Homeಮುಖಪುಟಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

ಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

- Advertisement -
- Advertisement -

‘ಮಾತಿನ ಮಂಟಪ’ ಎಂದೇ ಖ್ಯಾತವಾಗಿರುವ ‘ಕ್ಲಬ್‌ ಹೌಸ್‌’ ಸರ್ವರ್‌ ಡೌನ್ ಆಗಿದ್ದು, ಅನೇಕ ಬಳಕೆದಾರರು ವರದಿ ಮಾಡಿದ್ದಾರೆ. ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಜರ್ಮನಿ, ಇಂಡಿಯಾ, ಈಜಿಪ್ಟ್‌, ಅಮೆರಿಕದ ಹಲವು ನಗರಗಳಲ್ಲಿ ಸರ್ವರ್‌‌ ಡೌನ್‌ ಆಗಿದ್ದು, ಮಾತಿನ ಮಂಟಪದಲ್ಲಿ ಚರ್ಚೆಗಳನ್ನು ನಡೆಸುತ್ತಿದ್ದವರಿಗೆ ಚಡಪಡಿಕೆ ಆರಂಭವಾಗಿದೆ.

ಈ ಕುರಿತು ‘ಕ್ಲಬ್‌ ಹೌಸ್‌’ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಸರ್ವರ್‌ ಡೌನ್‌ ಆಗಿರುವ ಕುರಿತು ಟ್ವೀಟ್ ಮಾಡಲಾಗಿದೆ. ‘ಸಮಸ್ಯೆಯನ್ನು ಬಗೆಹರಿಸಲಾಗುವುದು’ ಕ್ಲಬ್‌ಹೌಸ್‌ ಸಂಸ್ಥೆ ಹೇಳಿದೆ.

ಅಮೆಜಾನ್‌, ಟ್ವಿಟ್ಟರ್‌, ಫೇಸ್‌ಬುಕ್‌ ಮೊದಲಾದ ಟೆಕ್‌ ಸಂಸ್ಥೆಗಳನ್ನು ಕ್ಲಬ್‌ಹೌಸ್‌ ನಿದ್ದೆಗೆಡಿಸಿತ್ತು. ಮಾತಿನ ಮಾದರಿಯ ಅಪ್ಲಿಕೇಷನ್‌ಗಳು ಅಭಿವೃದ್ಧಿಪಡಿಸಲು ಇತರ ಸಂಸ್ಥೆಗಳು ಹೆಜ್ಜೆ ಇರಿಸಿದ್ದವು ಎನ್ನಲಾಗಿದೆ.

ಇತ್ತೀಚೆಗೆ ಫೇಸ್‌ಬುಕ್‌ ಸಂಸ್ಥೆಯ ಫೇಸ್‌ಬುಕ್‌, ಮೆಸೇಂಜರ್‌‌, ಇನ್‌ಸ್ಟಾಗ್ರಾಮ್‌ ಅಪ್ಲಿಕೇಷನ್‌ಗಳು ಸರ್ವರ್‌ ಡೌನ್‌ ಆಗಿ, ಬಳಕೆದಾರರು ಚಡಪಡಿಸಿದ್ದರು. ಸುಮಾರು ಆರು ಗಂಟೆಗಳ ಬಳಿಕ ಈ ಅಪ್ಲಿಕೇಷನ್‌ಗಳು ಮರಳಿ ಸೇವೆ ಆರಂಭಿಸಿದ್ದವು. ಈಗ ಕ್ಲಬ್‌ಹೌಸ್‌ ಡೌನ್‌ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ರೂಪದಲ್ಲಿ ಕಾಣಿಸಿಕೊಂಡ ಕ್ಲಬ್‌ಹೌಸ್‌, ಮಾತುಗಾರರಿಗೆ ಹೊಸ ಅನುಭವವನ್ನು ನೀಡಿದೆ. ಅಷ್ಟೇ ಪ್ರಮಾಣದಲ್ಲಿ ಕೇಳುಗ ವರ್ಗವನ್ನು ಸೃಷ್ಟಿ ಮಾಡಿದೆ. ನಿತ್ಯವು ಒಂದಲ್ಲ ಒಂದು ಕಾರ್ಯಕ್ರಮವನ್ನು ನಡೆಸುತ್ತಾ ಸಕ್ರಿಯವಾಗಿರುವ ಗ್ರೂಪ್‌ಗಳಿವೆ. ರಾಜಕಾರಣಿಗಳು ನೇರವಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಲೂ ಕ್ಲಬ್‌ಹೌಸ್‌ ವೇದಿಕೆಯಾಗಿ ಗಮನ ಸೆಳೆದಿದೆ. ಕ್ಲಬ್‌ಹೌಸ್‌ ಒಂದು ರೀತಿ ಅಡಿಕ್ಷನ್‌ ಎಂದವರೂ ಇದ್ದಾರೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಏನಿದು ಕ್ಲಬ್‌ಹೌಸ್?

