Homeಅಂಕಣಗಳುಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಗೋಹತ್ಯೆ ನಿಷೇಧ ವಿಧೇಯಕ ಮತ್ತು ರೈತರ ಹೋರಾಟದ ಕುರಿತು ಗುರುಪ್ರಸಾದ್ ಡಿ.ಎನ್ ರವರ ಲೇಖನ ಓದಿ.

- Advertisement -
- Advertisement -

ಯಾವುದೇ ಬಹು ಸಂಸ್ಕೃತಿಯ ಪ್ರಜಾಪ್ರಭುತ್ವ ದೇಶದಲ್ಲಿ ನಂಬಿಕೆ ಆಚರಣೆಗಳ ವಿಚಾರಕ್ಕೆ ಬಂದಾಗ, ಹಲವು ವರ್ಗಗಳ ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ವಿವಿಧ ಸಮುದಾಯಗಳ ನಡುವೆ ಸಂಧಾನಕ್ಕೆ, ಚೌಕಾಶಿಗೆ ಅವಕಾಶ ಇರಬೇಕು. ಅದಕ್ಕೆ ಪ್ರಭುತ್ವಗಳು-ಆಡಳಿತ ವ್ಯವಸ್ಥೆಗಳು ಸಹಾಯ ಮಾಡಬೇಕು. ಯಾವುದೋ ಒಂದು ಬಲಿಷ್ಟ ಸಂಸ್ಕೃತಿಯು ಮತ್ತೊಂದು ಸಂಸ್ಕೃತಿಯ ಮೇಲೆ ದಬ್ಬಾಳಿಕೆ ಮಾಡುವುದಕ್ಕೆ ಸಹಕರಿಸುವುದನ್ನಾಗಲೀ, ಸಾಂವಿಧಾನಿಕ ತತ್ವಗಳನ್ನು ಗಾಳಿಗೆ ತೂರಿ ಯಾವದೇ ಒಂದು ವರ್ಗದ-ಸಮುದಾಯದ ಹಿತಾಸಕ್ತಿಗೆ ಮಣೆ ಹಾಕಿ ಸಾಮಾನ್ಯ ಹಿತವನ್ನು, ಜನಸಾಮಾನ್ಯರ ಒಟ್ಟಾರೆ ಹಿತಾಸಕ್ತಿಯನ್ನು ಕಡೆಗಣಿಸುವುದನ್ನಾಗಲೀ ಸರ್ಕಾರಗಳು ಮಾಡಲೇಬಾರದು.

ಸ್ವಾತಂತ್ರ್ಯಪೂರ್ವದಿಂದಲೂ ಗೋಹತ್ಯೆ ಈ ದೇಶದಲ್ಲಿ ವಿವಾದಾಸ್ಪದ ಸಂಗತಿಯೇ. ಒಂದು ಸಣ್ಣ ಸಮುದಾಯದ ನಂಬಿಕೆಯಾಗಿ ಯಾವುದೋ ಒಂದು ಕಾಲಘಟ್ಟದಲ್ಲಿ ಹಸುಗಳ ಬಗ್ಗೆ ಪೂಜ್ಯ ಭಾವನೆ ಬೆಳೆದಿರಬಹುದು. ಈ ದೇಶದಲ್ಲಿ ಹಲವು ಸಮುದಾಯಗಳು ತಮ್ಮ ಮಾಂಸಾಹಾರದ ಜೊತೆಗೆ ಗೋಮಾಂಸ ತಿನ್ನುವುದೂ ಕೂಡ ವಾಸ್ತವ. ಹಸುಗಳನ್ನು ಪೂಜಿಸುವ ಆದರೆ ತಮ್ಮ ಮಾಂಸಾಹಾರದಲ್ಲಿ ಗೋವನ್ನು ಹೊಂದಿರದ ಮತ್ತು ಗೋಮಾಂಸ ತಿನ್ನುವವರ ಬಗ್ಗೆ ಯಾವುದೇ ಅಸಹನೆ ತೋರದ ಸಮುದಾಯಗಳೂ ಇವೆ. ಮೊದಲನೆಯ ಸಮುದಾಯದ ಅವೈಚಾರಿಕತೆಯನ್ನು ಮತ್ತು ಗೋಮಾಂಸ ತಿನ್ನುವ ಸಮುದಾಯಗಳ ಅಗತ್ಯಗಳು-ಕಾರಣಗಳನ್ನು ಸದ್ಯಕ್ಕೆ ಬದಿಗಿಟ್ಟರೂ, ಯಾವುದೇ ಆಡಳಿತ ವ್ಯವಸ್ಥೆಯ ಕೆಲಸ ಎರಡೂ ಸಮುದಾಯಗಳ ನಡುವಿನ ಸಂಘರ್ಷಕ್ಕೆ ವೈಚಾರಿಕ ತಳಹದಿಯಲ್ಲಿ, ಸಂವಿಧಾನದ ಆಶಯಗಳಲ್ಲಿ ಸಂಧಾನಕ್ಕೆ ಪ್ರಯತ್ನಿಸಿ, ಪರಿಹಾರಗಳನ್ನು ಸೂಚಿಸುವುದು. ಅಂದರೆ ಅಂತಹ ಚೌಕಾಶಿಗೆ ಇರುವ ಸ್ಪೇಸ್‌ಅನ್ನು ಉಳಿಸಿಕೊಳ್ಳಬೇಕು. ಇಂತಹ ಸಂದರ್ಭವನ್ನು ಊಹಿಸಿಯೇ, ಸಂವಿಧಾನ ರಚನೆಯಲ್ಲಿ, ಗೋರಕ್ಷಣೆಯನ್ನು ರಾಜ್ಯ ನಿರ್ದೇಶಕ ತತ್ವಗಳನ್ನಾಗಿಸಿ, ಆಯಾ ನಾಡಿನ ಸಾಂಸ್ಕೃತಿಕ-ಸಾಮಾಜಿಕ ಸಂದರ್ಭಕ್ಕೆ, ಎಲ್ಲ ಸಮುದಾಯಗಳ ಬೇಡಿಕೆಗಳಿಗೂ ಜಾಗ ನೀಡುವ ಕಾನೂನನ್ನು ರಚಿಸಲು ಸಾಧ್ಯವಾಗುವಂತೆ ಅವಕಾಶ ಒದಗಿಸಿತ್ತು.

