Homeಮುಖಪುಟಕ್ಲಬ್‌ಹೌಸ್‌ನಲ್ಲಿ ಮಹಿಳೆಯರ ವಿರುದ್ಧ ದ್ವೇಷ ಪ್ರಕರಣ: ಮೂವರಲ್ಲಿ ಒಬ್ಬ ಆರೋಪಿಗೆ ಜಾಮೀನು

ಕ್ಲಬ್‌ಹೌಸ್‌ನಲ್ಲಿ ಮಹಿಳೆಯರ ವಿರುದ್ಧ ದ್ವೇಷ ಪ್ರಕರಣ: ಮೂವರಲ್ಲಿ ಒಬ್ಬ ಆರೋಪಿಗೆ ಜಾಮೀನು

- Advertisement -
- Advertisement -

ಆಡಿಯೋ ಚಾಟ್ ಆ್ಯಪ್‌ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅಶ್ಲೀಲ, ದ್ವೇಷದ ಮಾತುಗಳನ್ನಾಡಿದ ಕ್ಲಬ್‌ಹೌಸ್ ಆ್ಯಪ್ ಪ್ರಕರಣದಲ್ಲಿ ಮುಂಬೈ ಕ್ರೈಂ ಬ್ರಾಂಚ್‌ನ ಸೈಬರ್ ಪೊಲೀಸ್ ವಿಭಾಗವು ಬಂಧಿಸಿದ್ದ ಮೂವರು ಆರೋಪಿಗಳಲ್ಲಿ ಒಬ್ಬರಿಗೆ ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.

22 ವರ್ಷದ ಕಾನೂನು ವಿದ್ಯಾರ್ಥಿ ಯಶ್‌ಕುಮಾರ್ ಪರಾಶರ್‌ಗೆ 15 ದಿನಗಳ ಕಡ್ಡಾಯ ಬಿಹೇವಿಯರಲ್‌ ಕೌನ್ಸಲಿಂಗ್ ಸೇರಿದಂತೆ ಹಲವು ಷರತ್ತುಗಳ ಮೇಲೆ ಜಾಮೀನು ನೀಡಲಾಗಿದೆ. ಈ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಂಧಿಸಿರುವ ಇತರ ಆರೋಪಿಗಳೆಂದರೆ ಆಕಾಶ್ ಸುಯಲ್ (19) ಮತ್ತು ಜೈಷ್ಣವ್ ಕಕ್ಕರ್ (21).

ಆರೋಪಿ ಯಶ್‌ಕುಮಾರ್ ಪರ ವಕೀಲರಾದ ಅಕ್ಷಯ್ ಬಾಫ್ನಾ ಮತ್ತು ಗಾಯತ್ರಿ ಗೋಖಲೆ ವಾದ ಮಂಡಿಸಿದ್ದರು. ಯಶ್ ಪರಾಶರ್ ಮತ್ತು ನನ್ನ ಕಕ್ಷಿದಾರ ಯಶ್‌ಕುಮಾರ್ ಪರಾಶರ್‌ ಒಬ್ಬರೆ ಎಂದು ಸೈಬರ್ ಪೊಲೀಸರಿಗೆ ಸಾಬೀತುಪಡಿಸಲು ಸಾಧ್ಯವಾಗಲಿಲ್ಲ ಎಂದು ಬಫ್ನಾ ವಾದಿಸಿದ್ದಾರೆ. ನನ್ನ ಕಕ್ಷಿದಾರನ ಫೋಟೋಗಳನ್ನು ನಕಲಿ ಖಾತೆಗಳಿಗೆ ಬಳಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಹಿಜಾಬ್ ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

