Homeಮುಖಪುಟಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

ಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

- Advertisement -
- Advertisement -

‘ಮಾತಿನ ಮಂಟಪ’ ಎಂದೇ ಖ್ಯಾತವಾಗಿರುವ ‘ಕ್ಲಬ್‌ ಹೌಸ್‌’ ಸರ್ವರ್‌ ಡೌನ್ ಆಗಿದ್ದು, ಅನೇಕ ಬಳಕೆದಾರರು ವರದಿ ಮಾಡಿದ್ದಾರೆ. ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಜರ್ಮನಿ, ಇಂಡಿಯಾ, ಈಜಿಪ್ಟ್‌, ಅಮೆರಿಕದ ಹಲವು ನಗರಗಳಲ್ಲಿ ಸರ್ವರ್‌‌ ಡೌನ್‌ ಆಗಿದ್ದು, ಮಾತಿನ ಮಂಟಪದಲ್ಲಿ ಚರ್ಚೆಗಳನ್ನು ನಡೆಸುತ್ತಿದ್ದವರಿಗೆ ಚಡಪಡಿಕೆ ಆರಂಭವಾಗಿದೆ.

ಈ ಕುರಿತು ‘ಕ್ಲಬ್‌ ಹೌಸ್‌’ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಸರ್ವರ್‌ ಡೌನ್‌ ಆಗಿರುವ ಕುರಿತು ಟ್ವೀಟ್ ಮಾಡಲಾಗಿದೆ. ‘ಸಮಸ್ಯೆಯನ್ನು ಬಗೆಹರಿಸಲಾಗುವುದು’ ಕ್ಲಬ್‌ಹೌಸ್‌ ಸಂಸ್ಥೆ ಹೇಳಿದೆ.

ಅಮೆಜಾನ್‌, ಟ್ವಿಟ್ಟರ್‌, ಫೇಸ್‌ಬುಕ್‌ ಮೊದಲಾದ ಟೆಕ್‌ ಸಂಸ್ಥೆಗಳನ್ನು ಕ್ಲಬ್‌ಹೌಸ್‌ ನಿದ್ದೆಗೆಡಿಸಿತ್ತು. ಮಾತಿನ ಮಾದರಿಯ ಅಪ್ಲಿಕೇಷನ್‌ಗಳು ಅಭಿವೃದ್ಧಿಪಡಿಸಲು ಇತರ ಸಂಸ್ಥೆಗಳು ಹೆಜ್ಜೆ ಇರಿಸಿದ್ದವು ಎನ್ನಲಾಗಿದೆ.

ಇತ್ತೀಚೆಗೆ ಫೇಸ್‌ಬುಕ್‌ ಸಂಸ್ಥೆಯ ಫೇಸ್‌ಬುಕ್‌, ಮೆಸೇಂಜರ್‌‌, ಇನ್‌ಸ್ಟಾಗ್ರಾಮ್‌ ಅಪ್ಲಿಕೇಷನ್‌ಗಳು ಸರ್ವರ್‌ ಡೌನ್‌ ಆಗಿ, ಬಳಕೆದಾರರು ಚಡಪಡಿಸಿದ್ದರು. ಸುಮಾರು ಆರು ಗಂಟೆಗಳ ಬಳಿಕ ಈ ಅಪ್ಲಿಕೇಷನ್‌ಗಳು ಮರಳಿ ಸೇವೆ ಆರಂಭಿಸಿದ್ದವು. ಈಗ ಕ್ಲಬ್‌ಹೌಸ್‌ ಡೌನ್‌ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ರೂಪದಲ್ಲಿ ಕಾಣಿಸಿಕೊಂಡ ಕ್ಲಬ್‌ಹೌಸ್‌, ಮಾತುಗಾರರಿಗೆ ಹೊಸ ಅನುಭವವನ್ನು ನೀಡಿದೆ. ಅಷ್ಟೇ ಪ್ರಮಾಣದಲ್ಲಿ ಕೇಳುಗ ವರ್ಗವನ್ನು ಸೃಷ್ಟಿ ಮಾಡಿದೆ. ನಿತ್ಯವು ಒಂದಲ್ಲ ಒಂದು ಕಾರ್ಯಕ್ರಮವನ್ನು ನಡೆಸುತ್ತಾ ಸಕ್ರಿಯವಾಗಿರುವ ಗ್ರೂಪ್‌ಗಳಿವೆ. ರಾಜಕಾರಣಿಗಳು ನೇರವಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಲೂ ಕ್ಲಬ್‌ಹೌಸ್‌ ವೇದಿಕೆಯಾಗಿ ಗಮನ ಸೆಳೆದಿದೆ. ಕ್ಲಬ್‌ಹೌಸ್‌ ಒಂದು ರೀತಿ ಅಡಿಕ್ಷನ್‌ ಎಂದವರೂ ಇದ್ದಾರೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಏನಿದು ಕ್ಲಬ್‌ಹೌಸ್?

