Homeಮುಖಪುಟಕ್ಲಬ್‌ಹೌಸ್‌ನಲ್ಲಿ ಮಹಿಳೆಯರ ವಿರುದ್ಧ ದ್ವೇಷ ಪ್ರಕರಣ: ಮೂವರಲ್ಲಿ ಒಬ್ಬ ಆರೋಪಿಗೆ ಜಾಮೀನು

ಕ್ಲಬ್‌ಹೌಸ್‌ನಲ್ಲಿ ಮಹಿಳೆಯರ ವಿರುದ್ಧ ದ್ವೇಷ ಪ್ರಕರಣ: ಮೂವರಲ್ಲಿ ಒಬ್ಬ ಆರೋಪಿಗೆ ಜಾಮೀನು

- Advertisement -
- Advertisement -

ಆಡಿಯೋ ಚಾಟ್ ಆ್ಯಪ್‌ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅಶ್ಲೀಲ, ದ್ವೇಷದ ಮಾತುಗಳನ್ನಾಡಿದ ಕ್ಲಬ್‌ಹೌಸ್ ಆ್ಯಪ್ ಪ್ರಕರಣದಲ್ಲಿ ಮುಂಬೈ ಕ್ರೈಂ ಬ್ರಾಂಚ್‌ನ ಸೈಬರ್ ಪೊಲೀಸ್ ವಿಭಾಗವು ಬಂಧಿಸಿದ್ದ ಮೂವರು ಆರೋಪಿಗಳಲ್ಲಿ ಒಬ್ಬರಿಗೆ ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.

22 ವರ್ಷದ ಕಾನೂನು ವಿದ್ಯಾರ್ಥಿ ಯಶ್‌ಕುಮಾರ್ ಪರಾಶರ್‌ಗೆ 15 ದಿನಗಳ ಕಡ್ಡಾಯ ಬಿಹೇವಿಯರಲ್‌ ಕೌನ್ಸಲಿಂಗ್ ಸೇರಿದಂತೆ ಹಲವು ಷರತ್ತುಗಳ ಮೇಲೆ ಜಾಮೀನು ನೀಡಲಾಗಿದೆ. ಈ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಂಧಿಸಿರುವ ಇತರ ಆರೋಪಿಗಳೆಂದರೆ ಆಕಾಶ್ ಸುಯಲ್ (19) ಮತ್ತು ಜೈಷ್ಣವ್ ಕಕ್ಕರ್ (21).

ಆರೋಪಿ ಯಶ್‌ಕುಮಾರ್ ಪರ ವಕೀಲರಾದ ಅಕ್ಷಯ್ ಬಾಫ್ನಾ ಮತ್ತು ಗಾಯತ್ರಿ ಗೋಖಲೆ ವಾದ ಮಂಡಿಸಿದ್ದರು. ಯಶ್ ಪರಾಶರ್ ಮತ್ತು ನನ್ನ ಕಕ್ಷಿದಾರ ಯಶ್‌ಕುಮಾರ್ ಪರಾಶರ್‌ ಒಬ್ಬರೆ ಎಂದು ಸೈಬರ್ ಪೊಲೀಸರಿಗೆ ಸಾಬೀತುಪಡಿಸಲು ಸಾಧ್ಯವಾಗಲಿಲ್ಲ ಎಂದು ಬಫ್ನಾ ವಾದಿಸಿದ್ದಾರೆ. ನನ್ನ ಕಕ್ಷಿದಾರನ ಫೋಟೋಗಳನ್ನು ನಕಲಿ ಖಾತೆಗಳಿಗೆ ಬಳಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಹಿಜಾಬ್ ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

