Homeಮುಖಪುಟಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

ಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

- Advertisement -
- Advertisement -

‘ಮಾತಿನ ಮಂಟಪ’ ಎಂದೇ ಖ್ಯಾತವಾಗಿರುವ ‘ಕ್ಲಬ್‌ ಹೌಸ್‌’ ಸರ್ವರ್‌ ಡೌನ್ ಆಗಿದ್ದು, ಅನೇಕ ಬಳಕೆದಾರರು ವರದಿ ಮಾಡಿದ್ದಾರೆ. ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಜರ್ಮನಿ, ಇಂಡಿಯಾ, ಈಜಿಪ್ಟ್‌, ಅಮೆರಿಕದ ಹಲವು ನಗರಗಳಲ್ಲಿ ಸರ್ವರ್‌‌ ಡೌನ್‌ ಆಗಿದ್ದು, ಮಾತಿನ ಮಂಟಪದಲ್ಲಿ ಚರ್ಚೆಗಳನ್ನು ನಡೆಸುತ್ತಿದ್ದವರಿಗೆ ಚಡಪಡಿಕೆ ಆರಂಭವಾಗಿದೆ.

ಈ ಕುರಿತು ‘ಕ್ಲಬ್‌ ಹೌಸ್‌’ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಸರ್ವರ್‌ ಡೌನ್‌ ಆಗಿರುವ ಕುರಿತು ಟ್ವೀಟ್ ಮಾಡಲಾಗಿದೆ. ‘ಸಮಸ್ಯೆಯನ್ನು ಬಗೆಹರಿಸಲಾಗುವುದು’ ಕ್ಲಬ್‌ಹೌಸ್‌ ಸಂಸ್ಥೆ ಹೇಳಿದೆ.

ಅಮೆಜಾನ್‌, ಟ್ವಿಟ್ಟರ್‌, ಫೇಸ್‌ಬುಕ್‌ ಮೊದಲಾದ ಟೆಕ್‌ ಸಂಸ್ಥೆಗಳನ್ನು ಕ್ಲಬ್‌ಹೌಸ್‌ ನಿದ್ದೆಗೆಡಿಸಿತ್ತು. ಮಾತಿನ ಮಾದರಿಯ ಅಪ್ಲಿಕೇಷನ್‌ಗಳು ಅಭಿವೃದ್ಧಿಪಡಿಸಲು ಇತರ ಸಂಸ್ಥೆಗಳು ಹೆಜ್ಜೆ ಇರಿಸಿದ್ದವು ಎನ್ನಲಾಗಿದೆ.

ಇತ್ತೀಚೆಗೆ ಫೇಸ್‌ಬುಕ್‌ ಸಂಸ್ಥೆಯ ಫೇಸ್‌ಬುಕ್‌, ಮೆಸೇಂಜರ್‌‌, ಇನ್‌ಸ್ಟಾಗ್ರಾಮ್‌ ಅಪ್ಲಿಕೇಷನ್‌ಗಳು ಸರ್ವರ್‌ ಡೌನ್‌ ಆಗಿ, ಬಳಕೆದಾರರು ಚಡಪಡಿಸಿದ್ದರು. ಸುಮಾರು ಆರು ಗಂಟೆಗಳ ಬಳಿಕ ಈ ಅಪ್ಲಿಕೇಷನ್‌ಗಳು ಮರಳಿ ಸೇವೆ ಆರಂಭಿಸಿದ್ದವು. ಈಗ ಕ್ಲಬ್‌ಹೌಸ್‌ ಡೌನ್‌ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ರೂಪದಲ್ಲಿ ಕಾಣಿಸಿಕೊಂಡ ಕ್ಲಬ್‌ಹೌಸ್‌, ಮಾತುಗಾರರಿಗೆ ಹೊಸ ಅನುಭವವನ್ನು ನೀಡಿದೆ. ಅಷ್ಟೇ ಪ್ರಮಾಣದಲ್ಲಿ ಕೇಳುಗ ವರ್ಗವನ್ನು ಸೃಷ್ಟಿ ಮಾಡಿದೆ. ನಿತ್ಯವು ಒಂದಲ್ಲ ಒಂದು ಕಾರ್ಯಕ್ರಮವನ್ನು ನಡೆಸುತ್ತಾ ಸಕ್ರಿಯವಾಗಿರುವ ಗ್ರೂಪ್‌ಗಳಿವೆ. ರಾಜಕಾರಣಿಗಳು ನೇರವಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಲೂ ಕ್ಲಬ್‌ಹೌಸ್‌ ವೇದಿಕೆಯಾಗಿ ಗಮನ ಸೆಳೆದಿದೆ. ಕ್ಲಬ್‌ಹೌಸ್‌ ಒಂದು ರೀತಿ ಅಡಿಕ್ಷನ್‌ ಎಂದವರೂ ಇದ್ದಾರೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಏನಿದು ಕ್ಲಬ್‌ಹೌಸ್?

