Homeಮುಖಪುಟಉತ್ತರಾಖಂಡ: ಬಿಜೆಪಿ ನಾಯಕನ ಮಗನಿಂದ ಹತ್ಯೆಯಾದ ಯುವತಿ ಕುಟುಂಬಕ್ಕೆ 25 ಲಕ್ಷ ಘೋಷಿಸಿದ ಸಿಎಂ

ಉತ್ತರಾಖಂಡ: ಬಿಜೆಪಿ ನಾಯಕನ ಮಗನಿಂದ ಹತ್ಯೆಯಾದ ಯುವತಿ ಕುಟುಂಬಕ್ಕೆ 25 ಲಕ್ಷ ಘೋಷಿಸಿದ ಸಿಎಂ

ಪ್ರಕರಣವನ್ನು ತ್ವರಿತವಾಗಿ ಟ್ರ್ಯಾಕ್ ಮಾಡಲು ಸರ್ಕಾರವು ನ್ಯಾಯಾಲಯಕ್ಕೆ ಮನವಿ ಮಾಡಿದೆ ಎಂದು ಸರ್ಕಾರ ಹೇಳಿದೆ

- Advertisement -
- Advertisement -

ಉಚ್ಛಾಟಿತ ಬಿಜೆಪಿ ನಾಯಕನ ಪುತ್ರನಿಂದ ಹತ್ಯೆಗೀಡಾದ 19 ವರ್ಷದ ಯುವತಿಯ ಕುಟುಂಬಕ್ಕೆ 25 ಲಕ್ಷ ರೂ.ಗಳ ಆರ್ಥಿಕ ನೆರವು ನೀಡುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಂತ್ರಸ್ತೆಯ ಕುಟುಂಬಕ್ಕೆ ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ವಿಚಾರಣೆಯನ್ನು ತ್ವರಿತವಾಗಿ ಟ್ರ್ಯಾಕ್ ಮಾಡಲು ಸರ್ಕಾರವು ನ್ಯಾಯಾಲಯಕ್ಕೆ ಮನವಿ ಮಾಡಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

“ದಿವಂಗತ ಅಂಕಿತಾ ಭಂಡಾರಿ ಅವರ ಕುಟುಂಬಕ್ಕೆ 25 ಲಕ್ಷ ರೂ. ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಪುಷ್ಕರ ಧಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಂತ್ರಸ್ತೆಯ ಕುಟುಂಬಕ್ಕೆ ತ್ವರಿತ ನ್ಯಾಯ ಸಿಗುವಂತೆ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಗೌರವಾನ್ವಿತ ನ್ಯಾಯಾಲಯಕ್ಕೆ ವಿನಂತಿಸಲಾಗಿದೆ ಎಂದು ಅವರು ಹೇಳಿದರು” ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಧಾಮಿ ಅವರು ಮಂಗಳವಾರ ಸಂತ್ರಸ್ತೆಯ ತಂದೆಯೊಂದಿಗೆ ಮಾತನಾಡಿ ಪ್ರಕರಣದಲ್ಲಿ ನ್ಯಾಯದ ಭರವಸೆ ನೀಡಿದ್ದರು.

“ನಾನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರು ನನ್ನ ಮಗಳ ಪ್ರಕರಣದಲ್ಲಿ ನ್ಯಾಯ ಒದಗಿಸುವ ಸಂಪೂರ್ಣ ಭರವಸೆ ನೀಡಿದ್ದಾರೆ” ಎಂದು ಸಂತ್ರಸ್ತೆಯ ತಂದೆ ಹೇಳಿದ್ದರು.

