Homeಕರ್ನಾಟಕಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ...

ಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ ನೆಟ್ಟಿಗರು

- Advertisement -
- Advertisement -

ಸ್ವಿಟ್ಸರ್ಲೆಂಡಿನ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಭಾಗವಹಿಸಿರುವ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿಯವರು ಕೇರಳ ಮೂಲದ ಮುಸ್ಲಿಂ ಉದ್ಯಮಿ, ಲುಲು ಕಂಪನಿ ಛೇರ್ಮನ್ ‘ಯೂಸುಫ್‌ಅಲಿ ಎಂ.ಎ.’ ಅವರೊಂದಿಗೆ ಹೂಡಿಕೆಯ ಬಗ್ಗೆ ಚರ್ಚೆ ನಡೆಸಿದ್ದು, ಎರಡು ಸಾವಿರ ಕೋಟಿ ರೂ. ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದಿರುವ ಸಿಎಂ ಬೊಮ್ಮಾಯಿಯವರು ಲುಲು ಛೇರ್ಮನ್ ಯೂಸುಫ್ ಅಲಿ ರವರ ಹೆಸರ ಕೈಬಿಟ್ಟು ಲುಲು ಅಂತರಾಷ್ಟ್ರೀಯ ನಿರ್ದೆಶಕ ‘ಎ.ವಿ.ಅನಂತ ರಾಮನ್’ ರವರ ಹೆಸರು ಮಾತ್ರ ಉಲ್ಲೇಖಿಸಿದ್ದಾರೆ. ಮುಖ್ಯಮಂತ್ರಿಯ ಅಧೀಕೃತ ಫೇಸ್‌ಬುಕ್‌ ಖಾತೆಯಲ್ಲಿ ಇದನ್ನು ಪೋಸ್ಟ್‌ ಮಾಡಲಾಗಿದೆ. ಮುಸ್ಲಿಂರೊಂದಿಗೆ ವ್ಯಾಪಾರ ಒಪ್ಪಂದವು ಚರ್ಚೆಗೆ ಗ್ರಾಸವಾಗುವುದನ್ನು ತಪ್ಪಿಸಲು ಈ ರೀತಿ ಬರೆದಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ರಾಜ್ಯದಲ್ಲಿ ನಾಲ್ಕು ಮಾಲ್ ಗಳು ಮತ್ತು ಹೈಪರ್ ಮಾರ್ಕೆಟ್ ಗಳ ಮೂಲಕ 10,000 ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಂ.ಎ. ಯೂಸುಫ್ ಅಲಿ ಅವರು, ‘ಲುಲು ಗ್ರೂಪ್‌ ಇಂಟರ್‌ನ್ಯಾಷನಲ್‌’ ಕಂಪೆನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಲುಲು ಗ್ರೂಪ್ ಇಂಟರ್‌ನ್ಯಾಶನಲ್‌‌ನ ಪ್ರಧಾನ ಕಚೇರಿ ಯುಎಇಯ ಅಬುಧಾಬಿಯಲ್ಲಿದೆ. ಕಂಪೆನಿಯು ಹಲವಾರು ಹೈಪರ್‌ಮಾರ್ಕೆಟ್‌ಗಳು ಮತ್ತು ಮಾಲ್‌ಗಳನ್ನು ಹೊಂದಿದೆ. ತಿರುವನಂದಪುರಂನಲ್ಲಿರುವ ಲುಲು ಮಾಲ್‌ ಭಾರತದ 2 ನೇ ಅತೀ ದೊಡ್ಡ ಮಾಲ್‌ ಆಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕೂಡಾ ಲುಲು ಮಾಲ್ ಪ್ರಾರಂಭವಾಗಿದೆ.

ಮುಖ್ಯಮಂತ್ರಿ ತನ್ನ ಪೋಸ್ಟ್‌ನಲ್ಲಿ, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಸ್ವಿಟ್ಸರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಮೆ: ಲುಲು ಗ್ರೂಪ್ ಇಂಟರ್ ನ್ಯಾಷನಲ್ ನ ನಿರ್ದೇಶಕ ಎ.ವಿ.ಅನಂತ ರಾಮನ್ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಯಿತು” ಎಂದು ಹೆಸರಿಸಿದ್ದಾರೆ.

“ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ” ಎಂದು ಸಿಎಂ ಬರೆದಿದ್ದಾರೆ.

ಮುಖ್ಯಮಂತ್ರಿ ಫೇಸ್‌ಬುಕ್‌ನಲ್ಲಿ ಬರೆದ ಪೋಸ್ಟ್‌‌

ಇದನ್ನೂ ಓದಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

ಇಷ್ಟೇ ಅಲ್ಲದೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ತನ್ನ ಪೋಸ್ಟ್‌ ಅನ್ನು ಇಂಗ್ಲಿಷ್‌ನಲ್ಲಿ ಕೂಡಾ ಬರೆದಿದ್ದು, ಆದರೆ ಅದರಲ್ಲಿ ಉದ್ಯಮಿಯ ಹೆಸರನ್ನು ಉಲ್ಲೇಖಿಸಿಲ್ಲ. ಇಂ‌ಗ್ಲಿಷ್‌ನಲ್ಲಿ, “LuLu Group and Govt of Karnataka signed MoU for setting up of 4 Shopping Malls and Hypermarkets and 100% export oriented food stores for agricultural products processing. These malls are being targeted in Tier 2 cities in Karnataka. Rs 2000 Cr will be invested by Lulu Group in Karnataka and will generate 10,000+ employment opportunities” ಎಂದು ಬರೆದಿದ್ದಾರೆ.

ಸಿಎಂ ಬೊಮ್ಮಾಯಿ ಅವರ ಫೇಸ್‌ಬುಕ್‌ ಖಾತೆಯಲ್ಲಿನ ಪೋಸ್ಟ್‌

ಇತ್ತೀಚೆಗೆ ಕರ್ನಾಟಕದಲ್ಲಿ ಮುಸ್ಲಿಂ ವಿರೋಧಿ ದ್ವೇಷ ಅಭಿಯಾನ ಆರಂಭವಾಗಿತ್ತು. ಮುಸ್ಲಿಮರ ವ್ಯಾಪಾರಕ್ಕೆ ಬಹಿಷ್ಕಾರ ಮಾಡಲಾಗಿತ್ತು. ಅದನ್ನು ಸಿಎಂ ಬೊಮ್ಮಾಯಿ ಖಂಡಿಸದೆ ಪರೋಕ್ಷವಾಗಿ ಬೆಂಬಲಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈಗ ತಾವೇ ಮುಸ್ಲಿಮರೊಟ್ಟಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದ್ದಾರೆ, ಇದು ಇಬ್ಬಗೆ ನೀತಿ ಎಂಬ ಟೀಕೆ ತಪ್ಪಿಸಲು ಮುಖ್ಯಮಂತ್ರಿಯ ಅವರು ಕರ್ನಾಟಕ ಮುಖ್ಯಮಂತ್ರಿ ಅಧೀಕೃತ ಫೇಸ್‌ಬುಕ್ ಪೇಜ್‌ನಲ್ಲಿ ಉದ್ಯಮಿಯ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಟ್ಟಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ದ್ವೇಷ ಭಾಷಣ: ಮುಂಬೈನಲ್ಲಿ ಮೂರು ಜನರ ಬಂಧನ