ಇದೊಂದು ಆಡಿಯೋ ಆಧರಿತ ಸೋಷಿಯಲ್ ಮೀಡಿಯಾ ಆಪ್. ಇಲ್ಲಿ ವಿಡಿಯೋಗಳಿಲ್ಲ. ಸಾಲು ಸಾಲು ಬರಹಗಳಿಲ್ಲ. ಇಲ್ಲಿರುವುದು ಬರೀ ಮಾತು. ಇದೊಂದು ರೀತಿಯ ಪಾಡ್‌ಕಾಸ್ಟ್‌ನ ಲೈವ್ ಆವೃತ್ತಿ ಎನ್ನಬಹುದು. ಸಮಾನ ಆಸಕ್ತಿಯ ವಿಷಯಗಳ ಬಗ್ಗೆ ಒಂದೆಡೆ ಸೇರಿ ಹೇಗೆ ಹರಟೆ ಹೊಡೆಯುತ್ತೇವೊ, ಅದೇ ಅನೌಪಚಾರಿಕತೆಯೊಂದಿಗೆ ಹರಟೆ ಹೊಡೆಯುವುದಕ್ಕೆ ಕ್ಲಬ್‌ಹೌಸ್ ವೇದಿಕೆ ಕಲ್ಪಿಸಿದೆ. ಹೀಗಾಗಿ ಕೋಟ್ಯಂತರ ಜನರನ್ನು ಆಕರ್ಷಿಸಿದೆ.

ಭಾರತೀಯ ಹಿನ್ನೆಲೆಯ ಅಮೆರಿಕನ್ ರೋಹನ್ ಸೇತ್ ಮತ್ತು ಪಾಲ್ ಡೇವಿಸನ್ ಅಭಿವೃದ್ಧಿಪಡಿಸಿದ ಕ್ಲಬ್‌ಹೌಸ್ ಕೋವಿಡ್ ಮತ್ತು ಲಾಕ್‌ಡೌನ್ ಹಿನ್ನೆಲೆಯಲ್ಲಿ ದಿಢೀರನೆ ಪ್ರಚಾರ ಪಡೆದುಕೊಂಡು ವಿಶ್ವದಾದ್ಯಂತ 1 ಕೋಟಿ ಬಳಕೆದಾರರನ್ನು ಗಳಿಸಿಕೊಂಡಿತ್ತು.

ಬಳಕೆದಾರರು ತಮ್ಮದೇ ಆದ ಗುಂಪನ್ನು ಕಟ್ಟಿಕೊಂಡು ಆಸಕ್ತಿಯ ವಿಷಯ ಕುರಿತು ಚರ್ಚಿಸಬಹುದು, ಸಂವಾದ ನಡೆಸಬಹುದು. ಅನಿರ್ಬಂಧಿತವಾದ ಖಾಸಗಿ ಹರಟೆಗೂ ಅವಕಾಶವಿದೆ. ಮುಕ್ತವಾಗಿ ಆಸಕ್ತರೆಲ್ಲರನ್ನೂ ಒಳಗೊಳ್ಳುವುದಕ್ಕೂ ಅವಕಾಶವನ್ನು ಕ್ಲಬ್‌ಹೌಸ್ ನೀಡಿದೆ.

ಜನಪ್ರಿಯವಾಗಿದ್ದೇಕೆ?

