Homeಕರ್ನಾಟಕಕಾರ್ಯಕ್ರಮಕ್ಕೆ ತಡವಾಗಿ ಬಂದ ಸಿಎಂ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್

ಕಾರ್ಯಕ್ರಮಕ್ಕೆ ತಡವಾಗಿ ಬಂದ ಸಿಎಂ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್

- Advertisement -
- Advertisement -

ಮಂಗಳವಾರ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆಯಲ್ಲಿ (ಕೆಎಸ್‌ಎಲ್‌ಟಿಎ) ನಡೆದ ಸಮಾರಂಭದಲ್ಲಿ ಟೆನಿಸ್ ದಿಗ್ಗಜ ಬೋನ್ ಬೋರ್ಗ್ ಅವರು ಸನ್ಮಾನ ಸ್ವೀಕರಿಸಲು ನಿರಾಕರಿಸಿದ್ದಾರೆ. ಏಕೆಂದರೆ ಈ ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೂವರೆ ಗಂಟೆ ತಡವಾಗಿ ಬಂದಿದ್ದರು. ಹಾಗಾಗಿ ಸಮಯಕ್ಕೆ ಹೆಚ್ಚು ಮಹತ್ವ ಕೊಡುವ ಬೋರ್ಗ್ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದರು.

ಹನ್ನೊಂದು ಗ್ರಾನ್‌ ಸ್ಲಾಮ್ ಪ್ರಶಸ್ತಿಗಳ ವಿಜೇತ, ಸ್ವೀಡನ್ ದೇಶದ ಬೋರ್ಗ್ ಅವರ ಪುತ್ರ ಲಿಯೊ ಬೋರ್ಗ್, ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯಲ್ಲಿ ಭಾಗವಹಿಸಿದ್ದಾರೆ. ಮಗನ ಆಟ ನೋಡಲು ಬೋರ್ಗ್ ಬೆಂಗಳೂರಿಗೆ ಬಂದಿದ್ದಾರೆ.

ಮಂಗಳವಾರ ಬೆಂಗಳೂರಿನ ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ಭಾರತದ ಮಾಜಿ ಆಟಗಾರ ವಿಜಯ್ ಅಮೃತ್‌ರಾಜಿ ಮತ್ತು ಬೋರ್ಗ್ ಅವರನ್ನು ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬೆಳಿಗ್ಗೆ 9.30ಕ್ಕೆ ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿ ಬರುವುದು ತಡವಾದದ್ದಕ್ಕೆ ಸಮಾರಂಭವನ್ನು 10.15ಕ್ಕೆ ಮುಂದೂಡಲಾಯಿತು. ಆದರೆ ಸಿಎಂ ಬೊಮ್ಮಾಯಿ ಅವರು 11 ಗಂಟೆಯಾದರೂ ಬರಲಿಲ್ಲ ಎನ್ನುವ ಕಾರಣಕ್ಕೆ ಕಾರ್ಯಕ್ರಮವೂ ಆರಂಭವಾಗಲಿಲ್ಲ.

ಇದನ್ನೂ ಓದಿ:ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ಇತ್ತ ಬೋರ್ಗ್ ಅವರ ಪುತ್ರ ಲಿಯೊ ಅವರ ಪಂದ್ಯ ಬೆಳಿಗ್ಗೆ 11ಕ್ಕೆ ನಿಗದಿಯಾಗಿತ್ತು. ಮಗನ ಆಟ ನೋಡಲು ಬೋರ್ಗ್ ಅವರು ಗ್ಯಾಲರಿಯಲ್ಲಿ ಕುಳಿತುಕೊಂಡರು. ಪಂದ್ಯ ಶುರುವಾಗಿ ಕೆಲಹೊತ್ತಿನ ಬಳಿಕ ಬೊಮ್ಮಾಯಿ ಅವರು ಬಂದರು. ಮುಖ್ಯಮಂತ್ರಿ ಬಂದ ವಿಷಯವನ್ನು ಬೋರ್ಗ್ ಅವರ ಗಮನಕ್ಕೆ ತರಲಾಯಿತು ಆದರೆ ಬೋರ್ಗ್ ಅವರು ಪಂದ್ಯ ಮುಗಿದ ಬಳಿಕವಷ್ಟೇ ಬರುವುದಾಗಿ ಹೇಳಿದರು. ಇದರಿಂದ ಆಯೋಜಕರು ಸಮಾರಂಭವನ್ನು ರದ್ದುಗೊಳಿಸಿದರು.

‘ಬೇರೆ ಕಾರ್ಯಕ್ರಮಗಳು ಇದ್ದ ಕಾರಣ ಮುಖ್ಯಮಂತ್ರಿ ತಡವಾಗಿ ಬಂದರು’ ಎಂದು ಕಾರ್ಯಕ್ರಮದ ಸಂಘಟನಾ ಸಮಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

”ಮಗನ ಪಂದ್ಯದ ವೀಕ್ಷಣೆಯನ್ನು ಅರ್ಧದಲ್ಲೇ ಬಿಟ್ಟು ಬರಲು ಬೋರ್ಗ್  ಒಪ್ಪಲಿಲ್ಲ ಎನ್ನುವುದನ್ನು ಮುಖ್ಯಮಂತ್ರಿಗೆ ತಿಳಿಸಿದೆವು. ಪರಿಸ್ಥಿತಿಯನ್ನು ಕ್ರೀಡಾ ಮನೋಭಾವದಿಂದಲೇ ಸ್ವೀಕರಿಸಿದ ಬೊಮ್ಮಾಯಿ ಅವರು ಕೆಲಹೊತ್ತು ಗ್ಯಾಲರಿಯಲ್ಲಿ ಕುಳಿತು ಪಂದ್ಯ ವೀಕ್ಷಿಸಿ ಅಲ್ಲಿಂದ ತೆರಳಿದರು” ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಮಯಕ್ಕೆ ಬದ್ಧರಾಗಿರುವುದು ಕಷ್ಟ ಆದರೆ ಬೋರ್ಗ್ ಯಾವುದಕ್ಕೂ ಕಾಯುವವರಲ್ಲ, ಅವರು ಈ ಹಿಂದಿನಿಂದಲೂ ಇದನ್ನು ರೂಢಿಸಿಕೊಂಡು ಬಂದಿದ್ದಾರೆ. ಬೋರ್ಗ್ ನಲವತ್ತು ವರ್ಷಗಳ ಹಿಂದಿನಿಂದಲೂ ಸಮಯಕ್ಕೆ ಬೆಲೆ ಕೊಡುವುದನ್ನು ಪಾಲಿಸಿಕೊಂಡುಬಂದಿದ್ದು, ಇದೀಗ ಈ ಸಮಾರಂಭದಲ್ಲಿ ಮತ್ತೆ ಅದು ಕಂಡುಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...