Homeಮುಖಪುಟಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

ಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

- Advertisement -
- Advertisement -

‘ಮಾತಿನ ಮಂಟಪ’ ಎಂದೇ ಖ್ಯಾತವಾಗಿರುವ ‘ಕ್ಲಬ್‌ ಹೌಸ್‌’ ಸರ್ವರ್‌ ಡೌನ್ ಆಗಿದ್ದು, ಅನೇಕ ಬಳಕೆದಾರರು ವರದಿ ಮಾಡಿದ್ದಾರೆ. ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಜರ್ಮನಿ, ಇಂಡಿಯಾ, ಈಜಿಪ್ಟ್‌, ಅಮೆರಿಕದ ಹಲವು ನಗರಗಳಲ್ಲಿ ಸರ್ವರ್‌‌ ಡೌನ್‌ ಆಗಿದ್ದು, ಮಾತಿನ ಮಂಟಪದಲ್ಲಿ ಚರ್ಚೆಗಳನ್ನು ನಡೆಸುತ್ತಿದ್ದವರಿಗೆ ಚಡಪಡಿಕೆ ಆರಂಭವಾಗಿದೆ.

ಈ ಕುರಿತು ‘ಕ್ಲಬ್‌ ಹೌಸ್‌’ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಸರ್ವರ್‌ ಡೌನ್‌ ಆಗಿರುವ ಕುರಿತು ಟ್ವೀಟ್ ಮಾಡಲಾಗಿದೆ. ‘ಸಮಸ್ಯೆಯನ್ನು ಬಗೆಹರಿಸಲಾಗುವುದು’ ಕ್ಲಬ್‌ಹೌಸ್‌ ಸಂಸ್ಥೆ ಹೇಳಿದೆ.

ಅಮೆಜಾನ್‌, ಟ್ವಿಟ್ಟರ್‌, ಫೇಸ್‌ಬುಕ್‌ ಮೊದಲಾದ ಟೆಕ್‌ ಸಂಸ್ಥೆಗಳನ್ನು ಕ್ಲಬ್‌ಹೌಸ್‌ ನಿದ್ದೆಗೆಡಿಸಿತ್ತು. ಮಾತಿನ ಮಾದರಿಯ ಅಪ್ಲಿಕೇಷನ್‌ಗಳು ಅಭಿವೃದ್ಧಿಪಡಿಸಲು ಇತರ ಸಂಸ್ಥೆಗಳು ಹೆಜ್ಜೆ ಇರಿಸಿದ್ದವು ಎನ್ನಲಾಗಿದೆ.

ಇತ್ತೀಚೆಗೆ ಫೇಸ್‌ಬುಕ್‌ ಸಂಸ್ಥೆಯ ಫೇಸ್‌ಬುಕ್‌, ಮೆಸೇಂಜರ್‌‌, ಇನ್‌ಸ್ಟಾಗ್ರಾಮ್‌ ಅಪ್ಲಿಕೇಷನ್‌ಗಳು ಸರ್ವರ್‌ ಡೌನ್‌ ಆಗಿ, ಬಳಕೆದಾರರು ಚಡಪಡಿಸಿದ್ದರು. ಸುಮಾರು ಆರು ಗಂಟೆಗಳ ಬಳಿಕ ಈ ಅಪ್ಲಿಕೇಷನ್‌ಗಳು ಮರಳಿ ಸೇವೆ ಆರಂಭಿಸಿದ್ದವು. ಈಗ ಕ್ಲಬ್‌ಹೌಸ್‌ ಡೌನ್‌ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ರೂಪದಲ್ಲಿ ಕಾಣಿಸಿಕೊಂಡ ಕ್ಲಬ್‌ಹೌಸ್‌, ಮಾತುಗಾರರಿಗೆ ಹೊಸ ಅನುಭವವನ್ನು ನೀಡಿದೆ. ಅಷ್ಟೇ ಪ್ರಮಾಣದಲ್ಲಿ ಕೇಳುಗ ವರ್ಗವನ್ನು ಸೃಷ್ಟಿ ಮಾಡಿದೆ. ನಿತ್ಯವು ಒಂದಲ್ಲ ಒಂದು ಕಾರ್ಯಕ್ರಮವನ್ನು ನಡೆಸುತ್ತಾ ಸಕ್ರಿಯವಾಗಿರುವ ಗ್ರೂಪ್‌ಗಳಿವೆ. ರಾಜಕಾರಣಿಗಳು ನೇರವಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಲೂ ಕ್ಲಬ್‌ಹೌಸ್‌ ವೇದಿಕೆಯಾಗಿ ಗಮನ ಸೆಳೆದಿದೆ. ಕ್ಲಬ್‌ಹೌಸ್‌ ಒಂದು ರೀತಿ ಅಡಿಕ್ಷನ್‌ ಎಂದವರೂ ಇದ್ದಾರೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಏನಿದು ಕ್ಲಬ್‌ಹೌಸ್?

