Homeಕರ್ನಾಟಕಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ...

ಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ ನೆಟ್ಟಿಗರು

- Advertisement -
- Advertisement -

ಸ್ವಿಟ್ಸರ್ಲೆಂಡಿನ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಭಾಗವಹಿಸಿರುವ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿಯವರು ಕೇರಳ ಮೂಲದ ಮುಸ್ಲಿಂ ಉದ್ಯಮಿ, ಲುಲು ಕಂಪನಿ ಛೇರ್ಮನ್ ‘ಯೂಸುಫ್‌ಅಲಿ ಎಂ.ಎ.’ ಅವರೊಂದಿಗೆ ಹೂಡಿಕೆಯ ಬಗ್ಗೆ ಚರ್ಚೆ ನಡೆಸಿದ್ದು, ಎರಡು ಸಾವಿರ ಕೋಟಿ ರೂ. ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದಿರುವ ಸಿಎಂ ಬೊಮ್ಮಾಯಿಯವರು ಲುಲು ಛೇರ್ಮನ್ ಯೂಸುಫ್ ಅಲಿ ರವರ ಹೆಸರ ಕೈಬಿಟ್ಟು ಲುಲು ಅಂತರಾಷ್ಟ್ರೀಯ ನಿರ್ದೆಶಕ ‘ಎ.ವಿ.ಅನಂತ ರಾಮನ್’ ರವರ ಹೆಸರು ಮಾತ್ರ ಉಲ್ಲೇಖಿಸಿದ್ದಾರೆ. ಮುಖ್ಯಮಂತ್ರಿಯ ಅಧೀಕೃತ ಫೇಸ್‌ಬುಕ್‌ ಖಾತೆಯಲ್ಲಿ ಇದನ್ನು ಪೋಸ್ಟ್‌ ಮಾಡಲಾಗಿದೆ. ಮುಸ್ಲಿಂರೊಂದಿಗೆ ವ್ಯಾಪಾರ ಒಪ್ಪಂದವು ಚರ್ಚೆಗೆ ಗ್ರಾಸವಾಗುವುದನ್ನು ತಪ್ಪಿಸಲು ಈ ರೀತಿ ಬರೆದಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ರಾಜ್ಯದಲ್ಲಿ ನಾಲ್ಕು ಮಾಲ್ ಗಳು ಮತ್ತು ಹೈಪರ್ ಮಾರ್ಕೆಟ್ ಗಳ ಮೂಲಕ 10,000 ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಂ.ಎ. ಯೂಸುಫ್ ಅಲಿ ಅವರು, ‘ಲುಲು ಗ್ರೂಪ್‌ ಇಂಟರ್‌ನ್ಯಾಷನಲ್‌’ ಕಂಪೆನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಲುಲು ಗ್ರೂಪ್ ಇಂಟರ್‌ನ್ಯಾಶನಲ್‌‌ನ ಪ್ರಧಾನ ಕಚೇರಿ ಯುಎಇಯ ಅಬುಧಾಬಿಯಲ್ಲಿದೆ. ಕಂಪೆನಿಯು ಹಲವಾರು ಹೈಪರ್‌ಮಾರ್ಕೆಟ್‌ಗಳು ಮತ್ತು ಮಾಲ್‌ಗಳನ್ನು ಹೊಂದಿದೆ. ತಿರುವನಂದಪುರಂನಲ್ಲಿರುವ ಲುಲು ಮಾಲ್‌ ಭಾರತದ 2 ನೇ ಅತೀ ದೊಡ್ಡ ಮಾಲ್‌ ಆಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕೂಡಾ ಲುಲು ಮಾಲ್ ಪ್ರಾರಂಭವಾಗಿದೆ.

ಮುಖ್ಯಮಂತ್ರಿ ತನ್ನ ಪೋಸ್ಟ್‌ನಲ್ಲಿ, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಸ್ವಿಟ್ಸರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಮೆ: ಲುಲು ಗ್ರೂಪ್ ಇಂಟರ್ ನ್ಯಾಷನಲ್ ನ ನಿರ್ದೇಶಕ ಎ.ವಿ.ಅನಂತ ರಾಮನ್ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಯಿತು” ಎಂದು ಹೆಸರಿಸಿದ್ದಾರೆ.

“ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ” ಎಂದು ಸಿಎಂ ಬರೆದಿದ್ದಾರೆ.

ಮುಖ್ಯಮಂತ್ರಿ ಫೇಸ್‌ಬುಕ್‌ನಲ್ಲಿ ಬರೆದ ಪೋಸ್ಟ್‌‌

ಇದನ್ನೂ ಓದಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

ಇಷ್ಟೇ ಅಲ್ಲದೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ತನ್ನ ಪೋಸ್ಟ್‌ ಅನ್ನು ಇಂಗ್ಲಿಷ್‌ನಲ್ಲಿ ಕೂಡಾ ಬರೆದಿದ್ದು, ಆದರೆ ಅದರಲ್ಲಿ ಉದ್ಯಮಿಯ ಹೆಸರನ್ನು ಉಲ್ಲೇಖಿಸಿಲ್ಲ. ಇಂ‌ಗ್ಲಿಷ್‌ನಲ್ಲಿ, “LuLu Group and Govt of Karnataka signed MoU for setting up of 4 Shopping Malls and Hypermarkets and 100% export oriented food stores for agricultural products processing. These malls are being targeted in Tier 2 cities in Karnataka. Rs 2000 Cr will be invested by Lulu Group in Karnataka and will generate 10,000+ employment opportunities” ಎಂದು ಬರೆದಿದ್ದಾರೆ.

ಸಿಎಂ ಬೊಮ್ಮಾಯಿ ಅವರ ಫೇಸ್‌ಬುಕ್‌ ಖಾತೆಯಲ್ಲಿನ ಪೋಸ್ಟ್‌

ಇತ್ತೀಚೆಗೆ ಕರ್ನಾಟಕದಲ್ಲಿ ಮುಸ್ಲಿಂ ವಿರೋಧಿ ದ್ವೇಷ ಅಭಿಯಾನ ಆರಂಭವಾಗಿತ್ತು. ಮುಸ್ಲಿಮರ ವ್ಯಾಪಾರಕ್ಕೆ ಬಹಿಷ್ಕಾರ ಮಾಡಲಾಗಿತ್ತು. ಅದನ್ನು ಸಿಎಂ ಬೊಮ್ಮಾಯಿ ಖಂಡಿಸದೆ ಪರೋಕ್ಷವಾಗಿ ಬೆಂಬಲಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈಗ ತಾವೇ ಮುಸ್ಲಿಮರೊಟ್ಟಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದ್ದಾರೆ, ಇದು ಇಬ್ಬಗೆ ನೀತಿ ಎಂಬ ಟೀಕೆ ತಪ್ಪಿಸಲು ಮುಖ್ಯಮಂತ್ರಿಯ ಅವರು ಕರ್ನಾಟಕ ಮುಖ್ಯಮಂತ್ರಿ ಅಧೀಕೃತ ಫೇಸ್‌ಬುಕ್ ಪೇಜ್‌ನಲ್ಲಿ ಉದ್ಯಮಿಯ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಟ್ಟಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ದ್ವೇಷ ಭಾಷಣ: ಮುಂಬೈನಲ್ಲಿ ಮೂರು ಜನರ ಬಂಧನ

