Homeಮುಖಪುಟಸಿಕ್ಕಿಂನಲ್ಲಿ ಮೇಘಸ್ಫೋಟ: ತೀಸ್ತಾ ನದಿಯಲ್ಲಿ ಪ್ರವಾಹ; 23 ಸೇನಾ ಸಿಬ್ಬಂದಿ ನಾಪತ್ತೆ

ಸಿಕ್ಕಿಂನಲ್ಲಿ ಮೇಘಸ್ಫೋಟ: ತೀಸ್ತಾ ನದಿಯಲ್ಲಿ ಪ್ರವಾಹ; 23 ಸೇನಾ ಸಿಬ್ಬಂದಿ ನಾಪತ್ತೆ

- Advertisement -
- Advertisement -

ಸಿಕ್ಕಿಂನಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಯೋಧರ ಪತ್ತೆಗೆ ವ್ಯಾಪಕ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಸೇನೆಯ ಪೂರ್ವ ಕಮಾಂಡ್‌ನ ಹೇಳಿಕೆಯ ಪ್ರಕಾರ, ಲಾಚೆನ್ ಕಣಿವೆಯ ಉದ್ದಕ್ಕೂ ಕೆಲವು ಸಂಸ್ಥೆಗಳಿಗೆ ಕೂಡ ಹಾನಿಯಾಗಿದೆ. ಚುಂಗ್ತಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿರುವುದರಿಂದ ತೀಸ್ತಾ ನದಿಯಲ್ಲಿ ನೀರಿನ ಮಟ್ಟವು 15-20 ಅಡಿ ಎತ್ತರದವರೆಗೆ ಹಠಾತ್ ಹೆಚ್ಚಳಕ್ಕೆ ಕಾರಣವಾಗಿದೆ. ಇದರಿಂದಾಗಿ ಸಿಂಗ್ಟಾಮ್ ಬಳಿಯ ಬರ್ದಂಗ್‌ನಲ್ಲಿ ನಿಲುಗಡೆ ಮಾಡಿದ್ದ ಸೇನಾ ವಾಹನ ಕೊಚ್ಚಿಕೊಂಡು ಹೋಗಿದೆ. ಘಟನೆಯಲ್ಲಿ  23 ಭಾರತೀಯ ಸೇನಾ ಸಿಬ್ಬಂದಿ ಕಾಣೆಯಾಗಿದ್ದಾರೆ ಮತ್ತು ಕೆಲವು ವಾಹನಗಳು ಮುಳುಗಿವೆ. ಸ್ಥಳದಲ್ಲಿ ಕೆಸರು ತಂಬಿಕೊಂಡಿದ್ದು, ಕೆಸರಿನ ಅಡಿಯಲ್ಲಿ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ.

ಸಿಕ್ಕಿಂನಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದೆ. ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಬಳಿ ಮೇಘಸ್ಫೋಟವು ತೀಸ್ತಾ ನದಿಯಲ್ಲಿ ನೀರಿನ ಮಟ್ಟವನ್ನು ಹೆಚ್ಚಿಸಿದೆ. ತೀಸ್ತಾ ನದಿಯು ಬಾಂಗ್ಲಾದೇಶವನ್ನು ಪ್ರವೇಶಿಸುವ ಮೊದಲು ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಮೂಲಕ ಹರಿಯುತ್ತದೆ.

ಸಿಕ್ಕಿಂ ಆಡಳಿತವು ಸ್ಥಳೀಯ ನಿವಾಸಿಗಳಿಗೆ ಹೈ ಅಲರ್ಟ್ ನೀಡಿದೆ. ಸ್ಥಳೀಯ ನಿವಾಸಿಗಳು ರೆಕಾರ್ಡ್ ಮಾಡಿದ ವಿಡಿಯೋಗಳಲ್ಲಿ ರಸ್ತೆಗಳು ಕೊಚ್ಚಿಹೋಗಿವೆ ಮತ್ತು ಪ್ರವಾಹವನ್ನು ತೋರಿಸುತ್ತವೆ. ಸಾವು ನೋವಿನ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದಿದ್ದರೂ ಸಾರ್ವಜನಿಕ ಆಸ್ತಿಗೆ ಗಮನಾರ್ಹವಾಗಿ ಹಾನಿಯಾಗಿದೆ. ಸಿಂಗ್ಟಮ್ನಲ್ಲಿ ಕೆಲವರು ನಾಪತ್ತೆಯಾಗಿದ್ದಾರೆ.

ಸಿಕ್ಕಿಂನ ಚುಂಗ್‌ಥಾಂಗ್‌ನಲ್ಲಿನ ಸರೋವರವು ಉಕ್ಕಿ ಹರಿದ ನಂತರ ತೀಸ್ತಾ ನದಿಯಲ್ಲಿ ಪ್ರವಾಹ ಕಾಣಿಸಿಕೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಗಜೋಲ್ಡೋಬಾ, ಡೊಮೊಹಾನಿ, ಮೆಖಲಿಗಂಜ್ ಮತ್ತು ಘಿಶ್‌ನಂತಹ ತಗ್ಗು ಪ್ರದೇಶಗಳ ಮೇಲೆ ಇದು ಪರಿಣಾಮ ಬೀರಬಹುದು. ದಯವಿಟ್ಟು ಜಾಗರೂಕರಾಗಿರಿ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ: ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್: ಶಿಕ್ಷಕರನ್ನು ಥಳಿಸಿದ ಸಂಘ ಪರಿವಾರದ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...