Homeಮುಖಪುಟಸಿಎಂ ಒಪ್ಪಿಗೆಯಿಲ್ಲದೆ ಪದಚ್ಯುತಗೊಳಿಸಲು ಸಾಧ್ಯವಿಲ್ಲ; ಸೆಂಥಿಲ್ ಬಾಲಾಜಿಗೆ ಸುಪ್ರೀಂ ರಿಲೀಫ್

ಸಿಎಂ ಒಪ್ಪಿಗೆಯಿಲ್ಲದೆ ಪದಚ್ಯುತಗೊಳಿಸಲು ಸಾಧ್ಯವಿಲ್ಲ; ಸೆಂಥಿಲ್ ಬಾಲಾಜಿಗೆ ಸುಪ್ರೀಂ ರಿಲೀಫ್

- Advertisement -
- Advertisement -

ಬಂಧಿತ ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ಮುಖ್ಯಮಂತ್ರಿ ಒಪ್ಪಿಗೆಯಿಲ್ಲದೆ ಪದಚ್ಯುತಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದ್ದು, ಅವರನ್ನು ಪದಚ್ಯುತಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆಯ ಸಚಿವ ಬಾಲಾಜಿ ಅವರನ್ನು ರಾಜ್ಯ ಕ್ಯಾಬಿನೆಟ್ಟಿನಲ್ಲಿ ಖಾತೆಯಿಲ್ಲದ ಸಚಿವ ಸ್ಥಾನದಿಂದ ತೆಗೆದುಹಾಕಬೇಕೆ ಎಂಬುದನ್ನು ಮುಖ್ಯಮಂತ್ರಿ ನಿರ್ಧರಿಸಬಹುದು ಎಂದು ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

‘ರಾಜ್ಯಪಾಲರಿಗೆ ಸಚಿವರನ್ನು ವಜಾ ಮಾಡುವ ಅಧಿಕಾರವಿದೆಯೇ ಎಂಬುದನ್ನು ಪರಿಗಣಿಸಲು ಹೈಕೋರ್ಟ್ ಸೂಕ್ತವಾಗಿದ್ದು, ಸಂಬಂಧಪಟ್ಟವರು ಸಚಿವರಾಗಿ ಮುಂದುವರಿಯಬೇಕೇ ಎಂಬುದನ್ನು ನಿರ್ಧರಿಸಲು ಮುಖ್ಯಮಂತ್ರಿಗೆ ಬಿಟ್ಟಿದ್ದಾರೆ’ ಎಂದು ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಇಂದು ಹೇಳಿದೆ.

ಇದರಲ್ಲಿ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ನಾವು ಭಾವಿಸುತ್ತೇವೆ. ಮದ್ರಾಸ್ ಹೈಕೋರ್ಟಿನ ದೃಷ್ಟಿಕೋನವನ್ನು ನಾವು ಒಪ್ಪುತ್ತೇವೆ ಮತ್ತು ಯಾವುದೇ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದರೂ ತಮಿಳುನಾಡು ಸರ್ಕಾರದಲ್ಲಿ ಸಚಿವರಾಗಿ ಮುಂದುವರಿಯಬೇಕು ಎಂದು ಮದ್ರಾಸ್ ಹೈಕೋರ್ಟಿನ ತೀರ್ಪನ್ನು ಸಾಮಾಜಿಕ ಕಾರ್ಯಕರ್ತ ಎಂಎಲ್ ರವಿ ಪ್ರಶ್ನಿಸಿದ್ದರು.

ಪ್ರಕರಣದ ಹಿನ್ನೆಲೆ:

ಬರೋಬ್ಬರಿ 18 ಗಂಟೆಗಳ ವಿಚಾರಣೆ ಬಳಿಕ ತಮಿಳುನಾಡಿನ ವಿದ್ಯುತ್ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು 203ರ ಜೂನ್ 14ರಂದು ಬಂಧಿಸಿದ್ದರು. ಬಂಧನವಾದ ಬಳಿಕ ಸೆಂಥಿಲ್ ಬಾಲಾಜಿ ಬಿಕ್ಕಿ ಬಿಕ್ಕಿ ಅಳುತ್ತಿರುವ ದೃಶ್ಯಗಳು ಎಲ್ಲೆಡೆ ವೈರಲ್ ಆಗಿತ್ತು. ಸೆಂಥಿಲ್ ಬಂಧನದ ನಂತರ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದವು.

ಹಿಂದಿನ ಜಯಲಲಿತಾ ಸರ್ಕಾರದಲ್ಲಿ ಸಚಿವರಾಗಿದ್ದ ಸೆಂಥಿಲ್, 2011 ರಿಂದ 2016ರ ಅವಧಿಯಲ್ಲಿ ಸಾರಿಗೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಉದ್ಯೋಗಕ್ಕಾಗಿ ಲಂಚ ಪಡೆದ ಹಗರಣದಲ್ಲಿ ಅವರನ್ನು ಇಡಿ ಬಂಧಿಸಿದೆ. ಈ ಅವಧಿಯಲ್ಲಿ ತಮಿಳುನಾಡಿನಲ್ಲಿ ಇದ್ದ ಎಐಎಡಿಎಂಕೆಯ ಜಯಲಲಿತಾ ನೇತೃತ್ವದ ಸರ್ಕಾರದಲ್ಲಿ ಸೆಂಥಿಲ್ ಬಾಲಾಜಿ ಸಾರಿಗೆ ಸಚಿವರಾಗಿದ್ದರು. ಸದ್ಯ ಅವರು ಎಂಕೆ ಸ್ಟಾಲಿನ್ ಸಂಪುಟದಲ್ಲಿ ವಿದ್ಯುತ್ ಮತ್ತು ಅಬಕಾರಿ ಖಾತೆಗಳನ್ನು ನಿರ್ವಹಿಸುತ್ತಿದ್ದರು.

ಸೆಂಥಿಲ್ ಬಾಲಾಜಿ ಅವರು 1975, ಅಕ್ಟೋಬರ್ 21 ರಂದು ತಮಿಳುನಾಡಿನ ಕರೂರು ಜಿಲ್ಲೆಯ ರಾಮೇಶ್ವರಪಟ್ಟಿ ಎಂಬಲ್ಲಿ ಜನಿಸಿದ್ದಾರೆ. ನಾಲ್ಕು ಬಾರಿಯ ಶಾಸಕರಾಗಿರುವ ಸೆಂಥಿಲ್ ಬಾಲಾಜಿ ಎಐಎಡಿಎಂಕೆ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ. 2006ರಲ್ಲಿ ಶಾಸಕರಾಗಿ ತಮಿಳುನಾಡು ವಿಧಾನಸಭೆಯನ್ನು ಪ್ರವೇಶಿಸಿದ ಸೆಂಥಿಲ್ ಬಾಲಾಜಿ, 2011 ರಿಂದ 2015ರಲ್ಲಿ ಜೆ ಜಯಲಲಿತಾ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ, 2018ರಲ್ಲಿ ಸೆಂಥಿಲ್ ಡಿಎಂಕೆ ಪಕ್ಷದ ಕಡೆ ಹೆಜ್ಜೆ ಹಾಕಿದರು.

ಇದನ್ನೂ ಓದಿ; ರಾಜ್ಯಸಭೆಗೆ ನಾಮನಿರ್ದೇಶನಗೊಂಡ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...