಅದಕ್ಕೆ ಪ್ರಭುತ್ವಗಳು-ಆಡಳಿತ ವ್ಯವಸ್ಥೆಗಳು ಸಹಾಯ ಮಾಡಬೇಕು. ಯಾವುದೋ ಒಂದು ಬಲಿಷ್ಟ ಸಂಸ್ಕೃತಿಯು ಮತ್ತೊಂದು ಸಂಸ್ಕೃತಿಯ ಮೇಲೆ ದಬ್ಬಾಳಿಕೆ ಮಾಡುವುದಕ್ಕೆ ಸಹಕರಿಸುವುದನ್ನಾಗಲೀ, ಸಾಂವಿಧಾನಿಕ ತತ್ವಗಳನ್ನು ಗಾಳಿಗೆ ತೂರಿ ಯಾವದೇ ಒಂದು ವರ್ಗದ-ಸಮುದಾಯದ ಹಿತಾಸಕ್ತಿಗೆ ಮಣೆ ಹಾಕಿ ಸಾಮಾನ್ಯ ಹಿತವನ್ನು, ಜನಸಾಮಾನ್ಯರ ಒಟ್ಟಾರೆ ಹಿತಾಸಕ್ತಿಯನ್ನು ಕಡೆಗಣಿಸುವುದನ್ನಾಗಲೀ ಸರ್ಕಾರಗಳು ಮಾಡಲೇಬಾರದು.

ಸ್ವಾತಂತ್ರ್ಯಪೂರ್ವದಿಂದಲೂ ಗೋಹತ್ಯೆ ಈ ದೇಶದಲ್ಲಿ ವಿವಾದಾಸ್ಪದ ಸಂಗತಿಯೇ. ಒಂದು ಸಣ್ಣ ಸಮುದಾಯದ ನಂಬಿಕೆಯಾಗಿ ಯಾವುದೋ ಒಂದು ಕಾಲಘಟ್ಟದಲ್ಲಿ ಹಸುಗಳ ಬಗ್ಗೆ ಪೂಜ್ಯ ಭಾವನೆ ಬೆಳೆದಿರಬಹುದು. ಈ ದೇಶದಲ್ಲಿ ಹಲವು ಸಮುದಾಯಗಳು ತಮ್ಮ ಮಾಂಸಾಹಾರದ ಜೊತೆಗೆ ಗೋಮಾಂಸ ತಿನ್ನುವುದೂ ಕೂಡ ವಾಸ್ತವ. ಹಸುಗಳನ್ನು ಪೂಜಿಸುವ ಆದರೆ ತಮ್ಮ ಮಾಂಸಾಹಾರದಲ್ಲಿ ಗೋವನ್ನು ಹೊಂದಿರದ ಮತ್ತು ಗೋಮಾಂಸ ತಿನ್ನುವವರ ಬಗ್ಗೆ ಯಾವುದೇ ಅಸಹನೆ ತೋರದ ಸಮುದಾಯಗಳೂ ಇವೆ. ಮೊದಲನೆಯ ಸಮುದಾಯದ ಅವೈಚಾರಿಕತೆಯನ್ನು ಮತ್ತು ಗೋಮಾಂಸ ತಿನ್ನುವ ಸಮುದಾಯಗಳ ಅಗತ್ಯಗಳು-ಕಾರಣಗಳನ್ನು ಸದ್ಯಕ್ಕೆ ಬದಿಗಿಟ್ಟರೂ, ಯಾವುದೇ ಆಡಳಿತ ವ್ಯವಸ್ಥೆಯ ಕೆಲಸ ಎರಡೂ ಸಮುದಾಯಗಳ ನಡುವಿನ ಸಂಘರ್ಷಕ್ಕೆ ವೈಚಾರಿಕ ತಳಹದಿಯಲ್ಲಿ, ಸಂವಿಧಾನದ ಆಶಯಗಳಲ್ಲಿ ಸಂಧಾನಕ್ಕೆ ಪ್ರಯತ್ನಿಸಿ, ಪರಿಹಾರಗಳನ್ನು ಸೂಚಿಸುವುದು. ಅಂದರೆ ಅಂತಹ ಚೌಕಾಶಿಗೆ ಇರುವ ಸ್ಪೇಸ್‌ಅನ್ನು ಉಳಿಸಿಕೊಳ್ಳಬೇಕು. ಇಂತಹ ಸಂದರ್ಭವನ್ನು ಊಹಿಸಿಯೇ, ಸಂವಿಧಾನ ರಚನೆಯಲ್ಲಿ, ಗೋರಕ್ಷಣೆಯನ್ನು ರಾಜ್ಯ ನಿರ್ದೇಶಕ ತತ್ವಗಳನ್ನಾಗಿಸಿ, ಆಯಾ ನಾಡಿನ ಸಾಂಸ್ಕೃತಿಕ-ಸಾಮಾಜಿಕ ಸಂದರ್ಭಕ್ಕೆ, ಎಲ್ಲ ಸಮುದಾಯಗಳ ಬೇಡಿಕೆಗಳಿಗೂ ಜಾಗ ನೀಡುವ ಕಾನೂನನ್ನು ರಚಿಸಲು ಸಾಧ್ಯವಾಗುವಂತೆ ಅವಕಾಶ ಒದಗಿಸಿತ್ತು.

