Homeಕರ್ನಾಟಕಕಾರ್ಯಕ್ರಮಕ್ಕೆ ತಡವಾಗಿ ಬಂದ ಸಿಎಂ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್

ಕಾರ್ಯಕ್ರಮಕ್ಕೆ ತಡವಾಗಿ ಬಂದ ಸಿಎಂ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್

- Advertisement -
- Advertisement -

ಮಂಗಳವಾರ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆಯಲ್ಲಿ (ಕೆಎಸ್‌ಎಲ್‌ಟಿಎ) ನಡೆದ ಸಮಾರಂಭದಲ್ಲಿ ಟೆನಿಸ್ ದಿಗ್ಗಜ ಬೋನ್ ಬೋರ್ಗ್ ಅವರು ಸನ್ಮಾನ ಸ್ವೀಕರಿಸಲು ನಿರಾಕರಿಸಿದ್ದಾರೆ. ಏಕೆಂದರೆ ಈ ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೂವರೆ ಗಂಟೆ ತಡವಾಗಿ ಬಂದಿದ್ದರು. ಹಾಗಾಗಿ ಸಮಯಕ್ಕೆ ಹೆಚ್ಚು ಮಹತ್ವ ಕೊಡುವ ಬೋರ್ಗ್ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದರು.

ಹನ್ನೊಂದು ಗ್ರಾನ್‌ ಸ್ಲಾಮ್ ಪ್ರಶಸ್ತಿಗಳ ವಿಜೇತ, ಸ್ವೀಡನ್ ದೇಶದ ಬೋರ್ಗ್ ಅವರ ಪುತ್ರ ಲಿಯೊ ಬೋರ್ಗ್, ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯಲ್ಲಿ ಭಾಗವಹಿಸಿದ್ದಾರೆ. ಮಗನ ಆಟ ನೋಡಲು ಬೋರ್ಗ್ ಬೆಂಗಳೂರಿಗೆ ಬಂದಿದ್ದಾರೆ.

ಮಂಗಳವಾರ ಬೆಂಗಳೂರಿನ ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ಭಾರತದ ಮಾಜಿ ಆಟಗಾರ ವಿಜಯ್ ಅಮೃತ್‌ರಾಜಿ ಮತ್ತು ಬೋರ್ಗ್ ಅವರನ್ನು ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬೆಳಿಗ್ಗೆ 9.30ಕ್ಕೆ ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿ ಬರುವುದು ತಡವಾದದ್ದಕ್ಕೆ ಸಮಾರಂಭವನ್ನು 10.15ಕ್ಕೆ ಮುಂದೂಡಲಾಯಿತು. ಆದರೆ ಸಿಎಂ ಬೊಮ್ಮಾಯಿ ಅವರು 11 ಗಂಟೆಯಾದರೂ ಬರಲಿಲ್ಲ ಎನ್ನುವ ಕಾರಣಕ್ಕೆ ಕಾರ್ಯಕ್ರಮವೂ ಆರಂಭವಾಗಲಿಲ್ಲ.

ಇದನ್ನೂ ಓದಿ:ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ಇತ್ತ ಬೋರ್ಗ್ ಅವರ ಪುತ್ರ ಲಿಯೊ ಅವರ ಪಂದ್ಯ ಬೆಳಿಗ್ಗೆ 11ಕ್ಕೆ ನಿಗದಿಯಾಗಿತ್ತು. ಮಗನ ಆಟ ನೋಡಲು ಬೋರ್ಗ್ ಅವರು ಗ್ಯಾಲರಿಯಲ್ಲಿ ಕುಳಿತುಕೊಂಡರು. ಪಂದ್ಯ ಶುರುವಾಗಿ ಕೆಲಹೊತ್ತಿನ ಬಳಿಕ ಬೊಮ್ಮಾಯಿ ಅವರು ಬಂದರು. ಮುಖ್ಯಮಂತ್ರಿ ಬಂದ ವಿಷಯವನ್ನು ಬೋರ್ಗ್ ಅವರ ಗಮನಕ್ಕೆ ತರಲಾಯಿತು ಆದರೆ ಬೋರ್ಗ್ ಅವರು ಪಂದ್ಯ ಮುಗಿದ ಬಳಿಕವಷ್ಟೇ ಬರುವುದಾಗಿ ಹೇಳಿದರು. ಇದರಿಂದ ಆಯೋಜಕರು ಸಮಾರಂಭವನ್ನು ರದ್ದುಗೊಳಿಸಿದರು.

‘ಬೇರೆ ಕಾರ್ಯಕ್ರಮಗಳು ಇದ್ದ ಕಾರಣ ಮುಖ್ಯಮಂತ್ರಿ ತಡವಾಗಿ ಬಂದರು’ ಎಂದು ಕಾರ್ಯಕ್ರಮದ ಸಂಘಟನಾ ಸಮಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

”ಮಗನ ಪಂದ್ಯದ ವೀಕ್ಷಣೆಯನ್ನು ಅರ್ಧದಲ್ಲೇ ಬಿಟ್ಟು ಬರಲು ಬೋರ್ಗ್  ಒಪ್ಪಲಿಲ್ಲ ಎನ್ನುವುದನ್ನು ಮುಖ್ಯಮಂತ್ರಿಗೆ ತಿಳಿಸಿದೆವು. ಪರಿಸ್ಥಿತಿಯನ್ನು ಕ್ರೀಡಾ ಮನೋಭಾವದಿಂದಲೇ ಸ್ವೀಕರಿಸಿದ ಬೊಮ್ಮಾಯಿ ಅವರು ಕೆಲಹೊತ್ತು ಗ್ಯಾಲರಿಯಲ್ಲಿ ಕುಳಿತು ಪಂದ್ಯ ವೀಕ್ಷಿಸಿ ಅಲ್ಲಿಂದ ತೆರಳಿದರು” ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಮಯಕ್ಕೆ ಬದ್ಧರಾಗಿರುವುದು ಕಷ್ಟ ಆದರೆ ಬೋರ್ಗ್ ಯಾವುದಕ್ಕೂ ಕಾಯುವವರಲ್ಲ, ಅವರು ಈ ಹಿಂದಿನಿಂದಲೂ ಇದನ್ನು ರೂಢಿಸಿಕೊಂಡು ಬಂದಿದ್ದಾರೆ. ಬೋರ್ಗ್ ನಲವತ್ತು ವರ್ಷಗಳ ಹಿಂದಿನಿಂದಲೂ ಸಮಯಕ್ಕೆ ಬೆಲೆ ಕೊಡುವುದನ್ನು ಪಾಲಿಸಿಕೊಂಡುಬಂದಿದ್ದು, ಇದೀಗ ಈ ಸಮಾರಂಭದಲ್ಲಿ ಮತ್ತೆ ಅದು ಕಂಡುಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...