Homeಮುಖಪುಟಸಿಎಂ ಒಪ್ಪಿಗೆಯಿಲ್ಲದೆ ಪದಚ್ಯುತಗೊಳಿಸಲು ಸಾಧ್ಯವಿಲ್ಲ; ಸೆಂಥಿಲ್ ಬಾಲಾಜಿಗೆ ಸುಪ್ರೀಂ ರಿಲೀಫ್

ಸಿಎಂ ಒಪ್ಪಿಗೆಯಿಲ್ಲದೆ ಪದಚ್ಯುತಗೊಳಿಸಲು ಸಾಧ್ಯವಿಲ್ಲ; ಸೆಂಥಿಲ್ ಬಾಲಾಜಿಗೆ ಸುಪ್ರೀಂ ರಿಲೀಫ್

- Advertisement -
- Advertisement -

ಬಂಧಿತ ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ಮುಖ್ಯಮಂತ್ರಿ ಒಪ್ಪಿಗೆಯಿಲ್ಲದೆ ಪದಚ್ಯುತಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದ್ದು, ಅವರನ್ನು ಪದಚ್ಯುತಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆಯ ಸಚಿವ ಬಾಲಾಜಿ ಅವರನ್ನು ರಾಜ್ಯ ಕ್ಯಾಬಿನೆಟ್ಟಿನಲ್ಲಿ ಖಾತೆಯಿಲ್ಲದ ಸಚಿವ ಸ್ಥಾನದಿಂದ ತೆಗೆದುಹಾಕಬೇಕೆ ಎಂಬುದನ್ನು ಮುಖ್ಯಮಂತ್ರಿ ನಿರ್ಧರಿಸಬಹುದು ಎಂದು ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

‘ರಾಜ್ಯಪಾಲರಿಗೆ ಸಚಿವರನ್ನು ವಜಾ ಮಾಡುವ ಅಧಿಕಾರವಿದೆಯೇ ಎಂಬುದನ್ನು ಪರಿಗಣಿಸಲು ಹೈಕೋರ್ಟ್ ಸೂಕ್ತವಾಗಿದ್ದು, ಸಂಬಂಧಪಟ್ಟವರು ಸಚಿವರಾಗಿ ಮುಂದುವರಿಯಬೇಕೇ ಎಂಬುದನ್ನು ನಿರ್ಧರಿಸಲು ಮುಖ್ಯಮಂತ್ರಿಗೆ ಬಿಟ್ಟಿದ್ದಾರೆ’ ಎಂದು ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಇಂದು ಹೇಳಿದೆ.

ಇದರಲ್ಲಿ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ನಾವು ಭಾವಿಸುತ್ತೇವೆ. ಮದ್ರಾಸ್ ಹೈಕೋರ್ಟಿನ ದೃಷ್ಟಿಕೋನವನ್ನು ನಾವು ಒಪ್ಪುತ್ತೇವೆ ಮತ್ತು ಯಾವುದೇ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದರೂ ತಮಿಳುನಾಡು ಸರ್ಕಾರದಲ್ಲಿ ಸಚಿವರಾಗಿ ಮುಂದುವರಿಯಬೇಕು ಎಂದು ಮದ್ರಾಸ್ ಹೈಕೋರ್ಟಿನ ತೀರ್ಪನ್ನು ಸಾಮಾಜಿಕ ಕಾರ್ಯಕರ್ತ ಎಂಎಲ್ ರವಿ ಪ್ರಶ್ನಿಸಿದ್ದರು.

ಪ್ರಕರಣದ ಹಿನ್ನೆಲೆ:

ಬರೋಬ್ಬರಿ 18 ಗಂಟೆಗಳ ವಿಚಾರಣೆ ಬಳಿಕ ತಮಿಳುನಾಡಿನ ವಿದ್ಯುತ್ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು 203ರ ಜೂನ್ 14ರಂದು ಬಂಧಿಸಿದ್ದರು. ಬಂಧನವಾದ ಬಳಿಕ ಸೆಂಥಿಲ್ ಬಾಲಾಜಿ ಬಿಕ್ಕಿ ಬಿಕ್ಕಿ ಅಳುತ್ತಿರುವ ದೃಶ್ಯಗಳು ಎಲ್ಲೆಡೆ ವೈರಲ್ ಆಗಿತ್ತು. ಸೆಂಥಿಲ್ ಬಂಧನದ ನಂತರ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದವು.

ಹಿಂದಿನ ಜಯಲಲಿತಾ ಸರ್ಕಾರದಲ್ಲಿ ಸಚಿವರಾಗಿದ್ದ ಸೆಂಥಿಲ್, 2011 ರಿಂದ 2016ರ ಅವಧಿಯಲ್ಲಿ ಸಾರಿಗೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಉದ್ಯೋಗಕ್ಕಾಗಿ ಲಂಚ ಪಡೆದ ಹಗರಣದಲ್ಲಿ ಅವರನ್ನು ಇಡಿ ಬಂಧಿಸಿದೆ. ಈ ಅವಧಿಯಲ್ಲಿ ತಮಿಳುನಾಡಿನಲ್ಲಿ ಇದ್ದ ಎಐಎಡಿಎಂಕೆಯ ಜಯಲಲಿತಾ ನೇತೃತ್ವದ ಸರ್ಕಾರದಲ್ಲಿ ಸೆಂಥಿಲ್ ಬಾಲಾಜಿ ಸಾರಿಗೆ ಸಚಿವರಾಗಿದ್ದರು. ಸದ್ಯ ಅವರು ಎಂಕೆ ಸ್ಟಾಲಿನ್ ಸಂಪುಟದಲ್ಲಿ ವಿದ್ಯುತ್ ಮತ್ತು ಅಬಕಾರಿ ಖಾತೆಗಳನ್ನು ನಿರ್ವಹಿಸುತ್ತಿದ್ದರು.

ಸೆಂಥಿಲ್ ಬಾಲಾಜಿ ಅವರು 1975, ಅಕ್ಟೋಬರ್ 21 ರಂದು ತಮಿಳುನಾಡಿನ ಕರೂರು ಜಿಲ್ಲೆಯ ರಾಮೇಶ್ವರಪಟ್ಟಿ ಎಂಬಲ್ಲಿ ಜನಿಸಿದ್ದಾರೆ. ನಾಲ್ಕು ಬಾರಿಯ ಶಾಸಕರಾಗಿರುವ ಸೆಂಥಿಲ್ ಬಾಲಾಜಿ ಎಐಎಡಿಎಂಕೆ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ. 2006ರಲ್ಲಿ ಶಾಸಕರಾಗಿ ತಮಿಳುನಾಡು ವಿಧಾನಸಭೆಯನ್ನು ಪ್ರವೇಶಿಸಿದ ಸೆಂಥಿಲ್ ಬಾಲಾಜಿ, 2011 ರಿಂದ 2015ರಲ್ಲಿ ಜೆ ಜಯಲಲಿತಾ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ, 2018ರಲ್ಲಿ ಸೆಂಥಿಲ್ ಡಿಎಂಕೆ ಪಕ್ಷದ ಕಡೆ ಹೆಜ್ಜೆ ಹಾಕಿದರು.

ಇದನ್ನೂ ಓದಿ; ರಾಜ್ಯಸಭೆಗೆ ನಾಮನಿರ್ದೇಶನಗೊಂಡ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...