Homeಮುಖಪುಟಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತಕ್ಕೆ 5 ಮಂದಿ ಬಲಿ

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತಕ್ಕೆ 5 ಮಂದಿ ಬಲಿ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಶುಕ್ರವಾರದಿಂದ ಸುರಿಯುತ್ತಿರುವ ಭಾರೀ ಮಳೆ ಮತ್ತು ಭೂಕುಸಿತದಿಂದ ಉಂಟಾಗಿರುವ ಹವಾಮಾನ ವೈಪರೀತ್ಯದಿಂದ ಐದು ಜನರು ಸಾವನ್ನಪ್ಪಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಮಿಂಚು, ಬಿರುಗಾಳಿ, ಆಲಿಕಲ್ಲು ಮತ್ತು ಹಿಮ ಬಿದ್ದಿದ್ದು, ರಂಬನ್ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಹಲವಾರು ವಸತಿ ಮತ್ತು ವಾಣಿಜ್ಯ ಕಟ್ಟಡಗಳು ಕುಸಿದು ಬಿದ್ದಿದ್ದು, ಕನಿಷ್ಠ 500 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

“ಭಾನುವಾರ ರಿಯಾಸಿಯ ಅರ್ನಾಸ್‌ನ ಜಮೇದಿ ಗ್ರಾಮದಲ್ಲಿ ಸಿಡಿಲು ಬಡಿದಿದೆ. ಇದರಿಂದ ಇಬ್ಬರು ಸ್ಥಳೀಯರು ಸಾವನ್ನಪ್ಪಿದರು. ಸುಮಾರು 40 ಜಾನುವಾರುಗಳು ಸಿಡಿಲಿಗೆ ಬಲಿಯಾದವು.” ಎಂದು ಸಮುದಾಯದ ನಾಯಕ ತಾಲಿಬ್ ಹುಸಿಯಾನ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ರಾಂಬನ್ ಜಿಲ್ಲೆಯ ಬಾಗ್ನಾದಲ್ಲಿ ಮನೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. “ರಾಂಬನ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ರಾಂಬನ್ ಪ್ರದೇಶದಲ್ಲಿ ರಾತ್ರಿಯಿಡೀ ಭಾರೀ ಆಲಿಕಲ್ಲು ಮಳೆ, ಹಲವಾರು ಭೂಕುಸಿತಗಳು ಮತ್ತು ವೇಗದ ಗಾಳಿ ಬೀಸಿತು” ಎಂದು ಉಧಂಪುರ್‌ ಬಿಜೆಪಿ ಸಂಸದ ಜಿತೇಂದ್ರ ಸಿಂಗ್ ಎಕ್ಸ್‌ನಲ್ಲಿ ಹೇಳಿದ್ದಾರೆ. “ರಾಷ್ಟ್ರೀಯ ಹೆದ್ದಾರಿ ಮುಚ್ಚಿಹೋಗಿದ್ದು, ದುರದೃಷ್ಟವಶಾತ್ ಮೂರು ಸಾವುನೋವುಗಳು ಮತ್ತು ಎರಡು ಕುಟುಂಬಗಳಿಗೆ ಆಸ್ತಿ ನಷ್ಟ ಸಂಭವಿಸಿದೆ.” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರ ಸರ್ಕಾರವು ಅಧಿಕೃತವಾಗಿ ಯಾವುದೇ ಸಾವುನೋವುಗಳ ಅಂಕಿ ಅಂಶ ಬಿಡುಗಡೆ ಮಾಡಿಲ್ಲ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ರಾಂಬನ್‌ನ ತಗ್ಗು ಪ್ರದೇಶಗಳಿಂದ ನಿವಾಸಿಗಳನ್ನು ರಕ್ಷಿಸಲು ಕೇಂದ್ರಾಡಳಿತ ಪ್ರದೇಶದ ತುರ್ತು ನಿಯಂತ್ರಣ ಕೇಂದ್ರವು ಕಂದಾಯ ಇಲಾಖೆ ಮತ್ತು ಪೊಲೀಸ್ ತಂಡಗಳನ್ನು ನೇಮಿಸಿದೆ.

ಜಮ್ಮು ಕಾಶ್ಮೀರದಲ್ಲಿ ಭಾನುವಾರದವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ತಿಳಿಸಿತ್ತು. ಭಾನುವಾರ ಹೊಸದಾಗಿ ನೀಡಿರುವ ಸಲಹೆಯಲ್ಲಿ, ಸೋಮವಾರದವರೆಗೆ ಪ್ರದೇಶದಾದ್ಯಂತ ಗುಡುಗು ಮತ್ತು ಮಿಂಚಿ ಸಹಿತ ಮಳೆ ಇರಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅನಿರೀಕ್ಷಿತ ಹಠಾತ್ ಪ್ರವಾಹದ ಅಪಾಯವನ್ನು ಉಲ್ಲೇಖಿಸಿ, ರಸ್ತೆ ಅಂಡರ್‌ಪಾಸ್‌ಗಳು, ಒಳಚರಂಡಿ ಹಳ್ಳಗಳು ಮತ್ತು ನೀರು ಸಂಗ್ರಹವಾಗುವ ತಗ್ಗು ಪ್ರದೇಶಗಳಿಂದ ದೂರವಿರಲು ಸಾರ್ವಜನಿಕರಿಗೆ ಹವಮಾನ ಇಲಾಖೆ ಸಲಹೆ ನೀಡಿದೆ.

“ಪ್ರವಾಹಕ್ಕೆ ಸಿಲುಕಿರುವ ರಸ್ತೆಯನ್ನು ದಾಟಲು ಪ್ರಯತ್ನಿಸಬೇಡಿ. ನೀರು ನೀವು ಕಾಣುವುದಕ್ಕಿಂತ ಆಳ ಮತ್ತು ತೀವ್ರವಾಗಿರಬಹುದು ಮತ್ತು ಬಂಡೆಯ ರಾಶಿಗಳು, ಚೂಪಾದ ಅಥವಾ ಅಪಾಯಕಾರಿ ವಸ್ತುಗಳು, ಗುಂಡಿಗಳು ಅಥವಾ ವಿದ್ಯುತ್ ತಂತಿಗಳು ಇರದಲ್ಲಿ ಬಿದ್ದಿರಬಹುದು” ಎಂದು ಇಲಾಖೆ ಹೇಳಿದೆ.

ರಂಬನ್‌ನಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದ “ತೀವ್ರ ದುಃಖಿತನಾಗಿದ್ದೇನೆ” ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಅಗತ್ಯವಿರುವಲ್ಲೆಲ್ಲಾ ತಕ್ಷಣದ ರಕ್ಷಣಾ ಪ್ರಯತ್ನಗಳನ್ನು ಖಚಿತಪಡಿಸಿಕೊಳ್ಳಲು ನಾವು ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಅವರು ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ. ಜಮ್ಮು ಕಾಶ್ಮೀರದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಮಿಳುನಾಡಿನಲ್ಲಿ ಹೇಗಾದರೂ ಹಿಂದಿ ಹೇರಲು ಕೇಂದ್ರ ಸರ್ಕಾರ ಬಯಸುತ್ತಿದೆ: ಉದಯನಿಧಿ ಸ್ಟಾಲಿನ್

ತಮಿಳುನಾಡಿನಲ್ಲಿ ಹೇಗಾದರೂ ಹಿಂದಿ ಹೇರಲು ಕೇಂದ್ರ ಸರ್ಕಾರ ಬಯಸುತ್ತಿದೆ: ಉದಯನಿಧಿ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...