Homeಕರ್ನಾಟಕ‘ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿ ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ’

‘ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿ ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ’

- Advertisement -
- Advertisement -

ಒಂದು ಪ್ರಶ್ನೆ ವಿಡಿಯೋ ಸರಣಿಯ ಮೂಲಕ ಪ್ರಚಲಿತ ವಿದ್ಯಮಾನಗಳ ಕುರಿತು ಮಾತನಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮತೀಯ ಗೂಂಡಾಗಿರಿ ವಿರುದ್ಧ ಧ್ವನಿ ಎತ್ತಿದ್ದಾರೆ. ಮುಖ್ಯಮಂತ್ರಿಯವರ ನಡೆಯನ್ನು ಖಂಡಿಸಿದ್ದಾರೆ.

ಈಗ ಬಿಡುಗಡೆಯಾಗಿರುವ ವಿಡಿಯೋದಲ್ಲಿ, “ಸಂವಿಧಾನಬದ್ಧ ಪ್ರಜಾಪ್ರಭುತ್ವದ ನೆರಳಲ್ಲಿ ನಾವೆಲ್ಲ ಸ್ವತಂತ್ರವಾಗಿ ಬದುಕುತ್ತಿದ್ದೇವೆ. ನಮ್ಮಿಷ್ಟದಂತೆ ಬದುಕುವ ಹಕ್ಕನ್ನು ಸಂವಿಧಾನ ನಮ್ಮೆಲ್ಲರಿಗೂ ನೀಡಿದೆ. ನಿಮ್ಮ ಬದುಕಿನ ಹಕ್ಕಿನ ಬಗ್ಗೆ ಮಾತನಾಡಲು ನಿಮ್ಮ ಮುಂದೆ ನಿಂತಿದ್ದೇನೆ” ಎಂದು ಅವರು ಮಾತು ಆರಂಭಿಸಿ ಮತೀಯ ಗೂಂಡಾಗಿರಿಯನ್ನು ಪ್ರಶ್ನಿಸಿದ್ದಾರೆ.

“ನೈತಿಕ ಪೊಲೀಸ್‌ಗಿರಿ (ಮತೀಯ ಗೂಂಡಾಗಿರಿ) ನಡೆಸಲು ಸಂವಿಧಾನದಲ್ಲಿ ಅವಕಾಶ ಇದೆಯಾ? -ಇದು ಈ ವಾರ ನಾನು ನಿಮ್ಮ ಮುಂದೆ ಇಡುತ್ತಿರುವ ಪ್ರಶ್ನೆ” ಎಂದಿದ್ದಾರೆ.

“ಜನರು ಬಿಜೆಪಿಯ ಸಿದ್ಧಾಂತದಂತೆಯೇ ಬದುಕಬೇಕೆಂದು ಸರ್ಕಾರ ಬಯಸುತ್ತಿದೆ. ಮಹಿಳೆಯರ ಹಕ್ಕನ್ನೇ ಕಿತ್ತಿಕೊಳ್ಳಲು ಪ್ರಯತ್ನಿಸುತ್ತಿದೆ. ಯುವಜನರನ್ನು ಹಿಂಸಾತ್ಮಕ ದಾರಿಗೆ ದೂಡಲಾಗುತ್ತಿದೆ. ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾದ ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿಯನ್ನು ಸಮರ್ಥಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದ್ವೇಷವನ್ನು ಹರಡುವ ಕೆಲಸವನ್ನು ಮುಖ್ಯಮಂತ್ರಿಯವರು ಸಮರ್ಥಿಸಿಕೊಳ್ಳಬಾರದು. ಒಂದು ವೇಳೆ ಅವರು ಇದನ್ನು ಸಮರ್ಥಿಸಿಕೊಂಡರೆ, ನಾಳೆ ನೀವು ಯಾವ ಯಾವ ಬಟ್ಟೆ ಧರಿಸಬೇಕು, ಯಾವುದರಲ್ಲಿ ಕಾಫಿ ಕುಡಿಯಬೇಕು ಎಂಬುದನ್ನು ಬಿಜೆಪಿ ಸ್ನೇಹಿತರು ನಿರ್ಧಾರ ಮಾಡುತ್ತಾರೆ” ಎಂದು ಎಚ್ಚರಿಸಿರುವ ಅವರು, ಜನರು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಕೋರಿದ್ದಾರೆ.

ಒಂದು ಪ್ರಶ್ನೆ ಕಾರ್ಯಕ್ರಮದ ಮೂಲಕ ಡಿ.ಕೆ.ಶಿವಕುಮಾರ್‌ ಈ ಹಿಂದೆಯೂ ಹಲವು ಸಂಗತಿಗಳ ಬಗ್ಗೆ ಮಾತನಾಡಿದ್ದಾರೆ.

ತಮ್ಮ ನಾಲ್ಕನೇ ಕಂತಿನಲ್ಲಿ ‘ಉದ್ಯೋಗ ಸೃಷ್ಟಿ’ಯ ಕುರಿತು ಮಾತನಾಡಿದ್ದರು. “ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು. ಏಳು ವರ್ಷ ಆಯಿತು. ಹದಿನಾಲ್ಕು ಕೋಟಿ ಉದ್ಯೋಗಗಳನ್ನು ಸೃಷ್ಟಿ ಮಾಡಬೇಕಿತ್ತು. ನಾನು ನಿಮ್ಮಲ್ಲಿ ಸರ್ಕಾರದ ಉದ್ಯೋಗವನ್ನು ಕೊಡಿ ಎಂದು ಕೇಳುತ್ತಿಲ್ಲ. ಖಾಸಗಿ ಉದ್ಯೋಗಗಳನ್ನು ಸೃಷ್ಟಿ ಮಾಡುವ ಅವಕಾಶ ಸರ್ಕಾರಕ್ಕೆ ಇಲ್ಲವೇ?” ಎಂದು ಅವರು ಪ್ರಶ್ನಿಸಿದ್ದರು.

