Homeಮುಖಪುಟಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

ಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

- Advertisement -
- Advertisement -

‘ಮಾತಿನ ಮಂಟಪ’ ಎಂದೇ ಖ್ಯಾತವಾಗಿರುವ ‘ಕ್ಲಬ್‌ ಹೌಸ್‌’ ಸರ್ವರ್‌ ಡೌನ್ ಆಗಿದ್ದು, ಅನೇಕ ಬಳಕೆದಾರರು ವರದಿ ಮಾಡಿದ್ದಾರೆ. ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಜರ್ಮನಿ, ಇಂಡಿಯಾ, ಈಜಿಪ್ಟ್‌, ಅಮೆರಿಕದ ಹಲವು ನಗರಗಳಲ್ಲಿ ಸರ್ವರ್‌‌ ಡೌನ್‌ ಆಗಿದ್ದು, ಮಾತಿನ ಮಂಟಪದಲ್ಲಿ ಚರ್ಚೆಗಳನ್ನು ನಡೆಸುತ್ತಿದ್ದವರಿಗೆ ಚಡಪಡಿಕೆ ಆರಂಭವಾಗಿದೆ.

ಈ ಕುರಿತು ‘ಕ್ಲಬ್‌ ಹೌಸ್‌’ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಸರ್ವರ್‌ ಡೌನ್‌ ಆಗಿರುವ ಕುರಿತು ಟ್ವೀಟ್ ಮಾಡಲಾಗಿದೆ. ‘ಸಮಸ್ಯೆಯನ್ನು ಬಗೆಹರಿಸಲಾಗುವುದು’ ಕ್ಲಬ್‌ಹೌಸ್‌ ಸಂಸ್ಥೆ ಹೇಳಿದೆ.

ಅಮೆಜಾನ್‌, ಟ್ವಿಟ್ಟರ್‌, ಫೇಸ್‌ಬುಕ್‌ ಮೊದಲಾದ ಟೆಕ್‌ ಸಂಸ್ಥೆಗಳನ್ನು ಕ್ಲಬ್‌ಹೌಸ್‌ ನಿದ್ದೆಗೆಡಿಸಿತ್ತು. ಮಾತಿನ ಮಾದರಿಯ ಅಪ್ಲಿಕೇಷನ್‌ಗಳು ಅಭಿವೃದ್ಧಿಪಡಿಸಲು ಇತರ ಸಂಸ್ಥೆಗಳು ಹೆಜ್ಜೆ ಇರಿಸಿದ್ದವು ಎನ್ನಲಾಗಿದೆ.

ಇತ್ತೀಚೆಗೆ ಫೇಸ್‌ಬುಕ್‌ ಸಂಸ್ಥೆಯ ಫೇಸ್‌ಬುಕ್‌, ಮೆಸೇಂಜರ್‌‌, ಇನ್‌ಸ್ಟಾಗ್ರಾಮ್‌ ಅಪ್ಲಿಕೇಷನ್‌ಗಳು ಸರ್ವರ್‌ ಡೌನ್‌ ಆಗಿ, ಬಳಕೆದಾರರು ಚಡಪಡಿಸಿದ್ದರು. ಸುಮಾರು ಆರು ಗಂಟೆಗಳ ಬಳಿಕ ಈ ಅಪ್ಲಿಕೇಷನ್‌ಗಳು ಮರಳಿ ಸೇವೆ ಆರಂಭಿಸಿದ್ದವು. ಈಗ ಕ್ಲಬ್‌ಹೌಸ್‌ ಡೌನ್‌ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ರೂಪದಲ್ಲಿ ಕಾಣಿಸಿಕೊಂಡ ಕ್ಲಬ್‌ಹೌಸ್‌, ಮಾತುಗಾರರಿಗೆ ಹೊಸ ಅನುಭವವನ್ನು ನೀಡಿದೆ. ಅಷ್ಟೇ ಪ್ರಮಾಣದಲ್ಲಿ ಕೇಳುಗ ವರ್ಗವನ್ನು ಸೃಷ್ಟಿ ಮಾಡಿದೆ. ನಿತ್ಯವು ಒಂದಲ್ಲ ಒಂದು ಕಾರ್ಯಕ್ರಮವನ್ನು ನಡೆಸುತ್ತಾ ಸಕ್ರಿಯವಾಗಿರುವ ಗ್ರೂಪ್‌ಗಳಿವೆ. ರಾಜಕಾರಣಿಗಳು ನೇರವಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಲೂ ಕ್ಲಬ್‌ಹೌಸ್‌ ವೇದಿಕೆಯಾಗಿ ಗಮನ ಸೆಳೆದಿದೆ. ಕ್ಲಬ್‌ಹೌಸ್‌ ಒಂದು ರೀತಿ ಅಡಿಕ್ಷನ್‌ ಎಂದವರೂ ಇದ್ದಾರೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಏನಿದು ಕ್ಲಬ್‌ಹೌಸ್?

