Homeಮುಖಪುಟಕ್ಲಬ್‌ಹೌಸ್‌ನಲ್ಲಿ ಮಹಿಳೆಯರ ವಿರುದ್ಧ ದ್ವೇಷ ಪ್ರಕರಣ: ಮೂವರಲ್ಲಿ ಒಬ್ಬ ಆರೋಪಿಗೆ ಜಾಮೀನು

ಕ್ಲಬ್‌ಹೌಸ್‌ನಲ್ಲಿ ಮಹಿಳೆಯರ ವಿರುದ್ಧ ದ್ವೇಷ ಪ್ರಕರಣ: ಮೂವರಲ್ಲಿ ಒಬ್ಬ ಆರೋಪಿಗೆ ಜಾಮೀನು

- Advertisement -
- Advertisement -

ಆಡಿಯೋ ಚಾಟ್ ಆ್ಯಪ್‌ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅಶ್ಲೀಲ, ದ್ವೇಷದ ಮಾತುಗಳನ್ನಾಡಿದ ಕ್ಲಬ್‌ಹೌಸ್ ಆ್ಯಪ್ ಪ್ರಕರಣದಲ್ಲಿ ಮುಂಬೈ ಕ್ರೈಂ ಬ್ರಾಂಚ್‌ನ ಸೈಬರ್ ಪೊಲೀಸ್ ವಿಭಾಗವು ಬಂಧಿಸಿದ್ದ ಮೂವರು ಆರೋಪಿಗಳಲ್ಲಿ ಒಬ್ಬರಿಗೆ ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.

22 ವರ್ಷದ ಕಾನೂನು ವಿದ್ಯಾರ್ಥಿ ಯಶ್‌ಕುಮಾರ್ ಪರಾಶರ್‌ಗೆ 15 ದಿನಗಳ ಕಡ್ಡಾಯ ಬಿಹೇವಿಯರಲ್‌ ಕೌನ್ಸಲಿಂಗ್ ಸೇರಿದಂತೆ ಹಲವು ಷರತ್ತುಗಳ ಮೇಲೆ ಜಾಮೀನು ನೀಡಲಾಗಿದೆ. ಈ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಂಧಿಸಿರುವ ಇತರ ಆರೋಪಿಗಳೆಂದರೆ ಆಕಾಶ್ ಸುಯಲ್ (19) ಮತ್ತು ಜೈಷ್ಣವ್ ಕಕ್ಕರ್ (21).

ಆರೋಪಿ ಯಶ್‌ಕುಮಾರ್ ಪರ ವಕೀಲರಾದ ಅಕ್ಷಯ್ ಬಾಫ್ನಾ ಮತ್ತು ಗಾಯತ್ರಿ ಗೋಖಲೆ ವಾದ ಮಂಡಿಸಿದ್ದರು. ಯಶ್ ಪರಾಶರ್ ಮತ್ತು ನನ್ನ ಕಕ್ಷಿದಾರ ಯಶ್‌ಕುಮಾರ್ ಪರಾಶರ್‌ ಒಬ್ಬರೆ ಎಂದು ಸೈಬರ್ ಪೊಲೀಸರಿಗೆ ಸಾಬೀತುಪಡಿಸಲು ಸಾಧ್ಯವಾಗಲಿಲ್ಲ ಎಂದು ಬಫ್ನಾ ವಾದಿಸಿದ್ದಾರೆ. ನನ್ನ ಕಕ್ಷಿದಾರನ ಫೋಟೋಗಳನ್ನು ನಕಲಿ ಖಾತೆಗಳಿಗೆ ಬಳಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಹಿಜಾಬ್ ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

