Homeಮುಖಪುಟಜಮ್ಮು ಕಾಶ್ಮೀರದ ಕಥುವಾದಲ್ಲಿ ಮೇಘಸ್ಫೋಟ: 7 ಮಂದಿ ಸಾವು, ಹಲವರಿಗೆ ಗಾಯ

ಜಮ್ಮು ಕಾಶ್ಮೀರದ ಕಥುವಾದಲ್ಲಿ ಮೇಘಸ್ಫೋಟ: 7 ಮಂದಿ ಸಾವು, ಹಲವರಿಗೆ ಗಾಯ

- Advertisement -
- Advertisement -

ಜಮ್ಮು ಕಾಶ್ಮೀರದ ಕಥುವಾ ಜಿಲ್ಲಾ ಕೇಂದ್ರದಿಂದ ಬಹಳ ದೂರದಲ್ಲಿರುವ ಗ್ರಾಮವಾದ ಜೋಡ್ ಘಾಟಿಯಲ್ಲಿ ಭಾನುವಾರ (ಆ.17) ಬೆಳಗಿನ ಜಾವ ಮೇಘಸ್ಫೋಟ ಸಂಭವಿಸಿದ್ದು, ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ದುರಂತದಿಂದ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು, ರೈತರ ಜಮೀನು ಸೇರಿದಂತೆ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮನೆಗಳು ಸೇರಿದಂತೆ ಕೆಲ ಕಟ್ಟಡಗಳು ನೀರಿನೊಂದಿಗೆ ಕೊಚ್ಚಿ ಬಂದ ಮಣ್ಣಿನಿಂದ ಸಂಪೂರ್ಣ ಆವೃತ್ತವಾಗಿವೆ. ಅವಶೇಷಗಳ ಅಡಿಯಲ್ಲಿ ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ವರದಿಗಳು ಹೇಳಿವೆ.

ಸ್ಥಳೀಯ ಸ್ವಯಂ ಸೇವಕರ ಸಹಾಯ ಪಡೆದು ಘಟನಾ ಸ್ಥಳಕ್ಕೆ ತಲುಪಿರುವ ಪೊಲೀಸ್ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್) ಜಂಟಿ ತಂಡ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ.

ದುರಂತ ಸ್ಥಳದಿಂದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಕಥುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಗಾರ್ಡ್ ಮತ್ತು ಚಾಂಗ್ಡಾ ಗ್ರಾಮಗಳಲ್ಲಿ ಹಾಗೂ ಲಖನ್‌ಪುರದ ದಿಲ್ವಾನ್-ಹುಟ್ಲಿ ಪ್ರದೇಶದಲ್ಲಿ ಕೂಡ ಭೂಕುಸಿತ ಸಂಭವಿಸಿದ ಬಗ್ಗೆ ವರದಿಯಾಗಿವೆ. ಆದರೆ, ಈ ಪ್ರದೇಶಗಳಲ್ಲಿ ದೊಡ್ಡ ಮಟ್ಟದ ಹಾನಿ ಸಂಭವಿಸಿಲ್ಲ ಎಂದು ವರದಿಗಳು ಹೇಳಿವೆ.

ಕಥುವಾ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ನದಿಗಳು ಉಕ್ಕಿ ಹರಿಯುತ್ತಿವೆ. ಉಜ್ ನದಿ ಪ್ರಸ್ತುತ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲಾಡಳಿತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಜನರು ಜಾಗರೂಕರಾಗಿರುವಂತೆ ಮತ್ತು ಜಲಮೂಲಗಳ ಬಳಿ ಹೋಗದಂತೆ ಮುನ್ನೆಚ್ಚರಿಕೆ ನೀಡಿದೆ.

ಆಗಸ್ಟ್ 14ರಂದು ಜಮ್ಮು ಕಾಶ್ಮೀರದ ಕಿಶ್ತ್ವಾರದಲ್ಲಿ ಸಂಭವಿಸಿದ ಮೇಘ ಸ್ಪೋಟದಲ್ಲಿ ಸುಮಾರು 60 ಜನರು ಸಾವನ್ನಪ್ಪಿದ್ದು, ಅನೇಕರು ಇನ್ನೂ ನಾಪತ್ತೆಯಾಗಿದ್ದಾರೆ. 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆ ದುರಂತದ ರಕ್ಷಣಾ ಮುಂದುವರೆಯುತ್ತಿರುವ ನಡುವೆಯೇ, ಮತ್ತೊಂದು ಅದೇ ರೀತಿಯ ದುರಂತ ಸಂಭವಿಸಿದೆ.

ಆಗಸ್ಟ್ 5ರಂದು ಉತ್ತರಾಖಂಡದ ಉತ್ತರಕಾಶಿಯ ಧರಲಿ ಮತ್ತು ಹರ್ಸಿಲ್ ಪ್ರದೇಶದಲ್ಲಿ ಸಂಭವಿಸಿದ ಮೇಘಸ್ಪೋಟ ದುರಂತದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ.

Bihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...