Homeಮುಖಪುಟಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

ಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

- Advertisement -
- Advertisement -

‘ಮಾತಿನ ಮಂಟಪ’ ಎಂದೇ ಖ್ಯಾತವಾಗಿರುವ ‘ಕ್ಲಬ್‌ ಹೌಸ್‌’ ಸರ್ವರ್‌ ಡೌನ್ ಆಗಿದ್ದು, ಅನೇಕ ಬಳಕೆದಾರರು ವರದಿ ಮಾಡಿದ್ದಾರೆ. ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಜರ್ಮನಿ, ಇಂಡಿಯಾ, ಈಜಿಪ್ಟ್‌, ಅಮೆರಿಕದ ಹಲವು ನಗರಗಳಲ್ಲಿ ಸರ್ವರ್‌‌ ಡೌನ್‌ ಆಗಿದ್ದು, ಮಾತಿನ ಮಂಟಪದಲ್ಲಿ ಚರ್ಚೆಗಳನ್ನು ನಡೆಸುತ್ತಿದ್ದವರಿಗೆ ಚಡಪಡಿಕೆ ಆರಂಭವಾಗಿದೆ.

ಈ ಕುರಿತು ‘ಕ್ಲಬ್‌ ಹೌಸ್‌’ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಸರ್ವರ್‌ ಡೌನ್‌ ಆಗಿರುವ ಕುರಿತು ಟ್ವೀಟ್ ಮಾಡಲಾಗಿದೆ. ‘ಸಮಸ್ಯೆಯನ್ನು ಬಗೆಹರಿಸಲಾಗುವುದು’ ಕ್ಲಬ್‌ಹೌಸ್‌ ಸಂಸ್ಥೆ ಹೇಳಿದೆ.

ಅಮೆಜಾನ್‌, ಟ್ವಿಟ್ಟರ್‌, ಫೇಸ್‌ಬುಕ್‌ ಮೊದಲಾದ ಟೆಕ್‌ ಸಂಸ್ಥೆಗಳನ್ನು ಕ್ಲಬ್‌ಹೌಸ್‌ ನಿದ್ದೆಗೆಡಿಸಿತ್ತು. ಮಾತಿನ ಮಾದರಿಯ ಅಪ್ಲಿಕೇಷನ್‌ಗಳು ಅಭಿವೃದ್ಧಿಪಡಿಸಲು ಇತರ ಸಂಸ್ಥೆಗಳು ಹೆಜ್ಜೆ ಇರಿಸಿದ್ದವು ಎನ್ನಲಾಗಿದೆ.

ಇತ್ತೀಚೆಗೆ ಫೇಸ್‌ಬುಕ್‌ ಸಂಸ್ಥೆಯ ಫೇಸ್‌ಬುಕ್‌, ಮೆಸೇಂಜರ್‌‌, ಇನ್‌ಸ್ಟಾಗ್ರಾಮ್‌ ಅಪ್ಲಿಕೇಷನ್‌ಗಳು ಸರ್ವರ್‌ ಡೌನ್‌ ಆಗಿ, ಬಳಕೆದಾರರು ಚಡಪಡಿಸಿದ್ದರು. ಸುಮಾರು ಆರು ಗಂಟೆಗಳ ಬಳಿಕ ಈ ಅಪ್ಲಿಕೇಷನ್‌ಗಳು ಮರಳಿ ಸೇವೆ ಆರಂಭಿಸಿದ್ದವು. ಈಗ ಕ್ಲಬ್‌ಹೌಸ್‌ ಡೌನ್‌ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ರೂಪದಲ್ಲಿ ಕಾಣಿಸಿಕೊಂಡ ಕ್ಲಬ್‌ಹೌಸ್‌, ಮಾತುಗಾರರಿಗೆ ಹೊಸ ಅನುಭವವನ್ನು ನೀಡಿದೆ. ಅಷ್ಟೇ ಪ್ರಮಾಣದಲ್ಲಿ ಕೇಳುಗ ವರ್ಗವನ್ನು ಸೃಷ್ಟಿ ಮಾಡಿದೆ. ನಿತ್ಯವು ಒಂದಲ್ಲ ಒಂದು ಕಾರ್ಯಕ್ರಮವನ್ನು ನಡೆಸುತ್ತಾ ಸಕ್ರಿಯವಾಗಿರುವ ಗ್ರೂಪ್‌ಗಳಿವೆ. ರಾಜಕಾರಣಿಗಳು ನೇರವಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಲೂ ಕ್ಲಬ್‌ಹೌಸ್‌ ವೇದಿಕೆಯಾಗಿ ಗಮನ ಸೆಳೆದಿದೆ. ಕ್ಲಬ್‌ಹೌಸ್‌ ಒಂದು ರೀತಿ ಅಡಿಕ್ಷನ್‌ ಎಂದವರೂ ಇದ್ದಾರೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಏನಿದು ಕ್ಲಬ್‌ಹೌಸ್?