ಇದೊಂದು ಆಡಿಯೋ ಆಧರಿತ ಸೋಷಿಯಲ್ ಮೀಡಿಯಾ ಆಪ್. ಇಲ್ಲಿ ವಿಡಿಯೋಗಳಿಲ್ಲ. ಸಾಲು ಸಾಲು ಬರಹಗಳಿಲ್ಲ. ಇಲ್ಲಿರುವುದು ಬರೀ ಮಾತು. ಇದೊಂದು ರೀತಿಯ ಪಾಡ್‌ಕಾಸ್ಟ್‌ನ ಲೈವ್ ಆವೃತ್ತಿ ಎನ್ನಬಹುದು. ಸಮಾನ ಆಸಕ್ತಿಯ ವಿಷಯಗಳ ಬಗ್ಗೆ ಒಂದೆಡೆ ಸೇರಿ ಹೇಗೆ ಹರಟೆ ಹೊಡೆಯುತ್ತೇವೊ, ಅದೇ ಅನೌಪಚಾರಿಕತೆಯೊಂದಿಗೆ ಹರಟೆ ಹೊಡೆಯುವುದಕ್ಕೆ ಕ್ಲಬ್‌ಹೌಸ್ ವೇದಿಕೆ ಕಲ್ಪಿಸಿದೆ. ಹೀಗಾಗಿ ಕೋಟ್ಯಂತರ ಜನರನ್ನು ಆಕರ್ಷಿಸಿದೆ.

ಭಾರತೀಯ ಹಿನ್ನೆಲೆಯ ಅಮೆರಿಕನ್ ರೋಹನ್ ಸೇತ್ ಮತ್ತು ಪಾಲ್ ಡೇವಿಸನ್ ಅಭಿವೃದ್ಧಿಪಡಿಸಿದ ಕ್ಲಬ್‌ಹೌಸ್ ಕೋವಿಡ್ ಮತ್ತು ಲಾಕ್‌ಡೌನ್ ಹಿನ್ನೆಲೆಯಲ್ಲಿ ದಿಢೀರನೆ ಪ್ರಚಾರ ಪಡೆದುಕೊಂಡು ವಿಶ್ವದಾದ್ಯಂತ 1 ಕೋಟಿ ಬಳಕೆದಾರರನ್ನು ಗಳಿಸಿಕೊಂಡಿತ್ತು.

ಬಳಕೆದಾರರು ತಮ್ಮದೇ ಆದ ಗುಂಪನ್ನು ಕಟ್ಟಿಕೊಂಡು ಆಸಕ್ತಿಯ ವಿಷಯ ಕುರಿತು ಚರ್ಚಿಸಬಹುದು, ಸಂವಾದ ನಡೆಸಬಹುದು. ಅನಿರ್ಬಂಧಿತವಾದ ಖಾಸಗಿ ಹರಟೆಗೂ ಅವಕಾಶವಿದೆ. ಮುಕ್ತವಾಗಿ ಆಸಕ್ತರೆಲ್ಲರನ್ನೂ ಒಳಗೊಳ್ಳುವುದಕ್ಕೂ ಅವಕಾಶವನ್ನು ಕ್ಲಬ್‌ಹೌಸ್ ನೀಡಿದೆ.

ಜನಪ್ರಿಯವಾಗಿದ್ದೇಕೆ?

