Homeಮುಖಪುಟಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧೆ ಖಚಿತಪಡಿಸಿದ ಸಿಎಂ ಅಶೋಕ್ ಗೆಹ್ಲೋಟ್

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧೆ ಖಚಿತಪಡಿಸಿದ ಸಿಎಂ ಅಶೋಕ್ ಗೆಹ್ಲೋಟ್

ಗೆಹ್ಲೋಟ್ ಆಯ್ಕೆಯಾದಲ್ಲಿ 20 ವರ್ಷದ ನಂತರ ಗಾಂಧಿಯೇತರ ಕುಟುಂಬದವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕಾಣಸಿಗಲಿದ್ದಾರೆ.

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಷ್ಟ್ರೀಯ ಕಾಂಗ್ರೆಸ್‌‌ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ. ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿಯವರು ಅಧ್ಯಕ್ಷರಾಗಬೇಕೆಂದು ಬಯಸಿದ್ದೆ. ಅವರು ಗಾಂಧಿ ಕುಟುಂಬದ ಯಾರೊಬ್ಬರೂ ಅಧ್ಯಕ್ಷರಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. ಹಾಗಾಗಿ ನನಗೆ ಸೂಚಿಸಿದ್ದಾರೆ ಎಂದಿದ್ದಾರೆ.

ಬಹುತೇಕ ಜನರು ನನ್ನನ್ನು ಅಧ್ಯಕ್ಷ ಹುದ್ದೆಯಲ್ಲಿ ಕಾಣಬಯಸುತ್ತಾರೆ ಎಂಬುದು ನನಗೆ ಗೊತ್ತು. ಆದರೆ ಗಾಂಧಿ ಕುಟುಂಬದವರು ಅಧ್ಯಕ್ಷರಾಗಬಾರದು ಎಂದು ನಾನು ನಿರ್ಧರಿಸಿದ್ದೇನೆ. ಹಾಗಾಗಿ ಗಾಂಧಿಯೇತರ ಕುಟುಂಬದವರು ಅಧ್ಯಕ್ಷರಾಗಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಕೇರಳದಲ್ಲಿರುವ ಅವರು ಈ ವಾರದಲ್ಲಿ ನಾಮಪತ್ರ ಸಲ್ಲಿಸುತ್ತೇನೆ, ಅದಕ್ಕೆ ಸಿದ್ದತೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.

ಗೆಹ್ಲೋಟ್ ಅಧ್ಯಕ್ಷರಾಗಿ ಆಯ್ಕೆಯಾದರೆ ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಬೇಕಾಗುತ್ತದೆ. ಎರಡು ಹುದ್ದೆ ನಿರ್ವಹಿಸಲು ಗೆಹ್ಲೋಟ್‌ಗೆ ಒಲವಿದ್ದರೂ ಸಹ ರಾಹುಲ್ ಒಬ್ಬ ವ್ಯಕ್ತಿ, ಒಂದು ಹುದ್ದೆ ಎಂಬ ನೀತಿಯನ್ನು ಪುನರುಚ್ಚರಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಮತ್ತೊಬ್ಬ ನಾಯಕ ಸಚಿನ್ ಪೈಲಟ್ ಅವರಿಗೆ ರಾಜಸ್ಥಾನದ ಸಿಎಂ ಅಧಿಕಾರ ವಹಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ನಿಯಮವು ಅಶೋಕ್ ಗೆಹ್ಲೋಟ್‌ಗೆ ಅನ್ವಯಿಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ನಾವು ಉದಯಪುರದ ಚಿಂತನ್ ಶಿವಿರ್‌ನಲ್ಲಿ ನಿರ್ಣಯ ಮಾಡಿದ್ದು, ಆ ಬದ್ಧತೆಯನ್ನು ಉಳಿಸಿಕೊಳ್ಳಲಾಗುವುದು ಎಂದು ನಾನು ನಿರೀಕ್ಷಿಸುತ್ತೇನೆ” ಎಂದು ಹೇಳಿದ್ದಾರೆ.

ಅಶೋಕ್ ಗೆಹ್ಲೋಟ್‌ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗುವುದು ರಾಹುಲ್ ಗಾಂಧಿಯವರ ಆಯ್ಕೆಯಾಗಿದ್ದು, ಅದು ಸಾಧ್ಯವಾದಲ್ಲಿ 20 ವರ್ಷದ ನಂತರ ಗಾಂಧಿಯೇತರ ಕುಟುಂಬದವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕಾಣಸಿಗಲಿದ್ದಾರೆ.

ಇದೇ ವೇಳೆ ರಾಜಸ್ಥಾನದಲ್ಲಿ ಗೆಹ್ಲೋಟ್ ಅವರ ಬದಲಿಯಾಗಿ ಅವರ ಪಕ್ಷದೊಳಗಿನ ಸಚಿನ್ ಪೈಲಟ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ. ಗೆಹ್ಲೋಟ್‌ ವಿರುದ್ಧ 2020 ರಲ್ಲಿ ಸಚಿನ್ ಪೈಲಟ್‌ ಬಂಡಾಯವೆದ್ದಿದ್ದರು. ಆದರೆ ರಾಹುಲ್ ಗಾಂಧಿ ಅವರ ಮಧ್ಯ ಪ್ರವೇಶದ ನಂತರ ಸರ್ಕಾರ ಉರುಳಿರಲಿಲ್ಲ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಯ ಪ್ರಕಾರ, ಗುರುವಾರದಿಂದ ನಾಮಪತ್ರಗಳು ಲಭ್ಯವಿದ್ದು, ನಾಮಪತ್ರಗಳ ಸಲ್ಲಿಕೆ ಸೆಪ್ಟೆಂಬರ್ 24 ಮತ್ತು 30 ರ ನಡುವೆ ನಡೆಯಲಿದೆ.

ಅಕ್ಟೋಬರ್ 1 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅದೇ ದಿನ ಮಾನ್ಯ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಕ್ಟೋಬರ್ 8ರ ವರೆಗೆ ಹಿಂಪಡೆಯಲು ಕೊನೆಯ ದಿನಾಂಕವಾಗಿದ್ದು, ಇದರ ನಂತರ ಅಂತಿಮ ಪಟ್ಟಿಯನ್ನು ಹೊರತರಲಾಗುವುದು. ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ; ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ತರಾತುರಿ ಟೆಂಡರ್ ಕರೆದ BBMP

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...