Homeಮುಖಪುಟಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

ಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

- Advertisement -
- Advertisement -

‘ಮಾತಿನ ಮಂಟಪ’ ಎಂದೇ ಖ್ಯಾತವಾಗಿರುವ ‘ಕ್ಲಬ್‌ ಹೌಸ್‌’ ಸರ್ವರ್‌ ಡೌನ್ ಆಗಿದ್ದು, ಅನೇಕ ಬಳಕೆದಾರರು ವರದಿ ಮಾಡಿದ್ದಾರೆ. ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಜರ್ಮನಿ, ಇಂಡಿಯಾ, ಈಜಿಪ್ಟ್‌, ಅಮೆರಿಕದ ಹಲವು ನಗರಗಳಲ್ಲಿ ಸರ್ವರ್‌‌ ಡೌನ್‌ ಆಗಿದ್ದು, ಮಾತಿನ ಮಂಟಪದಲ್ಲಿ ಚರ್ಚೆಗಳನ್ನು ನಡೆಸುತ್ತಿದ್ದವರಿಗೆ ಚಡಪಡಿಕೆ ಆರಂಭವಾಗಿದೆ.

ಈ ಕುರಿತು ‘ಕ್ಲಬ್‌ ಹೌಸ್‌’ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಸರ್ವರ್‌ ಡೌನ್‌ ಆಗಿರುವ ಕುರಿತು ಟ್ವೀಟ್ ಮಾಡಲಾಗಿದೆ. ‘ಸಮಸ್ಯೆಯನ್ನು ಬಗೆಹರಿಸಲಾಗುವುದು’ ಕ್ಲಬ್‌ಹೌಸ್‌ ಸಂಸ್ಥೆ ಹೇಳಿದೆ.

ಅಮೆಜಾನ್‌, ಟ್ವಿಟ್ಟರ್‌, ಫೇಸ್‌ಬುಕ್‌ ಮೊದಲಾದ ಟೆಕ್‌ ಸಂಸ್ಥೆಗಳನ್ನು ಕ್ಲಬ್‌ಹೌಸ್‌ ನಿದ್ದೆಗೆಡಿಸಿತ್ತು. ಮಾತಿನ ಮಾದರಿಯ ಅಪ್ಲಿಕೇಷನ್‌ಗಳು ಅಭಿವೃದ್ಧಿಪಡಿಸಲು ಇತರ ಸಂಸ್ಥೆಗಳು ಹೆಜ್ಜೆ ಇರಿಸಿದ್ದವು ಎನ್ನಲಾಗಿದೆ.

ಇತ್ತೀಚೆಗೆ ಫೇಸ್‌ಬುಕ್‌ ಸಂಸ್ಥೆಯ ಫೇಸ್‌ಬುಕ್‌, ಮೆಸೇಂಜರ್‌‌, ಇನ್‌ಸ್ಟಾಗ್ರಾಮ್‌ ಅಪ್ಲಿಕೇಷನ್‌ಗಳು ಸರ್ವರ್‌ ಡೌನ್‌ ಆಗಿ, ಬಳಕೆದಾರರು ಚಡಪಡಿಸಿದ್ದರು. ಸುಮಾರು ಆರು ಗಂಟೆಗಳ ಬಳಿಕ ಈ ಅಪ್ಲಿಕೇಷನ್‌ಗಳು ಮರಳಿ ಸೇವೆ ಆರಂಭಿಸಿದ್ದವು. ಈಗ ಕ್ಲಬ್‌ಹೌಸ್‌ ಡೌನ್‌ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ರೂಪದಲ್ಲಿ ಕಾಣಿಸಿಕೊಂಡ ಕ್ಲಬ್‌ಹೌಸ್‌, ಮಾತುಗಾರರಿಗೆ ಹೊಸ ಅನುಭವವನ್ನು ನೀಡಿದೆ. ಅಷ್ಟೇ ಪ್ರಮಾಣದಲ್ಲಿ ಕೇಳುಗ ವರ್ಗವನ್ನು ಸೃಷ್ಟಿ ಮಾಡಿದೆ. ನಿತ್ಯವು ಒಂದಲ್ಲ ಒಂದು ಕಾರ್ಯಕ್ರಮವನ್ನು ನಡೆಸುತ್ತಾ ಸಕ್ರಿಯವಾಗಿರುವ ಗ್ರೂಪ್‌ಗಳಿವೆ. ರಾಜಕಾರಣಿಗಳು ನೇರವಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಲೂ ಕ್ಲಬ್‌ಹೌಸ್‌ ವೇದಿಕೆಯಾಗಿ ಗಮನ ಸೆಳೆದಿದೆ. ಕ್ಲಬ್‌ಹೌಸ್‌ ಒಂದು ರೀತಿ ಅಡಿಕ್ಷನ್‌ ಎಂದವರೂ ಇದ್ದಾರೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಏನಿದು ಕ್ಲಬ್‌ಹೌಸ್?