ಸೋಷಿಯಲ್ ಮೀಡಿಯಾ ಅಂದರೆ ಅಲ್ಲಿ ಸೆಲ್ಫಿಗಳು, ಫೋಟೊಗಳು, ವಿಡಿಯೋಗಳು, ಉದ್ದುದ್ದ ಬರಹಗಳು.. ಅವುಗಳಿಗೆ ಬರುವ ಲೈಕ್, ಕಮೆಂಟ್‌ಗಳು, ಶೇರ್‌ಗಳು…

ಮನಸ್ಸಿನ ಮೇಲೆ ತೀವ್ರ ಪರಿಣಾಮ ಉಂಟುಮಾಡುವ ಈ ಹಲವು ಸೋಷಿಯಲ್ ಮೀಡಿಯಾ ಚಟುವಟಿಕೆಗಳಿಂದ ರೋಸಿದ ಕಾರಣಕ್ಕೊ ಏನೋ, ಕೇವಲ ಧ್ವನಿಯನ್ನಷ್ಟೇ ಆಧರಿಸಿದ ಕ್ಲಬ್‌ಹೌಸ್ ಜನಪ್ರಿಯವಾಗುತ್ತಿದೆ.

ಎಷ್ಟರಮಟ್ಟಿಗೆ ಎಂದರೆ ಇಲ್ಲಿ ತರುಣ-ತರುಣಿಯರಿದ್ದಾರೆ, ಮಹಿಳೆಯರಿದ್ದಾರೆ, ಉದ್ಯಮಿಗಳು, ಪತ್ರಕರ್ತರು, ಹೊಸ ಹಾಗೂ ಹಳೆಯ ತಲೆಮಾರಿನ ರಾಜಕಾರಣಿಗಳೂ ತೊಡಗಿಸಿಕೊಂಡಿದ್ದಾರೆ. ತರಹೇವಾರಿ ವಿಷಯಗಳ ಕುರಿತು ಸೀಮಿತ ಅವಧಿಯ ಚರ್ಚೆಗಳು ನಡೆಯುತ್ತವೆ. ಅಲ್ಲಿಗೆ ಒಂದು ಸಭೆ ಮುಗಿದುಹೋಗುತ್ತದೆ.

ಯಾರು ಬೇಕಾದರೂ ಇಂತಹ ಚರ್ಚೆಗಳನ್ನು ನಡೆಸಬಹುದು, ಯಾರೂ ಬೇಕಾದರೂ ಪಾಲ್ಗೊಳ್ಳಬಹುದು. ವಿವಿಧ ಹಿನ್ನೆಲೆಯ ಅನುಭವವುಳ್ಳವರೊಂದಿಗೆ ನೇರ ಸಂವಾದ ಚರ್ಚೆಗಳು ಸಾಧ್ಯವಾಗುವುದರಿಂದ
ವಸ್ತು-ವಿಷಯಗಳ ವಿವಿಧ ಆಯಾಮಗಳ ದೃಷ್ಟಿಕೋನವನ್ನು ಪಡೆಯುವುದಕ್ಕೂ ಕ್ಲಬ್‌ಹೌಸ್ ಅವಕಾಶ ಕೊಡುತ್ತದೆ ಎಂಬುದು ಬಳಕೆದಾರರ ಅಭಿಪ್ರಾಯ.

ಕೆಲವೇ ತಿಂಗಳ ಹಿಂದೆ ಭಾರತದಲ್ಲಿ ಚಾಲ್ತಿಗೆ ಬಂದ ಕ್ಲಬ್‌ಹೌಸ್‌ ಸ್ಮಾರ್ಟ್‌‌ಫೋನ್‌ ಬಳಕೆಗೂ ಲಭ್ಯವಾಗಿ ಅಪಾರ ಜನಮೆಚ್ಚುಗೆ ಗಳಿಸಿದೆ. ತಾಂತ್ರಿಕ ದೋಷದಿಂದಾಗಿ ಅಡಚಣೆಯಾಗಿರುವುದು ಕ್ಲಬ್‌ಹೌಸ್‌ ಪ್ರಿಯರಿಗೆ ಬೇಸರ ತಂದಿದೆ.


ಇದನ್ನೂ ಓದಿರಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...