Homeಅಂಕಣಗಳುಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಗೋಹತ್ಯೆ ನಿಷೇಧ ವಿಧೇಯಕ ಮತ್ತು ರೈತರ ಹೋರಾಟದ ಕುರಿತು ಗುರುಪ್ರಸಾದ್ ಡಿ.ಎನ್ ರವರ ಲೇಖನ ಓದಿ.

- Advertisement -
- Advertisement -

ಯಾವುದೇ ಬಹು ಸಂಸ್ಕೃತಿಯ ಪ್ರಜಾಪ್ರಭುತ್ವ ದೇಶದಲ್ಲಿ ನಂಬಿಕೆ ಆಚರಣೆಗಳ ವಿಚಾರಕ್ಕೆ ಬಂದಾಗ, ಹಲವು ವರ್ಗಗಳ ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ವಿವಿಧ ಸಮುದಾಯಗಳ ನಡುವೆ ಸಂಧಾನಕ್ಕೆ, ಚೌಕಾಶಿಗೆ ಅವಕಾಶ ಇರಬೇಕು. ಅದಕ್ಕೆ ಪ್ರಭುತ್ವಗಳು-ಆಡಳಿತ ವ್ಯವಸ್ಥೆಗಳು ಸಹಾಯ ಮಾಡಬೇಕು. ಯಾವುದೋ ಒಂದು ಬಲಿಷ್ಟ ಸಂಸ್ಕೃತಿಯು ಮತ್ತೊಂದು ಸಂಸ್ಕೃತಿಯ ಮೇಲೆ ದಬ್ಬಾಳಿಕೆ ಮಾಡುವುದಕ್ಕೆ ಸಹಕರಿಸುವುದನ್ನಾಗಲೀ, ಸಾಂವಿಧಾನಿಕ ತತ್ವಗಳನ್ನು ಗಾಳಿಗೆ ತೂರಿ ಯಾವದೇ ಒಂದು ವರ್ಗದ-ಸಮುದಾಯದ ಹಿತಾಸಕ್ತಿಗೆ ಮಣೆ ಹಾಕಿ ಸಾಮಾನ್ಯ ಹಿತವನ್ನು, ಜನಸಾಮಾನ್ಯರ ಒಟ್ಟಾರೆ ಹಿತಾಸಕ್ತಿಯನ್ನು ಕಡೆಗಣಿಸುವುದನ್ನಾಗಲೀ ಸರ್ಕಾರಗಳು ಮಾಡಲೇಬಾರದು.

ಸ್ವಾತಂತ್ರ್ಯಪೂರ್ವದಿಂದಲೂ ಗೋಹತ್ಯೆ ಈ ದೇಶದಲ್ಲಿ ವಿವಾದಾಸ್ಪದ ಸಂಗತಿಯೇ. ಒಂದು ಸಣ್ಣ ಸಮುದಾಯದ ನಂಬಿಕೆಯಾಗಿ ಯಾವುದೋ ಒಂದು ಕಾಲಘಟ್ಟದಲ್ಲಿ ಹಸುಗಳ ಬಗ್ಗೆ ಪೂಜ್ಯ ಭಾವನೆ ಬೆಳೆದಿರಬಹುದು. ಈ ದೇಶದಲ್ಲಿ ಹಲವು ಸಮುದಾಯಗಳು ತಮ್ಮ ಮಾಂಸಾಹಾರದ ಜೊತೆಗೆ ಗೋಮಾಂಸ ತಿನ್ನುವುದೂ ಕೂಡ ವಾಸ್ತವ. ಹಸುಗಳನ್ನು ಪೂಜಿಸುವ ಆದರೆ ತಮ್ಮ ಮಾಂಸಾಹಾರದಲ್ಲಿ ಗೋವನ್ನು ಹೊಂದಿರದ ಮತ್ತು ಗೋಮಾಂಸ ತಿನ್ನುವವರ ಬಗ್ಗೆ ಯಾವುದೇ ಅಸಹನೆ ತೋರದ ಸಮುದಾಯಗಳೂ ಇವೆ. ಮೊದಲನೆಯ ಸಮುದಾಯದ ಅವೈಚಾರಿಕತೆಯನ್ನು ಮತ್ತು ಗೋಮಾಂಸ ತಿನ್ನುವ ಸಮುದಾಯಗಳ ಅಗತ್ಯಗಳು-ಕಾರಣಗಳನ್ನು ಸದ್ಯಕ್ಕೆ ಬದಿಗಿಟ್ಟರೂ, ಯಾವುದೇ ಆಡಳಿತ ವ್ಯವಸ್ಥೆಯ ಕೆಲಸ ಎರಡೂ ಸಮುದಾಯಗಳ ನಡುವಿನ ಸಂಘರ್ಷಕ್ಕೆ ವೈಚಾರಿಕ ತಳಹದಿಯಲ್ಲಿ, ಸಂವಿಧಾನದ ಆಶಯಗಳಲ್ಲಿ ಸಂಧಾನಕ್ಕೆ ಪ್ರಯತ್ನಿಸಿ, ಪರಿಹಾರಗಳನ್ನು ಸೂಚಿಸುವುದು. ಅಂದರೆ ಅಂತಹ ಚೌಕಾಶಿಗೆ ಇರುವ ಸ್ಪೇಸ್‌ಅನ್ನು ಉಳಿಸಿಕೊಳ್ಳಬೇಕು. ಇಂತಹ ಸಂದರ್ಭವನ್ನು ಊಹಿಸಿಯೇ, ಸಂವಿಧಾನ ರಚನೆಯಲ್ಲಿ, ಗೋರಕ್ಷಣೆಯನ್ನು ರಾಜ್ಯ ನಿರ್ದೇಶಕ ತತ್ವಗಳನ್ನಾಗಿಸಿ, ಆಯಾ ನಾಡಿನ ಸಾಂಸ್ಕೃತಿಕ-ಸಾಮಾಜಿಕ ಸಂದರ್ಭಕ್ಕೆ, ಎಲ್ಲ ಸಮುದಾಯಗಳ ಬೇಡಿಕೆಗಳಿಗೂ ಜಾಗ ನೀಡುವ ಕಾನೂನನ್ನು ರಚಿಸಲು ಸಾಧ್ಯವಾಗುವಂತೆ ಅವಕಾಶ ಒದಗಿಸಿತ್ತು.