ಇತರ ಇಬ್ಬರು ಆರೋಪಿಗಳಾದ ಎಚ್‌ಎಸ್‌ಸಿ ವಿದ್ಯಾರ್ಥಿ ಆಕಾಶ್ ಸುಯಲ್ ಮತ್ತು ಬಿಕಾಂ ವಿದ್ಯಾರ್ಥಿ ಜೈಷ್ಣವ್ ಕಕ್ಕರ್ (20) ಇಬ್ಬರಿಗೂ ಕೊರೊನಾ ಸೋಂಕು ತಗುಲಿರುವುದರಿಂದ ಕೆಲವು ದಿನಗಳ ನಂತರ ಜಾಮೀನು ಅರ್ಜಿಗಳ ಬಗ್ಗೆ ನ್ಯಾಯಾಲಯ ನಿರ್ಧರಿಸುತ್ತದೆ. ಇಬ್ಬರು ಆರೋಪಿಗಳ ಪರ ವಕೀಲರಾದ ಶ್ಯಾಮ್ ರಿಷಿ ಪಾಠಕ್ ಮತ್ತು ರಾಹುಲ್ ಯಾದವ್ ವಾದ ಮಂಡಿಸಿದ್ದರು.

ಈ ಎಲ್ಲಾ ಮೂವರು ಆರೋಪಿಗಳನ್ನು ಜನವರಿ 21 ರಂದು ಹರಿಯಾಣದಿಂದ ಬಂಧಿಸಲಾಗಿತ್ತು. ಮೂವರು ಕ್ಲಬ್‌ಹೌಸ್‌ ಆ್ಯಪ್‌ನಲ್ಲಿ Kira XD, @jaishav ಮತ್ತು pradhan@haryana_alla ಎಂಬ ಹೆಸರಿನಲ್ಲಿ ಖಾತೆಯನ್ನು ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಕಾಶ್ ಸುಯಲ್ ಮತ್ತುಜೈಷ್ಣವ್ ಕಕ್ಕರ್ ಜನವರಿ 16 ಮತ್ತು 19 ರಂದು ಕ್ಲಬ್‌ಹೌಸ್‌ನಲ್ಲಿ ಎರಡು ಚಾಟ್ ರೂಮ್‌ಗಳನ್ನು ರಚಿಸಿದ್ದರು. ಇದರಲ್ಲಿ 300 ಕ್ಕೂ ಹೆಚ್ಚು ಭಾಗವಹಿಸುವವರು ಇದ್ದರು. ಇಲ್ಲಿ ಮಹಿಳೆಯರ ಬಗ್ಗೆ ಅಶ್ಲಿಲ ಕಾಮೆಂಟ್ ಮಾಡಲಾಗಿತ್ತು. ಇನ್ನು, 2021 ರ ಅಕ್ಟೋಬರ್ 27 ಮತ್ತು ನವೆಂಬರ್ 27 ರಂದು, ಯಶ್‌ಕುಮಾರ್‌ ಪರಾಶರ್ ರಚಿಸಿದ ಚಾಟ್ ರೂಮ್‌ನಲ್ಲಿಯೂ ಮಹಿಳೆಯರ ಬಗ್ಗೆ ಮತ್ತು ಅವರ ದೇಹದ ಭಾಗಗಳ ಬಗ್ಗೆ ಕೆಟ್ಟ ಕಾಮೆಂಟ್ ಮಾಡಲಾಗಿತ್ತು ಎಂದು ದೂರು ದಾಖಲಾಗಿತ್ತು.

ಆರೋಪಿಗಳ ವಿರುದ್ಧ ಸೆಕ್ಷನ್ 153 (ಎ) (ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) 295 (ಎ) (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯಗಳು) 354 (ಎ) ಲೈಂಗಿಕ ಕಿರುಕುಳ, 354 (ಡಿ) (ಹಿಂಬಾಲಿಸುವಿಕೆ), 500 (ಮಾನನಷ್ಟ), 509 (ಮಹಿಳೆಯರ ಘನತೆಯನ್ನು ಅವಮಾನಿಸುವುದು) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 67 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ದ್ವೇಷ ಭಾಷಣ: ಮುಂಬೈನಲ್ಲಿ ಮೂರು ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....