Homeಕರ್ನಾಟಕಕಾರ್ಯಕ್ರಮಕ್ಕೆ ತಡವಾಗಿ ಬಂದ ಸಿಎಂ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್

ಕಾರ್ಯಕ್ರಮಕ್ಕೆ ತಡವಾಗಿ ಬಂದ ಸಿಎಂ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್

- Advertisement -
- Advertisement -

ಮಂಗಳವಾರ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆಯಲ್ಲಿ (ಕೆಎಸ್‌ಎಲ್‌ಟಿಎ) ನಡೆದ ಸಮಾರಂಭದಲ್ಲಿ ಟೆನಿಸ್ ದಿಗ್ಗಜ ಬೋನ್ ಬೋರ್ಗ್ ಅವರು ಸನ್ಮಾನ ಸ್ವೀಕರಿಸಲು ನಿರಾಕರಿಸಿದ್ದಾರೆ. ಏಕೆಂದರೆ ಈ ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೂವರೆ ಗಂಟೆ ತಡವಾಗಿ ಬಂದಿದ್ದರು. ಹಾಗಾಗಿ ಸಮಯಕ್ಕೆ ಹೆಚ್ಚು ಮಹತ್ವ ಕೊಡುವ ಬೋರ್ಗ್ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದರು.

ಹನ್ನೊಂದು ಗ್ರಾನ್‌ ಸ್ಲಾಮ್ ಪ್ರಶಸ್ತಿಗಳ ವಿಜೇತ, ಸ್ವೀಡನ್ ದೇಶದ ಬೋರ್ಗ್ ಅವರ ಪುತ್ರ ಲಿಯೊ ಬೋರ್ಗ್, ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯಲ್ಲಿ ಭಾಗವಹಿಸಿದ್ದಾರೆ. ಮಗನ ಆಟ ನೋಡಲು ಬೋರ್ಗ್ ಬೆಂಗಳೂರಿಗೆ ಬಂದಿದ್ದಾರೆ.

ಮಂಗಳವಾರ ಬೆಂಗಳೂರಿನ ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ಭಾರತದ ಮಾಜಿ ಆಟಗಾರ ವಿಜಯ್ ಅಮೃತ್‌ರಾಜಿ ಮತ್ತು ಬೋರ್ಗ್ ಅವರನ್ನು ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬೆಳಿಗ್ಗೆ 9.30ಕ್ಕೆ ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿ ಬರುವುದು ತಡವಾದದ್ದಕ್ಕೆ ಸಮಾರಂಭವನ್ನು 10.15ಕ್ಕೆ ಮುಂದೂಡಲಾಯಿತು. ಆದರೆ ಸಿಎಂ ಬೊಮ್ಮಾಯಿ ಅವರು 11 ಗಂಟೆಯಾದರೂ ಬರಲಿಲ್ಲ ಎನ್ನುವ ಕಾರಣಕ್ಕೆ ಕಾರ್ಯಕ್ರಮವೂ ಆರಂಭವಾಗಲಿಲ್ಲ.

ಇದನ್ನೂ ಓದಿ:ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ಇತ್ತ ಬೋರ್ಗ್ ಅವರ ಪುತ್ರ ಲಿಯೊ ಅವರ ಪಂದ್ಯ ಬೆಳಿಗ್ಗೆ 11ಕ್ಕೆ ನಿಗದಿಯಾಗಿತ್ತು. ಮಗನ ಆಟ ನೋಡಲು ಬೋರ್ಗ್ ಅವರು ಗ್ಯಾಲರಿಯಲ್ಲಿ ಕುಳಿತುಕೊಂಡರು. ಪಂದ್ಯ ಶುರುವಾಗಿ ಕೆಲಹೊತ್ತಿನ ಬಳಿಕ ಬೊಮ್ಮಾಯಿ ಅವರು ಬಂದರು. ಮುಖ್ಯಮಂತ್ರಿ ಬಂದ ವಿಷಯವನ್ನು ಬೋರ್ಗ್ ಅವರ ಗಮನಕ್ಕೆ ತರಲಾಯಿತು ಆದರೆ ಬೋರ್ಗ್ ಅವರು ಪಂದ್ಯ ಮುಗಿದ ಬಳಿಕವಷ್ಟೇ ಬರುವುದಾಗಿ ಹೇಳಿದರು. ಇದರಿಂದ ಆಯೋಜಕರು ಸಮಾರಂಭವನ್ನು ರದ್ದುಗೊಳಿಸಿದರು.

‘ಬೇರೆ ಕಾರ್ಯಕ್ರಮಗಳು ಇದ್ದ ಕಾರಣ ಮುಖ್ಯಮಂತ್ರಿ ತಡವಾಗಿ ಬಂದರು’ ಎಂದು ಕಾರ್ಯಕ್ರಮದ ಸಂಘಟನಾ ಸಮಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

”ಮಗನ ಪಂದ್ಯದ ವೀಕ್ಷಣೆಯನ್ನು ಅರ್ಧದಲ್ಲೇ ಬಿಟ್ಟು ಬರಲು ಬೋರ್ಗ್  ಒಪ್ಪಲಿಲ್ಲ ಎನ್ನುವುದನ್ನು ಮುಖ್ಯಮಂತ್ರಿಗೆ ತಿಳಿಸಿದೆವು. ಪರಿಸ್ಥಿತಿಯನ್ನು ಕ್ರೀಡಾ ಮನೋಭಾವದಿಂದಲೇ ಸ್ವೀಕರಿಸಿದ ಬೊಮ್ಮಾಯಿ ಅವರು ಕೆಲಹೊತ್ತು ಗ್ಯಾಲರಿಯಲ್ಲಿ ಕುಳಿತು ಪಂದ್ಯ ವೀಕ್ಷಿಸಿ ಅಲ್ಲಿಂದ ತೆರಳಿದರು” ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಮಯಕ್ಕೆ ಬದ್ಧರಾಗಿರುವುದು ಕಷ್ಟ ಆದರೆ ಬೋರ್ಗ್ ಯಾವುದಕ್ಕೂ ಕಾಯುವವರಲ್ಲ, ಅವರು ಈ ಹಿಂದಿನಿಂದಲೂ ಇದನ್ನು ರೂಢಿಸಿಕೊಂಡು ಬಂದಿದ್ದಾರೆ. ಬೋರ್ಗ್ ನಲವತ್ತು ವರ್ಷಗಳ ಹಿಂದಿನಿಂದಲೂ ಸಮಯಕ್ಕೆ ಬೆಲೆ ಕೊಡುವುದನ್ನು ಪಾಲಿಸಿಕೊಂಡುಬಂದಿದ್ದು, ಇದೀಗ ಈ ಸಮಾರಂಭದಲ್ಲಿ ಮತ್ತೆ ಅದು ಕಂಡುಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...