Homeಅಂಕಣಗಳುಮೋಡದ ಮರೆಯಲ್ಲಿ ಮೋದಿ

ಮೋಡದ ಮರೆಯಲ್ಲಿ ಮೋದಿ

ಸಾಹಿತ್ಯದ ಲೋಕದ ಜೈನ ವಿದ್ವಾಂಸರಾದ ಹಂಪನಾ ಅವರು ಮಠಮಂದಿರಗಳು ಭಯೋತ್ಪಾದನೆಯ ಕೇಂದ್ರಗಳಾಗದಿರಲಿ ಎಂದಿದ್ದಾರೆ.

- Advertisement -
- Advertisement -

ಬಾಲಾಕೋಟ್ ಕಾರ್ಯಾಚರಣೆಯನ್ನು ಮೋಡದ ಮರೆಯಲ್ಲಿ ಮಾಡಿ ಪಾಕಿಸ್ತಾನಕ್ಕೆ ಚಳ್ಳೆಹಣ್ಣು ತಿನ್ನಿಸಿದೆ ಎಂದು ನಮ್ಮ ಭವ್ಯ ಭಾರತದ ಪ್ರಧಾನಿ ಭೂಗತಲೋಕದ ಕಿಡಿಗೇಡಿಯಂತೆ ಬಾಯಿ ಬಿಟ್ಟಿದ್ದಾರಲ್ಲಾ. ಇದನ್ನು ಕೇಳಿದ ಇಡೀ ಭಾರತವಷ್ಟೆ ಅಲ್ಲ. ಬಾಂಗ್ಲಾ, ಪಾಕಿಸ್ತಾನ ಕೂಡ ನಗಾಡಿದವಂತೆ. ಇದೇ ಮೋದಿ ಪ್ರಧಾನಿಯಾದ ಆರಂಭದಲ್ಲಿ ನಮ್ಮ ಪುರಾತನ ಆಯುರ್ವೇದ ಪಂಡಿತರು ಪ್ಲಾಸ್ಟಿಕ್ ಸರ್ಜರಿಯಲ್ಲಿ ಪರಿಣಿತರಾಗಿದ್ದರು. ಆ ಕಾರಣಕ್ಕೆ ಆನೆಮರಿ ತಲೆಯನ್ನು ಗಣೇಶನಿಗೆ ಜೋಡಿಸಿ ಕೆಲವೇ ದಿನಗಳಲ್ಲಿ ಗಣೇಶ ಮಾತನಾಡುವಂತೆ ಮಾಡಿದರು ಎಂದಾಗ, ಇಡೀ ಭಾರತವೇ ಅಯ್ಯೋ ಮುಂಡೆದೆ ಎಂದು ಲೊಚಗರೆದಿತ್ತು. ಆ ಪುರಾಣ ಹಾಳುಬಿದ್ದೋಗಲಿ ಮೋಡ ಮುಸುಕಿದ್ದರೆ ಯುದ್ಧ ವಿಮಾನಗಳು ಮತ್ತು ರೆಡಾರ್ ಸಂದೇಶಗಳು ಬಂದಾಗುತ್ತವೆ ಎಂದು ಭಾವಿಸಿರುವ ಈತ, ಎರಡನೇ ಮಹಾಯುದ್ಧದಲ್ಲಿ ಭಾಗವಹಿಸಿದ್ದ ಜರ್ಮನ್ ಶೆಪರ್ಡ್ ನಾಯಿಯ ಬಗ್ಗೆ ತಿಳಿದುಕೊಂಡಿಲ್ಲ ಅನ್ನಿಸುತ್ತದೆ. ಹಾಗೆ ನೋಡಿದರೆ ಸದರಿ ಮೇಧಾವಿ ಯಾವುದರ ಬಗ್ಗೆಯೂ ನಿಖರವಾಗಿ ತಿಳಿದು ಕೊಂಡಿಲ್ಲ. ಅದಕ್ಕೆ ಪ್ರೆಸ್‍ಮೀಟು ಗಳಿಗೆ ಹೆದರಿ ರುವುದು ಅಕಸ್ಮಾತ್ ಸಂದರ್ಶನ ವಿದ್ದರೆ ತಾನೇ ಪ್ರಶ್ನೆ ಕಳಿಸಿ, ಏಕಪಾತ್ರಾಭಿನಯ ಮಾಡುವುದು ಇನ್ನೊಂದು ಜೋಕ್ ಎಂದರೆ ಈತ ಪಾಕಿಸ್ತಾನಕ್ಕೆ ಹೋಗಿದ್ದು ಕೂಡ ಮೋಡದ ಮರೆಯಲ್ಲಂತಲ್ಲಾ ಥೂತ್ತೇರಿ.