ಸೋಷಿಯಲ್ ಮೀಡಿಯಾ ಅಂದರೆ ಅಲ್ಲಿ ಸೆಲ್ಫಿಗಳು, ಫೋಟೊಗಳು, ವಿಡಿಯೋಗಳು, ಉದ್ದುದ್ದ ಬರಹಗಳು.. ಅವುಗಳಿಗೆ ಬರುವ ಲೈಕ್, ಕಮೆಂಟ್‌ಗಳು, ಶೇರ್‌ಗಳು…

ಮನಸ್ಸಿನ ಮೇಲೆ ತೀವ್ರ ಪರಿಣಾಮ ಉಂಟುಮಾಡುವ ಈ ಹಲವು ಸೋಷಿಯಲ್ ಮೀಡಿಯಾ ಚಟುವಟಿಕೆಗಳಿಂದ ರೋಸಿದ ಕಾರಣಕ್ಕೊ ಏನೋ, ಕೇವಲ ಧ್ವನಿಯನ್ನಷ್ಟೇ ಆಧರಿಸಿದ ಕ್ಲಬ್‌ಹೌಸ್ ಜನಪ್ರಿಯವಾಗುತ್ತಿದೆ.

ಎಷ್ಟರಮಟ್ಟಿಗೆ ಎಂದರೆ ಇಲ್ಲಿ ತರುಣ-ತರುಣಿಯರಿದ್ದಾರೆ, ಮಹಿಳೆಯರಿದ್ದಾರೆ, ಉದ್ಯಮಿಗಳು, ಪತ್ರಕರ್ತರು, ಹೊಸ ಹಾಗೂ ಹಳೆಯ ತಲೆಮಾರಿನ ರಾಜಕಾರಣಿಗಳೂ ತೊಡಗಿಸಿಕೊಂಡಿದ್ದಾರೆ. ತರಹೇವಾರಿ ವಿಷಯಗಳ ಕುರಿತು ಸೀಮಿತ ಅವಧಿಯ ಚರ್ಚೆಗಳು ನಡೆಯುತ್ತವೆ. ಅಲ್ಲಿಗೆ ಒಂದು ಸಭೆ ಮುಗಿದುಹೋಗುತ್ತದೆ.

ಯಾರು ಬೇಕಾದರೂ ಇಂತಹ ಚರ್ಚೆಗಳನ್ನು ನಡೆಸಬಹುದು, ಯಾರೂ ಬೇಕಾದರೂ ಪಾಲ್ಗೊಳ್ಳಬಹುದು. ವಿವಿಧ ಹಿನ್ನೆಲೆಯ ಅನುಭವವುಳ್ಳವರೊಂದಿಗೆ ನೇರ ಸಂವಾದ ಚರ್ಚೆಗಳು ಸಾಧ್ಯವಾಗುವುದರಿಂದ
ವಸ್ತು-ವಿಷಯಗಳ ವಿವಿಧ ಆಯಾಮಗಳ ದೃಷ್ಟಿಕೋನವನ್ನು ಪಡೆಯುವುದಕ್ಕೂ ಕ್ಲಬ್‌ಹೌಸ್ ಅವಕಾಶ ಕೊಡುತ್ತದೆ ಎಂಬುದು ಬಳಕೆದಾರರ ಅಭಿಪ್ರಾಯ.

ಕೆಲವೇ ತಿಂಗಳ ಹಿಂದೆ ಭಾರತದಲ್ಲಿ ಚಾಲ್ತಿಗೆ ಬಂದ ಕ್ಲಬ್‌ಹೌಸ್‌ ಸ್ಮಾರ್ಟ್‌‌ಫೋನ್‌ ಬಳಕೆಗೂ ಲಭ್ಯವಾಗಿ ಅಪಾರ ಜನಮೆಚ್ಚುಗೆ ಗಳಿಸಿದೆ. ತಾಂತ್ರಿಕ ದೋಷದಿಂದಾಗಿ ಅಡಚಣೆಯಾಗಿರುವುದು ಕ್ಲಬ್‌ಹೌಸ್‌ ಪ್ರಿಯರಿಗೆ ಬೇಸರ ತಂದಿದೆ.


ಇದನ್ನೂ ಓದಿರಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...