Homeಮುಖಪುಟಸಿಕ್ಕಿಂನಲ್ಲಿ ಮೇಘಸ್ಫೋಟ: ತೀಸ್ತಾ ನದಿಯಲ್ಲಿ ಪ್ರವಾಹ; 23 ಸೇನಾ ಸಿಬ್ಬಂದಿ ನಾಪತ್ತೆ

ಸಿಕ್ಕಿಂನಲ್ಲಿ ಮೇಘಸ್ಫೋಟ: ತೀಸ್ತಾ ನದಿಯಲ್ಲಿ ಪ್ರವಾಹ; 23 ಸೇನಾ ಸಿಬ್ಬಂದಿ ನಾಪತ್ತೆ

- Advertisement -
- Advertisement -

ಸಿಕ್ಕಿಂನಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಯೋಧರ ಪತ್ತೆಗೆ ವ್ಯಾಪಕ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಸೇನೆಯ ಪೂರ್ವ ಕಮಾಂಡ್‌ನ ಹೇಳಿಕೆಯ ಪ್ರಕಾರ, ಲಾಚೆನ್ ಕಣಿವೆಯ ಉದ್ದಕ್ಕೂ ಕೆಲವು ಸಂಸ್ಥೆಗಳಿಗೆ ಕೂಡ ಹಾನಿಯಾಗಿದೆ. ಚುಂಗ್ತಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿರುವುದರಿಂದ ತೀಸ್ತಾ ನದಿಯಲ್ಲಿ ನೀರಿನ ಮಟ್ಟವು 15-20 ಅಡಿ ಎತ್ತರದವರೆಗೆ ಹಠಾತ್ ಹೆಚ್ಚಳಕ್ಕೆ ಕಾರಣವಾಗಿದೆ. ಇದರಿಂದಾಗಿ ಸಿಂಗ್ಟಾಮ್ ಬಳಿಯ ಬರ್ದಂಗ್‌ನಲ್ಲಿ ನಿಲುಗಡೆ ಮಾಡಿದ್ದ ಸೇನಾ ವಾಹನ ಕೊಚ್ಚಿಕೊಂಡು ಹೋಗಿದೆ. ಘಟನೆಯಲ್ಲಿ  23 ಭಾರತೀಯ ಸೇನಾ ಸಿಬ್ಬಂದಿ ಕಾಣೆಯಾಗಿದ್ದಾರೆ ಮತ್ತು ಕೆಲವು ವಾಹನಗಳು ಮುಳುಗಿವೆ. ಸ್ಥಳದಲ್ಲಿ ಕೆಸರು ತಂಬಿಕೊಂಡಿದ್ದು, ಕೆಸರಿನ ಅಡಿಯಲ್ಲಿ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ.

ಸಿಕ್ಕಿಂನಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದೆ. ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಬಳಿ ಮೇಘಸ್ಫೋಟವು ತೀಸ್ತಾ ನದಿಯಲ್ಲಿ ನೀರಿನ ಮಟ್ಟವನ್ನು ಹೆಚ್ಚಿಸಿದೆ. ತೀಸ್ತಾ ನದಿಯು ಬಾಂಗ್ಲಾದೇಶವನ್ನು ಪ್ರವೇಶಿಸುವ ಮೊದಲು ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಮೂಲಕ ಹರಿಯುತ್ತದೆ.

ಸಿಕ್ಕಿಂ ಆಡಳಿತವು ಸ್ಥಳೀಯ ನಿವಾಸಿಗಳಿಗೆ ಹೈ ಅಲರ್ಟ್ ನೀಡಿದೆ. ಸ್ಥಳೀಯ ನಿವಾಸಿಗಳು ರೆಕಾರ್ಡ್ ಮಾಡಿದ ವಿಡಿಯೋಗಳಲ್ಲಿ ರಸ್ತೆಗಳು ಕೊಚ್ಚಿಹೋಗಿವೆ ಮತ್ತು ಪ್ರವಾಹವನ್ನು ತೋರಿಸುತ್ತವೆ. ಸಾವು ನೋವಿನ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದಿದ್ದರೂ ಸಾರ್ವಜನಿಕ ಆಸ್ತಿಗೆ ಗಮನಾರ್ಹವಾಗಿ ಹಾನಿಯಾಗಿದೆ. ಸಿಂಗ್ಟಮ್ನಲ್ಲಿ ಕೆಲವರು ನಾಪತ್ತೆಯಾಗಿದ್ದಾರೆ.

ಸಿಕ್ಕಿಂನ ಚುಂಗ್‌ಥಾಂಗ್‌ನಲ್ಲಿನ ಸರೋವರವು ಉಕ್ಕಿ ಹರಿದ ನಂತರ ತೀಸ್ತಾ ನದಿಯಲ್ಲಿ ಪ್ರವಾಹ ಕಾಣಿಸಿಕೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಗಜೋಲ್ಡೋಬಾ, ಡೊಮೊಹಾನಿ, ಮೆಖಲಿಗಂಜ್ ಮತ್ತು ಘಿಶ್‌ನಂತಹ ತಗ್ಗು ಪ್ರದೇಶಗಳ ಮೇಲೆ ಇದು ಪರಿಣಾಮ ಬೀರಬಹುದು. ದಯವಿಟ್ಟು ಜಾಗರೂಕರಾಗಿರಿ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ: ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್: ಶಿಕ್ಷಕರನ್ನು ಥಳಿಸಿದ ಸಂಘ ಪರಿವಾರದ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...