Homeಮುಖಪುಟಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದ 5 ನೂತನ ಸಚಿವರಿವರು

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದ 5 ನೂತನ ಸಚಿವರಿವರು

- Advertisement -
- Advertisement -

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಒಂದು ವಾರದ ನಂತರ ಕೊನೆಗೂ ಸಚಿವ ಸಂಪುಟವನ್ನು ಅಂತಿಮಗೊಳಿಸಿದ್ದಾರೆ. ಒಟ್ಟು 29 ಶಾಸಕರಿಗೆ ಕರೆ ಮಾಡಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಅವರಲ್ಲಿ ಹೊಸದಾಗಿ ಸಂಪುಟ ಸೇರುತ್ತಿರುವವರ ಸಣ್ಣ ಪರಿಚಯ ಇಲ್ಲಿದೆ.

ಸುನೀಲ್ ಕುಮಾರ್

ಉಡುಪಿ ಜಿಲ್ಲೆಯ ಕಾರ್ಕಳ ಶಾಸಕರಾದ ಸುನೀಲ್ ಕುಮಾರ್ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ಅರಗ ಜ್ಞಾನೇಂದ್ರ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಶಾಸಕರಾದ ಅರಗ ಜ್ಞಾನೇಂದ್ರರವರು ಹೊಸ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದ್ದಾರೆ.

ಹಾಲಪ್ಪ ಆಚಾರ್

ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಶಾಸಕ ಹಾಲಪ್ಪ ಆಚಾರ್ ಅಂತೂ ಬೊಮ್ಮಾಯಿಯವರ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ಶಂಕರ್ ಪಾಟೀಲ್ ಮುನೇನಕೊಪ್ಪ

ಧಾರವಾಡ ಜಿಲ್ಲೆಯ ನವಲಗುಂದ ಶಾಸಕರಾದ ಶಂಕರ್ ಪಾಟೀಲ್ ಮುನೇನಕೊಪ್ಪ ನೂತನ ಪಟ್ಟಿಯಲ್ಲಿದ್ದಾರೆ.

ಬಿ.ಸಿ. ನಾಗೇಶ್

ತುಮಕೂರು ಜಿಲ್ಲೆಯ ತಿಪಟೂರು ಶಾಸಕರಾದ ಬಿ.ಸಿ. ನಾಗೇಶ್ ನಾಗೇಶ್ ಸಚಿವ ಸಂಪುಟ ಸೇರಿದ ನೂತನ ಸದಸ್ಯರಾಗಿದ್ದಾರೆ.

ಬಿಎಸ್‌ವೈ ಸಂಪುಟದಲ್ಲಿದ್ದು ಈಗ ಕೈಬಿಟ್ಟವರ ಪಟ್ಟಿ 

ಜಗದೀಶ್ ಶೆಟ್ಟರ್

ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್‌ರವರು ಬಿ.ಎಸ್ ಯಡಿಯೂರಪ್ಪನವರ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವರಾಗಿದ್ದರು. ಅವರು ಬೊಮ್ಮಾಯಿಯವರ ಸಂಪುಟದಲ್ಲಿಲ್ಲ. ಅವರನ್ನು ಸ್ವೀಕರ್ ಅಥವಾ ಬೇರೆ ರಾಜ್ಯಕ್ಕೆ ರಾಜ್ಯಪಾಲರನ್ನಾಗಿ ಮಾಡುವ ಚಿಂತನೆ ನಡೆದಿದೆ ಅಂತೆ

ಎಸ್ ಸುರೇಶ್ ಕುಮಾರ್

ಬಿಎಸ್‌ವೈ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು. ಅವರನ್ನು ಈಗ ಕೈಬಿಡಲಾಗಿದೆ.

ಸಿ.ಪಿ ಯೋಗಿಶ್ವರ್

ಪ್ರವಾಸೋದ್ಯಮ, ಪರಿಸರ ಮತ್ತು ಭೂವಿಜ್ಞಾನ ಸಚಿವರಾಗಿ ಇದೇ ವರ್ಷ ಜನವರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದ ಸಿ.ಪಿ ಯೋಗಿಶ್ವರ್‌ರವರಿಗೆ ಗೇಟ್ ಪಾಸ್ ನೀಡಲಾಗಿದೆ.

ಲಕ್ಷ್ಮಣ ಸವದಿ

ಬಿಎಸ್‌ವೈ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾಗಿದ್ದ ಲಕ್ಷ್ಮಣ ಸವದಿಯವರನ್ನು ಬಸವರಾಜ ಬೊಮ್ಮಾಯಿ ಸಂಪುಟದಿಂದ ಹೊರಗಿಡಲಾಗಿದೆ.

ಶ್ರೀಮಂತ ಪಾಟೀಲ್

ಜವಳಿ ಸಚಿವರಾಗಿದ್ದ ಶ್ರೀಮಂತ ಪಾಟೀಲ್ ಹೊಸ ಸಂಪುಟದಿಂದ ಹೊರಗುಳಿದಿದ್ದಾರೆ.

ಆರ್ ಶಂಕರ್

ರೇಷ್ಮೆ, ತೋಟಗಾರಿಕೆ ಸಚಿವರಾಗಿದ್ದ ಆರ್ ಶಂಕರ್‌ರವರು ನೂತನ ಸಚಿವರ ಪಟ್ಟಿಯಿಂದ ಹೊರಗಿದ್ದಾರೆ.

ಅರವಿಂದ ಲಿಂಬಾವಳಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅರಣ್ಯ ಇಲಾಖೆಯ ಸಚಿವರಾಗಿದ್ದರು. ಅವರನ್ನು ಕೈಬಿಡಲಾಗಿದೆ.


ಇದನ್ನೂ ಓದಿ: ನೂತನ ಸಚಿವರ ಪಟ್ಟಿ ಇಲ್ಲಿದೆ: ಬಿ.ವೈ ವಿಜಯೇಂದ್ರಗೆ ಇಲ್ಲ ಸಚಿವ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...