ಇತರ ಇಬ್ಬರು ಆರೋಪಿಗಳಾದ ಎಚ್‌ಎಸ್‌ಸಿ ವಿದ್ಯಾರ್ಥಿ ಆಕಾಶ್ ಸುಯಲ್ ಮತ್ತು ಬಿಕಾಂ ವಿದ್ಯಾರ್ಥಿ ಜೈಷ್ಣವ್ ಕಕ್ಕರ್ (20) ಇಬ್ಬರಿಗೂ ಕೊರೊನಾ ಸೋಂಕು ತಗುಲಿರುವುದರಿಂದ ಕೆಲವು ದಿನಗಳ ನಂತರ ಜಾಮೀನು ಅರ್ಜಿಗಳ ಬಗ್ಗೆ ನ್ಯಾಯಾಲಯ ನಿರ್ಧರಿಸುತ್ತದೆ. ಇಬ್ಬರು ಆರೋಪಿಗಳ ಪರ ವಕೀಲರಾದ ಶ್ಯಾಮ್ ರಿಷಿ ಪಾಠಕ್ ಮತ್ತು ರಾಹುಲ್ ಯಾದವ್ ವಾದ ಮಂಡಿಸಿದ್ದರು.

ಈ ಎಲ್ಲಾ ಮೂವರು ಆರೋಪಿಗಳನ್ನು ಜನವರಿ 21 ರಂದು ಹರಿಯಾಣದಿಂದ ಬಂಧಿಸಲಾಗಿತ್ತು. ಮೂವರು ಕ್ಲಬ್‌ಹೌಸ್‌ ಆ್ಯಪ್‌ನಲ್ಲಿ Kira XD, @jaishav ಮತ್ತು pradhan@haryana_alla ಎಂಬ ಹೆಸರಿನಲ್ಲಿ ಖಾತೆಯನ್ನು ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಕಾಶ್ ಸುಯಲ್ ಮತ್ತುಜೈಷ್ಣವ್ ಕಕ್ಕರ್ ಜನವರಿ 16 ಮತ್ತು 19 ರಂದು ಕ್ಲಬ್‌ಹೌಸ್‌ನಲ್ಲಿ ಎರಡು ಚಾಟ್ ರೂಮ್‌ಗಳನ್ನು ರಚಿಸಿದ್ದರು. ಇದರಲ್ಲಿ 300 ಕ್ಕೂ ಹೆಚ್ಚು ಭಾಗವಹಿಸುವವರು ಇದ್ದರು. ಇಲ್ಲಿ ಮಹಿಳೆಯರ ಬಗ್ಗೆ ಅಶ್ಲಿಲ ಕಾಮೆಂಟ್ ಮಾಡಲಾಗಿತ್ತು. ಇನ್ನು, 2021 ರ ಅಕ್ಟೋಬರ್ 27 ಮತ್ತು ನವೆಂಬರ್ 27 ರಂದು, ಯಶ್‌ಕುಮಾರ್‌ ಪರಾಶರ್ ರಚಿಸಿದ ಚಾಟ್ ರೂಮ್‌ನಲ್ಲಿಯೂ ಮಹಿಳೆಯರ ಬಗ್ಗೆ ಮತ್ತು ಅವರ ದೇಹದ ಭಾಗಗಳ ಬಗ್ಗೆ ಕೆಟ್ಟ ಕಾಮೆಂಟ್ ಮಾಡಲಾಗಿತ್ತು ಎಂದು ದೂರು ದಾಖಲಾಗಿತ್ತು.

ಆರೋಪಿಗಳ ವಿರುದ್ಧ ಸೆಕ್ಷನ್ 153 (ಎ) (ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) 295 (ಎ) (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯಗಳು) 354 (ಎ) ಲೈಂಗಿಕ ಕಿರುಕುಳ, 354 (ಡಿ) (ಹಿಂಬಾಲಿಸುವಿಕೆ), 500 (ಮಾನನಷ್ಟ), 509 (ಮಹಿಳೆಯರ ಘನತೆಯನ್ನು ಅವಮಾನಿಸುವುದು) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 67 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ದ್ವೇಷ ಭಾಷಣ: ಮುಂಬೈನಲ್ಲಿ ಮೂರು ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...