ಇದೊಂದು ಆಡಿಯೋ ಆಧರಿತ ಸೋಷಿಯಲ್ ಮೀಡಿಯಾ ಆಪ್. ಇಲ್ಲಿ ವಿಡಿಯೋಗಳಿಲ್ಲ. ಸಾಲು ಸಾಲು ಬರಹಗಳಿಲ್ಲ. ಇಲ್ಲಿರುವುದು ಬರೀ ಮಾತು. ಇದೊಂದು ರೀತಿಯ ಪಾಡ್‌ಕಾಸ್ಟ್‌ನ ಲೈವ್ ಆವೃತ್ತಿ ಎನ್ನಬಹುದು. ಸಮಾನ ಆಸಕ್ತಿಯ ವಿಷಯಗಳ ಬಗ್ಗೆ ಒಂದೆಡೆ ಸೇರಿ ಹೇಗೆ ಹರಟೆ ಹೊಡೆಯುತ್ತೇವೊ, ಅದೇ ಅನೌಪಚಾರಿಕತೆಯೊಂದಿಗೆ ಹರಟೆ ಹೊಡೆಯುವುದಕ್ಕೆ ಕ್ಲಬ್‌ಹೌಸ್ ವೇದಿಕೆ ಕಲ್ಪಿಸಿದೆ. ಹೀಗಾಗಿ ಕೋಟ್ಯಂತರ ಜನರನ್ನು ಆಕರ್ಷಿಸಿದೆ.

ಭಾರತೀಯ ಹಿನ್ನೆಲೆಯ ಅಮೆರಿಕನ್ ರೋಹನ್ ಸೇತ್ ಮತ್ತು ಪಾಲ್ ಡೇವಿಸನ್ ಅಭಿವೃದ್ಧಿಪಡಿಸಿದ ಕ್ಲಬ್‌ಹೌಸ್ ಕೋವಿಡ್ ಮತ್ತು ಲಾಕ್‌ಡೌನ್ ಹಿನ್ನೆಲೆಯಲ್ಲಿ ದಿಢೀರನೆ ಪ್ರಚಾರ ಪಡೆದುಕೊಂಡು ವಿಶ್ವದಾದ್ಯಂತ 1 ಕೋಟಿ ಬಳಕೆದಾರರನ್ನು ಗಳಿಸಿಕೊಂಡಿತ್ತು.

ಬಳಕೆದಾರರು ತಮ್ಮದೇ ಆದ ಗುಂಪನ್ನು ಕಟ್ಟಿಕೊಂಡು ಆಸಕ್ತಿಯ ವಿಷಯ ಕುರಿತು ಚರ್ಚಿಸಬಹುದು, ಸಂವಾದ ನಡೆಸಬಹುದು. ಅನಿರ್ಬಂಧಿತವಾದ ಖಾಸಗಿ ಹರಟೆಗೂ ಅವಕಾಶವಿದೆ. ಮುಕ್ತವಾಗಿ ಆಸಕ್ತರೆಲ್ಲರನ್ನೂ ಒಳಗೊಳ್ಳುವುದಕ್ಕೂ ಅವಕಾಶವನ್ನು ಕ್ಲಬ್‌ಹೌಸ್ ನೀಡಿದೆ.

ಜನಪ್ರಿಯವಾಗಿದ್ದೇಕೆ?