ಇದೊಂದು ಆಡಿಯೋ ಆಧರಿತ ಸೋಷಿಯಲ್ ಮೀಡಿಯಾ ಆಪ್. ಇಲ್ಲಿ ವಿಡಿಯೋಗಳಿಲ್ಲ. ಸಾಲು ಸಾಲು ಬರಹಗಳಿಲ್ಲ. ಇಲ್ಲಿರುವುದು ಬರೀ ಮಾತು. ಇದೊಂದು ರೀತಿಯ ಪಾಡ್‌ಕಾಸ್ಟ್‌ನ ಲೈವ್ ಆವೃತ್ತಿ ಎನ್ನಬಹುದು. ಸಮಾನ ಆಸಕ್ತಿಯ ವಿಷಯಗಳ ಬಗ್ಗೆ ಒಂದೆಡೆ ಸೇರಿ ಹೇಗೆ ಹರಟೆ ಹೊಡೆಯುತ್ತೇವೊ, ಅದೇ ಅನೌಪಚಾರಿಕತೆಯೊಂದಿಗೆ ಹರಟೆ ಹೊಡೆಯುವುದಕ್ಕೆ ಕ್ಲಬ್‌ಹೌಸ್ ವೇದಿಕೆ ಕಲ್ಪಿಸಿದೆ. ಹೀಗಾಗಿ ಕೋಟ್ಯಂತರ ಜನರನ್ನು ಆಕರ್ಷಿಸಿದೆ.

ಭಾರತೀಯ ಹಿನ್ನೆಲೆಯ ಅಮೆರಿಕನ್ ರೋಹನ್ ಸೇತ್ ಮತ್ತು ಪಾಲ್ ಡೇವಿಸನ್ ಅಭಿವೃದ್ಧಿಪಡಿಸಿದ ಕ್ಲಬ್‌ಹೌಸ್ ಕೋವಿಡ್ ಮತ್ತು ಲಾಕ್‌ಡೌನ್ ಹಿನ್ನೆಲೆಯಲ್ಲಿ ದಿಢೀರನೆ ಪ್ರಚಾರ ಪಡೆದುಕೊಂಡು ವಿಶ್ವದಾದ್ಯಂತ 1 ಕೋಟಿ ಬಳಕೆದಾರರನ್ನು ಗಳಿಸಿಕೊಂಡಿತ್ತು.

ಬಳಕೆದಾರರು ತಮ್ಮದೇ ಆದ ಗುಂಪನ್ನು ಕಟ್ಟಿಕೊಂಡು ಆಸಕ್ತಿಯ ವಿಷಯ ಕುರಿತು ಚರ್ಚಿಸಬಹುದು, ಸಂವಾದ ನಡೆಸಬಹುದು. ಅನಿರ್ಬಂಧಿತವಾದ ಖಾಸಗಿ ಹರಟೆಗೂ ಅವಕಾಶವಿದೆ. ಮುಕ್ತವಾಗಿ ಆಸಕ್ತರೆಲ್ಲರನ್ನೂ ಒಳಗೊಳ್ಳುವುದಕ್ಕೂ ಅವಕಾಶವನ್ನು ಕ್ಲಬ್‌ಹೌಸ್ ನೀಡಿದೆ.

ಜನಪ್ರಿಯವಾಗಿದ್ದೇಕೆ?