ಹಲವು ರಾಜ್ಯ ಸರ್ಕಾರಗಳು ಇಂತಹ ಸಮತೋಲನದ ಕಾನೂನುಗಳನ್ನು ರಚಿಸಿದ್ದವು ಕೂಡ. ಗೋವುಗಳನ್ನು ವಧೆ ಮಾಡದಂತೆ, ಉಳಿದ ಜಾನುವಾರುಗಳ ಭಕ್ಷಣೆಗೆ ಅವಕಾಶ ಮಾಡಿಕೊಡುವ ಕಾನೂನುಗಳು ಬಹುಸಂಸ್ಕೃತಿಯ ಪ್ರಜಾಸತ್ತೆಯಲ್ಲಿ ಚೌಕಾಶಿ ಮಾಡುವ ಪ್ರಕ್ರಿಯೆಯನ್ನು ಎತ್ತಿ ಹಿಡಿದಿತ್ತು. ಆದರೆ, ಈಗ ಹಲವು ರಾಜ್ಯಗಳ ಬಿಜೆಪಿ ಸರ್ಕಾರಗಳು ಹೊಸ ಜಾನುವಾರು ಹತ್ಯೆ ಕಾನೂನುಗಳನ್ನು ರಚಿಸಿ ಅದರಲ್ಲಿ, ಹಸುಗಳು, ಎತ್ತುಗಳು, ಗೊಡ್ಡು ದನಗಳು ಎಲ್ಲವನ್ನು ಹತ್ಯೆ ಮಾಡದಂತೆ ತಡೆದಿವೆ. ಕರ್ನಾಟಕ ಸರ್ಕಾರವೂ ಇಂತಹ ಕರಾಳ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೇವಲ ಒಂದು ಸಮುದಾಯದ ಹಿತಾಸಕ್ತಿಯನ್ನು ಕಾಯುವ, ಉಳಿದ ಸಮುದಾಯಗಳ ಸಂಧಾನಕ್ಕೆ ಕದ ಮುಚ್ಚಿರುವ ರಾಜ್ಯ ಸರ್ಕಾರದ ಕ್ರಮ ಸಂವಿಧಾನತತ್ವಕ್ಕೆ ಬದ್ಧವಾಗಿಲ್ಲ. (ವೈಚಾರಿಕವಾಗಿ, ಕಾನೂನಿನ ಅನುಷ್ಠಾನದ ದೃಷ್ಟಿಯಿಂದಲೂ ಈ ಹೊಸ ಕಾಯ್ದೆ ಸರಿಯಲ್ಲ ಎನ್ನುವ ಚರ್ಚೆಯನ್ನು ಹೊರತುಪಡಿಸಿದರೂ)

ಇದೇ ರೀತಿಯಲ್ಲಿ ಕೇಂದ್ರ ಸರ್ಕಾರ ಕಾರ್ಪೊರೆಟ್ ಹಿತಾಸಕ್ತಿಯನ್ನು ಮಾತ್ರ ಕಾಪಾಡಲು, ರೈತರ ಜೊತೆಗೆ, ರಾಜ್ಯ ಸರ್ಕಾರಗಳ ಜೊತೆಗೆ ಯಾವುದೇ ಸಂಧಾನ-ಚೌಕಾಶಿ ನಡೆಸದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕಾನೂನುಗಳು ಈಗ ತನ್ನ ಕೊರಳಿಗೇ ಸುತ್ತಿಕೊಳ್ಳುತ್ತಿವೆ. ಕಾನೂನು ಜಾರಿ ಮಾಡುವಾಗ ಯಾವುದೇ ಮಾತುಕತೆ ನಡೆಸದೆ, ಈಗ ದೊಡ್ಡ ಮಟ್ಟದ ಪ್ರತಿರೋಧ ಬರುತ್ತಿರುವ ಹೊತ್ತಿನಲ್ಲಿ ರೈತರ ಜೊತೆಗೆ ಚೌಕಾಶಿಗೆ ಇಳಿದಿದೆ. ಆದರೆ ಅಲ್ಲೂ ಪ್ರಾಮಾಣಿಕತೆಯಿಲ್ಲ. ಕಾರ್ಪೊರೆಟ್ ಶಕ್ತಿಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಬಹುತೇಕ ಬೆದರಿಕೆ ರೀತಿಯಲ್ಲಿಯೇ ರೈತರನ್ನು ಮಣಿಸಲು ಪ್ರಯತ್ನ ಮಾಡುತ್ತಿರುವುದು ಇಲ್ಲಿಯವರೆಗೂ ಫಲ ಕೊಟ್ಟಿಲ್ಲ.

ಯಾವುದೇ ಕಾನೂನು-ಕಾಯ್ದೆ ಜಾರಿಗೊಳಿಸುವಾಗ ಹಲವು ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ ಜನ ಸಾಮಾನ್ಯರೆಲ್ಲರ ಹಿತವನ್ನು ಕಾಯುವುದನ್ನು ಸರ್ಕಾರಗಳು ಮನಗಾಣಬೇಕಲ್ಲವೇ?


ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...