*****

ಇಂತಹ ಮೋದಿ ಇನ್ನೂ ಹದಿನೈದು ವರ್ಷ ಪ್ರಧಾನಿಯಾಗಿರಬೇಕು ಎಂದು ಭೈರಿಗೆ ಹಿಡಿದುಕೊಂಡಿರುವ ಸಂತೆಶಿವರದ ಚೆಡ್ಡಿ ಭೈರಣ್ಣನಿಗೆ, ನ್ಯಾಯಪಥದ ಪಂಚಕನ್ಯೆಯರು ಭೈರನ ಕೆನ್ನೆಗೆ ಸರಿಯಾಗಿ ತಪರಾಕಿ ಹಾಕಿದ್ದಾರಲ್ಲಾ. ಇವರೆಲ್ಲರ ಅನುಭವ ಏನೆಂದರೆ ಇದು ಅಗ್ರಹಾರದ ಹಾಳುಬಿದ್ದ ವಠಾರದಲ್ಲಿ ತನ್ನದೇ ಕಗ್ಗದ ರಾಶಿಯಲ್ಲಿ ಹುದುಗಿರುವ ಮುದಿಗೊಡ್ಡು. ಇದಕ್ಕೆ ಎಷ್ಟು ಬೈದರೂ ಅಷ್ಟೆ ಎಂದು ಸುಮ್ಮನಾದರಂತಲ್ಲಾ. ಚೆಡ್ಡಿ ಭೈರಣ್ಣ ಮಹಿಳೆಯರನ್ನೇನು ದ್ವೇಷ ಮಾಡುವುದಿಲ್ಲ. ಅವರಿಗೆ ಕರ್ತವ್ಯಗಳನ್ನು ನಿರ್ದೇಶಿಸುತ್ತಾನೆ ಅಷ್ಟೆ. ಈತನ ಗೊಡ್ಡು ಸಾಹಿತ್ಯದಲ್ಲಿ ವಿಧವೆಯರು ಮದುವೆಯಾದರೆ ನಿರಂತರ ಗರ್ಭಪಾತವಾಗುತ್ತದೆ. ಧಾಟುವಿನಲ್ಲಿ ಒಕ್ಕಲಿಗರ ಹುಡುಗನನ್ನ ಮದುವೆಯಾದ ಬ್ರಾಹ್ಮಣ ಪುರೋಹಿತನ ಮಗಳು ಸತ್ತುಹೋಗುತ್ತಾಳೆ. ಅಸ್ಪøಶ್ಯತೆ ಅವಮಾನದಿಂದ ಸಿಡಿದೆದ್ದ ಮೋಹನದಾಸ ಕೆರೆಗಳನ್ನು ಸ್ಫೋಟಿಸುತ್ತಾನೆ. ಹೀಗೆ ತನ್ನದೆ ಚೆಡ್ಡಿ ಕುಲುಮೆಯಲ್ಲಿ ಕಾಯಿಸಿ, ಕುಟ್ಟಿ ಕಟ್ಟಿದ ಪುಸ್ತಕಗಳ ರಾಶಿಯಿಂದ ಹೆಕ್ಕಿ ತೆಗೆಯಲು ಒಂದೇ ಒಂದು ಮಾನವೀಯ ಗುಣದ ಸಾಲಿಲ್ಲವಂತಲ್ಲಾ. ಆದರೂ ಈತ ಭಾರತದ ಜನಪ್ರಿಯ ಲೇಖಕ. ಏಕೆಂದರೆ ಅಕ್ಷರದ ಗುತ್ತಿಗೆ ಹಿಡಿದ ಪುರೋಹಿತರ ಕಪಾಟಿನಲ್ಲಿ ಈತನವೇ ಪುಸ್ತಕಗಳು. ಕೆರೆಯುತ್ತಿರುವವನೂ ಅವನೆ, ಓದುತ್ತಿರುವವರೂ ಅವರೆ. ಹುಟ್ಟ ಚೆಡ್ಡಿಗಳು ಚಟ್ಟದವರೆಗೂ ಚೆಡ್ಡಿಗಳಾಗಿರುತ್ತವೆ ಎಂಬುದಕ್ಕೆ, ಭೈರಣ್ಣನೇ ಉದಾಹರಣೆಯಂತಲ್ಲಾ ಥೂತ್ತೇರಿ.