ಇದೊಂದು ಆಡಿಯೋ ಆಧರಿತ ಸೋಷಿಯಲ್ ಮೀಡಿಯಾ ಆಪ್. ಇಲ್ಲಿ ವಿಡಿಯೋಗಳಿಲ್ಲ. ಸಾಲು ಸಾಲು ಬರಹಗಳಿಲ್ಲ. ಇಲ್ಲಿರುವುದು ಬರೀ ಮಾತು. ಇದೊಂದು ರೀತಿಯ ಪಾಡ್‌ಕಾಸ್ಟ್‌ನ ಲೈವ್ ಆವೃತ್ತಿ ಎನ್ನಬಹುದು. ಸಮಾನ ಆಸಕ್ತಿಯ ವಿಷಯಗಳ ಬಗ್ಗೆ ಒಂದೆಡೆ ಸೇರಿ ಹೇಗೆ ಹರಟೆ ಹೊಡೆಯುತ್ತೇವೊ, ಅದೇ ಅನೌಪಚಾರಿಕತೆಯೊಂದಿಗೆ ಹರಟೆ ಹೊಡೆಯುವುದಕ್ಕೆ ಕ್ಲಬ್‌ಹೌಸ್ ವೇದಿಕೆ ಕಲ್ಪಿಸಿದೆ. ಹೀಗಾಗಿ ಕೋಟ್ಯಂತರ ಜನರನ್ನು ಆಕರ್ಷಿಸಿದೆ.

ಭಾರತೀಯ ಹಿನ್ನೆಲೆಯ ಅಮೆರಿಕನ್ ರೋಹನ್ ಸೇತ್ ಮತ್ತು ಪಾಲ್ ಡೇವಿಸನ್ ಅಭಿವೃದ್ಧಿಪಡಿಸಿದ ಕ್ಲಬ್‌ಹೌಸ್ ಕೋವಿಡ್ ಮತ್ತು ಲಾಕ್‌ಡೌನ್ ಹಿನ್ನೆಲೆಯಲ್ಲಿ ದಿಢೀರನೆ ಪ್ರಚಾರ ಪಡೆದುಕೊಂಡು ವಿಶ್ವದಾದ್ಯಂತ 1 ಕೋಟಿ ಬಳಕೆದಾರರನ್ನು ಗಳಿಸಿಕೊಂಡಿತ್ತು.

ಬಳಕೆದಾರರು ತಮ್ಮದೇ ಆದ ಗುಂಪನ್ನು ಕಟ್ಟಿಕೊಂಡು ಆಸಕ್ತಿಯ ವಿಷಯ ಕುರಿತು ಚರ್ಚಿಸಬಹುದು, ಸಂವಾದ ನಡೆಸಬಹುದು. ಅನಿರ್ಬಂಧಿತವಾದ ಖಾಸಗಿ ಹರಟೆಗೂ ಅವಕಾಶವಿದೆ. ಮುಕ್ತವಾಗಿ ಆಸಕ್ತರೆಲ್ಲರನ್ನೂ ಒಳಗೊಳ್ಳುವುದಕ್ಕೂ ಅವಕಾಶವನ್ನು ಕ್ಲಬ್‌ಹೌಸ್ ನೀಡಿದೆ.

ಜನಪ್ರಿಯವಾಗಿದ್ದೇಕೆ?