ಸೋಷಿಯಲ್ ಮೀಡಿಯಾ ಅಂದರೆ ಅಲ್ಲಿ ಸೆಲ್ಫಿಗಳು, ಫೋಟೊಗಳು, ವಿಡಿಯೋಗಳು, ಉದ್ದುದ್ದ ಬರಹಗಳು.. ಅವುಗಳಿಗೆ ಬರುವ ಲೈಕ್, ಕಮೆಂಟ್‌ಗಳು, ಶೇರ್‌ಗಳು…

ಮನಸ್ಸಿನ ಮೇಲೆ ತೀವ್ರ ಪರಿಣಾಮ ಉಂಟುಮಾಡುವ ಈ ಹಲವು ಸೋಷಿಯಲ್ ಮೀಡಿಯಾ ಚಟುವಟಿಕೆಗಳಿಂದ ರೋಸಿದ ಕಾರಣಕ್ಕೊ ಏನೋ, ಕೇವಲ ಧ್ವನಿಯನ್ನಷ್ಟೇ ಆಧರಿಸಿದ ಕ್ಲಬ್‌ಹೌಸ್ ಜನಪ್ರಿಯವಾಗುತ್ತಿದೆ.

ಎಷ್ಟರಮಟ್ಟಿಗೆ ಎಂದರೆ ಇಲ್ಲಿ ತರುಣ-ತರುಣಿಯರಿದ್ದಾರೆ, ಮಹಿಳೆಯರಿದ್ದಾರೆ, ಉದ್ಯಮಿಗಳು, ಪತ್ರಕರ್ತರು, ಹೊಸ ಹಾಗೂ ಹಳೆಯ ತಲೆಮಾರಿನ ರಾಜಕಾರಣಿಗಳೂ ತೊಡಗಿಸಿಕೊಂಡಿದ್ದಾರೆ. ತರಹೇವಾರಿ ವಿಷಯಗಳ ಕುರಿತು ಸೀಮಿತ ಅವಧಿಯ ಚರ್ಚೆಗಳು ನಡೆಯುತ್ತವೆ. ಅಲ್ಲಿಗೆ ಒಂದು ಸಭೆ ಮುಗಿದುಹೋಗುತ್ತದೆ.

ಯಾರು ಬೇಕಾದರೂ ಇಂತಹ ಚರ್ಚೆಗಳನ್ನು ನಡೆಸಬಹುದು, ಯಾರೂ ಬೇಕಾದರೂ ಪಾಲ್ಗೊಳ್ಳಬಹುದು. ವಿವಿಧ ಹಿನ್ನೆಲೆಯ ಅನುಭವವುಳ್ಳವರೊಂದಿಗೆ ನೇರ ಸಂವಾದ ಚರ್ಚೆಗಳು ಸಾಧ್ಯವಾಗುವುದರಿಂದ
ವಸ್ತು-ವಿಷಯಗಳ ವಿವಿಧ ಆಯಾಮಗಳ ದೃಷ್ಟಿಕೋನವನ್ನು ಪಡೆಯುವುದಕ್ಕೂ ಕ್ಲಬ್‌ಹೌಸ್ ಅವಕಾಶ ಕೊಡುತ್ತದೆ ಎಂಬುದು ಬಳಕೆದಾರರ ಅಭಿಪ್ರಾಯ.

ಕೆಲವೇ ತಿಂಗಳ ಹಿಂದೆ ಭಾರತದಲ್ಲಿ ಚಾಲ್ತಿಗೆ ಬಂದ ಕ್ಲಬ್‌ಹೌಸ್‌ ಸ್ಮಾರ್ಟ್‌‌ಫೋನ್‌ ಬಳಕೆಗೂ ಲಭ್ಯವಾಗಿ ಅಪಾರ ಜನಮೆಚ್ಚುಗೆ ಗಳಿಸಿದೆ. ತಾಂತ್ರಿಕ ದೋಷದಿಂದಾಗಿ ಅಡಚಣೆಯಾಗಿರುವುದು ಕ್ಲಬ್‌ಹೌಸ್‌ ಪ್ರಿಯರಿಗೆ ಬೇಸರ ತಂದಿದೆ.


ಇದನ್ನೂ ಓದಿರಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...