Homeಮುಖಪುಟಸಿಎಂ ಬಿರೇನ್ ಸಿಂಗ್ ಕ್ಷಮೆಯಾಚಿಸಿದರೆ ಸಾಲದು, ರಾಜೀನಾಮೆ ನೀಡಬೇಕು - ಸಿಪಿಐ

ಸಿಎಂ ಬಿರೇನ್ ಸಿಂಗ್ ಕ್ಷಮೆಯಾಚಿಸಿದರೆ ಸಾಲದು, ರಾಜೀನಾಮೆ ನೀಡಬೇಕು – ಸಿಪಿಐ

- Advertisement -
- Advertisement -

ಈಶಾನ್ಯ ಭಾರತದ ಮಣಿಪುರದಲ್ಲಿ ಭುಗಿಲೆದ್ದಿರುವ ಜನಾಂಗೀಯ ಹಿಂಸಾಚಾರದ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವವ ಕ್ಷಮೆಯಾಚನೆಗೆ ಕಮ್ಯುನಿಸ್ಟ್‌ ಪಾರ್ಟಿ ಆಫ್ ಇಂಡಿಯಾ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಕೇಲವ ಕ್ಷಮೆಯಾಚಿಸಿದರೆ ಸಾಕಾಗುವುದಿಲ್ಲ, ಅವರು ರಾಜೀನಾಮೆ ನೀಡಬೇಕಿದೆ ಎಂದು ಹೇಳಿದೆ. ಸರ್ಕಾರವು ಸಂಪೂರ್ಣ ಸ್ಥಗಿತಗೊಂಡಿದೆ ಎಂಬುವುದನ್ನು ರಾಜ್ಯದ ಬಿಕ್ಕಟ್ಟು ಎತ್ತಿ ತೋರಿಸುತ್ತದೆ ಎಂದು ಪಕ್ಷವು ಹೇಳಿಕೆಯಲ್ಲಿ ಆರೋಪಿಸಿದೆ. ಸಿಎಂ ಬಿರೇನ್ ಸಿಂಗ್

“ರಾಜ್ಯ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ. ನಾಗರಿಕರನ್ನು ರಕ್ಷಿಸಲು ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳಲು ವಿಫಲವಾಗಿದೆ. ವ್ಯಾಪಕ ಸಾವು ನೋವು ಮತ್ತು ಅಭದ್ರತೆ ಉಂಟಾಗಿದೆ. ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ವ್ಯಕ್ತಪಡಿಸಿದ ಕ್ಷಮೆಯಾಚನೆಯು ಬಿಕ್ಕಟ್ಟಿನ ಗಂಭೀರತೆ ಮತ್ತು ರಾಜ್ಯದ ಜನರ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಲು ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯವನ್ನು ಒಪ್ಪಿಕೊಂಡಂತೆ ಆಗಿದೆ,” ಎಂದು ಅದು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯ ಸರ್ಕಾರವು ಸಾಮರಸ್ಯಕ್ಕೆ ಬೇಕಾದ ಅರ್ಥಪೂರ್ಣ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಸಿಪಿಐ ಆರೋಪಿಸಿದೆ. “ಸಮುದಾಯಗಳ ನಡುವೆ ಸಂವಾದವನ್ನು ಬೆಳೆಸಲು ಅಥವಾ ನಡೆಯುತ್ತಿರುವ ಬಿಕ್ಕಟ್ಟಿನಿಂದ ಉಂಟಾದ ಧೀರ್ಘವಾದ ಸಾಮಾಜಿಕ ಗಾಯಗಳನ್ನು ಗುಣಪಡಿಸಲು ಯಾವುದೇ ಸಕಾತಾತ್ಮಕ ಕ್ರಮಗಳನ್ನು ತೆಗೆದುಕೊಂಡಿಲ್ಲ” ಎಂದು ಸಿಪಿಐ ಹೇಳಿಕೊಂಡಿದೆ.

ಬಿರೇನ್ ಸಿಂಗ್ ಸರ್ಕಾರವು ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಅಥವಾ ಸಮಗ್ರ ರಾಜಕೀಯ ಪರಿಹಾರವನ್ನು ಕಂಡುಕೊಳ್ಳುವಲ್ಲಿ ಈ ಪಕ್ಷಗಳನ್ನು ತೊಡಗಿಸಿಕೊಳ್ಳಲು ಇಚ್ಛೆಯಿಲ್ಲ. ಅವರು ಕೇವಲ ಕ್ಷಮೆ ಕೇಳಿದರೆ ಸಾಲದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ, ಯಾಕೆಂದರೆ ಜವಾಬ್ದಾರಿಯುತ ಮತ್ತು ದೃಢವಾದ ಆಡಳಿತಕ್ಕೆ ಮಣಿಪುರದ ಜನರು ಅರ್ಹರಾಗಿದ್ದಾರೆ ಎಂದು ಸಿಪಿಐ ಹೇಳಿದೆ.

ಸರ್ಕಾರವು ವಿಶ್ವಾಸವನ್ನು ಮರುಸ್ಥಾಪಿಸಲು ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಹೊಸ ಜನಕೇಂದ್ರಿತ ವಿಧಾನಕ್ಕೆ ದಾರಿ ಮಾಡಿಕೊಡಲು ಅವರು ರಾಜೀನಾಮೆ ನೀಡಬೇಕಾಗಿದೆ ಎಂದು ಪಕ್ಷವೂ ಹೇಳಿದೆ. ಸಿಎಂ ಬಿರೇನ್ ಸಿಂಗ್

2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದ ರಾಜ್ಯದ ಸುಮಾರು 250 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಜೊತೆಗೆ ಸಾವಿರಾರು ಜನರನ್ನು ನಿರಾಶ್ರಿತರಾಗಿದ್ದಾರೆ. ಅದಾಗಿ ಸುಮಾರು ಒಂದುವರೆ ವರ್ಷಗಳ ನಂತರ ಸಿಎಂ ಬಿರೇನ್ ಸಿಂಗ್ ಕಳೆದ ಮಂಗಳವಾರ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಹಿಂದಿನ ತಪ್ಪುಗಳನ್ನು ಮರೆತು ಕ್ಷಮಿಸಿ ಮತ್ತು ಹೊಸದಾಗಿ ಪ್ರಾರಂಭಿಸಲು ಎಲ್ಲಾ ಸಮುದಾಯಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...