ಇದೊಂದು ಆಡಿಯೋ ಆಧರಿತ ಸೋಷಿಯಲ್ ಮೀಡಿಯಾ ಆಪ್. ಇಲ್ಲಿ ವಿಡಿಯೋಗಳಿಲ್ಲ. ಸಾಲು ಸಾಲು ಬರಹಗಳಿಲ್ಲ. ಇಲ್ಲಿರುವುದು ಬರೀ ಮಾತು. ಇದೊಂದು ರೀತಿಯ ಪಾಡ್‌ಕಾಸ್ಟ್‌ನ ಲೈವ್ ಆವೃತ್ತಿ ಎನ್ನಬಹುದು. ಸಮಾನ ಆಸಕ್ತಿಯ ವಿಷಯಗಳ ಬಗ್ಗೆ ಒಂದೆಡೆ ಸೇರಿ ಹೇಗೆ ಹರಟೆ ಹೊಡೆಯುತ್ತೇವೊ, ಅದೇ ಅನೌಪಚಾರಿಕತೆಯೊಂದಿಗೆ ಹರಟೆ ಹೊಡೆಯುವುದಕ್ಕೆ ಕ್ಲಬ್‌ಹೌಸ್ ವೇದಿಕೆ ಕಲ್ಪಿಸಿದೆ. ಹೀಗಾಗಿ ಕೋಟ್ಯಂತರ ಜನರನ್ನು ಆಕರ್ಷಿಸಿದೆ.

ಭಾರತೀಯ ಹಿನ್ನೆಲೆಯ ಅಮೆರಿಕನ್ ರೋಹನ್ ಸೇತ್ ಮತ್ತು ಪಾಲ್ ಡೇವಿಸನ್ ಅಭಿವೃದ್ಧಿಪಡಿಸಿದ ಕ್ಲಬ್‌ಹೌಸ್ ಕೋವಿಡ್ ಮತ್ತು ಲಾಕ್‌ಡೌನ್ ಹಿನ್ನೆಲೆಯಲ್ಲಿ ದಿಢೀರನೆ ಪ್ರಚಾರ ಪಡೆದುಕೊಂಡು ವಿಶ್ವದಾದ್ಯಂತ 1 ಕೋಟಿ ಬಳಕೆದಾರರನ್ನು ಗಳಿಸಿಕೊಂಡಿತ್ತು.

ಬಳಕೆದಾರರು ತಮ್ಮದೇ ಆದ ಗುಂಪನ್ನು ಕಟ್ಟಿಕೊಂಡು ಆಸಕ್ತಿಯ ವಿಷಯ ಕುರಿತು ಚರ್ಚಿಸಬಹುದು, ಸಂವಾದ ನಡೆಸಬಹುದು. ಅನಿರ್ಬಂಧಿತವಾದ ಖಾಸಗಿ ಹರಟೆಗೂ ಅವಕಾಶವಿದೆ. ಮುಕ್ತವಾಗಿ ಆಸಕ್ತರೆಲ್ಲರನ್ನೂ ಒಳಗೊಳ್ಳುವುದಕ್ಕೂ ಅವಕಾಶವನ್ನು ಕ್ಲಬ್‌ಹೌಸ್ ನೀಡಿದೆ.

ಜನಪ್ರಿಯವಾಗಿದ್ದೇಕೆ?

