Homeಮುಖಪುಟಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತಕ್ಕೆ 5 ಮಂದಿ ಬಲಿ

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತಕ್ಕೆ 5 ಮಂದಿ ಬಲಿ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಶುಕ್ರವಾರದಿಂದ ಸುರಿಯುತ್ತಿರುವ ಭಾರೀ ಮಳೆ ಮತ್ತು ಭೂಕುಸಿತದಿಂದ ಉಂಟಾಗಿರುವ ಹವಾಮಾನ ವೈಪರೀತ್ಯದಿಂದ ಐದು ಜನರು ಸಾವನ್ನಪ್ಪಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಮಿಂಚು, ಬಿರುಗಾಳಿ, ಆಲಿಕಲ್ಲು ಮತ್ತು ಹಿಮ ಬಿದ್ದಿದ್ದು, ರಂಬನ್ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಹಲವಾರು ವಸತಿ ಮತ್ತು ವಾಣಿಜ್ಯ ಕಟ್ಟಡಗಳು ಕುಸಿದು ಬಿದ್ದಿದ್ದು, ಕನಿಷ್ಠ 500 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

“ಭಾನುವಾರ ರಿಯಾಸಿಯ ಅರ್ನಾಸ್‌ನ ಜಮೇದಿ ಗ್ರಾಮದಲ್ಲಿ ಸಿಡಿಲು ಬಡಿದಿದೆ. ಇದರಿಂದ ಇಬ್ಬರು ಸ್ಥಳೀಯರು ಸಾವನ್ನಪ್ಪಿದರು. ಸುಮಾರು 40 ಜಾನುವಾರುಗಳು ಸಿಡಿಲಿಗೆ ಬಲಿಯಾದವು.” ಎಂದು ಸಮುದಾಯದ ನಾಯಕ ತಾಲಿಬ್ ಹುಸಿಯಾನ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ರಾಂಬನ್ ಜಿಲ್ಲೆಯ ಬಾಗ್ನಾದಲ್ಲಿ ಮನೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. “ರಾಂಬನ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ರಾಂಬನ್ ಪ್ರದೇಶದಲ್ಲಿ ರಾತ್ರಿಯಿಡೀ ಭಾರೀ ಆಲಿಕಲ್ಲು ಮಳೆ, ಹಲವಾರು ಭೂಕುಸಿತಗಳು ಮತ್ತು ವೇಗದ ಗಾಳಿ ಬೀಸಿತು” ಎಂದು ಉಧಂಪುರ್‌ ಬಿಜೆಪಿ ಸಂಸದ ಜಿತೇಂದ್ರ ಸಿಂಗ್ ಎಕ್ಸ್‌ನಲ್ಲಿ ಹೇಳಿದ್ದಾರೆ. “ರಾಷ್ಟ್ರೀಯ ಹೆದ್ದಾರಿ ಮುಚ್ಚಿಹೋಗಿದ್ದು, ದುರದೃಷ್ಟವಶಾತ್ ಮೂರು ಸಾವುನೋವುಗಳು ಮತ್ತು ಎರಡು ಕುಟುಂಬಗಳಿಗೆ ಆಸ್ತಿ ನಷ್ಟ ಸಂಭವಿಸಿದೆ.” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರ ಸರ್ಕಾರವು ಅಧಿಕೃತವಾಗಿ ಯಾವುದೇ ಸಾವುನೋವುಗಳ ಅಂಕಿ ಅಂಶ ಬಿಡುಗಡೆ ಮಾಡಿಲ್ಲ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ರಾಂಬನ್‌ನ ತಗ್ಗು ಪ್ರದೇಶಗಳಿಂದ ನಿವಾಸಿಗಳನ್ನು ರಕ್ಷಿಸಲು ಕೇಂದ್ರಾಡಳಿತ ಪ್ರದೇಶದ ತುರ್ತು ನಿಯಂತ್ರಣ ಕೇಂದ್ರವು ಕಂದಾಯ ಇಲಾಖೆ ಮತ್ತು ಪೊಲೀಸ್ ತಂಡಗಳನ್ನು ನೇಮಿಸಿದೆ.

ಜಮ್ಮು ಕಾಶ್ಮೀರದಲ್ಲಿ ಭಾನುವಾರದವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ತಿಳಿಸಿತ್ತು. ಭಾನುವಾರ ಹೊಸದಾಗಿ ನೀಡಿರುವ ಸಲಹೆಯಲ್ಲಿ, ಸೋಮವಾರದವರೆಗೆ ಪ್ರದೇಶದಾದ್ಯಂತ ಗುಡುಗು ಮತ್ತು ಮಿಂಚಿ ಸಹಿತ ಮಳೆ ಇರಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅನಿರೀಕ್ಷಿತ ಹಠಾತ್ ಪ್ರವಾಹದ ಅಪಾಯವನ್ನು ಉಲ್ಲೇಖಿಸಿ, ರಸ್ತೆ ಅಂಡರ್‌ಪಾಸ್‌ಗಳು, ಒಳಚರಂಡಿ ಹಳ್ಳಗಳು ಮತ್ತು ನೀರು ಸಂಗ್ರಹವಾಗುವ ತಗ್ಗು ಪ್ರದೇಶಗಳಿಂದ ದೂರವಿರಲು ಸಾರ್ವಜನಿಕರಿಗೆ ಹವಮಾನ ಇಲಾಖೆ ಸಲಹೆ ನೀಡಿದೆ.

“ಪ್ರವಾಹಕ್ಕೆ ಸಿಲುಕಿರುವ ರಸ್ತೆಯನ್ನು ದಾಟಲು ಪ್ರಯತ್ನಿಸಬೇಡಿ. ನೀರು ನೀವು ಕಾಣುವುದಕ್ಕಿಂತ ಆಳ ಮತ್ತು ತೀವ್ರವಾಗಿರಬಹುದು ಮತ್ತು ಬಂಡೆಯ ರಾಶಿಗಳು, ಚೂಪಾದ ಅಥವಾ ಅಪಾಯಕಾರಿ ವಸ್ತುಗಳು, ಗುಂಡಿಗಳು ಅಥವಾ ವಿದ್ಯುತ್ ತಂತಿಗಳು ಇರದಲ್ಲಿ ಬಿದ್ದಿರಬಹುದು” ಎಂದು ಇಲಾಖೆ ಹೇಳಿದೆ.

ರಂಬನ್‌ನಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದ “ತೀವ್ರ ದುಃಖಿತನಾಗಿದ್ದೇನೆ” ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಅಗತ್ಯವಿರುವಲ್ಲೆಲ್ಲಾ ತಕ್ಷಣದ ರಕ್ಷಣಾ ಪ್ರಯತ್ನಗಳನ್ನು ಖಚಿತಪಡಿಸಿಕೊಳ್ಳಲು ನಾವು ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಅವರು ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ. ಜಮ್ಮು ಕಾಶ್ಮೀರದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಮಿಳುನಾಡಿನಲ್ಲಿ ಹೇಗಾದರೂ ಹಿಂದಿ ಹೇರಲು ಕೇಂದ್ರ ಸರ್ಕಾರ ಬಯಸುತ್ತಿದೆ: ಉದಯನಿಧಿ ಸ್ಟಾಲಿನ್

ತಮಿಳುನಾಡಿನಲ್ಲಿ ಹೇಗಾದರೂ ಹಿಂದಿ ಹೇರಲು ಕೇಂದ್ರ ಸರ್ಕಾರ ಬಯಸುತ್ತಿದೆ: ಉದಯನಿಧಿ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...