 

*****

ಕರ್ನಾಟಕದ ರಾಜಕಾರಣದ ವಿಷಯಕ್ಕೆ ಬರುವುದಾದರೆ, ಕೋಡುಗಳಿಲ್ಲದ ಕುರುಬರ ಟಗರಿನ ಕಾಳಗ ಶಾನೆ ಜೋರಾಗಿದೆಯಲ್ಲಾ, ಜೆಡಿಎಸ್‍ನಿಂದ ವಿಶ್ವನಾಥ, ಬಿಜೆಪಿಯಿಂದ ಈಶ್ವರಪ್ಪ, ಕಾಂಗ್ರೆಸ್‍ನಿಂದ ಸಿದ್ದರಾಮಯ್ಯ ಈ ಮೂರು ಜನರ ಕುರಿಗಾಹಿ ಜಗಳದಂತ ಮಾತುಗಳನ್ನು ಕೇಳಿದರೆ, ಈ ರಾಜ್ಯದಲ್ಲಿ ಇನ್ನಾರೂ ಇಲ್ಲವೆ ಅನ್ನಿಸುತ್ತಿದೆಯಲ್ಲಾ. ಸಿದ್ದರಾಮಯ್ಯನೇ ಹೇಳಿದಂತೆ ಈಶ್ವರಪ್ಪನ ನಾಲಿಗೆ ಮತ್ತು ಮೆದುಳಿನ ನಡುವೆ ಲೂಸ್ ಕಾಂಟ್ಯಾಕ್ಟಿದೆ. ಇನ್ನ ವಿಶ್ವನಾಥ ಹೊಟ್ಟೆಕಿಚ್ಚಿನವನು. ಅದಕ್ಕೆ ವಿಶ್ವನಾಥ ಸಕಾರಣ ಒದಗಿಸಬಲ್ಲರು. ಆದರೆ ಸಿದ್ದು ಕತೆ ಅದಲ್ಲ. ಬರಲಿರುವ ರಿಸಲ್ಟಿನಿಂದ ಭಾರತ ಮತ್ತು ಕರ್ನಾಟಕದಲ್ಲಿ ಏನಾದರೂ ಆಗಬಹುದು ಆಗಿನ ದಾಳಗಳನ್ನ ಈಗಲೇ ರೆಡಿಮಾಡಿಕೊಳ್ಳುತ್ತಿರುವ ಸಿದ್ದು ವ್ಯಸನ ಏನೆಂದರೆ ಮತ್ತೆ ಮುಖ್ಯಮಂತ್ರಿಯಾಗುವುದು. ಸಿದ್ದರಾಮಯ್ಯ ಎಡೂರಪ್ಪನಂತಾಡುವುದು ಕೆಲವು ಕಾಂಗೈಗಳಲ್ಲೇ ಇರಿಸು ಮುರುಸಾಗಿದೆಯಂತಲ್ಲಾ. ಐದು ವರ್ಷ ಪೂರೈಸಿದ ಹೆಗ್ಗಳಿಕೆಯನ್ನು ಮುಂದಿಟ್ಟುಕೊಂಡು ನಮ್ಮ ಮುಂದಿನ ಮುಖ್ಯಮಂತ್ರಿ ಒಬ್ಬ ದಲಿತ ಎನ್ನಲು ಸಿದ್ದರಾಮಯ್ಯಗೇನಾಗಿದೆ. ಆಗ ಹಿಂದೆ ಖರ್ಗೆಯನ್ನ ಮುಖ್ಯಮಂತ್ರಿ ಮಾಡಿ ಎಂದಿದ್ದ ದೇವೇಗೌಡರು ಅನಾವರಣಗೊಳ್ಳುತ್ತಾರೆ, ಕಾಂಗ್ರೆಸ್‍ನ ದೊಡ್ಡ ಋಣವೊಂದು ಪರಿಹಾರವಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಎಡೂರಪ್ಪನ ಟೀಮೂ ಕೂಡ ಆಪರೇಷನ್ ಕತ್ತರಿಯನ್ನು ಬಿಸಾಡುತ್ತವಲ್ಲಾ, ಥೂತ್ತೇರಿ!