ಸೋಷಿಯಲ್ ಮೀಡಿಯಾ ಅಂದರೆ ಅಲ್ಲಿ ಸೆಲ್ಫಿಗಳು, ಫೋಟೊಗಳು, ವಿಡಿಯೋಗಳು, ಉದ್ದುದ್ದ ಬರಹಗಳು.. ಅವುಗಳಿಗೆ ಬರುವ ಲೈಕ್, ಕಮೆಂಟ್‌ಗಳು, ಶೇರ್‌ಗಳು…

ಮನಸ್ಸಿನ ಮೇಲೆ ತೀವ್ರ ಪರಿಣಾಮ ಉಂಟುಮಾಡುವ ಈ ಹಲವು ಸೋಷಿಯಲ್ ಮೀಡಿಯಾ ಚಟುವಟಿಕೆಗಳಿಂದ ರೋಸಿದ ಕಾರಣಕ್ಕೊ ಏನೋ, ಕೇವಲ ಧ್ವನಿಯನ್ನಷ್ಟೇ ಆಧರಿಸಿದ ಕ್ಲಬ್‌ಹೌಸ್ ಜನಪ್ರಿಯವಾಗುತ್ತಿದೆ.

ಎಷ್ಟರಮಟ್ಟಿಗೆ ಎಂದರೆ ಇಲ್ಲಿ ತರುಣ-ತರುಣಿಯರಿದ್ದಾರೆ, ಮಹಿಳೆಯರಿದ್ದಾರೆ, ಉದ್ಯಮಿಗಳು, ಪತ್ರಕರ್ತರು, ಹೊಸ ಹಾಗೂ ಹಳೆಯ ತಲೆಮಾರಿನ ರಾಜಕಾರಣಿಗಳೂ ತೊಡಗಿಸಿಕೊಂಡಿದ್ದಾರೆ. ತರಹೇವಾರಿ ವಿಷಯಗಳ ಕುರಿತು ಸೀಮಿತ ಅವಧಿಯ ಚರ್ಚೆಗಳು ನಡೆಯುತ್ತವೆ. ಅಲ್ಲಿಗೆ ಒಂದು ಸಭೆ ಮುಗಿದುಹೋಗುತ್ತದೆ.

ಯಾರು ಬೇಕಾದರೂ ಇಂತಹ ಚರ್ಚೆಗಳನ್ನು ನಡೆಸಬಹುದು, ಯಾರೂ ಬೇಕಾದರೂ ಪಾಲ್ಗೊಳ್ಳಬಹುದು. ವಿವಿಧ ಹಿನ್ನೆಲೆಯ ಅನುಭವವುಳ್ಳವರೊಂದಿಗೆ ನೇರ ಸಂವಾದ ಚರ್ಚೆಗಳು ಸಾಧ್ಯವಾಗುವುದರಿಂದ
ವಸ್ತು-ವಿಷಯಗಳ ವಿವಿಧ ಆಯಾಮಗಳ ದೃಷ್ಟಿಕೋನವನ್ನು ಪಡೆಯುವುದಕ್ಕೂ ಕ್ಲಬ್‌ಹೌಸ್ ಅವಕಾಶ ಕೊಡುತ್ತದೆ ಎಂಬುದು ಬಳಕೆದಾರರ ಅಭಿಪ್ರಾಯ.

ಕೆಲವೇ ತಿಂಗಳ ಹಿಂದೆ ಭಾರತದಲ್ಲಿ ಚಾಲ್ತಿಗೆ ಬಂದ ಕ್ಲಬ್‌ಹೌಸ್‌ ಸ್ಮಾರ್ಟ್‌‌ಫೋನ್‌ ಬಳಕೆಗೂ ಲಭ್ಯವಾಗಿ ಅಪಾರ ಜನಮೆಚ್ಚುಗೆ ಗಳಿಸಿದೆ. ತಾಂತ್ರಿಕ ದೋಷದಿಂದಾಗಿ ಅಡಚಣೆಯಾಗಿರುವುದು ಕ್ಲಬ್‌ಹೌಸ್‌ ಪ್ರಿಯರಿಗೆ ಬೇಸರ ತಂದಿದೆ.


ಇದನ್ನೂ ಓದಿರಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...