Homeಮುಖಪುಟಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

ಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

- Advertisement -
- Advertisement -

‘ಮಾತಿನ ಮಂಟಪ’ ಎಂದೇ ಖ್ಯಾತವಾಗಿರುವ ‘ಕ್ಲಬ್‌ ಹೌಸ್‌’ ಸರ್ವರ್‌ ಡೌನ್ ಆಗಿದ್ದು, ಅನೇಕ ಬಳಕೆದಾರರು ವರದಿ ಮಾಡಿದ್ದಾರೆ. ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಜರ್ಮನಿ, ಇಂಡಿಯಾ, ಈಜಿಪ್ಟ್‌, ಅಮೆರಿಕದ ಹಲವು ನಗರಗಳಲ್ಲಿ ಸರ್ವರ್‌‌ ಡೌನ್‌ ಆಗಿದ್ದು, ಮಾತಿನ ಮಂಟಪದಲ್ಲಿ ಚರ್ಚೆಗಳನ್ನು ನಡೆಸುತ್ತಿದ್ದವರಿಗೆ ಚಡಪಡಿಕೆ ಆರಂಭವಾಗಿದೆ.

ಈ ಕುರಿತು ‘ಕ್ಲಬ್‌ ಹೌಸ್‌’ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಸರ್ವರ್‌ ಡೌನ್‌ ಆಗಿರುವ ಕುರಿತು ಟ್ವೀಟ್ ಮಾಡಲಾಗಿದೆ. ‘ಸಮಸ್ಯೆಯನ್ನು ಬಗೆಹರಿಸಲಾಗುವುದು’ ಕ್ಲಬ್‌ಹೌಸ್‌ ಸಂಸ್ಥೆ ಹೇಳಿದೆ.

ಅಮೆಜಾನ್‌, ಟ್ವಿಟ್ಟರ್‌, ಫೇಸ್‌ಬುಕ್‌ ಮೊದಲಾದ ಟೆಕ್‌ ಸಂಸ್ಥೆಗಳನ್ನು ಕ್ಲಬ್‌ಹೌಸ್‌ ನಿದ್ದೆಗೆಡಿಸಿತ್ತು. ಮಾತಿನ ಮಾದರಿಯ ಅಪ್ಲಿಕೇಷನ್‌ಗಳು ಅಭಿವೃದ್ಧಿಪಡಿಸಲು ಇತರ ಸಂಸ್ಥೆಗಳು ಹೆಜ್ಜೆ ಇರಿಸಿದ್ದವು ಎನ್ನಲಾಗಿದೆ.

ಇತ್ತೀಚೆಗೆ ಫೇಸ್‌ಬುಕ್‌ ಸಂಸ್ಥೆಯ ಫೇಸ್‌ಬುಕ್‌, ಮೆಸೇಂಜರ್‌‌, ಇನ್‌ಸ್ಟಾಗ್ರಾಮ್‌ ಅಪ್ಲಿಕೇಷನ್‌ಗಳು ಸರ್ವರ್‌ ಡೌನ್‌ ಆಗಿ, ಬಳಕೆದಾರರು ಚಡಪಡಿಸಿದ್ದರು. ಸುಮಾರು ಆರು ಗಂಟೆಗಳ ಬಳಿಕ ಈ ಅಪ್ಲಿಕೇಷನ್‌ಗಳು ಮರಳಿ ಸೇವೆ ಆರಂಭಿಸಿದ್ದವು. ಈಗ ಕ್ಲಬ್‌ಹೌಸ್‌ ಡೌನ್‌ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ರೂಪದಲ್ಲಿ ಕಾಣಿಸಿಕೊಂಡ ಕ್ಲಬ್‌ಹೌಸ್‌, ಮಾತುಗಾರರಿಗೆ ಹೊಸ ಅನುಭವವನ್ನು ನೀಡಿದೆ. ಅಷ್ಟೇ ಪ್ರಮಾಣದಲ್ಲಿ ಕೇಳುಗ ವರ್ಗವನ್ನು ಸೃಷ್ಟಿ ಮಾಡಿದೆ. ನಿತ್ಯವು ಒಂದಲ್ಲ ಒಂದು ಕಾರ್ಯಕ್ರಮವನ್ನು ನಡೆಸುತ್ತಾ ಸಕ್ರಿಯವಾಗಿರುವ ಗ್ರೂಪ್‌ಗಳಿವೆ. ರಾಜಕಾರಣಿಗಳು ನೇರವಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಲೂ ಕ್ಲಬ್‌ಹೌಸ್‌ ವೇದಿಕೆಯಾಗಿ ಗಮನ ಸೆಳೆದಿದೆ. ಕ್ಲಬ್‌ಹೌಸ್‌ ಒಂದು ರೀತಿ ಅಡಿಕ್ಷನ್‌ ಎಂದವರೂ ಇದ್ದಾರೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಏನಿದು ಕ್ಲಬ್‌ಹೌಸ್?