*****

ಇನ್ನ ಕರ್ನಾಟಕದ ಸಾಹಿತ್ಯ ಮತ್ತು ಆಧ್ಯಾತ್ಮಲೋಕಕ್ಕೆ ಬರುವುದಾದರೆ ಸಿರಿಗೆರೆಸ್ವಾಮಿ, ಹಂಪಾನಾ ಇತ್ಯಾದಿ ಜನ ತಮ್ಮ ತಮ್ಮ ಹೇಳಿಕೆಯಿಂದ ಭಯ ಹುಟ್ಟಿಸಿದ್ದಾರಲ್ಲಾ. ಸಿರಿಗೆರೆ ಶ್ರೀಗಳ ಪ್ರಕಾರ ಮಠಮಂದಿರಗಳು ಜಾತಿ ಸಂಘರ್ಷಗಳಾಗುತ್ತಿವೆ. ಇದಂತೂ ನಿಜ. ಸಾದ ಜನಾಂಗದ ಸಿರಿಗೆರೆ ಮಠ ಕಂಡರೆ ನೊಣಬರಿಗಾಗುತ್ತಿಲ್ಲ, ಬಣಜಿಗರಿಗೂ ಅಷ್ಟೇ. ಇನ್ನ ಅದರಲ್ಲಿನ ಪಂಗಡಗಳಿಗೂ ಅಷ್ಟೆ. ‘ಇವ ನಮ್ಮವ’ ಎಂಬ ಭಾವನೆ ಕೊರತೆ ಈ ಮಠದ ಆವರಣದಲ್ಲಿದೆ. ಜಾತಿಮಠದ ತುದಿಯಲ್ಲಿ ಕುಳಿತ ಜಗದ್ಗುರು ಎಲ್ಲ ಜಾತಿಗೂ ಜಗದ್ಗುರುವಾಗುವುದು ಕಷ್ಟ. ಅಷ್ಟಕ್ಕೂ ಸಿರಿಗೆರೆ ಮಠದ ಸಂವಿಧಾನ ಮೀರಿ ನಿವೃತ್ತಿ ವಯಸ್ಸಾದರೂ ಅದನ್ನು ಹತ್ತಿಕ್ಕಿ ಪೀಠದ ಮೇಲಿರುವ ಸಿರಿಗೆರೆ ಶ್ರೀ ತಮ್ಮ ಮಾತುಗಳಿಗೆ ಹಿನ್ನಡೆ ಅನುಭವಿಸುತ್ತಿದ್ದಾರೆ. ಇವೆಲ್ಲಕ್ಕಿಂತ ಮುಖ್ಯವಾಗಿ ಸಾವಿರಾರು ಜಗದ್ಗುರುಗಳಿರುವ ಈ ನಾಡಿನಲ್ಲಿ ಇನ್ನ ಜಾತಿ ಸಾಮರಸ್ಯ ಮೂಡಿಲ್ಲ. ಅಸ್ಪøಶ್ಯತೆ ಹಾಗೇ ಇದೆ. ಬದಲಾದ ಜಗತ್ತಿನಲ್ಲಿ ಅಕಸ್ಮಾತ್ ಅಂತರ್ಜಾತಿ ಪ್ರೇಮವೇರ್ಪಟ್ಟರೆ ಮರ್ಯಾದೆ ಹತ್ಯೆಗಳು ಜರುಗುತ್ತಿವೆ. ಈ ಎಲ್ಲಾ ಅನಿಷ್ಟಗಳ ಮುಂದುವರಿಕೆಯಲ್ಲಿ ಜಗದ್ಗುರುಗಳ ಪಾಲಿರುವುದನ್ನು ಮರೆಮಾಚಿ ಮಠಮಂದಿರಗಳಿಂದ ಜಾತಿಸಂಘರ್ಷಗಳು ನಡೆಯುತ್ತವೆ ಎನ್ನುವ ಜಗದ್ಗುರುಗಳು ತಾವು ವಾಸ ಮಾಡುವ ಜಾಗದ ರಾಜಕಾರಣಿಗಳಾದ ಆಂಜನೇಯ, ಚಂದ್ರಪ್ಪನನ್ನ ಕರೆದು ಈಗಲೂ ನೀವು ಮನೆಗಳಿಂದ ಹೊರನಿಲ್ಲುವ ಸ್ಥಿತಿ ಇದೆಯೇ ಎಂದು ಕೇಳಬಹುದಲ್ಲಾ, ಥೂತ್ತೇರಿ!!

