Homeಮುಖಪುಟಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತಕ್ಕೆ 5 ಮಂದಿ ಬಲಿ

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತಕ್ಕೆ 5 ಮಂದಿ ಬಲಿ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಶುಕ್ರವಾರದಿಂದ ಸುರಿಯುತ್ತಿರುವ ಭಾರೀ ಮಳೆ ಮತ್ತು ಭೂಕುಸಿತದಿಂದ ಉಂಟಾಗಿರುವ ಹವಾಮಾನ ವೈಪರೀತ್ಯದಿಂದ ಐದು ಜನರು ಸಾವನ್ನಪ್ಪಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಮಿಂಚು, ಬಿರುಗಾಳಿ, ಆಲಿಕಲ್ಲು ಮತ್ತು ಹಿಮ ಬಿದ್ದಿದ್ದು, ರಂಬನ್ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಹಲವಾರು ವಸತಿ ಮತ್ತು ವಾಣಿಜ್ಯ ಕಟ್ಟಡಗಳು ಕುಸಿದು ಬಿದ್ದಿದ್ದು, ಕನಿಷ್ಠ 500 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

“ಭಾನುವಾರ ರಿಯಾಸಿಯ ಅರ್ನಾಸ್‌ನ ಜಮೇದಿ ಗ್ರಾಮದಲ್ಲಿ ಸಿಡಿಲು ಬಡಿದಿದೆ. ಇದರಿಂದ ಇಬ್ಬರು ಸ್ಥಳೀಯರು ಸಾವನ್ನಪ್ಪಿದರು. ಸುಮಾರು 40 ಜಾನುವಾರುಗಳು ಸಿಡಿಲಿಗೆ ಬಲಿಯಾದವು.” ಎಂದು ಸಮುದಾಯದ ನಾಯಕ ತಾಲಿಬ್ ಹುಸಿಯಾನ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ರಾಂಬನ್ ಜಿಲ್ಲೆಯ ಬಾಗ್ನಾದಲ್ಲಿ ಮನೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. “ರಾಂಬನ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ರಾಂಬನ್ ಪ್ರದೇಶದಲ್ಲಿ ರಾತ್ರಿಯಿಡೀ ಭಾರೀ ಆಲಿಕಲ್ಲು ಮಳೆ, ಹಲವಾರು ಭೂಕುಸಿತಗಳು ಮತ್ತು ವೇಗದ ಗಾಳಿ ಬೀಸಿತು” ಎಂದು ಉಧಂಪುರ್‌ ಬಿಜೆಪಿ ಸಂಸದ ಜಿತೇಂದ್ರ ಸಿಂಗ್ ಎಕ್ಸ್‌ನಲ್ಲಿ ಹೇಳಿದ್ದಾರೆ. “ರಾಷ್ಟ್ರೀಯ ಹೆದ್ದಾರಿ ಮುಚ್ಚಿಹೋಗಿದ್ದು, ದುರದೃಷ್ಟವಶಾತ್ ಮೂರು ಸಾವುನೋವುಗಳು ಮತ್ತು ಎರಡು ಕುಟುಂಬಗಳಿಗೆ ಆಸ್ತಿ ನಷ್ಟ ಸಂಭವಿಸಿದೆ.” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರ ಸರ್ಕಾರವು ಅಧಿಕೃತವಾಗಿ ಯಾವುದೇ ಸಾವುನೋವುಗಳ ಅಂಕಿ ಅಂಶ ಬಿಡುಗಡೆ ಮಾಡಿಲ್ಲ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ರಾಂಬನ್‌ನ ತಗ್ಗು ಪ್ರದೇಶಗಳಿಂದ ನಿವಾಸಿಗಳನ್ನು ರಕ್ಷಿಸಲು ಕೇಂದ್ರಾಡಳಿತ ಪ್ರದೇಶದ ತುರ್ತು ನಿಯಂತ್ರಣ ಕೇಂದ್ರವು ಕಂದಾಯ ಇಲಾಖೆ ಮತ್ತು ಪೊಲೀಸ್ ತಂಡಗಳನ್ನು ನೇಮಿಸಿದೆ.

ಜಮ್ಮು ಕಾಶ್ಮೀರದಲ್ಲಿ ಭಾನುವಾರದವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ತಿಳಿಸಿತ್ತು. ಭಾನುವಾರ ಹೊಸದಾಗಿ ನೀಡಿರುವ ಸಲಹೆಯಲ್ಲಿ, ಸೋಮವಾರದವರೆಗೆ ಪ್ರದೇಶದಾದ್ಯಂತ ಗುಡುಗು ಮತ್ತು ಮಿಂಚಿ ಸಹಿತ ಮಳೆ ಇರಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅನಿರೀಕ್ಷಿತ ಹಠಾತ್ ಪ್ರವಾಹದ ಅಪಾಯವನ್ನು ಉಲ್ಲೇಖಿಸಿ, ರಸ್ತೆ ಅಂಡರ್‌ಪಾಸ್‌ಗಳು, ಒಳಚರಂಡಿ ಹಳ್ಳಗಳು ಮತ್ತು ನೀರು ಸಂಗ್ರಹವಾಗುವ ತಗ್ಗು ಪ್ರದೇಶಗಳಿಂದ ದೂರವಿರಲು ಸಾರ್ವಜನಿಕರಿಗೆ ಹವಮಾನ ಇಲಾಖೆ ಸಲಹೆ ನೀಡಿದೆ.

“ಪ್ರವಾಹಕ್ಕೆ ಸಿಲುಕಿರುವ ರಸ್ತೆಯನ್ನು ದಾಟಲು ಪ್ರಯತ್ನಿಸಬೇಡಿ. ನೀರು ನೀವು ಕಾಣುವುದಕ್ಕಿಂತ ಆಳ ಮತ್ತು ತೀವ್ರವಾಗಿರಬಹುದು ಮತ್ತು ಬಂಡೆಯ ರಾಶಿಗಳು, ಚೂಪಾದ ಅಥವಾ ಅಪಾಯಕಾರಿ ವಸ್ತುಗಳು, ಗುಂಡಿಗಳು ಅಥವಾ ವಿದ್ಯುತ್ ತಂತಿಗಳು ಇರದಲ್ಲಿ ಬಿದ್ದಿರಬಹುದು” ಎಂದು ಇಲಾಖೆ ಹೇಳಿದೆ.

ರಂಬನ್‌ನಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದ “ತೀವ್ರ ದುಃಖಿತನಾಗಿದ್ದೇನೆ” ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಅಗತ್ಯವಿರುವಲ್ಲೆಲ್ಲಾ ತಕ್ಷಣದ ರಕ್ಷಣಾ ಪ್ರಯತ್ನಗಳನ್ನು ಖಚಿತಪಡಿಸಿಕೊಳ್ಳಲು ನಾವು ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಅವರು ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ. ಜಮ್ಮು ಕಾಶ್ಮೀರದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಮಿಳುನಾಡಿನಲ್ಲಿ ಹೇಗಾದರೂ ಹಿಂದಿ ಹೇರಲು ಕೇಂದ್ರ ಸರ್ಕಾರ ಬಯಸುತ್ತಿದೆ: ಉದಯನಿಧಿ ಸ್ಟಾಲಿನ್

ತಮಿಳುನಾಡಿನಲ್ಲಿ ಹೇಗಾದರೂ ಹಿಂದಿ ಹೇರಲು ಕೇಂದ್ರ ಸರ್ಕಾರ ಬಯಸುತ್ತಿದೆ: ಉದಯನಿಧಿ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...