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ವಿನಯ್ ಕಸ್ವೆ ಅವರು, “ಮುಖ್ಯಮಂತ್ರಿಗಳ ಅಧಿಕೃತ ಹ್ಯಾಂಡಲ್ ನಲ್ಲಿ ಒಂದು ಸೂಕ್ಷ್ಮ ಗಮನಿಸಿ. ಮುಸ್ಲಿಂ ಉದ್ಯಮಿ ಯೂಸುಫ್ ಅಲಿ ಮಾಲೀಕತ್ವದ ಲುಲು ಗ್ರೂಪ್ ನೊಂದಿಗೆ ರಾಜ್ಯದಲ್ಲಿ 2000 ಕೋಟಿ ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಿದ್ದಾರಂತೆ. ಸಿಎಂ ಅವರು ಯೂಸುಫ್ ಅಲಿಯವರನ್ನು ಭೇಟಿಯಾಗಿದ್ದಾರೆ, ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ, ಫೋಟೋದಲ್ಲೂ ಯೂಸುಫ್ ಅಲಿ ಇದ್ದಾರೆ. ಆದರೆ ಕನ್ನಡದಲ್ಲಿ ನಿರ್ದೇಶಕ ಅನಂತ್ ರಾಮನ್ ಹೆಸರನ್ನು ಮಾತ್ರ ಹಾಕಿದ್ದಾರೆ. ಯೂಸುಫ್ ಅಲಿ ಹೆಸರು ಹಾಕಲು ಹಿಂದೇಟು ಹಾಕಿದ್ದಾರೆ… ಯಾಕೆ ನಾಚಿಕೆಯೇ? ಸಂಘಪರಿವಾರದ ಬೆಂಬಲಿಗರು ಬೇಸರಿಕೊಂಡಾರು ಎಂಬ ಹಿಂಜರಿಕೆಯೇ? ಮುಗಿಬಿದ್ದಾರು ಎಂಬ ಭಯವೇ” ಎಂದು ಪ್ರಶ್ನಿಸಿದ್ದಾರೆ.

“ಇಂಗ್ಲಿಷ್ ಅನುವಾದದಲ್ಲಿ ಯಾರ ಹೆಸರನ್ನೂ ಹಾಕಿಲ್ಲ…ಮಾಲೀಕನ ಹೆಸರು ಬಿಟ್ಟು ನಿರ್ದೇಶಕನ ಹೆಸರು ಹಾಕಿದ್ದಾರೆ ಎಂಬ ವಿವಾದ ಆಗದಿರಲಿ ಎಂದೇ? ಅಲ್ಲಿಯವರು ಇಂಗ್ಲಿಷ್ ನಲ್ಲಿ ಓದಿಕೊಂಡು ತರಾಟೆಗೆ ತೆಗೆದುಕೊಳ್ಳದಿರಲಿ ಎಂದೇ?” ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮತದಾರರು ಮೋಸ ಹೋಗುತ್ತಲೇ ಇದ್ದಾರೆ….. ಅದರಲ್ಲೂ ಶೂದ್ರರು. ದಲಿತರು ಅತೀ ಹೆಚ್ಚು. ….. ಅವರೆಲ್ಲರೂ
    RSS ನಿಂದ ಈಗಲಾದರೂ ಹೊರಗೆ ಬರಲಿ.

  2. RSS/ BJP ಗೆ ವಾಸ್ತವ ಸಂಗತಿ ಯನ್ನು ಜನರಲ್ಲಿ ತಿಳಿಸುವ ಧೈರ್ಯ ಇಲ್ಲದ ಹಾಗೂ ಸುಳ್ಳು ಪ್ರಚಾರಕ್ಕೆ ದೇಶದ ಜನತೆ ಯನ್ನೂ ಮೋಸ ಮಾಡಿ ರಾಜಕಾರಣ ಮಾಡುವ ಪಕ್ಷ ಒಂದು ಇದ್ದರೆ ಅದು ಖಂಡಿತ BJP ಅಂತ ಮಾನ್ಯ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ ಹೊರತು ಇಂಗ್ಲಿಷ್ ನಲ್ಲಿ ಲುಲು ಮಾಲಕರ ಹೆಸರು ಸಂಘ್ಹಿ ಬೊಮ್ಮಾಯಿ ಬರೆದು ಆರೆಸಸ್ ನ ಕಿರಿಕ್ ಬೇಡ ಅಷ್ಟೇ. ಯೂಸುಫ್ ಅಲೀ ಗೆ ಯಾವ ಪರಿಚಯ ದ ಅವಶ್ಯಕತೆಯೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...