ಇದೊಂದು ಆಡಿಯೋ ಆಧರಿತ ಸೋಷಿಯಲ್ ಮೀಡಿಯಾ ಆಪ್. ಇಲ್ಲಿ ವಿಡಿಯೋಗಳಿಲ್ಲ. ಸಾಲು ಸಾಲು ಬರಹಗಳಿಲ್ಲ. ಇಲ್ಲಿರುವುದು ಬರೀ ಮಾತು. ಇದೊಂದು ರೀತಿಯ ಪಾಡ್‌ಕಾಸ್ಟ್‌ನ ಲೈವ್ ಆವೃತ್ತಿ ಎನ್ನಬಹುದು. ಸಮಾನ ಆಸಕ್ತಿಯ ವಿಷಯಗಳ ಬಗ್ಗೆ ಒಂದೆಡೆ ಸೇರಿ ಹೇಗೆ ಹರಟೆ ಹೊಡೆಯುತ್ತೇವೊ, ಅದೇ ಅನೌಪಚಾರಿಕತೆಯೊಂದಿಗೆ ಹರಟೆ ಹೊಡೆಯುವುದಕ್ಕೆ ಕ್ಲಬ್‌ಹೌಸ್ ವೇದಿಕೆ ಕಲ್ಪಿಸಿದೆ. ಹೀಗಾಗಿ ಕೋಟ್ಯಂತರ ಜನರನ್ನು ಆಕರ್ಷಿಸಿದೆ.

ಭಾರತೀಯ ಹಿನ್ನೆಲೆಯ ಅಮೆರಿಕನ್ ರೋಹನ್ ಸೇತ್ ಮತ್ತು ಪಾಲ್ ಡೇವಿಸನ್ ಅಭಿವೃದ್ಧಿಪಡಿಸಿದ ಕ್ಲಬ್‌ಹೌಸ್ ಕೋವಿಡ್ ಮತ್ತು ಲಾಕ್‌ಡೌನ್ ಹಿನ್ನೆಲೆಯಲ್ಲಿ ದಿಢೀರನೆ ಪ್ರಚಾರ ಪಡೆದುಕೊಂಡು ವಿಶ್ವದಾದ್ಯಂತ 1 ಕೋಟಿ ಬಳಕೆದಾರರನ್ನು ಗಳಿಸಿಕೊಂಡಿತ್ತು.

ಬಳಕೆದಾರರು ತಮ್ಮದೇ ಆದ ಗುಂಪನ್ನು ಕಟ್ಟಿಕೊಂಡು ಆಸಕ್ತಿಯ ವಿಷಯ ಕುರಿತು ಚರ್ಚಿಸಬಹುದು, ಸಂವಾದ ನಡೆಸಬಹುದು. ಅನಿರ್ಬಂಧಿತವಾದ ಖಾಸಗಿ ಹರಟೆಗೂ ಅವಕಾಶವಿದೆ. ಮುಕ್ತವಾಗಿ ಆಸಕ್ತರೆಲ್ಲರನ್ನೂ ಒಳಗೊಳ್ಳುವುದಕ್ಕೂ ಅವಕಾಶವನ್ನು ಕ್ಲಬ್‌ಹೌಸ್ ನೀಡಿದೆ.

ಜನಪ್ರಿಯವಾಗಿದ್ದೇಕೆ?

