Homeಕರ್ನಾಟಕ‘ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿ ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ’

‘ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿ ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ’

- Advertisement -
- Advertisement -

ಒಂದು ಪ್ರಶ್ನೆ ವಿಡಿಯೋ ಸರಣಿಯ ಮೂಲಕ ಪ್ರಚಲಿತ ವಿದ್ಯಮಾನಗಳ ಕುರಿತು ಮಾತನಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮತೀಯ ಗೂಂಡಾಗಿರಿ ವಿರುದ್ಧ ಧ್ವನಿ ಎತ್ತಿದ್ದಾರೆ. ಮುಖ್ಯಮಂತ್ರಿಯವರ ನಡೆಯನ್ನು ಖಂಡಿಸಿದ್ದಾರೆ.

ಈಗ ಬಿಡುಗಡೆಯಾಗಿರುವ ವಿಡಿಯೋದಲ್ಲಿ, “ಸಂವಿಧಾನಬದ್ಧ ಪ್ರಜಾಪ್ರಭುತ್ವದ ನೆರಳಲ್ಲಿ ನಾವೆಲ್ಲ ಸ್ವತಂತ್ರವಾಗಿ ಬದುಕುತ್ತಿದ್ದೇವೆ. ನಮ್ಮಿಷ್ಟದಂತೆ ಬದುಕುವ ಹಕ್ಕನ್ನು ಸಂವಿಧಾನ ನಮ್ಮೆಲ್ಲರಿಗೂ ನೀಡಿದೆ. ನಿಮ್ಮ ಬದುಕಿನ ಹಕ್ಕಿನ ಬಗ್ಗೆ ಮಾತನಾಡಲು ನಿಮ್ಮ ಮುಂದೆ ನಿಂತಿದ್ದೇನೆ” ಎಂದು ಅವರು ಮಾತು ಆರಂಭಿಸಿ ಮತೀಯ ಗೂಂಡಾಗಿರಿಯನ್ನು ಪ್ರಶ್ನಿಸಿದ್ದಾರೆ.

“ನೈತಿಕ ಪೊಲೀಸ್‌ಗಿರಿ (ಮತೀಯ ಗೂಂಡಾಗಿರಿ) ನಡೆಸಲು ಸಂವಿಧಾನದಲ್ಲಿ ಅವಕಾಶ ಇದೆಯಾ? -ಇದು ಈ ವಾರ ನಾನು ನಿಮ್ಮ ಮುಂದೆ ಇಡುತ್ತಿರುವ ಪ್ರಶ್ನೆ” ಎಂದಿದ್ದಾರೆ.

“ಜನರು ಬಿಜೆಪಿಯ ಸಿದ್ಧಾಂತದಂತೆಯೇ ಬದುಕಬೇಕೆಂದು ಸರ್ಕಾರ ಬಯಸುತ್ತಿದೆ. ಮಹಿಳೆಯರ ಹಕ್ಕನ್ನೇ ಕಿತ್ತಿಕೊಳ್ಳಲು ಪ್ರಯತ್ನಿಸುತ್ತಿದೆ. ಯುವಜನರನ್ನು ಹಿಂಸಾತ್ಮಕ ದಾರಿಗೆ ದೂಡಲಾಗುತ್ತಿದೆ. ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾದ ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿಯನ್ನು ಸಮರ್ಥಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದ್ವೇಷವನ್ನು ಹರಡುವ ಕೆಲಸವನ್ನು ಮುಖ್ಯಮಂತ್ರಿಯವರು ಸಮರ್ಥಿಸಿಕೊಳ್ಳಬಾರದು. ಒಂದು ವೇಳೆ ಅವರು ಇದನ್ನು ಸಮರ್ಥಿಸಿಕೊಂಡರೆ, ನಾಳೆ ನೀವು ಯಾವ ಯಾವ ಬಟ್ಟೆ ಧರಿಸಬೇಕು, ಯಾವುದರಲ್ಲಿ ಕಾಫಿ ಕುಡಿಯಬೇಕು ಎಂಬುದನ್ನು ಬಿಜೆಪಿ ಸ್ನೇಹಿತರು ನಿರ್ಧಾರ ಮಾಡುತ್ತಾರೆ” ಎಂದು ಎಚ್ಚರಿಸಿರುವ ಅವರು, ಜನರು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಕೋರಿದ್ದಾರೆ.

ಒಂದು ಪ್ರಶ್ನೆ ಕಾರ್ಯಕ್ರಮದ ಮೂಲಕ ಡಿ.ಕೆ.ಶಿವಕುಮಾರ್‌ ಈ ಹಿಂದೆಯೂ ಹಲವು ಸಂಗತಿಗಳ ಬಗ್ಗೆ ಮಾತನಾಡಿದ್ದಾರೆ.

ತಮ್ಮ ನಾಲ್ಕನೇ ಕಂತಿನಲ್ಲಿ ‘ಉದ್ಯೋಗ ಸೃಷ್ಟಿ’ಯ ಕುರಿತು ಮಾತನಾಡಿದ್ದರು. “ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು. ಏಳು ವರ್ಷ ಆಯಿತು. ಹದಿನಾಲ್ಕು ಕೋಟಿ ಉದ್ಯೋಗಗಳನ್ನು ಸೃಷ್ಟಿ ಮಾಡಬೇಕಿತ್ತು. ನಾನು ನಿಮ್ಮಲ್ಲಿ ಸರ್ಕಾರದ ಉದ್ಯೋಗವನ್ನು ಕೊಡಿ ಎಂದು ಕೇಳುತ್ತಿಲ್ಲ. ಖಾಸಗಿ ಉದ್ಯೋಗಗಳನ್ನು ಸೃಷ್ಟಿ ಮಾಡುವ ಅವಕಾಶ ಸರ್ಕಾರಕ್ಕೆ ಇಲ್ಲವೇ?” ಎಂದು ಅವರು ಪ್ರಶ್ನಿಸಿದ್ದರು.