ಸೋಷಿಯಲ್ ಮೀಡಿಯಾ ಅಂದರೆ ಅಲ್ಲಿ ಸೆಲ್ಫಿಗಳು, ಫೋಟೊಗಳು, ವಿಡಿಯೋಗಳು, ಉದ್ದುದ್ದ ಬರಹಗಳು.. ಅವುಗಳಿಗೆ ಬರುವ ಲೈಕ್, ಕಮೆಂಟ್‌ಗಳು, ಶೇರ್‌ಗಳು…

ಮನಸ್ಸಿನ ಮೇಲೆ ತೀವ್ರ ಪರಿಣಾಮ ಉಂಟುಮಾಡುವ ಈ ಹಲವು ಸೋಷಿಯಲ್ ಮೀಡಿಯಾ ಚಟುವಟಿಕೆಗಳಿಂದ ರೋಸಿದ ಕಾರಣಕ್ಕೊ ಏನೋ, ಕೇವಲ ಧ್ವನಿಯನ್ನಷ್ಟೇ ಆಧರಿಸಿದ ಕ್ಲಬ್‌ಹೌಸ್ ಜನಪ್ರಿಯವಾಗುತ್ತಿದೆ.

ಎಷ್ಟರಮಟ್ಟಿಗೆ ಎಂದರೆ ಇಲ್ಲಿ ತರುಣ-ತರುಣಿಯರಿದ್ದಾರೆ, ಮಹಿಳೆಯರಿದ್ದಾರೆ, ಉದ್ಯಮಿಗಳು, ಪತ್ರಕರ್ತರು, ಹೊಸ ಹಾಗೂ ಹಳೆಯ ತಲೆಮಾರಿನ ರಾಜಕಾರಣಿಗಳೂ ತೊಡಗಿಸಿಕೊಂಡಿದ್ದಾರೆ. ತರಹೇವಾರಿ ವಿಷಯಗಳ ಕುರಿತು ಸೀಮಿತ ಅವಧಿಯ ಚರ್ಚೆಗಳು ನಡೆಯುತ್ತವೆ. ಅಲ್ಲಿಗೆ ಒಂದು ಸಭೆ ಮುಗಿದುಹೋಗುತ್ತದೆ.

ಯಾರು ಬೇಕಾದರೂ ಇಂತಹ ಚರ್ಚೆಗಳನ್ನು ನಡೆಸಬಹುದು, ಯಾರೂ ಬೇಕಾದರೂ ಪಾಲ್ಗೊಳ್ಳಬಹುದು. ವಿವಿಧ ಹಿನ್ನೆಲೆಯ ಅನುಭವವುಳ್ಳವರೊಂದಿಗೆ ನೇರ ಸಂವಾದ ಚರ್ಚೆಗಳು ಸಾಧ್ಯವಾಗುವುದರಿಂದ
ವಸ್ತು-ವಿಷಯಗಳ ವಿವಿಧ ಆಯಾಮಗಳ ದೃಷ್ಟಿಕೋನವನ್ನು ಪಡೆಯುವುದಕ್ಕೂ ಕ್ಲಬ್‌ಹೌಸ್ ಅವಕಾಶ ಕೊಡುತ್ತದೆ ಎಂಬುದು ಬಳಕೆದಾರರ ಅಭಿಪ್ರಾಯ.

ಕೆಲವೇ ತಿಂಗಳ ಹಿಂದೆ ಭಾರತದಲ್ಲಿ ಚಾಲ್ತಿಗೆ ಬಂದ ಕ್ಲಬ್‌ಹೌಸ್‌ ಸ್ಮಾರ್ಟ್‌‌ಫೋನ್‌ ಬಳಕೆಗೂ ಲಭ್ಯವಾಗಿ ಅಪಾರ ಜನಮೆಚ್ಚುಗೆ ಗಳಿಸಿದೆ. ತಾಂತ್ರಿಕ ದೋಷದಿಂದಾಗಿ ಅಡಚಣೆಯಾಗಿರುವುದು ಕ್ಲಬ್‌ಹೌಸ್‌ ಪ್ರಿಯರಿಗೆ ಬೇಸರ ತಂದಿದೆ.


ಇದನ್ನೂ ಓದಿರಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...