 ಇದನ್ನೂ ಓದಿರಿ: ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ನಮ್ಮ ಜನ, ನಮ್ಮ ಯುವಕರು, ಪದವಿ ಪಡೆದವರು ಉದ್ಯೋಗವಿಲ್ಲದೆ ಹಳ್ಳಿಗಳಲ್ಲಿ ನರೇಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸರ್ಕಾರ ಆರ್ಥಿಕವಾಗಿ ಸಹಾಯವನ್ನು ಕೊಡಬೇಕಾಗಿದೆ. ಆದರೆ ಬಂಡವಾಳಶಾಹಿಗಳಿಗೆ ಮಾತ್ರ ಅನೇಕ ಘೋಷಣೆಗಳನ್ನು ಮಾಡಲಾಗುತ್ತಿದೆ ಎಂದು ಟೀಕಿಸಿದ್ದರು.

ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ನಗರಗಳಲ್ಲಿ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದ್ದವರಿಗೆ ಯಾವುದೇ ಸಹಕಾರವನ್ನು ನೀಡುತ್ತಿಲ್ಲ. ಸರ್ಕಾರ ಇಂತಹ ವಿಚಾರಗಳಲ್ಲಿ ಯಾವ ದಿಕ್ಕಿನಲ್ಲಿ ಹೋಗಬೇಕು? ಉದ್ಯೋಗಗಳನ್ನು ಸೃಷ್ಟಿ ಮಾಡಲಿಕ್ಕೆ, ಕೈಗಾರಿಕೆಗಳನ್ನು ತರಲಿಕ್ಕೆ, ಖಾಸಗಿ ಕ್ಷೇತ್ರಗಳಲ್ಲಿನ ಉದ್ಯೋಗಗಳನ್ನು ಜನರಿಗೆ ಕೊಡಲಿಕ್ಕೆ ಯಾವೆಲ್ಲ ರೀತಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ನಿಮ್ಮ ಸಲಹೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ನನ್ನಲ್ಲಿ ತಿಳಿಸಿರಿ ಎಂದು ಅವರು ಮನವಿ ಮಾಡಿದ್ದರು.

ಮೂರನೇ ಕಂತಿನಲ್ಲಿ ‘ಕೋವಿಡ್‌ ಪರಿಹಾರ’ ಕುರಿತು ಪ್ರಸ್ತಾಪಿಸಿದ್ದರು. “ಮಳೆ ಹೆಚ್ಚಾದಾಗ, ಭೂಕಂಪವಾದಾಗ ಯಾವುದೇ ಸಂದರ್ಭಗಳಲ್ಲಿ ಸರ್ಕಾರ ಪರಿಹಾರಗಳನ್ನು ಘೋಷಣೆ ಮಾಡಿದೆ. ಕೋವಿಡ್‌ ಬಿಕ್ಕಟ್ಟನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸರ್ಕಾರ ಬಿಡುಗಾಸು ಪರಿಹಾರ ನೀಡಿಲ್ಲ. ಕೋವಿಡ್‌ನಿಂದ ಲಕ್ಷಾಂತರ ಮಂದಿ ಸತ್ತಿದ್ದಾರೆ. ಸರ್ಕಾರವೇ ನಂಬರ್‌ ಬಿಡುಗಡೆ ಮಾಡಿದೆ. ಒಬ್ಬರಿಗೂ ಪರಿಹಾರ ನೀಡಿಲ್ಲ” ಎಂದು ಟೀಕಿಸಿದ್ದರು.

ಎರಡನೇ ಕಂತಿನಲ್ಲಿ ‘ಸಿಲಿಂಡರ್‌ ಬೆಲೆ ಏರಿಕೆ’ಯ ಕುರಿತು ಮಾತನಾಡುತ್ತಾ, “ಸಿಲಿಂಡರ್ ಬೆಲೆ 888 ರೂ.  ಇದ್ದು, ಸದ್ಯದಲ್ಲೇ 900 ರೂಪಾಯಿಯಿಂದ 1000 ರೂ.ವರೆಗೆ ತಲುಪಬಹುದು. ರಾಜ್ಯದ ಜನತೆಗೆ ಎಂತಹ ಸಂಕಷ್ಟ ನೋಡಿ. ಕೋವಿಡ್‌ನಿಂದ ಜನ ಸಾಯುತ್ತಿದ್ದಾರೆ. ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಆದರೆ ಬೆಲೆ ಮಾತ್ರ ಕಡಿಮೆಯಾಗಲಿಲ್ಲ” ಎಂದಿದ್ದರು. ಮೊದಲ ಕಂತಿನಲ್ಲಿ ‘ಎನ್‌ಇಪಿಯನ್ನು ನಾಗಪುರ ಎಜುಕೇಷನ್‌ ಪಾಲಿಸಿ’ ಎಂದು ವಿಶ್ಲೇಷಿಸಿದ್ದರು.

ಇದನ್ನೂ ಓದಿರಿ: ನೈತಿಕತೆ ಮತ್ತು ಪೊಲೀಸ್‌ಗಿರಿ ಕೂಡಿಕೊಂಡರೆ ಅದು ಅನೈತಿಕ ಮನಸ್ಥಿತಿಗಳ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...