ಸೋಷಿಯಲ್ ಮೀಡಿಯಾ ಅಂದರೆ ಅಲ್ಲಿ ಸೆಲ್ಫಿಗಳು, ಫೋಟೊಗಳು, ವಿಡಿಯೋಗಳು, ಉದ್ದುದ್ದ ಬರಹಗಳು.. ಅವುಗಳಿಗೆ ಬರುವ ಲೈಕ್, ಕಮೆಂಟ್‌ಗಳು, ಶೇರ್‌ಗಳು…

ಮನಸ್ಸಿನ ಮೇಲೆ ತೀವ್ರ ಪರಿಣಾಮ ಉಂಟುಮಾಡುವ ಈ ಹಲವು ಸೋಷಿಯಲ್ ಮೀಡಿಯಾ ಚಟುವಟಿಕೆಗಳಿಂದ ರೋಸಿದ ಕಾರಣಕ್ಕೊ ಏನೋ, ಕೇವಲ ಧ್ವನಿಯನ್ನಷ್ಟೇ ಆಧರಿಸಿದ ಕ್ಲಬ್‌ಹೌಸ್ ಜನಪ್ರಿಯವಾಗುತ್ತಿದೆ.

ಎಷ್ಟರಮಟ್ಟಿಗೆ ಎಂದರೆ ಇಲ್ಲಿ ತರುಣ-ತರುಣಿಯರಿದ್ದಾರೆ, ಮಹಿಳೆಯರಿದ್ದಾರೆ, ಉದ್ಯಮಿಗಳು, ಪತ್ರಕರ್ತರು, ಹೊಸ ಹಾಗೂ ಹಳೆಯ ತಲೆಮಾರಿನ ರಾಜಕಾರಣಿಗಳೂ ತೊಡಗಿಸಿಕೊಂಡಿದ್ದಾರೆ. ತರಹೇವಾರಿ ವಿಷಯಗಳ ಕುರಿತು ಸೀಮಿತ ಅವಧಿಯ ಚರ್ಚೆಗಳು ನಡೆಯುತ್ತವೆ. ಅಲ್ಲಿಗೆ ಒಂದು ಸಭೆ ಮುಗಿದುಹೋಗುತ್ತದೆ.

ಯಾರು ಬೇಕಾದರೂ ಇಂತಹ ಚರ್ಚೆಗಳನ್ನು ನಡೆಸಬಹುದು, ಯಾರೂ ಬೇಕಾದರೂ ಪಾಲ್ಗೊಳ್ಳಬಹುದು. ವಿವಿಧ ಹಿನ್ನೆಲೆಯ ಅನುಭವವುಳ್ಳವರೊಂದಿಗೆ ನೇರ ಸಂವಾದ ಚರ್ಚೆಗಳು ಸಾಧ್ಯವಾಗುವುದರಿಂದ
ವಸ್ತು-ವಿಷಯಗಳ ವಿವಿಧ ಆಯಾಮಗಳ ದೃಷ್ಟಿಕೋನವನ್ನು ಪಡೆಯುವುದಕ್ಕೂ ಕ್ಲಬ್‌ಹೌಸ್ ಅವಕಾಶ ಕೊಡುತ್ತದೆ ಎಂಬುದು ಬಳಕೆದಾರರ ಅಭಿಪ್ರಾಯ.

ಕೆಲವೇ ತಿಂಗಳ ಹಿಂದೆ ಭಾರತದಲ್ಲಿ ಚಾಲ್ತಿಗೆ ಬಂದ ಕ್ಲಬ್‌ಹೌಸ್‌ ಸ್ಮಾರ್ಟ್‌‌ಫೋನ್‌ ಬಳಕೆಗೂ ಲಭ್ಯವಾಗಿ ಅಪಾರ ಜನಮೆಚ್ಚುಗೆ ಗಳಿಸಿದೆ. ತಾಂತ್ರಿಕ ದೋಷದಿಂದಾಗಿ ಅಡಚಣೆಯಾಗಿರುವುದು ಕ್ಲಬ್‌ಹೌಸ್‌ ಪ್ರಿಯರಿಗೆ ಬೇಸರ ತಂದಿದೆ.


ಇದನ್ನೂ ಓದಿರಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...