ಇತರ ಇಬ್ಬರು ಆರೋಪಿಗಳಾದ ಎಚ್‌ಎಸ್‌ಸಿ ವಿದ್ಯಾರ್ಥಿ ಆಕಾಶ್ ಸುಯಲ್ ಮತ್ತು ಬಿಕಾಂ ವಿದ್ಯಾರ್ಥಿ ಜೈಷ್ಣವ್ ಕಕ್ಕರ್ (20) ಇಬ್ಬರಿಗೂ ಕೊರೊನಾ ಸೋಂಕು ತಗುಲಿರುವುದರಿಂದ ಕೆಲವು ದಿನಗಳ ನಂತರ ಜಾಮೀನು ಅರ್ಜಿಗಳ ಬಗ್ಗೆ ನ್ಯಾಯಾಲಯ ನಿರ್ಧರಿಸುತ್ತದೆ. ಇಬ್ಬರು ಆರೋಪಿಗಳ ಪರ ವಕೀಲರಾದ ಶ್ಯಾಮ್ ರಿಷಿ ಪಾಠಕ್ ಮತ್ತು ರಾಹುಲ್ ಯಾದವ್ ವಾದ ಮಂಡಿಸಿದ್ದರು.

ಈ ಎಲ್ಲಾ ಮೂವರು ಆರೋಪಿಗಳನ್ನು ಜನವರಿ 21 ರಂದು ಹರಿಯಾಣದಿಂದ ಬಂಧಿಸಲಾಗಿತ್ತು. ಮೂವರು ಕ್ಲಬ್‌ಹೌಸ್‌ ಆ್ಯಪ್‌ನಲ್ಲಿ Kira XD, @jaishav ಮತ್ತು pradhan@haryana_alla ಎಂಬ ಹೆಸರಿನಲ್ಲಿ ಖಾತೆಯನ್ನು ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಕಾಶ್ ಸುಯಲ್ ಮತ್ತುಜೈಷ್ಣವ್ ಕಕ್ಕರ್ ಜನವರಿ 16 ಮತ್ತು 19 ರಂದು ಕ್ಲಬ್‌ಹೌಸ್‌ನಲ್ಲಿ ಎರಡು ಚಾಟ್ ರೂಮ್‌ಗಳನ್ನು ರಚಿಸಿದ್ದರು. ಇದರಲ್ಲಿ 300 ಕ್ಕೂ ಹೆಚ್ಚು ಭಾಗವಹಿಸುವವರು ಇದ್ದರು. ಇಲ್ಲಿ ಮಹಿಳೆಯರ ಬಗ್ಗೆ ಅಶ್ಲಿಲ ಕಾಮೆಂಟ್ ಮಾಡಲಾಗಿತ್ತು. ಇನ್ನು, 2021 ರ ಅಕ್ಟೋಬರ್ 27 ಮತ್ತು ನವೆಂಬರ್ 27 ರಂದು, ಯಶ್‌ಕುಮಾರ್‌ ಪರಾಶರ್ ರಚಿಸಿದ ಚಾಟ್ ರೂಮ್‌ನಲ್ಲಿಯೂ ಮಹಿಳೆಯರ ಬಗ್ಗೆ ಮತ್ತು ಅವರ ದೇಹದ ಭಾಗಗಳ ಬಗ್ಗೆ ಕೆಟ್ಟ ಕಾಮೆಂಟ್ ಮಾಡಲಾಗಿತ್ತು ಎಂದು ದೂರು ದಾಖಲಾಗಿತ್ತು.

ಆರೋಪಿಗಳ ವಿರುದ್ಧ ಸೆಕ್ಷನ್ 153 (ಎ) (ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) 295 (ಎ) (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯಗಳು) 354 (ಎ) ಲೈಂಗಿಕ ಕಿರುಕುಳ, 354 (ಡಿ) (ಹಿಂಬಾಲಿಸುವಿಕೆ), 500 (ಮಾನನಷ್ಟ), 509 (ಮಹಿಳೆಯರ ಘನತೆಯನ್ನು ಅವಮಾನಿಸುವುದು) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 67 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ದ್ವೇಷ ಭಾಷಣ: ಮುಂಬೈನಲ್ಲಿ ಮೂರು ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...