ಹಲವು ರಾಜ್ಯ ಸರ್ಕಾರಗಳು ಇಂತಹ ಸಮತೋಲನದ ಕಾನೂನುಗಳನ್ನು ರಚಿಸಿದ್ದವು ಕೂಡ. ಗೋವುಗಳನ್ನು ವಧೆ ಮಾಡದಂತೆ, ಉಳಿದ ಜಾನುವಾರುಗಳ ಭಕ್ಷಣೆಗೆ ಅವಕಾಶ ಮಾಡಿಕೊಡುವ ಕಾನೂನುಗಳು ಬಹುಸಂಸ್ಕೃತಿಯ ಪ್ರಜಾಸತ್ತೆಯಲ್ಲಿ ಚೌಕಾಶಿ ಮಾಡುವ ಪ್ರಕ್ರಿಯೆಯನ್ನು ಎತ್ತಿ ಹಿಡಿದಿತ್ತು. ಆದರೆ, ಈಗ ಹಲವು ರಾಜ್ಯಗಳ ಬಿಜೆಪಿ ಸರ್ಕಾರಗಳು ಹೊಸ ಜಾನುವಾರು ಹತ್ಯೆ ಕಾನೂನುಗಳನ್ನು ರಚಿಸಿ ಅದರಲ್ಲಿ, ಹಸುಗಳು, ಎತ್ತುಗಳು, ಗೊಡ್ಡು ದನಗಳು ಎಲ್ಲವನ್ನು ಹತ್ಯೆ ಮಾಡದಂತೆ ತಡೆದಿವೆ. ಕರ್ನಾಟಕ ಸರ್ಕಾರವೂ ಇಂತಹ ಕರಾಳ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೇವಲ ಒಂದು ಸಮುದಾಯದ ಹಿತಾಸಕ್ತಿಯನ್ನು ಕಾಯುವ, ಉಳಿದ ಸಮುದಾಯಗಳ ಸಂಧಾನಕ್ಕೆ ಕದ ಮುಚ್ಚಿರುವ ರಾಜ್ಯ ಸರ್ಕಾರದ ಕ್ರಮ ಸಂವಿಧಾನತತ್ವಕ್ಕೆ ಬದ್ಧವಾಗಿಲ್ಲ. (ವೈಚಾರಿಕವಾಗಿ, ಕಾನೂನಿನ ಅನುಷ್ಠಾನದ ದೃಷ್ಟಿಯಿಂದಲೂ ಈ ಹೊಸ ಕಾಯ್ದೆ ಸರಿಯಲ್ಲ ಎನ್ನುವ ಚರ್ಚೆಯನ್ನು ಹೊರತುಪಡಿಸಿದರೂ)

ಇದೇ ರೀತಿಯಲ್ಲಿ ಕೇಂದ್ರ ಸರ್ಕಾರ ಕಾರ್ಪೊರೆಟ್ ಹಿತಾಸಕ್ತಿಯನ್ನು ಮಾತ್ರ ಕಾಪಾಡಲು, ರೈತರ ಜೊತೆಗೆ, ರಾಜ್ಯ ಸರ್ಕಾರಗಳ ಜೊತೆಗೆ ಯಾವುದೇ ಸಂಧಾನ-ಚೌಕಾಶಿ ನಡೆಸದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕಾನೂನುಗಳು ಈಗ ತನ್ನ ಕೊರಳಿಗೇ ಸುತ್ತಿಕೊಳ್ಳುತ್ತಿವೆ. ಕಾನೂನು ಜಾರಿ ಮಾಡುವಾಗ ಯಾವುದೇ ಮಾತುಕತೆ ನಡೆಸದೆ, ಈಗ ದೊಡ್ಡ ಮಟ್ಟದ ಪ್ರತಿರೋಧ ಬರುತ್ತಿರುವ ಹೊತ್ತಿನಲ್ಲಿ ರೈತರ ಜೊತೆಗೆ ಚೌಕಾಶಿಗೆ ಇಳಿದಿದೆ. ಆದರೆ ಅಲ್ಲೂ ಪ್ರಾಮಾಣಿಕತೆಯಿಲ್ಲ. ಕಾರ್ಪೊರೆಟ್ ಶಕ್ತಿಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಬಹುತೇಕ ಬೆದರಿಕೆ ರೀತಿಯಲ್ಲಿಯೇ ರೈತರನ್ನು ಮಣಿಸಲು ಪ್ರಯತ್ನ ಮಾಡುತ್ತಿರುವುದು ಇಲ್ಲಿಯವರೆಗೂ ಫಲ ಕೊಟ್ಟಿಲ್ಲ.

ಯಾವುದೇ ಕಾನೂನು-ಕಾಯ್ದೆ ಜಾರಿಗೊಳಿಸುವಾಗ ಹಲವು ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ ಜನ ಸಾಮಾನ್ಯರೆಲ್ಲರ ಹಿತವನ್ನು ಕಾಯುವುದನ್ನು ಸರ್ಕಾರಗಳು ಮನಗಾಣಬೇಕಲ್ಲವೇ?


ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...