Homeಕರ್ನಾಟಕಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ: ಬಸವರಾಜ ಬೊಮ್ಮಾಯಿ

ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ: ಬಸವರಾಜ ಬೊಮ್ಮಾಯಿ

- Advertisement -
- Advertisement -

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಪರಿಶೀಲಿಸಲು ಪರಿಣತರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 60 ವರ್ಷಾಚರಣೆಯಲ್ಲಿ ಮಾತನಾಡಿದ ಅವರು, “ಇಂದು ನಿಗಮವು ಸಂಕಷ್ಟದಲ್ಲಿದೆ. ಆದರೆ ಸಮಸ್ಯೆಯನ್ನು ಬೆಳೆಯಲು ಬಿಡದೆ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ. ಆದಾಯೋತ್ಪನ್ನ ಮಾದರಿಯಿದ್ದರೂ, ನಿಗಮ ನಷ್ಟದಲ್ಲಿರಲು ಕಾರಣಗಳನ್ನು ವಿಶ್ಲೇಷಿಸುವುದರೊಂದಿಗೆ, ನಿಗಮವನ್ನು ಲಾಭದಾಯಕವಾಗಿಸಲು ಸಲಹೆ ಸೂಚನೆಗಳನ್ನು ನೀಡಲು ಈ ಸಮಿತಿ ರಚಿಸಲಾಗುವುದು” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದ ಅವಧಿಯಲ್ಲಿ ನೌಕರರ ವೇತನ ಸೇರಿದಂತೆ, ನಿಗಮಕ್ಕೆ ಬೆಂಬಲ ನೀಡಲು ರಾಜ್ಯ ಸರ್ಕಾರ 2,300 ಕೋಟಿ ರೂ. ಬಿಡುಗಡೆ ಮಾಡಿದೆ. ತಾವು ಮುಖ್ಯಮಂತ್ರಿಯಾದ ನಂತರವೂ 108 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ನಿಗಮದ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಇದಕ್ಕೆ ಚಿಂತನೆ, ಕಾರ್ಯವಿಧಾನಗಳಲ್ಲಿ ಬದಲಾವಣೆ ಅಗತ್ಯ; ಜೊತೆಗೆ ಕ್ಷಮತೆಯಿಂದ ನಿಗಮವನ್ನು ಮುನ್ನಡೆಸಲು ಸರ್ಕಾರ ಬದ್ಧವಾಗಿದೆ. ನಿಗಮದ ಸುಧಾರಣೆಯೊಂದಿಗೆ ನೌಕರರ ಜೀವನಮಟ್ಟ ಸುಧಾರಣೆಗೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ನೀಡಲು ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ

ವಿಶ್ವದಾದ್ಯಂತ ಸಾರಿಗೆ ವ್ಯವಸ್ಥೆಯಲ್ಲಿ ಎಷ್ಟೇ ಬದಲಾವಣೆಗಳಾದರೂ, ಬಸ್ ಸೇವೆ ನಿರಂತರವಾಗಿ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಹಳ್ಳಿಗಳಲ್ಲಿ ಬಸ್ ಬಂದರೆ ಚಟುವಟಿಕೆ ಪ್ರಾರಂಭವಾಗುತ್ತದೆ. ಈ ಎಲ್ಲ ಕಾರಣಗಳಿಗಾಗಿ ನಿಗಮ ತನ್ನದೇ ಆದ ಗೌರವವನ್ನು ಹೊಂದಿದೆ. ಬಸ್ ಚಾಲಕರು ಅತ್ಯಂತ ಜವಾಬ್ದಾರಿಯ ಕೆಲಸ ನಿರ್ವಹಿಸುತ್ತಾರೆ. ಪ್ರಯಾಣದ ಅವಧಿಯಲ್ಲಿ ನಮ್ಮ ಜೀವ ಅವರ ಕೈಯಲಿರುತ್ತದೆ. ಆದ್ದರಿಂದ ಚಾಲಕರಿಗೆ ಮೊದಲ ಗೌರವ ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಪರಿಸರ ಸ್ನೇಹಿ ವಾಹನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಬಿಎಂಟಿಸಿಯು 90 ವಿದ್ಯುತ್ ಚಾಲಿತ ಬಸ್‌ಗಳನ್ನು ಖರೀದಿಸುತ್ತಿದೆ. ಅಂತೆಯೇ ಕೆಎಸ್‌ಆರ್‌ಟಿಸಿಯು 642 ಹೊಸ ಬಸ್ ಗಳನ್ನು ಖರೀದಿಸುತ್ತಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ನಾಲ್ಕೂ ನಿಗಮಗಳ ಅಪಘಾತ ರಹಿತ ಚಾಲನೆ ಮಾಡಿದ 60 ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ 60ನೇ ವರ್ಷದ ಸವಿ ನೆನಪಿಗೆ ಅಂಚೆ ಲಕೋಟೆ ಬಿಡುಗಡೆ ಹಾಗೂ ಕೆಂಪೇಗೌಡ ಬಸ್ ನಿಲ್ದಾಣ 60 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗಿದೆ.


ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...