Homeಮುಖಪುಟಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತಕ್ಕೆ 5 ಮಂದಿ ಬಲಿ

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತಕ್ಕೆ 5 ಮಂದಿ ಬಲಿ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಶುಕ್ರವಾರದಿಂದ ಸುರಿಯುತ್ತಿರುವ ಭಾರೀ ಮಳೆ ಮತ್ತು ಭೂಕುಸಿತದಿಂದ ಉಂಟಾಗಿರುವ ಹವಾಮಾನ ವೈಪರೀತ್ಯದಿಂದ ಐದು ಜನರು ಸಾವನ್ನಪ್ಪಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಮಿಂಚು, ಬಿರುಗಾಳಿ, ಆಲಿಕಲ್ಲು ಮತ್ತು ಹಿಮ ಬಿದ್ದಿದ್ದು, ರಂಬನ್ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಹಲವಾರು ವಸತಿ ಮತ್ತು ವಾಣಿಜ್ಯ ಕಟ್ಟಡಗಳು ಕುಸಿದು ಬಿದ್ದಿದ್ದು, ಕನಿಷ್ಠ 500 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

“ಭಾನುವಾರ ರಿಯಾಸಿಯ ಅರ್ನಾಸ್‌ನ ಜಮೇದಿ ಗ್ರಾಮದಲ್ಲಿ ಸಿಡಿಲು ಬಡಿದಿದೆ. ಇದರಿಂದ ಇಬ್ಬರು ಸ್ಥಳೀಯರು ಸಾವನ್ನಪ್ಪಿದರು. ಸುಮಾರು 40 ಜಾನುವಾರುಗಳು ಸಿಡಿಲಿಗೆ ಬಲಿಯಾದವು.” ಎಂದು ಸಮುದಾಯದ ನಾಯಕ ತಾಲಿಬ್ ಹುಸಿಯಾನ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ರಾಂಬನ್ ಜಿಲ್ಲೆಯ ಬಾಗ್ನಾದಲ್ಲಿ ಮನೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. “ರಾಂಬನ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ರಾಂಬನ್ ಪ್ರದೇಶದಲ್ಲಿ ರಾತ್ರಿಯಿಡೀ ಭಾರೀ ಆಲಿಕಲ್ಲು ಮಳೆ, ಹಲವಾರು ಭೂಕುಸಿತಗಳು ಮತ್ತು ವೇಗದ ಗಾಳಿ ಬೀಸಿತು” ಎಂದು ಉಧಂಪುರ್‌ ಬಿಜೆಪಿ ಸಂಸದ ಜಿತೇಂದ್ರ ಸಿಂಗ್ ಎಕ್ಸ್‌ನಲ್ಲಿ ಹೇಳಿದ್ದಾರೆ. “ರಾಷ್ಟ್ರೀಯ ಹೆದ್ದಾರಿ ಮುಚ್ಚಿಹೋಗಿದ್ದು, ದುರದೃಷ್ಟವಶಾತ್ ಮೂರು ಸಾವುನೋವುಗಳು ಮತ್ತು ಎರಡು ಕುಟುಂಬಗಳಿಗೆ ಆಸ್ತಿ ನಷ್ಟ ಸಂಭವಿಸಿದೆ.” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರ ಸರ್ಕಾರವು ಅಧಿಕೃತವಾಗಿ ಯಾವುದೇ ಸಾವುನೋವುಗಳ ಅಂಕಿ ಅಂಶ ಬಿಡುಗಡೆ ಮಾಡಿಲ್ಲ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ರಾಂಬನ್‌ನ ತಗ್ಗು ಪ್ರದೇಶಗಳಿಂದ ನಿವಾಸಿಗಳನ್ನು ರಕ್ಷಿಸಲು ಕೇಂದ್ರಾಡಳಿತ ಪ್ರದೇಶದ ತುರ್ತು ನಿಯಂತ್ರಣ ಕೇಂದ್ರವು ಕಂದಾಯ ಇಲಾಖೆ ಮತ್ತು ಪೊಲೀಸ್ ತಂಡಗಳನ್ನು ನೇಮಿಸಿದೆ.

ಜಮ್ಮು ಕಾಶ್ಮೀರದಲ್ಲಿ ಭಾನುವಾರದವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ತಿಳಿಸಿತ್ತು. ಭಾನುವಾರ ಹೊಸದಾಗಿ ನೀಡಿರುವ ಸಲಹೆಯಲ್ಲಿ, ಸೋಮವಾರದವರೆಗೆ ಪ್ರದೇಶದಾದ್ಯಂತ ಗುಡುಗು ಮತ್ತು ಮಿಂಚಿ ಸಹಿತ ಮಳೆ ಇರಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅನಿರೀಕ್ಷಿತ ಹಠಾತ್ ಪ್ರವಾಹದ ಅಪಾಯವನ್ನು ಉಲ್ಲೇಖಿಸಿ, ರಸ್ತೆ ಅಂಡರ್‌ಪಾಸ್‌ಗಳು, ಒಳಚರಂಡಿ ಹಳ್ಳಗಳು ಮತ್ತು ನೀರು ಸಂಗ್ರಹವಾಗುವ ತಗ್ಗು ಪ್ರದೇಶಗಳಿಂದ ದೂರವಿರಲು ಸಾರ್ವಜನಿಕರಿಗೆ ಹವಮಾನ ಇಲಾಖೆ ಸಲಹೆ ನೀಡಿದೆ.

“ಪ್ರವಾಹಕ್ಕೆ ಸಿಲುಕಿರುವ ರಸ್ತೆಯನ್ನು ದಾಟಲು ಪ್ರಯತ್ನಿಸಬೇಡಿ. ನೀರು ನೀವು ಕಾಣುವುದಕ್ಕಿಂತ ಆಳ ಮತ್ತು ತೀವ್ರವಾಗಿರಬಹುದು ಮತ್ತು ಬಂಡೆಯ ರಾಶಿಗಳು, ಚೂಪಾದ ಅಥವಾ ಅಪಾಯಕಾರಿ ವಸ್ತುಗಳು, ಗುಂಡಿಗಳು ಅಥವಾ ವಿದ್ಯುತ್ ತಂತಿಗಳು ಇರದಲ್ಲಿ ಬಿದ್ದಿರಬಹುದು” ಎಂದು ಇಲಾಖೆ ಹೇಳಿದೆ.

ರಂಬನ್‌ನಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದ “ತೀವ್ರ ದುಃಖಿತನಾಗಿದ್ದೇನೆ” ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಅಗತ್ಯವಿರುವಲ್ಲೆಲ್ಲಾ ತಕ್ಷಣದ ರಕ್ಷಣಾ ಪ್ರಯತ್ನಗಳನ್ನು ಖಚಿತಪಡಿಸಿಕೊಳ್ಳಲು ನಾವು ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಅವರು ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ. ಜಮ್ಮು ಕಾಶ್ಮೀರದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಮಿಳುನಾಡಿನಲ್ಲಿ ಹೇಗಾದರೂ ಹಿಂದಿ ಹೇರಲು ಕೇಂದ್ರ ಸರ್ಕಾರ ಬಯಸುತ್ತಿದೆ: ಉದಯನಿಧಿ ಸ್ಟಾಲಿನ್

ತಮಿಳುನಾಡಿನಲ್ಲಿ ಹೇಗಾದರೂ ಹಿಂದಿ ಹೇರಲು ಕೇಂದ್ರ ಸರ್ಕಾರ ಬಯಸುತ್ತಿದೆ: ಉದಯನಿಧಿ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...