ಸೋಷಿಯಲ್ ಮೀಡಿಯಾ ಅಂದರೆ ಅಲ್ಲಿ ಸೆಲ್ಫಿಗಳು, ಫೋಟೊಗಳು, ವಿಡಿಯೋಗಳು, ಉದ್ದುದ್ದ ಬರಹಗಳು.. ಅವುಗಳಿಗೆ ಬರುವ ಲೈಕ್, ಕಮೆಂಟ್‌ಗಳು, ಶೇರ್‌ಗಳು…

ಮನಸ್ಸಿನ ಮೇಲೆ ತೀವ್ರ ಪರಿಣಾಮ ಉಂಟುಮಾಡುವ ಈ ಹಲವು ಸೋಷಿಯಲ್ ಮೀಡಿಯಾ ಚಟುವಟಿಕೆಗಳಿಂದ ರೋಸಿದ ಕಾರಣಕ್ಕೊ ಏನೋ, ಕೇವಲ ಧ್ವನಿಯನ್ನಷ್ಟೇ ಆಧರಿಸಿದ ಕ್ಲಬ್‌ಹೌಸ್ ಜನಪ್ರಿಯವಾಗುತ್ತಿದೆ.

ಎಷ್ಟರಮಟ್ಟಿಗೆ ಎಂದರೆ ಇಲ್ಲಿ ತರುಣ-ತರುಣಿಯರಿದ್ದಾರೆ, ಮಹಿಳೆಯರಿದ್ದಾರೆ, ಉದ್ಯಮಿಗಳು, ಪತ್ರಕರ್ತರು, ಹೊಸ ಹಾಗೂ ಹಳೆಯ ತಲೆಮಾರಿನ ರಾಜಕಾರಣಿಗಳೂ ತೊಡಗಿಸಿಕೊಂಡಿದ್ದಾರೆ. ತರಹೇವಾರಿ ವಿಷಯಗಳ ಕುರಿತು ಸೀಮಿತ ಅವಧಿಯ ಚರ್ಚೆಗಳು ನಡೆಯುತ್ತವೆ. ಅಲ್ಲಿಗೆ ಒಂದು ಸಭೆ ಮುಗಿದುಹೋಗುತ್ತದೆ.

ಯಾರು ಬೇಕಾದರೂ ಇಂತಹ ಚರ್ಚೆಗಳನ್ನು ನಡೆಸಬಹುದು, ಯಾರೂ ಬೇಕಾದರೂ ಪಾಲ್ಗೊಳ್ಳಬಹುದು. ವಿವಿಧ ಹಿನ್ನೆಲೆಯ ಅನುಭವವುಳ್ಳವರೊಂದಿಗೆ ನೇರ ಸಂವಾದ ಚರ್ಚೆಗಳು ಸಾಧ್ಯವಾಗುವುದರಿಂದ
ವಸ್ತು-ವಿಷಯಗಳ ವಿವಿಧ ಆಯಾಮಗಳ ದೃಷ್ಟಿಕೋನವನ್ನು ಪಡೆಯುವುದಕ್ಕೂ ಕ್ಲಬ್‌ಹೌಸ್ ಅವಕಾಶ ಕೊಡುತ್ತದೆ ಎಂಬುದು ಬಳಕೆದಾರರ ಅಭಿಪ್ರಾಯ.

ಕೆಲವೇ ತಿಂಗಳ ಹಿಂದೆ ಭಾರತದಲ್ಲಿ ಚಾಲ್ತಿಗೆ ಬಂದ ಕ್ಲಬ್‌ಹೌಸ್‌ ಸ್ಮಾರ್ಟ್‌‌ಫೋನ್‌ ಬಳಕೆಗೂ ಲಭ್ಯವಾಗಿ ಅಪಾರ ಜನಮೆಚ್ಚುಗೆ ಗಳಿಸಿದೆ. ತಾಂತ್ರಿಕ ದೋಷದಿಂದಾಗಿ ಅಡಚಣೆಯಾಗಿರುವುದು ಕ್ಲಬ್‌ಹೌಸ್‌ ಪ್ರಿಯರಿಗೆ ಬೇಸರ ತಂದಿದೆ.


ಇದನ್ನೂ ಓದಿರಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...