Homeಕರ್ನಾಟಕಮಹಾಧರಣಿ| ದುಡಿವ ಜನರ ಸಮಸ್ಯೆ ಆಲಿಸಲು ಸಿಎಂ ಒಪ್ಪಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

ಮಹಾಧರಣಿ| ದುಡಿವ ಜನರ ಸಮಸ್ಯೆ ಆಲಿಸಲು ಸಿಎಂ ಒಪ್ಪಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಧರಣಿ ನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ ಹೋರಾಟಗಾರರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ದುಡಿಯುವ ಜನರ ಮಹಾಧರಣಿ ಸ್ಥಳಕ್ಕೆ ಬಂದು ಹೋರಾಟಗಾರರ ಹಕ್ಕೊತ್ತಾಯಗಳನ್ನು ಆಲಿಸಿ, ಅವರು ಮಾತನಾಡಿದರು. “ಮುಖ್ಯಮಂತ್ರಿಗಳು ಜನತಾ ದರ್ಶನ ಕಾರ್ಯಕ್ರಮದಲ್ಲಿದ್ದಾರೆ. ಇಲ್ಲಿನ ಹೋರಾಟದ ಬಗ್ಗೆ ಅವರಿಗೆ ಅರಿವಿದೆ. ಅವರ ಪರವಾಗಿ ನನ್ನನ್ನು ಕಳಿಸಿದ್ದಾರೆ. ಹೋರಾಟಗಾರರು ಮುಂದಿಟ್ಟಿರುವ ಎಲ್ಲ ಹಕ್ಕೊತ್ತಾಯಗಳ ಬಗ್ಗೆ ಚರ್ಚಿಸಲು ಸಮಯ ಕೊಡುತ್ತೇನೆಂದು ಹೇಳಿದ್ದಾರೆ” ಎಂದರು.

“ಹೋರಾಟಗಾರರು 18 ಹಕ್ಕೊತ್ತಾಯಗಳನ್ನು ನಮ್ಮ ಮುಂದಿಟ್ಟಿದ್ದಾರೆ. ಇವುಗಳಲ್ಲಿ ಮೂರು ಕಂದಾಯ ಇಲಾಖೆಗೆ ಸಂಬಂಧಿಸಿದ ವಿಚಾರಗಳೂ ಇವೆ. ಮಂಗಳವಾರ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಸಭೆ ಇದೆ. ಅಲ್ಲಿ, ಇಲ್ಲಿನ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಮಯ ನಿಗದಿ ಮಾಡಿಸಲು ನಾನು ಒತ್ತು ಕೊಡುತ್ತೇನೆ. ಶೀಘ್ರದಲ್ಲೇ ಹೋರಾಟಗಾರರೊಂದಿಗಿನ ಸಭೆಯನ್ನು ನಿಗದಿ ಮಾಡಿಸುತ್ತೇನೆ” ಎಂದು ಸಚಿವರು ಹೇಳಿದರು.

“ಕಾರ್ಮಿಕರು, ಭೂಮಿ ರಹಿತರು ಸೇರಿದಂತೆ ನಾನಾ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಬರ ಪರಿಹಾರಕ್ಕೆ ಅನುದಾನ ಕೇಂದ್ರದಿಂದ ಬಂದಿಲ್ಲ. ಅದರ ಬಗ್ಗೆ ಚರ್ಚಿಲು ಮುಖ್ಯಮಂತ್ರಿಗಳು ದೆಹಲಿಗೆ ತರಳಲಿದ್ದಾರೆ. ಡಿಸೆಂಬರ್ 4ರಿಂದ ಅಧಿವೇಶನವೂ ಇದೆ. ಈ ಎಲ್ಲದರ ನಡುವೆ ಸಮಯವನ್ನು ನೋಡಿಕೊಂಡು, ಸಭೆ ನಿಗದಿ ಮಾಡಿಸುತ್ತೇನೆ. ಎಲ್ಲರ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇವೆ” ಎಂದರು.

“ಹೋರಾಟಗಾರರು ಮುಂದಿಟ್ಟಿರುವ ಎಲ್ಲ ವಿಷಯಗಳು ಶ್ರಮಿಕರು, ಬಡವರ ಪರವಾಗಿವೆ. ಅವುಗಳೆಲ್ಲವನ್ನೂ ನಾವು ಈಡೇರಿಸಲು ಸಾಧ್ಯವಾಗುತ್ತದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ, ಬಡವರು, ರೈತರು, ಕಾರ್ಮಿಕರ ಪರವಾಗಿ ನಡೆಯುತ್ತಿರುವ ಹೋರಾಟ ಸ್ವಾಗತಾರ್ಹ. ಸಾಮಾನ್ಯ ಜನರ ವಿಷಯಗಳು ಚರ್ಚೆಯಾಗಬೇಕು. ಜೀವನಾಧಾರ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕು. ಅದಕ್ಕಾಗಿ, ಎಲ್ಲ ಹಕ್ಕೊತ್ತಾಯಗಳ ಬಗ್ಗೆ ಖಂಡಿತವಾಗಿಯೂ ಚರ್ಚಿಸುತ್ತೇನೆ. ಸಭೆ ಕರೆಯುತ್ತೇವೆ” ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ಸರ್ಕಾರದ ಪರವಾಗಿ ಧರಣಿ ಸ್ಥಳಕ್ಕೆ ಆಗಮಿಸಿದ್ದ ಸಚಿವರಿಗೆ ವಿವಿಧ ಸಂಘಟನೆಗಳು ಮುಖಂಡರು ತಮ್ಮ ಬೇಡಿಕೆಗಳ ಕುರಿತ ಆಗ್ರಹ ಪತ್ರವನ್ನು ನೀಡಿದರು.

ಇದನ್ನೂ ಓದಿ : ಮಹಾಧರಣಿ| ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರ: ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...