 ಇದನ್ನೂ ಓದಿರಿ: ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ನಮ್ಮ ಜನ, ನಮ್ಮ ಯುವಕರು, ಪದವಿ ಪಡೆದವರು ಉದ್ಯೋಗವಿಲ್ಲದೆ ಹಳ್ಳಿಗಳಲ್ಲಿ ನರೇಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸರ್ಕಾರ ಆರ್ಥಿಕವಾಗಿ ಸಹಾಯವನ್ನು ಕೊಡಬೇಕಾಗಿದೆ. ಆದರೆ ಬಂಡವಾಳಶಾಹಿಗಳಿಗೆ ಮಾತ್ರ ಅನೇಕ ಘೋಷಣೆಗಳನ್ನು ಮಾಡಲಾಗುತ್ತಿದೆ ಎಂದು ಟೀಕಿಸಿದ್ದರು.

ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ನಗರಗಳಲ್ಲಿ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದ್ದವರಿಗೆ ಯಾವುದೇ ಸಹಕಾರವನ್ನು ನೀಡುತ್ತಿಲ್ಲ. ಸರ್ಕಾರ ಇಂತಹ ವಿಚಾರಗಳಲ್ಲಿ ಯಾವ ದಿಕ್ಕಿನಲ್ಲಿ ಹೋಗಬೇಕು? ಉದ್ಯೋಗಗಳನ್ನು ಸೃಷ್ಟಿ ಮಾಡಲಿಕ್ಕೆ, ಕೈಗಾರಿಕೆಗಳನ್ನು ತರಲಿಕ್ಕೆ, ಖಾಸಗಿ ಕ್ಷೇತ್ರಗಳಲ್ಲಿನ ಉದ್ಯೋಗಗಳನ್ನು ಜನರಿಗೆ ಕೊಡಲಿಕ್ಕೆ ಯಾವೆಲ್ಲ ರೀತಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ನಿಮ್ಮ ಸಲಹೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ನನ್ನಲ್ಲಿ ತಿಳಿಸಿರಿ ಎಂದು ಅವರು ಮನವಿ ಮಾಡಿದ್ದರು.

ಮೂರನೇ ಕಂತಿನಲ್ಲಿ ‘ಕೋವಿಡ್‌ ಪರಿಹಾರ’ ಕುರಿತು ಪ್ರಸ್ತಾಪಿಸಿದ್ದರು. “ಮಳೆ ಹೆಚ್ಚಾದಾಗ, ಭೂಕಂಪವಾದಾಗ ಯಾವುದೇ ಸಂದರ್ಭಗಳಲ್ಲಿ ಸರ್ಕಾರ ಪರಿಹಾರಗಳನ್ನು ಘೋಷಣೆ ಮಾಡಿದೆ. ಕೋವಿಡ್‌ ಬಿಕ್ಕಟ್ಟನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸರ್ಕಾರ ಬಿಡುಗಾಸು ಪರಿಹಾರ ನೀಡಿಲ್ಲ. ಕೋವಿಡ್‌ನಿಂದ ಲಕ್ಷಾಂತರ ಮಂದಿ ಸತ್ತಿದ್ದಾರೆ. ಸರ್ಕಾರವೇ ನಂಬರ್‌ ಬಿಡುಗಡೆ ಮಾಡಿದೆ. ಒಬ್ಬರಿಗೂ ಪರಿಹಾರ ನೀಡಿಲ್ಲ” ಎಂದು ಟೀಕಿಸಿದ್ದರು.

ಎರಡನೇ ಕಂತಿನಲ್ಲಿ ‘ಸಿಲಿಂಡರ್‌ ಬೆಲೆ ಏರಿಕೆ’ಯ ಕುರಿತು ಮಾತನಾಡುತ್ತಾ, “ಸಿಲಿಂಡರ್ ಬೆಲೆ 888 ರೂ.  ಇದ್ದು, ಸದ್ಯದಲ್ಲೇ 900 ರೂಪಾಯಿಯಿಂದ 1000 ರೂ.ವರೆಗೆ ತಲುಪಬಹುದು. ರಾಜ್ಯದ ಜನತೆಗೆ ಎಂತಹ ಸಂಕಷ್ಟ ನೋಡಿ. ಕೋವಿಡ್‌ನಿಂದ ಜನ ಸಾಯುತ್ತಿದ್ದಾರೆ. ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಆದರೆ ಬೆಲೆ ಮಾತ್ರ ಕಡಿಮೆಯಾಗಲಿಲ್ಲ” ಎಂದಿದ್ದರು. ಮೊದಲ ಕಂತಿನಲ್ಲಿ ‘ಎನ್‌ಇಪಿಯನ್ನು ನಾಗಪುರ ಎಜುಕೇಷನ್‌ ಪಾಲಿಸಿ’ ಎಂದು ವಿಶ್ಲೇಷಿಸಿದ್ದರು.

ಇದನ್ನೂ ಓದಿರಿ: ನೈತಿಕತೆ ಮತ್ತು ಪೊಲೀಸ್‌ಗಿರಿ ಕೂಡಿಕೊಂಡರೆ ಅದು ಅನೈತಿಕ ಮನಸ್ಥಿತಿಗಳ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...