ಹಲವು ರಾಜ್ಯ ಸರ್ಕಾರಗಳು ಇಂತಹ ಸಮತೋಲನದ ಕಾನೂನುಗಳನ್ನು ರಚಿಸಿದ್ದವು ಕೂಡ. ಗೋವುಗಳನ್ನು ವಧೆ ಮಾಡದಂತೆ, ಉಳಿದ ಜಾನುವಾರುಗಳ ಭಕ್ಷಣೆಗೆ ಅವಕಾಶ ಮಾಡಿಕೊಡುವ ಕಾನೂನುಗಳು ಬಹುಸಂಸ್ಕೃತಿಯ ಪ್ರಜಾಸತ್ತೆಯಲ್ಲಿ ಚೌಕಾಶಿ ಮಾಡುವ ಪ್ರಕ್ರಿಯೆಯನ್ನು ಎತ್ತಿ ಹಿಡಿದಿತ್ತು. ಆದರೆ, ಈಗ ಹಲವು ರಾಜ್ಯಗಳ ಬಿಜೆಪಿ ಸರ್ಕಾರಗಳು ಹೊಸ ಜಾನುವಾರು ಹತ್ಯೆ ಕಾನೂನುಗಳನ್ನು ರಚಿಸಿ ಅದರಲ್ಲಿ, ಹಸುಗಳು, ಎತ್ತುಗಳು, ಗೊಡ್ಡು ದನಗಳು ಎಲ್ಲವನ್ನು ಹತ್ಯೆ ಮಾಡದಂತೆ ತಡೆದಿವೆ. ಕರ್ನಾಟಕ ಸರ್ಕಾರವೂ ಇಂತಹ ಕರಾಳ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೇವಲ ಒಂದು ಸಮುದಾಯದ ಹಿತಾಸಕ್ತಿಯನ್ನು ಕಾಯುವ, ಉಳಿದ ಸಮುದಾಯಗಳ ಸಂಧಾನಕ್ಕೆ ಕದ ಮುಚ್ಚಿರುವ ರಾಜ್ಯ ಸರ್ಕಾರದ ಕ್ರಮ ಸಂವಿಧಾನತತ್ವಕ್ಕೆ ಬದ್ಧವಾಗಿಲ್ಲ. (ವೈಚಾರಿಕವಾಗಿ, ಕಾನೂನಿನ ಅನುಷ್ಠಾನದ ದೃಷ್ಟಿಯಿಂದಲೂ ಈ ಹೊಸ ಕಾಯ್ದೆ ಸರಿಯಲ್ಲ ಎನ್ನುವ ಚರ್ಚೆಯನ್ನು ಹೊರತುಪಡಿಸಿದರೂ)

ಇದೇ ರೀತಿಯಲ್ಲಿ ಕೇಂದ್ರ ಸರ್ಕಾರ ಕಾರ್ಪೊರೆಟ್ ಹಿತಾಸಕ್ತಿಯನ್ನು ಮಾತ್ರ ಕಾಪಾಡಲು, ರೈತರ ಜೊತೆಗೆ, ರಾಜ್ಯ ಸರ್ಕಾರಗಳ ಜೊತೆಗೆ ಯಾವುದೇ ಸಂಧಾನ-ಚೌಕಾಶಿ ನಡೆಸದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕಾನೂನುಗಳು ಈಗ ತನ್ನ ಕೊರಳಿಗೇ ಸುತ್ತಿಕೊಳ್ಳುತ್ತಿವೆ. ಕಾನೂನು ಜಾರಿ ಮಾಡುವಾಗ ಯಾವುದೇ ಮಾತುಕತೆ ನಡೆಸದೆ, ಈಗ ದೊಡ್ಡ ಮಟ್ಟದ ಪ್ರತಿರೋಧ ಬರುತ್ತಿರುವ ಹೊತ್ತಿನಲ್ಲಿ ರೈತರ ಜೊತೆಗೆ ಚೌಕಾಶಿಗೆ ಇಳಿದಿದೆ. ಆದರೆ ಅಲ್ಲೂ ಪ್ರಾಮಾಣಿಕತೆಯಿಲ್ಲ. ಕಾರ್ಪೊರೆಟ್ ಶಕ್ತಿಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಬಹುತೇಕ ಬೆದರಿಕೆ ರೀತಿಯಲ್ಲಿಯೇ ರೈತರನ್ನು ಮಣಿಸಲು ಪ್ರಯತ್ನ ಮಾಡುತ್ತಿರುವುದು ಇಲ್ಲಿಯವರೆಗೂ ಫಲ ಕೊಟ್ಟಿಲ್ಲ.

ಯಾವುದೇ ಕಾನೂನು-ಕಾಯ್ದೆ ಜಾರಿಗೊಳಿಸುವಾಗ ಹಲವು ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ ಜನ ಸಾಮಾನ್ಯರೆಲ್ಲರ ಹಿತವನ್ನು ಕಾಯುವುದನ್ನು ಸರ್ಕಾರಗಳು ಮನಗಾಣಬೇಕಲ್ಲವೇ?


ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...