ಇದೊಂದು ಆಡಿಯೋ ಆಧರಿತ ಸೋಷಿಯಲ್ ಮೀಡಿಯಾ ಆಪ್. ಇಲ್ಲಿ ವಿಡಿಯೋಗಳಿಲ್ಲ. ಸಾಲು ಸಾಲು ಬರಹಗಳಿಲ್ಲ. ಇಲ್ಲಿರುವುದು ಬರೀ ಮಾತು. ಇದೊಂದು ರೀತಿಯ ಪಾಡ್‌ಕಾಸ್ಟ್‌ನ ಲೈವ್ ಆವೃತ್ತಿ ಎನ್ನಬಹುದು. ಸಮಾನ ಆಸಕ್ತಿಯ ವಿಷಯಗಳ ಬಗ್ಗೆ ಒಂದೆಡೆ ಸೇರಿ ಹೇಗೆ ಹರಟೆ ಹೊಡೆಯುತ್ತೇವೊ, ಅದೇ ಅನೌಪಚಾರಿಕತೆಯೊಂದಿಗೆ ಹರಟೆ ಹೊಡೆಯುವುದಕ್ಕೆ ಕ್ಲಬ್‌ಹೌಸ್ ವೇದಿಕೆ ಕಲ್ಪಿಸಿದೆ. ಹೀಗಾಗಿ ಕೋಟ್ಯಂತರ ಜನರನ್ನು ಆಕರ್ಷಿಸಿದೆ.

ಭಾರತೀಯ ಹಿನ್ನೆಲೆಯ ಅಮೆರಿಕನ್ ರೋಹನ್ ಸೇತ್ ಮತ್ತು ಪಾಲ್ ಡೇವಿಸನ್ ಅಭಿವೃದ್ಧಿಪಡಿಸಿದ ಕ್ಲಬ್‌ಹೌಸ್ ಕೋವಿಡ್ ಮತ್ತು ಲಾಕ್‌ಡೌನ್ ಹಿನ್ನೆಲೆಯಲ್ಲಿ ದಿಢೀರನೆ ಪ್ರಚಾರ ಪಡೆದುಕೊಂಡು ವಿಶ್ವದಾದ್ಯಂತ 1 ಕೋಟಿ ಬಳಕೆದಾರರನ್ನು ಗಳಿಸಿಕೊಂಡಿತ್ತು.

ಬಳಕೆದಾರರು ತಮ್ಮದೇ ಆದ ಗುಂಪನ್ನು ಕಟ್ಟಿಕೊಂಡು ಆಸಕ್ತಿಯ ವಿಷಯ ಕುರಿತು ಚರ್ಚಿಸಬಹುದು, ಸಂವಾದ ನಡೆಸಬಹುದು. ಅನಿರ್ಬಂಧಿತವಾದ ಖಾಸಗಿ ಹರಟೆಗೂ ಅವಕಾಶವಿದೆ. ಮುಕ್ತವಾಗಿ ಆಸಕ್ತರೆಲ್ಲರನ್ನೂ ಒಳಗೊಳ್ಳುವುದಕ್ಕೂ ಅವಕಾಶವನ್ನು ಕ್ಲಬ್‌ಹೌಸ್ ನೀಡಿದೆ.

ಜನಪ್ರಿಯವಾಗಿದ್ದೇಕೆ?