ಇದನ್ನೂ ಓದಿ: ‘ಯುವತಿ ಸತ್ತಿರುವುದಕ್ಕೆ ಒಂದೇ ಕಾರಣ…’: ಉತ್ತರಾಖಂಡ್ ರೆಸಾರ್ಟ್‌‌ ಹತ್ಯೆ ಕುರಿತು ರಾಹುಲ್ ಗಾಂಧಿ

ತಪ್ಪಿತಸ್ಥರಿಗೆ ಮರಣದಂಡನೆ ವಿಧಿಸಲು ಒತ್ತಾಯಿಸಿದ ಅವರು, “ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕೆಂದು ನಾವು ಒತ್ತಾಯಿಸಿದ್ದೇವೆ. ಸಿಎಂ ಧಾಮಿ ಅವರು ಇಡೀ ವಿಷಯದಲ್ಲಿ ಪೊಲೀಸರು ಮತ್ತು ಆಡಳಿತದಿಂದ ಸಂಪೂರ್ಣ ಸಹಕಾರ ನೀಡುವ ಬಗ್ಗೆ ಮಾತನಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಪರಾಧಕ್ಕೆ ಬಳಸಲಾಗಿದೆ ಎನ್ನಲಾಗಿರುವ ಬೂದು ಬಣ್ಣದ ಆಕ್ಟಿವಾ ಮತ್ತು ಕಪ್ಪು ಬಣ್ಣದ ಪಲ್ಸರ್ ಬೈಕನ್ನು ವಶಪಡಿಸಿಕೊಂಡಿದೆ. ಇವುಗಳನ್ನು ಬಳಸಿ ಆರೋಪಿಗಳು ಯುವತಿಯನ್ನು ಚಿಲ್ಲಾ ಕಾಲುವೆಗೆ ಎಸೆದಿದ್ದಾರೆ ಅಧಿಕೃತ ಪ್ರಕಟಣೆ ತಿಳಿಸಿದೆ.

ಬಿಜೆಪಿಯ ಉಚ್ಛಾಟಿತ ನಾಯಕ ವಿನೋದ್ ಆರ್ಯ ಅವರ ಮಗ ಪುಲ್ಕಿತ್ ಆರ್ಯ ಒಡೆತನದ ರೆಸಾರ್ಟ್‌ನ ಭಾಗಗಳನ್ನು ರಾತ್ರೋರಾತ್ರಿ ಕೆಡವುವ ಮೂಲಕ ಕೊಲೆ ಪ್ರಕರಣದ ಸಾಕ್ಷ್ಯಾಧಾರಗಳನ್ನು ನಾಶಪಡಿಸಲಾಗಿದೆ ಎಂಬ ಟೀಕೆಗಳು ಕೂಡಾ ಕೇಳಿಬಂದಿದೆ.

ಇದನ್ನೂ ಓದಿ: ‘ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗುತ್ತಿದೆ’: ಕೊಲೆಗೀಡಾದ ಉತ್ತರಾಖಂಡದ ಯುವತಿಯ ವಾಟ್ಸಾಪ್ ಚಾಟ್‌‌

“ಈ ಪ್ರಕರಣದಲ್ಲಿ ಅಕ್ರಮ ರೆಸಾರ್ಟ್ ಕೆಡವಲು ಸರಿಯಾದ ವಿಧಾನವನ್ನು ಅನುಸರಿಸಲಾಗಿಲ್ಲ ಎಂದು ನನಗೆ ತೋರುತ್ತದೆ. ಸಾಮಾನ್ಯವಾಗಿ, ಅಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಳ್ಳುವ ಮೊದಲು ಶೋಕಾಸ್ ನೋಟಿಸ್ ನೀಡಲಾಗುತ್ತದೆ” ಎಂದು ಉತ್ತರಾಖಂಡದ ಮಾಜಿ ಡಿಜಿಪಿ ಅಲೋಕೆ ಬಿ ಲಾಲ್ ಹೇಳಿದ್ದಾರೆ.

“ಆದಾಗ್ಯೂ, ಈ ಪ್ರಕರಣದಲ್ಲಿ ಬುಲ್ಡೋಜರ್‌ಗಳು ಯಾವುದೇ ಮುನ್ಸೂಚನೆಯಿಲ್ಲದೆ ರಾತ್ರಿಯ ಸಮಯದಲ್ಲಿ ರೆಸಾರ್ಟ್‌ನ ಭಾಗಗಳನ್ನು ನೆಲಸಮಗೊಳಿಸಿದವು. ಹಠಾತ್ ಕ್ರಮವು ಪ್ರಕರಣದಲ್ಲಿ ನಿರ್ಣಾಯಕ ಸಾಕ್ಷ್ಯವನ್ನು ನಾಶಪಡಿಸಿರಬೇಕು” ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...