*****

ಸಾಹಿತ್ಯದ ಲೋಕದ ಜೈನ ವಿದ್ವಾಂಸರಾದ ಹಂಪನಾ ಅವರು ಮಠಮಂದಿರಗಳು ಭಯೋತ್ಪಾದನೆಯ ಕೇಂದ್ರಗಳಾಗದಿರಲಿ ಎಂದುಬಿಟ್ಟಿದ್ದಾರೆ. `ಕನ್ನಡ ಸಾಹಿತ್ಯ ಪಂಪನಿಂದ ಹಿಡಿದು ಹಂಪಾನಾವರೆಗೆ’ ಎಂದು ತಮ್ಮವರ ಕೈಯಿಂದ ಹೊಗಳಿಸಿಕೊಂಡು ಹಾರ, ತುರಾಯಿ, ಪ್ರಶಸ್ತಿಗಳನ್ನು ಪಡೆದಿರುವ ಈ ಹಂಪಾನಾ ಕಾಲದಲ್ಲೇ, ಸಾಹಿತ್ಯ ವೇದಿಕೆಗೆ ಮಠಮಂದಿರಗಳ ಜಗದ್ಗುರುಗಳು ಬಂದು ಆಸೀನರಾಗಿದ್ದು. ಜಾತ್ಯತೀತ ವೇದಿಕೆಗೆ ಜಗದ್ಗುರುಗಳನ್ನ ತಂದ ಅನಿಷ್ಠವೇ ಈ ಹಂಪಾನಾ. ಇವರ ಕಾಲದಲ್ಲಿ ಹಾಳಾದ ಸಾಹಿತ್ಯ ಪರಿಷತ್ತು ಸುಧಾರಿಸಲೇಇಲ್ಲ. ಕುವೆಂಪು ಟ್ರಸ್ಟಿಗೂ ವಕ್ಕರಿಸಿದ ಈತ ಅದಕ್ಕೂ ಭ್ರಷ್ಟತೆ ಕಳಂಕ ಹಚ್ಚಿದವರು. ಅದಿರಲಿ, ಸದ್ಯಕ್ಕೆ ಇವರಿಗೆ ಅದ್ಯಾವ ಮಠ ಬೆದರಿಕೆ ಹಾಕಿತು ಎಂಬುದೇ ಗೊತ್ತಿಲ್ಲ. ಇಷ್ಟಾದರೂ ಹಂಪಾನಾ ಚೆಡ್ಡಿ ಭೈರಣ್ಣನಂತಲ್ಲ. ಅಪ್ಪಟ ಸ್ತ್ರೀವಾದಿ. ಕಮಲಾಹಂಪನಾ ಅವರು ಭಾಷಣ ಮಾಡುತ್ತಿದ್ದಾಗ ಅವರ ಸಾಧಾರಣ ಮಾತಿಗೂ ಬಿರುಸಿನ ಚಪ್ಪಾಳೆ ಬೀಳುತ್ತಿತ್ತು. ತಿರುಗಿ ನೋಡಿದಾಗ ಪತಿ ಹಂಪಾನ ಕಮಲಾ ಮಾತಿಗೆ ಚಪ್ಪಾಳೆ ಚಚ್ಚುತಿದ್ದರಂತಲ್ಲಾ, ಥೂತ್ತೇರಿ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...