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ವಿನಯ್ ಕಸ್ವೆ ಅವರು, “ಮುಖ್ಯಮಂತ್ರಿಗಳ ಅಧಿಕೃತ ಹ್ಯಾಂಡಲ್ ನಲ್ಲಿ ಒಂದು ಸೂಕ್ಷ್ಮ ಗಮನಿಸಿ. ಮುಸ್ಲಿಂ ಉದ್ಯಮಿ ಯೂಸುಫ್ ಅಲಿ ಮಾಲೀಕತ್ವದ ಲುಲು ಗ್ರೂಪ್ ನೊಂದಿಗೆ ರಾಜ್ಯದಲ್ಲಿ 2000 ಕೋಟಿ ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಿದ್ದಾರಂತೆ. ಸಿಎಂ ಅವರು ಯೂಸುಫ್ ಅಲಿಯವರನ್ನು ಭೇಟಿಯಾಗಿದ್ದಾರೆ, ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ, ಫೋಟೋದಲ್ಲೂ ಯೂಸುಫ್ ಅಲಿ ಇದ್ದಾರೆ. ಆದರೆ ಕನ್ನಡದಲ್ಲಿ ನಿರ್ದೇಶಕ ಅನಂತ್ ರಾಮನ್ ಹೆಸರನ್ನು ಮಾತ್ರ ಹಾಕಿದ್ದಾರೆ. ಯೂಸುಫ್ ಅಲಿ ಹೆಸರು ಹಾಕಲು ಹಿಂದೇಟು ಹಾಕಿದ್ದಾರೆ… ಯಾಕೆ ನಾಚಿಕೆಯೇ? ಸಂಘಪರಿವಾರದ ಬೆಂಬಲಿಗರು ಬೇಸರಿಕೊಂಡಾರು ಎಂಬ ಹಿಂಜರಿಕೆಯೇ? ಮುಗಿಬಿದ್ದಾರು ಎಂಬ ಭಯವೇ” ಎಂದು ಪ್ರಶ್ನಿಸಿದ್ದಾರೆ.

“ಇಂಗ್ಲಿಷ್ ಅನುವಾದದಲ್ಲಿ ಯಾರ ಹೆಸರನ್ನೂ ಹಾಕಿಲ್ಲ…ಮಾಲೀಕನ ಹೆಸರು ಬಿಟ್ಟು ನಿರ್ದೇಶಕನ ಹೆಸರು ಹಾಕಿದ್ದಾರೆ ಎಂಬ ವಿವಾದ ಆಗದಿರಲಿ ಎಂದೇ? ಅಲ್ಲಿಯವರು ಇಂಗ್ಲಿಷ್ ನಲ್ಲಿ ಓದಿಕೊಂಡು ತರಾಟೆಗೆ ತೆಗೆದುಕೊಳ್ಳದಿರಲಿ ಎಂದೇ?” ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮತದಾರರು ಮೋಸ ಹೋಗುತ್ತಲೇ ಇದ್ದಾರೆ….. ಅದರಲ್ಲೂ ಶೂದ್ರರು. ದಲಿತರು ಅತೀ ಹೆಚ್ಚು. ….. ಅವರೆಲ್ಲರೂ
    RSS ನಿಂದ ಈಗಲಾದರೂ ಹೊರಗೆ ಬರಲಿ.

  2. RSS/ BJP ಗೆ ವಾಸ್ತವ ಸಂಗತಿ ಯನ್ನು ಜನರಲ್ಲಿ ತಿಳಿಸುವ ಧೈರ್ಯ ಇಲ್ಲದ ಹಾಗೂ ಸುಳ್ಳು ಪ್ರಚಾರಕ್ಕೆ ದೇಶದ ಜನತೆ ಯನ್ನೂ ಮೋಸ ಮಾಡಿ ರಾಜಕಾರಣ ಮಾಡುವ ಪಕ್ಷ ಒಂದು ಇದ್ದರೆ ಅದು ಖಂಡಿತ BJP ಅಂತ ಮಾನ್ಯ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ ಹೊರತು ಇಂಗ್ಲಿಷ್ ನಲ್ಲಿ ಲುಲು ಮಾಲಕರ ಹೆಸರು ಸಂಘ್ಹಿ ಬೊಮ್ಮಾಯಿ ಬರೆದು ಆರೆಸಸ್ ನ ಕಿರಿಕ್ ಬೇಡ ಅಷ್ಟೇ. ಯೂಸುಫ್ ಅಲೀ ಗೆ ಯಾವ ಪರಿಚಯ ದ ಅವಶ್ಯಕತೆಯೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...