ಸೋಷಿಯಲ್ ಮೀಡಿಯಾ ಅಂದರೆ ಅಲ್ಲಿ ಸೆಲ್ಫಿಗಳು, ಫೋಟೊಗಳು, ವಿಡಿಯೋಗಳು, ಉದ್ದುದ್ದ ಬರಹಗಳು.. ಅವುಗಳಿಗೆ ಬರುವ ಲೈಕ್, ಕಮೆಂಟ್‌ಗಳು, ಶೇರ್‌ಗಳು…

ಮನಸ್ಸಿನ ಮೇಲೆ ತೀವ್ರ ಪರಿಣಾಮ ಉಂಟುಮಾಡುವ ಈ ಹಲವು ಸೋಷಿಯಲ್ ಮೀಡಿಯಾ ಚಟುವಟಿಕೆಗಳಿಂದ ರೋಸಿದ ಕಾರಣಕ್ಕೊ ಏನೋ, ಕೇವಲ ಧ್ವನಿಯನ್ನಷ್ಟೇ ಆಧರಿಸಿದ ಕ್ಲಬ್‌ಹೌಸ್ ಜನಪ್ರಿಯವಾಗುತ್ತಿದೆ.

ಎಷ್ಟರಮಟ್ಟಿಗೆ ಎಂದರೆ ಇಲ್ಲಿ ತರುಣ-ತರುಣಿಯರಿದ್ದಾರೆ, ಮಹಿಳೆಯರಿದ್ದಾರೆ, ಉದ್ಯಮಿಗಳು, ಪತ್ರಕರ್ತರು, ಹೊಸ ಹಾಗೂ ಹಳೆಯ ತಲೆಮಾರಿನ ರಾಜಕಾರಣಿಗಳೂ ತೊಡಗಿಸಿಕೊಂಡಿದ್ದಾರೆ. ತರಹೇವಾರಿ ವಿಷಯಗಳ ಕುರಿತು ಸೀಮಿತ ಅವಧಿಯ ಚರ್ಚೆಗಳು ನಡೆಯುತ್ತವೆ. ಅಲ್ಲಿಗೆ ಒಂದು ಸಭೆ ಮುಗಿದುಹೋಗುತ್ತದೆ.

ಯಾರು ಬೇಕಾದರೂ ಇಂತಹ ಚರ್ಚೆಗಳನ್ನು ನಡೆಸಬಹುದು, ಯಾರೂ ಬೇಕಾದರೂ ಪಾಲ್ಗೊಳ್ಳಬಹುದು. ವಿವಿಧ ಹಿನ್ನೆಲೆಯ ಅನುಭವವುಳ್ಳವರೊಂದಿಗೆ ನೇರ ಸಂವಾದ ಚರ್ಚೆಗಳು ಸಾಧ್ಯವಾಗುವುದರಿಂದ
ವಸ್ತು-ವಿಷಯಗಳ ವಿವಿಧ ಆಯಾಮಗಳ ದೃಷ್ಟಿಕೋನವನ್ನು ಪಡೆಯುವುದಕ್ಕೂ ಕ್ಲಬ್‌ಹೌಸ್ ಅವಕಾಶ ಕೊಡುತ್ತದೆ ಎಂಬುದು ಬಳಕೆದಾರರ ಅಭಿಪ್ರಾಯ.

ಕೆಲವೇ ತಿಂಗಳ ಹಿಂದೆ ಭಾರತದಲ್ಲಿ ಚಾಲ್ತಿಗೆ ಬಂದ ಕ್ಲಬ್‌ಹೌಸ್‌ ಸ್ಮಾರ್ಟ್‌‌ಫೋನ್‌ ಬಳಕೆಗೂ ಲಭ್ಯವಾಗಿ ಅಪಾರ ಜನಮೆಚ್ಚುಗೆ ಗಳಿಸಿದೆ. ತಾಂತ್ರಿಕ ದೋಷದಿಂದಾಗಿ ಅಡಚಣೆಯಾಗಿರುವುದು ಕ್ಲಬ್‌ಹೌಸ್‌ ಪ್ರಿಯರಿಗೆ ಬೇಸರ ತಂದಿದೆ.


ಇದನ್ನೂ ಓದಿರಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...